Connect with us

bangalore

ಕೈ ಅಭ್ಯರ್ಥಿಗೆ ಚುನಾವಣಾ ಅಧಿಕಾರಿಗಳಿಂದ ಶಾಕ್ – ಕೆಎಂ ಉದಯ್ ಬೆಂಬಲಿಗರ ಮನೆಯಲ್ಲಿ 2 ಕೋಟಿ ಹಣ ಪತ್ತೆ

Published

on

ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ.

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ.

ಮಂಡ್ಯದ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಬರೋಬ್ಬರಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.

ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ.

ಬೆಳ್ಳಂ ಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿದ್ದು, 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.

ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದ್ದು, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ.

ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದಾರೆ.

ಮಾತ್ರವಲ್ಲದೇ ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

bangalore

ರಸ್ತೆ ಮಧ್ಯೆಯೇ ಕಾಲೇಜು ಪ್ರಾಧ್ಯಪಕನ ಮೇಲೆ ಹಲ್ಲೆ; ಮೂವರು ಅರೆಸ್ಟ್

Published

on

ಮಂಗಳೂರು/ಬೆಂಗಳೂರು : ಎಂಥಾ ವಿಚಿತ್ರ ಜನರಿರುತ್ತಾರೆ ಎಂದು ಹೇಳುವುದೂ ಅಸಾಧ್ಯ. ಇದು ಸರಿಯಲ್ಲ ತಪ್ಪು ಎಂದು ಹೇಳುವ ಹಾಗೆಯೂ ಇಲ್ಲ. ಬಿಸಿ ರಕ್ತ ಕುದಿಯುತ್ತೆ. ಹಲ್ಲೆ ಮಾಡಲು ಸಹ ಹಿಂಜರಿಯುವುದಿಲ್ಲ. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯ ರಾಜಧಾನಿಯಲ್ಲೂ ನಡೆದಿದೆ. ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಎಂಬವರ ಮೇಲೆ ಯುವಕರು ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ರೋಡ್ ರೇಜ್ ಪ್ರಕರಣ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಅದೇ ಸಂದರ್ಭದಲ್ಲೇ ಈ ಘಟನೆಯೂ ನಡೆದಿತ್ತು.

ಅಷ್ಟಕ್ಕೂ ನಡೆದಿದ್ದೇನು ..?

ಕುಮಾರಸ್ವಾಮಿ ಲೇಔಟ್​ನ  ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಏಪ್ರಿಲ್ 21 ರಂದು ಸಂಜೆ 6 ರಿಂದ 7 ಗಂಟೆಯ ಸಮಯದಲ್ಲಿ  ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ : ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ; ಅಂಕಪಟ್ಟಿಯಲ್ಲಿ ನಂ.1

ಸ್ಥಳೀಯರೊಬ್ಬರು ಈ ಅಮಾನುಷ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಬಳಿಕ  ಕೆಎಸ್ ಲೇಔಟ್ ಪೊಲೀರು ಈ ಘಟನೆ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

Continue Reading

bangalore

ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ; ಅಂಕಪಟ್ಟಿಯಲ್ಲಿ ನಂ.1

Published

on

IPL 2025 : ಬಹು ನಿರೀಕ್ಷಿತ ಪಂದ್ಯವಾದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವಿನ ಹೈವೋಲ್ಟೇಜ್ ಕದನವು ನಿನ್ನೆ (ಏ.27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿತ್ತು. ರಜತ್ ಪಡೆ ಡೆಲ್ಲಿ ತಂಡವನ್ನು ಅವರ ನೆಲದಲ್ಲೇ ಮಣಿಸುವ ಯತ್ನದಲ್ಲಿ ರಾಯಲ್ ಚಾಲೆಂಜರ್ಸ್ ತಂಡ ಯಶಸ್ವಿಯಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ (RCB) ಕೇವಲ 4 ವಿಕೆಟ್ ಕಳೆದುಕೊಂಡು ಇನ್ನು 9 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಈ ಗೆಲುವಿನೊಂದಿಗೆ ಆರ್​ಸಿಬಿ,  ಡೆಲ್ಲಿ ವಿರುದ್ಧ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಂಡಿದಲ್ಲದೆ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿತು. ಆರ್​ಸಿಬಿ ಈಗ 10 ಪಂದ್ಯಗಳಿಂದ 14 ಅಂಕಗಳನ್ನು ಗಳಿಸಿದ್ದು, ಪ್ಲೇಆಫ್ ಅರ್ಹತೆಗೆ ಬಹಳ ಹತ್ತಿರದಲ್ಲಿದೆ.

ಈ ಬಾರಿಯ ಐಪಿಎಲ್ ನಲ್ಲಿ ಪ್ರತಿಯೊಂದು ತಂಡವೂ ತಲಾ 14 ಪಂದ್ಯಗಳನ್ನು ಆಡುತ್ತಿದೆ. ಅದರಲ್ಲಿ ಗುಜರಾತ್ ಜೈಂಟ್ಸ್ 8 ಪಂದ್ಯ ಆಡಿರುವುದನ್ನು ಹೊರತುಪಡಿಸಿದರೆ ಎಲ್ಲಾ ಪಂದ್ಯಗಳು 9 ಪಂದ್ಯಗಳನ್ನು ಆಡಿವೆ. ರಾಯಲ್ ಚಾಲೆಂಡರ್ಸ್ , ಲಖನೌ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ 10 ಪಂದ್ಯಗಳನ್ನು ಪೂರ್ತಿಗೊಳಿಸಿವೆ. ಇವುಗಳಲ್ಲಿ ಪ್ರಸ್ತುತ ಅಂಕಗಳ ಆಧಾರದಲ್ಲಿ ನೋಡುವುದಾದರೆ ನಿನ್ನೆ ನಡೆದ ಪಂದ್ಯದ ಗೆಲುವಿನ ಬಳಿಕ ಆರ್‌ಸಿಬಿ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅನ್ನು 2ನೇ ಸ್ಥಾನಕ್ಕೆ ತಳ್ಳಿ ಅಗ್ರಸ್ಥಾನದಲ್ಲಿದೆ.

ಆರ್ ಸಿಬಿಗೆ ಬಾಕಿ ಇರುವ ಪಂದ್ಯ :

ಮೇ 3ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ, ಮೇ 9ರಂದು ಲಖನೌ ಸೂಪರ್ ಜೈಂಟ್ಸ್, ಮೇ 13ರಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಮೇ 17ರಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆರ್ ಸಿಬಿ ಸೆಣೆಸಬೇಕಿದೆ. ಇದರಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಹೊರತುಪಡಿಸಿದರೆ ಉಳಿದ ಮೂರು ಪಂದ್ಯಗಳು ಸಹ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಆರ್ ಸಿಬಿಯ ಪ್ಲಸ್ ಪಾಯಿಂಟ್.

Continue Reading

bangalore

ಇಬ್ಬರು ಮೂವರಾಗಿ ಇಂದಿಗೆ 3 ತಿಂಗಳು; ಮಗನ ಫೊಟೋ ರಿವೀಲ್ ಮಾಡಿದ ವಶಿಷ್ಠ ದಂಪತಿ

Published

on

ಸ್ಯಾಂಡಲ್‌ವುಡ್‌ನ ಕ್ಯೂಟ್ ಹೋಡಿಯಾಗಿ ಗುರುತಿಸಿಕೊಂಡಿರುವ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿ ಗಂಡು ಮಗುವಿಗೆ ಜನ್ಮ ನೀಡಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿತ್ತು. ಈಗ ಮಗು ಜನಿಸಿ 3 ತಿಂಗಳು ತುಂಬಿದ ಖುಷಿಯಲ್ಲಿ ಮಗನ ಫೋಟೋವನ್ನು ವಸಿಷ್ಠ ದಂಪತಿ ರಿವೀಲ್ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಫುಲ್ ಖುಷ್ ಆಗಿದೆ.
2023ರ ಜನವರಿ 26ರಂದು ವಸಿಷ್ಠ ಮತ್ತು ಹರಿಪ್ರಿಯಾ ಮೈಸೂರಿನಲ್ಲಿ ಮದುವೆಯಾದರು. ಇದೇ ದಿನಾಂಕ ಅಂದರೆ 2025 ರ ಜ.26ರಂದು ಹರಿಪ್ರಿಯಾ ಮುದ್ದಾದ ಗಂಡು ಮಗನಿಗೆ ಜನ್ಮ ನೀಡಿದರು. ಹೀಗಾಗಿ ಸಿನಿಮಾಗೆ ಬ್ರೇಕ್ ಕೊಟ್ಟು ಮಗನ ಆರೈಕೆಯಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಮಗನಿಗೆ 3 ತಿಂಗಳು ತುಂಬಿದ ಖುಷಿಯಲ್ಲಿ ಮೊದಲ ಬಾರಿಗೆ ಹರಿಪ್ರಿಯಾ ದಂಪತಿ ಮಗನ ಫೊಟೋ ರಿವೀಲ್ ಮಾಡಿದ್ದಾರೆ.
ಮಗನೊಂದಿಗಿನ ಬ್ಲ್ಯಾಕ್ & ವೈಟ್ ಫೋಟೋ ಶೇರ್ ಮಾಡಿ, ‘ನಾವಿಬ್ಬರೂ ಮೂವರಾಗಿ ಇಂದಿಗೆ 3 ತಿಂಗಳು’ ವಸಿಷ್ಠ ದಂಪತಿ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಈ ಫೊಟೋ ಫುಲ್ ವೈರಲ್ ಆಘುತ್ತಿದೆ ಹಲವಾರು ಕಾಮೆಂಟ್‌ಗಳನ್ನು ಒಳಗೊಂಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page