Connect with us

DAKSHINA KANNADA

ಖಾಕಿಯೊಳಗೂ ಹೈಟೆಕ್ ಮಾಹಿತಿ ಹೊಂದಿರುವ ವ್ಯಕ್ತಿ ಇದ್ದಾನೆ -ಸಚಿವ ಪರಮೇಶ್ವರ್

Published

on

ಮಂಗಳೂರು: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರ ಕಚೇರಿಯನ್ನು ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರು ಅ.29ರಂದು ಉದ್ಘಾಟನೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್ ಅವರು ಸುಮಾರು ಒಂಭತ್ತುವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ಕಟ್ಟಡಗಳನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಶನ್‌ನಿಂದ ನಿರ್ಮಾಣ ಮಾಡಲಾಗಿದೆ. ಸರಕಾರದ ಪ್ರಮುಖ ಉದ್ದೇಶ ಪೊಲೀಸ್ ಇಲಾಖೆ, ಪೊಲೀಸ್ ಸಿಬ್ಬಂದಿ ಆಧುನೀಕರಣ ಮಾಡುವುದು, ಅತ್ಯಾಧುನಿಕ ತರಬೇತಿಯನ್ನು ಅವರಿಗೆ ನಾವು ನೀಡುವುದು.

ಈ ಉದ್ದೇಶಗಳನ್ನು ಇಟ್ಟುಕೊಂಡು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಅವರ ವಿಶೇಷ ತರಬೇತಿಗಾಗಿ ಕಂಪ್ಯೂಟರ್ ಶಿಕ್ಷಣ, ಸೈಬರ್‌ ಮಾಹಿತಿ, ಶಸ್ತ್ರಾಸ್ತ್ರಗಳ ಬಳಕೆ ಹೀಗೆ ಎಲ್ಲವನ್ನೂ ವಿವರಿಸುತ್ತಿದ್ದೇವೆ. ಪ್ರಸ್ತುತ ಪೊಲೀಸ್ ಇಲಾಖೆಗೆ ನಡೆಸಲಾಗುತ್ತಿರುವ ಆಯ್ಕೆ ಪ್ರಕ್ರಿಯೆಗೆ ಡಬ್ಬಲ್‌ ಗ್ರಾಜುವೆಟ್ಸ್ ಬರುತ್ತಿದ್ದಾರೆ. ರಾಜ್ಯ ಸರಕಾರ 100 ಪೊಲೀಸ್ ಠಾಣೆ ಎಂದು ಯೋಜನೆ ಮಾಡಿ ಮೇಲ್ದರ್ಜೆಗೇರಿಸುತ್ತಿದೆ ಎಂದರು. ಖಾಕಿಯೊಳಗೆ ಕೂಡಾ ಒಬ್ಬ ಅತ್ಯಾಧುನಿಕ ಮಾದರಿಯ ಸಂಪೂರ್ಣ ಮಾಹಿತಿಯನ್ನು ಹೊಂದಿರುವ ವ್ಯಕ್ತಿ ಇದ್ದಾನೆ ಎನ್ನುವುದನ್ನು ಜನ ತಿಳಿದುಕೊಳ್ಳಬೇಕಾಗಿದೆ ಅದಕ್ಕೆ ಸರಕಾರ ಬದ್ಧವಾಗಿದೆ ಎಂದರು.

ನಮ್ಮಲ್ಲಿ ಶೇಕಡಾ 40 ಸಿಬ್ಬಂದಿಗಳಿಗೆ ಹೊಸದಾಗಿ ಮನೆಗಳನ್ನು ಕಟ್ಟಿಕೊಡಲು ಮುಂದಾಗಿದ್ದೇವೆ. ಅಪಾರ್ಟ್‌ ಮೆಂಟ್ ಮಾದರಿ ಮನೆ ನೀಡುತ್ತಿದ್ದೇವೆ. ಶೇಕಡಾ 70ರಷ್ಟಾದರೂ ಮನೆ ನೀಡಲು ಯೋಜನೆ ರೂಪಿಸಿದ್ದೇವೆ. ಪೊಲೀಸರು ಸಂಯಮದಿಂದ ವರ್ತಿಸಬೇಕು, ಜನಸ್ನೇಹಿ ಆಗಿರಬೇಕು ಎಂದು ಅವರಿಗೆ ಕಾಲಕಾಲಕ್ಕೆ ಸೂಚನೆ ನೀಡಲಾಗಿದೆ. ಪ್ರತಿ ಪೊಲೀಸ್‌ ಠಾಣೆಗಳ ಚಟುವಟಿಕೆಗಳನ್ನು ನಿರ್ವಹಣೆ ಮಾಡಲು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಮಾಡ್ತಾ ಇದ್ದೇವೆ. ಇದು ದೇಶದಲ್ಲೇ ಪ್ರಥಮವಾಗಿದೆ. ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಹೈ ರೆಶಲ್ಯೂಶನ್‌ ಕ್ಯಾಮೆರಾ ಅಳವಡಿಸಲಿದ್ದೇವೆ. ಕೆಲವೇ ಕ್ಷಣಗಳಲ್ಲಿ ಈ ಮಾಹಿತಿ ಲಭ್ಯ ಆಗುವಂತೆ ನಾವು ಯೋಜನೆ ರೂಪಿಸುತ್ತಿದ್ದೇವೆ. ಯಾವುದೇ ಠಾಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದರೆ ನಮಗೆ ಕಂಟ್ರೋಲ್‌ ರೂಂಗೆ ಗೊತ್ತಾಗುತ್ತದೆ ಎಂದರು. ಎಲ್ಲಾ ಜಿಲ್ಲೆಗಳಲ್ಲೂ ಸೈಬರ್‌ ಕ್ರೈಂ ನೋಡಲು ಸೆಲ್‌ ರೂಪಿಸುತ್ತಿದ್ದೇವೆ. ಪೊಲೀಸ್ ಕಾನ್‌ಸ್ಟೇಬಲ್ 18,000 ಹುದ್ದೆಗಳು ಖಾಲಿ ಇವೆ. ಅದನ್ನು ತುಂಬಲು ಹಂತಹಂತವಾಗಿ ಆಯ್ಕೆ ಪ್ರಕ್ರಿಯೆ ಆರಂಭಿಸಿದ್ದೆವೆ. 1000 ಮಂದಿ ಸಬ್‌ ಇನ್‌ಸ್ಪೆಕ್ಟ್ರರ್ ಹುದ್ದೆಗಳು ಕೂಡಾ ಖಾಲಿ ಇವೆ. ಅವುಗಳನ್ನು ನಾವು ಭರ್ತಿ ಮಾಡುವವರಿದ್ದೇವೆ ಎಂಧರು. ಕಾನೂನುಬಾಹಿರವಾದ ಕೃತ್ಯಗಳನ್ನು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್‌ ಮೊದಲಾದವರು ಉಪಸ್ಥಿತರಿದ್ದರು.

DAKSHINA KANNADA

ಯುವಕನ ಬರ್ಬರ ಹತ್ಯೆ ಬಗ್ಗೆ ಅಪಪ್ರಚಾರ ಸಲ್ಲದು : ಅನುಪಮ್ ಅಗರ್ವಾಲ್

Published

on

ಮಂಗಳೂರು : ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆಯು ಮಂಗಳೂರು ಹೊರವಲಯದ ಕುಡುಪು ಸಮೀಪ ನಿನ್ನೆ (ಏ.27) ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಯಾವುದೇ ರೀತಿಯಿಂದನೂ ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸುಮಾರು 35 ರಿಂದ 40 ವರ್ಷ ಪ್ರಾಯದ ಹೊರ ರಾಜ್ಯದ ಈ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಸಾಗಿಸಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕುಂಭದ್ರೋಣ ಮಳೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

Published

on

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ.

 

ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಇದೀಗ ಮಳೆಗಾಲ ಸಮೀಪಿಸ್ತಾ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.

ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿ ಹೋಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading

DAKSHINA KANNADA

ರೈಲ್ವೇ ಇಲಾಖೆ ಪರೀಕ್ಷೆಯಲ್ಲೂ ಎಡವಟ್ಟು; ಜನಿವಾರದ ಜೊತೆ ತಾಳಿಗೂ ಕಂಟಕ

Published

on

ಮಂಗಳೂರು : ಇತ್ತಿಚೆಗೆ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಬ್ರಾಹ್ಮಣ ಸಮೂದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳೂ ಕೂಡ ಪರೀಕ್ಷಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರವಾಗಿ ಪ್ರತಿಭಟನೆ ನಡೆಸಿತ್ತು. ಇದೀಗ ರೈಲ್ವೇ ಇಲಾಖೆ ಕೂಡಾ ಇಂತಹದೇ ಒಂದು ಯಡವಟ್ಟು ಮಾಡಿದೆ. ಅದೇನು ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಜನಿವಾರ ಪ್ರಕರಣ ತೀವ್ರ ಸುದ್ಧಿಯಾಗುತ್ತಿರುವ ಬೆನ್ನಲ್ಲೇ ಇದೀಗ ಪರೀಕ್ಷೆ ಬರೆಯಲು ಜನಿವಾರ ಮತ್ತು ಮಂಗಳ ಸೂತ್ರ ತೆಗೆದು ಬರುವಂತೆ ಸೂಚಿಸಿದೆ. ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಏಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲೇ ಈ ಸೂಚನೆಯನ್ನು ನೀಡಿದೆ.

ಮಂಗಳೂರು ನಗರದ ಬೋಂದೇಲ್‌ ಸಮೀಪದ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲಿ ನಮೂದಿಸಿದ ವಿಚಾರ ಧಾರ್ಮಿಕ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ವಿಚಾವಾಗಿದೆ. ಹೀಗಾಗಿ ಈ ಸೂಚನೆಯನ್ನು ರದ್ದು ಪಡಿಸುವಂತೆ ರೈಲ್ವೇ ಇಲಾಖೆಗೆ ಸೂಚಿಸಬೇಕು ಎಂದು ಹಿಂದೂ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page