Connect with us

hasana

ಆತ್ಮಹತ್ಯೆ ನಾಟಕವಾಡಿ ಪ್ರಿಯಕರನ ಜೊತೆ ಎಸ್ಕೇಪ್: ಪ್ರಿಯಾಂಕಾ-ಡೇವಿಡ್ ಪ್ರೇಮಪುರಾಣ ಬಯಲು

Published

on

ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದ ಪ್ರಿಯಾಂಕಾ ಎಂಬ ಮಹಿಳೆಯ ನಾಪತ್ತೆ ಪ್ರಕರಣವು ತನಿಖೆಯ ನಂತರ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಕೆರೆಯ ಬಳಿ ಆಕೆಯ ಬಟ್ಟೆ, ಬ್ಯಾಗ್ ಮತ್ತು ಚಪ್ಪಲಿಗಳು ಪತ್ತೆಯಾಗಿದ್ದವು, ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು.


ಅಗ್ನಿಶಾಮಕ ದಳ ಮತ್ತು ಮುಳುಗುತಜ್ಞರು ಕೆರೆಯಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ತದನಂತರ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಎಂಬುವವನ ಮನೆಯಲ್ಲಿ ಸುರಕ್ಷಿತವಾಗಿರುವುದು ಪತ್ತೆಯಾಗಿದೆ. 11 ವರ್ಷಗಳ ಹಿಂದೆ ಮದುವೆಯಾಗಿದ್ದ ಪ್ರಿಯಾಂಕಾ, ತನ್ನ ಪತಿ ಕೆಲಸಕ್ಕೆ ಹೋದ ಸಮಯದಲ್ಲಿ ಉತ್ತರ ಪ್ರದೇಶ ಮೂಲದ, ಡೇವಿಡ್ ಎಂಬುವವನ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ.

ಡೇವಿಡ್ ಸುಮಾರು ಒಂದು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮೊದಲು ಹೆಂಡತಿ ಎಂದು ಹೇಳಿ ಒಬ್ಬ ಮಹಿಳೆಯೊಂದಿಗೆ ಡೇವಿಡ್ ವಾಸವಿದ್ದ. ಆ ಮಹಿಳೆ ಆರು-ಏಳು ತಿಂಗಳ ಹಿಂದೆ ಅಪ್ಪ-ಅಮ್ಮನಿಗೆ ಹುಷಾರಿಲ್ಲವೆಂದು ಹೋದವಳು ನಂತರ ಮರಳಿ ಬಂದಿರಲಿಲ್ಲ. ಅಂದಿನಿಂದ ಡೇವಿಡ್ ಒಬ್ಬನೇ ವಾಸವಾಗಿದ್ದ. ಇನ್ನು ಆ ಮಿಸ್ಸಿಂಗ್ ಮಹಿಳೆ ಮನೆಯಲ್ಲಿರುವ ವಿಷಯವೂ ನಮಗೆ ಗೊತ್ತಿರಲಿಲ್ಲ ಎಂದು ಮನೆ ಮಾಲಿಕ ಹೇಳಿದ್ದಾರೆ.

ಇದನ್ನೂ ಓದಿ: ನೆಲಮಂಗಲ ಬಳಿ ಭೀಕರ ಅಪಘಾತ; ಡಿವೈಡರ್‌ಗೆ ದಾಟಿ ಬಸ್ಸಿಗೆ ಗುದ್ದಿದ ಕಾರು; ಐವರ ದುರ್ಮರಣ

ಹಾಸನ ಮತ್ತು ಬೇಲೂರು ಠಾಣೆಯ ಪೊಲೀಸರು ಇಬ್ಬರ ಅಕ್ರಮ ಸಂಬಂಧವನ್ನು ಪತ್ತೆ ಮಾಡಿದ್ದಾರೆ. ನೇರವಾಗಿ ಕುಣಿಗಲ್‌ಗೆ ಬಂದ ಪೊಲೀಸರು ಪ್ರಿಯಾಂಕಾ ಮತ್ತು ಡೇವಿಡ್ ಇಬ್ಬರನ್ನೂ ಬಂಧಿಸಿದ್ದಾರೆ.

hasana

ಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು

Published

on

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.


ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್(53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಸತೀಶ್‌ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತ ಸಂಭವಿಸಿದೆ. ವಿದ್ಯಾರ್ಥಿಗಳ ಕಣ್ಣೆದುರೇ ಶಿಕ್ಷಕರು ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಕುರಿ ಶೆಡ್‌ಗೆ ಆಕಸ್ಮಿಕ ಬೆಂಕಿ; 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Continue Reading

hasana

ಬುದ್ಧಿವಾದ ಹೇಳಿದ ಯುವಕರ ಮೇಲೆ ಕಾರು ಹರಿಸಿದ ಕಿಡಿಗೇಡಿಗಳು; ಓರ್ವ ಸಾವು

Published

on

ಹಾಸನ: ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ.


ಮೃತ ಮನು ನಡುರಾತ್ರಿ 12 ಗಂಟೆ ಸಮಯದಲ್ಲಿ ತನ್ನ ಸ್ನೇಹಿತರಾದ ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ಜತೆ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಆ ವೇಳೆ ಕಾರಿನಲ್ಲಿ ವೇಗವಾಗಿ ಬಂದ ಕಿಡಿಗೇಡಿಗಳಿಗೆ ‘ನಿಧಾನವಾಗಿ ಕಾರು ಚಲಾಯಿಸಿ’ ಎಂದು ಬುದ್ಧಿವಾದ ಹೇಳಿದ್ದರು.

ಇದರಿಂದ ಆಕ್ರೋಶಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಮನು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇತರ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕ್ರೋಶಗೊಂಡ ಸ್ಥಳೀಯರು ಘಟನೆಯ ನಂತರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Continue Reading

hasana

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಶೃತಿ ಬಲಿ: ಕುಟುಂಬಸ್ಥರಿಂದ ತೀವ್ರ ಆಕ್ರೋಶ

Published

on

ಹಾಸನ: ಬಾಣಂತಿ ಮಹಿಳೆ ಸಾವನ್ನಪ್ಪಿರುವ ದುರಂತ ಘಟನೆ ಹಾಸನದ ಹಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿ(30) ಮೃತಪಟ್ಟ ಬಾಣಂತಿ ಮಹಿಳೆ.


ಹನುಮನಹಳ್ಳಿ ನಿವಾಸಿ, ಮತ್ತುಅತಿಥಿ ಶಿಕ್ಷಕಿಯಾಗಿದ್ದ ಶೃತಿ ಅವರು ಹೆರಿಗೆಗಾಗಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಆರೋಗ್ಯ ಕ್ಷೀಣಿಸಿತು. ಭಾನುವಾರವಾದ್ದರಿಂದ ತಜ್ಞ ವೈದ್ಯರು ಲಭ್ಯವಿರಲಿಲ್ಲ ಮತ್ತು ಚಿಕಿತ್ಸೆ ವಿಳಂಬವಾಯಿತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.


ವೈದ್ಯರು ಮೊದಲು ಶೃತಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ನಂತರ ದಿಢೀರನೆ ಸ್ಥಿತಿ ಗಂಭೀರವಾಗಿದೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಶೃತಿ ಕೊನೆಯುಸಿರೆಳೆದಿದ್ದಾರೆ.


ಇದನ್ನೂ ಓದಿ: 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಕುಟುಂಬದವರು 6 ಯುನಿಟ್ ರಕ್ತ ನೀಡಿದ್ದರೂ ಸಹ ಸರಿಯಾದ ಚಿಕಿತ್ಸೆ ಸಿಗಲಿಲ್ಲ ಎಂಬುದು ಪತಿ ಪುನೀತ್ ಅವರ ದೂರು. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಪ್ರಕರಣವು ಹಾಸನ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಮುಂದುವರೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page