Connect with us

DAKSHINA KANNADA

ಬಿಜೆಪಿಯವರಿಗೆ ಚುನಾವಣಾ ಭಯ ಆರಂಭವಾಗಿದೆ: ಹರೀಶ್ ಕುಮಾರ್‌

Published

on

ಮಂಗಳೂರು: ಬಿಜೆಪಿಯವರಿಗೆ ಚುನಾವಣಾ ಭಯ ಆರಂಭವಾಗಿದ್ದು, ಉತ್ತರ ಭಾರತದ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಇವರಿಗೆ ಭೀತಿ ಹುಟ್ಟಿಸಿದೆ. ದೆಹಲಿಯ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಆಪ್‌ ಪಾರಮ್ಯ ಮೆರೆದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಜಯ, ದೆಹಲಿಯಲ್ಲಿ ಆಪ್‌ ಜಯ ಗಳಿಸಿದೆ. ಇದನ್ನು ಅವಲೋಕಿಸಿದಾಗ ಬಿಜೆಪಿಯವರಿಗೆ ಚುನಾವಣಾ ಭಯ ಪ್ರಾರಂಭವಾಗಿದೆ ಎಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್‌ ವ್ಯಂಗ್ಯ ಮಾಡಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೇವಲ ಗುಜರಾತಿನಲ್ಲಿ ಬಿಜೆಪಿ ಗೆದ್ದಿದೆ ಎಂದು ಅದನ್ನೇ ದೊಡ್ಡ ವಿಚಾರ ಮಾಡಿಕೊಂಡು ಮೋದಿ ಮೇನಿಯಾ ಎನ್ನುವ ಪ್ರಚಾರ ಶುರು ಮಾಡಿದ್ದಾರೆ. ಅದನ್ನೇ ಕರ್ನಾಟಕದ ಚುನಾವಣೇಗೆ ದಿಕ್ಸೂಚಿ ಹೇಳುತ್ತಿದ್ದಾರೆ. ಹಿಮಾಚಲ ರಾಜ್ಯದ ಚುನಾವನೆಯೇ ಕರ್ನಾಟಕ ರಾಜ್ಯದ ಚುನಾವಣೆಗೆ ದಿಕ್ಸೂಚಿ ಎಂದು ತಾನು ಹೇಳುವುದಾಗಿ ನುಡಿದರು.

ಬಿಜೆಪಿಯವರಿಗೆ ಗುಜರಾತ್ ಅಲ್ಲ, ದೇಶದ ರಾಜಧಾನಿ ದೆಹಲಿಯಲ್ಲಿನ ಮಹಾನಗರ ಪಾಲಿಕೆಯ 15 ವರ್ಷಗಳ ಬಿಜೆಪಿ ಸೋಲು ಅವರಿಗೆ ದಿಕ್ಸೂಚಿ ಆಗಿರಬಹುದು ಎಂದರು. 7 ಬೈ ಇಲೆಕ್ಷನ್‌ಗಳಲ್ಲಿ 2 ರಾಜ್ಯಗಳಲ್ಲಿ 1 ಬಿಜೆಪಿ, 1 ಕಾಂಗ್ರೆಸ್ ಬಂದಿದೆ. ದೆಹಲಿಯಲ್ಲಿ ಆಪ್ ಬಂದಿದೆ.

ಏಳು ಮರುಚುನಾವಣೆಯಲ್ಲಿ 2ರಲ್ಲಿ ಕಾಂಗ್ರೆಸ್ ಬಂದಿದೆ. ಬಿಜೆಯೂ 2 ಬಂದಿದೆ. ಉಳಿದ ಮೂರು ಇತರ ಪಕ್ಷಗಳು ಹಂಚಿಕೊಂಡಿವೆ. ಗುಜರಾತಿನ ಸಾಧನೆ ಏನೂ ಇಲ್ಲ ಎಂದು ಟೀಕಿಸಿದರು.


ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸೋಲಿನ ಚಿಂತನೆ ನಡೆದಿದೆ. ಇವತ್ತು ಚುನಾವಣಾ ಭಯದಿಂದಾಗಿ ನಮ್ಮ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ರಾಮುಲ್ಲಾಖಾನ್ ಎನ್ನುವ ವಿಚಾರ ಮುನ್ನೆಲೆಗೆ ತರುತ್ತಿದ್ದಾರೆ.

ಯೋಜನೆಗಳ ಹೆಸರು ಬದಲಾವಣೆ ಮಾಡಿ ಅದನ್ನು ತಮ್ಮ ಯೋಜನೆ ಹೇಳುತ್ತಿದ್ದಾರೆ. ಎಲ್ಲಾ ಯೋಜನೆಗಳಿಗೆ ತಮ್ಮದೇ ನಾಯಕರ ಹೆಸರನ್ನು ಇಡುತ್ತಿದ್ದಾರೆ.

ಈ ಮೂಲಕ ವ್ಯವಸ್ಥೆಯನ್ನೇ ತಿರುಚಲು ಹೊರಟಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ನಾಯಕರಾದ ಪ್ರಕಾಶ್ ಸಾಲ್ಯಾನ್‌, ಸುಧೀರ್ ಟಿಕೆ, ಕುಮಾರಿ ಅಪ್ಪಿ, ಶೊಭೋದಯ ಆಳ್ವ, ಅಬ್ದುಲ್ ಸಲೀಂ, ಕವಿತಾ ಸನಿಲ್‌ ಉಪಸ್ಥಿತರಿದ್ದರು.

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಎರಡನೇ ದಿನವಾದ ಇಂದು ಕೂಡಾ ಮುಂದುವರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ನೆರೆ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಮಳೆ ತೀವ್ರವಾಗಿದೆ. ಹವಾಮಾನ ಇಲಾಖೆಯು ನಾಲ್ಕೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ರಸ್ತೆ ಕಾಮಗಾರಿ, ಅವೈಜ್ಙಾನಿಕ ಚರಂಡಿ ಕೆಲಸ ಇತ್ಯಾದಿ ಕಾರಣಗಳಿಂದಾಗಿ ಮಳೆ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಬಂದು ಅನೇಕ ಕಡೆಗಳಲ್ಲಿ ನಾಶ ನಷ್ಟ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

ಗಾಳಿ ಮಳೆಗೆ ಮರಗಳು ಬಿದ್ದು ವಿದ್ಯುತ್‌ ಸಂಪರ್ಕ ಹಲವಾರು ಕಡೆಗಳಲ್ಲಿ ಕಡಿತಗೊಂಡಿದೆ. ಮಂಗಳೂರು ನಗರ, ಉಡುಪಿ ನಗರ, ಮಣಿಪಾಲಗಳಲ್ಲಿ ಅಲ್ಲಲ್ಲಿ ಕೃತಕ ನೆರೆಯಿಂದ ಹಾನಿ ಸಂಭವಿಸಿದೆ. ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆ ಬರುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Continue Reading

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page