Connect with us

LATEST NEWS

ಕರ್ನಾಟಕ ವಿರುದ್ಧವೇ ಮಾಜಿ IPS ಅಣ್ಣಾಮಲೈ ಉಪವಾಸ ಸತ್ಯಾಗ್ರಹ..!

Published

on

ಚೆನ್ನೈ: ಮೇಕೆದಾಟು ಯೋಜನೆ ವಿಚಾರದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿ ಅವರು ಪ್ರತಿಭಟನೆ ನಡೆಸಲಿದ್ದಾರೆ.
ಆಗಸ್ಟ್ 5ರಂದು ಕೆ. ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಪಕ್ಷದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಕರ್ನಾಟಕ ಸರ್ಕಾರ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಲಿದ್ದಾರೆ.


ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೆಲವು ದಿನಗಳ ಹಿಂದೆ ಸರ್ವಪಕ್ಷಗಳ ಸಭೆಯನ್ನು ನಡೆಸಿದ್ದರು. ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ನಿಲುವಿನ ಬಗ್ಗೆ ಚರ್ಚೆ ನಡೆಸಿದ್ದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದರು. ಕರ್ನಾಟಕ ಸರ್ಕಾರದ ಪ್ರಸ್ತಾವಿತ ಯೋಜನೆಯನ್ನು ವಿರೋಧಿಸಿದ್ದರು.


ಎಂ. ಕೆ. ಸ್ಟಾಲಿನ್ ನಡೆಸಿದ ಸರ್ವಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ನಾಲ್ವರು ಬಿಜೆಪಿ ಶಾಸಕರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿರಬಹುದು. ಆದರೆ ರಾಜ್ಯದ ಹಿತ ನಮಗೆ ಮುಖ್ಯ. ಆದ್ದರಿಂದ ಮೇಕೆದಾಟು ವಿಚಾರದಲ್ಲಿ ನಾವು ತಮಿಳುನಾಡು ಸರ್ಕಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ನೀರಾವರಿ ವಿಚಾರದಲ್ಲಿ ಅಪಾರ ಜ್ಞಾನ ಹೊಂದಿರುವ ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಯೋಜನೆಗೆ ಪುದುಚೇರಿ ಸಹ ವಿರೋಧ ವ್ಯಕ್ತಪಡಿಸಿದೆ. ಬಸವರಾಜ ಬೊಮ್ಮಾಯಿ ಅಕ್ಕ-ಪಕ್ಕದ ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ತರಲಿದ್ದಾರೆಯೇ? ಕಾದು ನೋಡಬೇಕಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಜೇಕಬ್ ಬೆಥೆಲ್ ಬದಲು ಆರ್‌ಸಿಬಿಗೆ ಸ್ಪೋಟಕ ಬ್ಯಾಟರ್ ಎಂಟ್ರಿ

Published

on

ಮಂಗಳೂರು/ಬೆಂಗಳೂರು: ಐಪಿಎಲ್‌ 2025ರ ಪ್ಲೇ ಆಫ್‌ಗೆ ತೇರ್ಗಡೆ ಆಗಿರುವ ಆರ್‌ಸಿಬಿ ತಂಡಕ್ಕೆ ಸ್ಪೋಟಕ ಆಟಗಾರ ಎಂಟ್ರಿ ಕೊಟ್ಟಿದ್ದಾರೆ.

ಹೌದು, ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಂದ ಯುವ ದಾಂಡಿಗ ಜೇಕಬ್ ಬೆಥೆಲ್ ಹೊರಗುಳಿಯುವುದು ಖಚಿತವಾಗಿದೆ. ಹೀಗಾಗಿ ಬದಲಿ ಆಟಗಾರನಾಗಿ ನ್ಯೂಝಿಲೆಂಡ್‌ನ ವಿಕೆಟ್ ಕೀಪರ್ ಬ್ಯಾಟರ್ ಆರ್‌ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಬದಲಾವಣೆಯಿಂದ ಆರ್‌ಸಿಬಿ ತಂಡದ ಬ್ಯಾಟಿಂಗ್ ಬಲ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮೇ 23ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುವ ಆರ್‌ಸಿಬಿಯ ಕೊನೆಯ ಲೀಗ್ ಹಂತದ ಪಂದ್ಯಕ್ಕೆ ಜೇಕಬ್ ಬೆಥೆಲ್ ಲಭ್ಯವಿರುತ್ತಾರೆ. ಆ ಪಂದ್ಯದ ನಂತರ ಅವರು ತಂಡದಿಂದ ಹೊರಡಲಿದ್ದಾರೆ.

ಇಂಗ್ಲೆಂಡ್ ರಾಷ್ಟ್ರೀಯ ತಂಡದ ಜೊತೆ ಸೇರಿಕೊಳ್ಳುವ ಸಲುವಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಸೀಫರ್ಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಆರ್‌ಸಿಬಿ ತಂಡಕ್ಕೆ ಸೇರ್ಪಡೆಯಾಗಲಿರುವ ಟಿಮ್ ಸೀಫರ್ಟ್, ನ್ಯೂಜಿಲೆಂಡ್ ಪರ 66 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 1,540 ರನ್ ಗಳಿಸಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ಶೈಲಿ ಮತ್ತು ವಿಕೆಟ್ ಕೀಪಿಂಗ್ ಸಾಮರ್ಥ್ಯ ತಂಡಕ್ಕೆ ದೊಡ್ಡ ಆಸ್ತಿಯಾಗಲಿದೆ. ಸೈಫರ್ಟ್ ಅವರನ್ನು ಆರ್‌ಸಿಬಿ 2 ಕೋಟಿ ರೂಪಾಯಿಗಳಿಗೆ ಖರೀದಿಸಿದೆ. ಮೇ 24ರಿಂದಲೇ ಅವರ ಸೇರ್ಪಡೆ ಜಾರಿಗೆ ಬರಲಿದೆ.

ಸದ್ಯ ಆರ್​ಸಿಬಿ ತಂಡದ ಭಾಗವಾಗಿರುವ ಟಿಮ್ ಸೈಫರ್ಟ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 3 ಐಪಿಎಲ್ ಪಂದ್ಯಗಳನ್ನಾಡಿರುವ ಅವರು 26 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಆರ್‌ಸಿಬಿಯಲ್ಲಿ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ಕಿವೀಸ್ ದಾಂಡಿಗ ಯಶಸ್ವಿಯಾಗಿದ್ದಾರೆ.

 

Continue Reading

FILM

‘ಸ್ಪಿರಿಟ್’ ಸಿನಿಮಾದಿಂದ ಹೊರಬಂದ ದೀಪಿಕಾ ಪಡುಕೋಣೆ!

Published

on

ಮಂಗಳೂರು/ಮುಂಬೈ : ನಟಿ ದೀಪಿಕಾ ಪಡುಕೋಣೆ ತಾಯ್ತನದ ಸಂಭ್ರಮದಲ್ಲಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೆ ಮತ್ತೆ ಬಣ್ಣ ಹಚ್ಚುವ ಮೂಲಕ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ತಯಾರಿಯಲ್ಲಿದ್ದರು. ಸಿನಿಮಾ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದರು.

ಹೌದು, ಅರ್ಜುನ್ ರೆಡ್ಡಿ, ಅನಿಮಲ್ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ ಒಪ್ಪಿಕೊಂಡಿದ್ದರು ದೀಪಿಕಾ. ಈ ಚಿತ್ರಕ್ಕೆ ‘ಸ್ಪಿರಿಟ್’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ನಾಯಕನಾಗಿ ನಟಿಸುತ್ತಿದ್ದರು. ಕಲ್ಕಿ ಚಿತ್ರದ ಬಳಿಕ ಮತ್ತೊಮ್ಮೆ ಪ್ರಭಾಸ್ ಜೊತೆ ದೀಪಿಕಾ ಕಾಣಿಸಿಕೊಳ್ಳಲು ಅಣಿಯಾಗಿದ್ದರು.

ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ ಎಂಬ ವಿಚಾರಕ್ಕಿಂತಲೂ ಸುದ್ದಿಯಾಗಿದ್ದು ಆಕೆಯ ಸಂಭಾವನೆ. ಹೌದು, ನಟರಿಗೆ ಸರಿಸಮಾನವಾಗಿ ನಾಯಕಿಯರು ಸಂಭಾವನೆ ಪಡೆಯುತ್ತಿದ್ದು, ದೀಪಿಕಾ ಕೂಡ ಕೋಟಿಗಟ್ಟಲೆ ಸಂಭಾವನೆ ಪಡೆಯುತ್ತಿದ್ದಾರೆ. ದೀಪಿಕಾ ಸ್ಪಿರಿಟ್ ಚಿತ್ರಕ್ಕೆ 20 ಕೋಟಿ ಸಂಭಾವನೆ ಕೇಳಿದ್ದಾರೆ ಎನ್ನಲಾಗಿದೆ. ಅದಕ್ಕೆ ಚಿತ್ರತಂಡವೂ ಒಪ್ಪಿಕೊಂಡಿತ್ತು ಎನ್ನಲಾಗಿದೆ.

ಇದನ್ನೂ ಓದಿ : ಕಾನ್ ಚಿತ್ರೋತ್ಸವದಲ್ಲಿ ಕಂಗೊಳಿಸಿದ ‘ಸಿಂದೂರ’; ಗಮನ ಸೆಳೆದ ಐಶ್ವರ್ಯಾ ರೈ, ಅದಿತಿ ರಾವ್ ಹೈದರಿ

ಆದ್ರೆ, ಇದೀಗ ನಿರಾಸೆಯುಂಟು ಮಾಡುವ ಸುದ್ದಿ ಬಂದಿದೆ.  ಸದ್ಯ ದೀಪಿಕಾ ಈ ಚಿತ್ರದಿಂದ ಹೊರ ಬಂದಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಇದಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ, ದೀಪಿಕಾ ಚಿತ್ರತಂಡಕ್ಕೆ ಹಲವು ಷರತ್ತುಗಳನ್ನು ವಿಧಿಸಿದ್ದರಂತೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಸ್ಪಿರಿಟ್‌ನ ಮೂಲ ತೆಲುಗು. ಆದರೆ, ದೀಪಿಕಾ ತೆಲುಗಿನಲ್ಲಿ ಡೈಲಾಗ್ಸ್ ಹೇಳಲ್ಲ ಎಂದಿದ್ದಾರಂತೆ. 8 ಗಂಟೆ ಕೆಲಸ ಮಾಡಿ ನಂತರ ಒಂದು ಸೆಕೆಂಡ್ ಕೂಡ ಅಲ್ಲಿರುವುದಿಲ್ಲ ಎಂದಿದ್ದಾರೆ. ಹೀಗಾಗಿ ಚಿತ್ರತಂಡ ಅವರನ್ನು ಕೈ ಬಿಟ್ಟಿದೆ ಎಂಬ ಗಾಸಿಪ್‌ಗಳು ಹರಿದಾಡುತ್ತಿವೆ.

Continue Reading

LATEST NEWS

ಉಡುಪಿ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

Published

on

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ.

ಬಿಹಾರ ಮೂಲದ ಬ್ರಹ್ಮದೇವ್ ಯಾದವ್ (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲ ರೈಲ್ವೆ ನಿಲ್ಧಾಣದ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಮುಂದಾಗಿದ್ದನು. ಈ ವೇಳೆ ಸೆನ್ ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: UPI Payment: ಇನ್ಮುಂದೆ ತಪ್ಪಾದ ಖಾತೆಗೆ ಹಣ ಪಾವತಿ ಆಗುವುದಿಲ್ಲ

ಈತನಿಂದ 690 ಗ್ರಾಂ ಗಾಂಜಾ, ಮೊಬೈಲ್ ಪೋನ್-1, ನಗದು 680 ರೂಪಾಯಿ ಮತ್ತು ಇತರೇ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page