Connect with us

DAKSHINA KANNADA

ಸರಕಾರದ ಆದೇಶವನ್ನು ಸಂಸ್ಥೆ ಎಂದೂ ಉಲ್ಲಂಘಿಸಿಲ್ಲ – ಸಂಸ್ಥೆಯ ವಿರುದ್ಧ ಮಾಡಿರುವ ಆರೋಪ ನಿರಾಧಾರ: ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಸ್ಪಷ್ಟನೆ

Published

on

ಮಂಗಳೂರು :ರಾಜ್ಯ ಸರಕಾರ ಹೊರಡಿಸಿರುವ ಕರ್ಫ್ಯೂ ಆದೇಶ ಉಲ್ಲಂಘಿಸಿ ಎಪ್ರಿಲ್ 7 ರಿಂದ ಯಾವುದೇ ತರಗತಿಗಳನ್ನು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮಂಗಳೂರಿನ ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆ ನಡೆಸಿಲ್ಲ, ಸಂಸ್ಥೆಯ ಮೇಲೆ ಮಾಡಿರುವ ಆರೋಪಗಳು ನಿರಾಧಾರವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಎಪ್ರಿಲ್ 21 ರಂದು ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಯಥಾ ಪ್ರಕಾರ ಜಾರಿಗೆ ತರಲಾಗಿದೆ. ಲಾಕ್‌ಡೌನ್ ಗಿಂತ ಮೊದಲು ಬಂದ ಪೋಷಕರೊಂದಿಗೆ 500 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಲಾಕ್ ಡೌನ್ ಜಾರಿಯಾದ ಬಳಿಕ ಪೋಷಕರು ಮಕ್ಕಳನ್ನು ಕರೆದುಕೊಂಡು ಹೋಗಲು ಬರಬೇಕಾದರೆ ಸರಕಾರದ ಕಠಿಣ ಆದೇಶವನ್ನು ಉಲ್ಲಂಘಿಸಬೇಕಾಗುತ್ತದೆ, ಕಾನೂನು ಕಣ್ಣು ತಪ್ಪಿಸಿ ಮಕ್ಕಳನ್ನು ಕರೆದುಕೊಂಡು ಹೋಗುವ ವೇಳೆ ತನಿಖಾಧಿಕಾರಿಗಳ ಕೈಗೆ ಸಿಕ್ಕಿ ಹಾಕಿಕೊಂಡರೆ ಕ್ರಿಮಿನಲ್ ಪ್ರಕರಣ ದಾಖಲಾಗುವ ಉಪಾಯ ಇದೆ ಎಂಬ ಕಾರಣದಿಂದಾಗಿ, ಕಠಿಣ ಕರ್ಫ್ಯೂ ಜಾರಿಯಾದ ಬಳಿಕ, ರಾಜ್ಯ ಸಕಾCದ ಆದೇಶವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕಳುಹಿಸಿ ಕೊಡಲಾಗುವುದಿಲ್ಲ. ಲಾಕ್ ಡೌನ್ ಜಾರಿಯಾದ ಬಳಿಕ ಹೆತ್ತವರು ಬರಬಾರದು ಈ ಬಗ್ಗೆ ಎಲ್ಲರಿಗೂ ಮುಂಗಡವಾಗಿ ತಿಳಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ನಡುವೆ, ಮುಂಬರುವ ಪರೀಕ್ಷೆಗಳ ದೃಷ್ಟಿಯಿಂದ, ವಸತಿ ಕಾಲೇಜುಗಳ ಮಾತ್ರ ನಿಲಯದಲ್ಲಿರುವ ವಿದ್ಯಾರ್ಥಿಗಳನ್ನು ಇಲ್ಲೆ ಉಳಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರು ಮಾರ್ಗಸೂಚಿಗಳನ್ನು ಹೊರಡಿಸಿದ್ದರು, ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾನದಂಡವನ್ನು ಸಂಸ್ಥೆ ಪಾಲನೆ ಮಾಡಿದೆ ಎಂದು ಹೇಳಿದೆ. .

ಆದರೆ ಸರಕಾರದ ಕಠಿಣ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಪೋಷಕರು ಸಂಸ್ಥೆಗೆ ಯಾವುದೇ ಮುನ್ಸೂಚನೆ ನೀಡಿದೆ ತಮ್ಮ ಮಕ್ಕಳನ್ನು ಕರೆದೊಯ್ಯಲು ಕ್ಯಾಂಪಸ್‌ಗೆ ಬಂದಿದ್ದರು, ಲಾಕ್‌ ಡೌನ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಮತ್ತು ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರಸ್ತುತ ದಿನದಲ್ಲಿ ಕ್ಯಾಂಪಸ್ ನೊಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು,ಸರ್ಕಾರದ ಆದೇಶವನ್ನು ಗಾಳಿಗೆ ಹಾರಿ ಕ್ಯಾಂಪಸ್‌ಗೆ ಬಂದ ಪೋಷಕರ 20-30 ಮಂದಿಯ ಗುಂಪು ಅಸಭ್ಯ ಭಾಷೆಯನ್ನು ಬಳಸಿದಾಗ ಸಂಸ್ಥೆಯು ನಾವು ಪೊಲೀಸರನ್ನು ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿತ್ತು. ದುರಾದೃಷ್ಟವಶಾತ್ ಸರ್ಕಾರದ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಯಾರು ಕೂಡ ಕ್ಯಾಂಪಸ್‌ಗೆ ಬರಬಾರದೆಂದು ಪದೇ ಪದೇ ಈ ಮೇಲ್ ಮೂಲಕ ಸಂದೇಶ ಕಳುಹಿಸಿದ್ದರೂ, ಇದನ್ನು ಉಲ್ಲಂಘಿಸಿ ಕ್ಯಾಂಪಸ್‌ಗೆ ಬಂದಿದರಲ್ಲದೆ ಸಂಸ್ಥೆಯ ತರಗತಿ ನಡೆಸುತ್ತಿದೆ ಎಂದು ಸುಳ್ಳು ಆರೋಪ ಮಾಡಿ ಸಂಸ್ಥೆಯ ವಿರುದ್ದ ಎಫ್‌ಐಆರ್‌ ದಾಖಲಿಸಲು ಕಾರಣರಾಗಿದ್ದಾರೆ.
ಇದೀಗ ಕೆಲ ಪೋಷಕರ ಒತ್ತಡ ಮತ್ತು ಜಿಲ್ಲಾಡಳಿತ ನಿರ್ದೇಶನದ ಆಧಾರದ ಮೇರೆಗೆ ತಮ್ಮ ಮಕ್ಕಳನ್ನು
ಮನೆಗೆ ಕರೆದೊಯ್ಯಲು ಎಪ್ರಿಲ್ 29ರಿಂದ ಅವಕಾಶ ನೀಡಲಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಪೋಷಕರು
ಮನೆಗೆ ಕರೆದುಕೊಂಡು ಹೋಗಲು ಸಂಸ್ಥೆಯು ನಿರ್ಬಂಧಿಸಿಲ್ಲ, ಸರ್ಕಾರದ ಕಠಿಣ ಲಾಕ್ ಡೌನ್ ಅದೇಶದ ನಡುವೆಯೂ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಬಯಸಿದರೆ, ಈಗಲೂ ಬಂದು ಕರೆದುಕೊಂಡು ಹೋಗಬಹುದು ಎಂದು ಸಂಸ್ಥೆಯು ತಿಳಿಸಿದೆ. ಕ್ಯಾಂಪಸ್ ನಲ್ಲಿ ಯಾವುದೇ ಒಂದು ವಿದ್ಯಾರ್ಥಿಗೆ ಕೂಡ ಪಾಸಿಟಿವ್ ಬಂದಿರುವುದಿಲ್ಲ, ಆರ್‌ಟಿಪಿಸಿಆರ್ ಪರೀಕ್ಷೆಗಾಗಿ ಐವರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.. ಯಾವುದೇ ವಿದ್ಯಾರ್ಥಿಗೆ ಕೋವಿಡ್ ಪಾಸಿಟಿವ್ ಬಂದರೆ, ಅವರನ್ನು ಪ್ರತ್ಯೇಕಿಸಲು ಮತ್ತು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಎಲ್ಲಾ ರೀತಿಯ ಕ್ರಮ ಸಂಸ್ಥೆ ಕೈಗೊಂಡಿದೆ,
ಈ ನಡುವೆ ಬೋರ್ಡ್ ಪರೀಕ್ಷೆಗಳನ್ನು ಎದುರಿಸಲು ಕ್ಯಾಂಪಸ್, ಸುರಕ್ಷಿತ ಮತ್ತು ಪ್ರಶಾಂತ ವಾತಾವರಣವನ್ನು ಒದಗಿಸಿದೆಯೆಂಬ ಭಾವನೆಯಿಂದ ಹಲವು ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆಯಂತೆ ಹಾಸ್ಟೆಲ್‌ನಲ್ಲಿ ಸ್ವಯಂ ಅದ್ಯಯನದಲ್ಲಿ ತೊಡಗಿದ್ದಾರೆ ಎಂದು ಸಂಸ್ಥೆಯು ತಿಳಿಸಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಎಜೆ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ಸು

Published

on

ಮಂಗಳೂರು: ಎಂಡೋಮೆಟ್ರಿಯೊಸಿಸ್ ಜಾಗೃತಿ ಮಾಸದ ಅಂಗವಾಗಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಂಡೋಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರಿಗೆ ಅಪರೂಪದ ಮಿನಿಮಲ್ ಇನ್ವೇಸಿವ್ (ಲ್ಯಾಪರೋಸ್ಕೋಪಿಕ್) ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಎಂಡೋಮೆಟ್ರಿಯೊಸಿಸ್ ಮತ್ತು ಅಡೆನೊಮಯೋಸಿಸ್ ಮಹಿಳೆಯರಲ್ಲಿ ಸಾಮಾನ್ಯವಾಗಿದ್ದರೂ ಹಲವು ಬಾರಿ ಸರಿಯಾದ ಸಮಯದಲ್ಲಿ ಗುರುತಿಸಲಾಗದೆ ತೀವ್ರ ಹೊಟ್ಟೆ ಕೆಳಭಾಗದ ನೋವು, ನೋವಿನೊಂದಿಗೆ ಮುಟ್ಟು ಮತ್ತು ಸಂತಾನೋತ್ಪತ್ತಿ ಸಮಸ್ಯೆಗಳಿಗೆ ಕಾರಣವಾಗುತ್ತದೆ

36 ವರ್ಷದ ಮಹಿಳೆ ಸುಮಾರು 10 ವರ್ಷಗಳಿಂದ ತೀವ್ರ ಹೊಟ್ಟೆ ನೋವು, ಮುಟ್ಟಿನ ಸಮಯದಲ್ಲಿ  ರಕ್ತಸ್ರಾವ ಮತ್ತು ತೀವ್ರ ಮಾಸಿಕ ನೋವಿನಿಂದ ಬಳಲುತ್ತಿದ್ದರು. ಪರೀಕ್ಷೆಯಲ್ಲಿ ಅವರಿಗೆ ಐಲಿಯೋಕೋಲಿಕ್ ಭಾಗವನ್ನು ಒಳಗೊಂಡ ಸ್ಟೇಜ್ IV ಎಂಡೋಮೆಟ್ರಿಯೊಸಿಸ್ ಇರುವುದಾಗಿ ಪತ್ತೆಯಾಯಿತು. ಅವರಿಗೆ ಲ್ಯಾಪರೋಸ್ಕೋಪಿಕ್ ಎಂಡೋಮೆಟ್ರಿಯೊಸಿಸ್ ಎಕ್ಸಿಷನ್ ಶಸ್ತ್ರಚಿಕಿತ್ಸೆ ಹಾಗೂ ಐಲಿಯೋಕೋಲಿಕ್ ನೊಡ್ಯೂಲ್ ತೆಗೆದುಹಾಕುವ ಸಂಕೀರ್ಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಯಿತು.

ಮತ್ತೊಂದು ಪ್ರಕರಣದಲ್ಲಿ, 34 ವರ್ಷದ ಮಹಿಳೆಗೆ ಡಿಫ್ಯೂಸ್ ಪೋಸ್ಟೀರಿಯರ್ ವಾಲ್ ಅಡೆನೊಮಯೋಸಿಸ್ ಜೊತೆಗೆ ಸ್ಟೇಜ್ IV ಎಂಡೋಮೆಟ್ರಿಯೊಸಿಸ್ ಪತ್ತೆಯಾಯಿತು. ಅವರಿಗೆ ಲ್ಯಾಪರೋಸ್ಕೋಪಿಕ್ ಎಂಡೋಮೆಟ್ರಿಯೊಸಿಸ್ ಎಕ್ಸಿಷನ್ ಶಸ್ತ್ರಚಿಕಿತ್ಸೆ ನಡೆಸಿ ನಂತರ ಮೈಕ್ರೋವೇವ್ ಅಬ್ಲೇಷನ್ ಮೂಲಕ ಚಿಕಿತ್ಸೆ ನೀಡಲಾಯಿತು. ಇದರಿಂದ ನೋವು ಕಡಿಮೆಯಾಗುವ ಜೊತೆಗೆ ಭವಿಷ್ಯದಲ್ಲಿ ಗರ್ಭಧಾರಣೆಯ ಅವಕಾಶವನ್ನು ಉಳಿಸಿಕೊಳ್ಳಲು ಸಹಾಯವಾಗುತ್ತದೆ

ಈ ಶಸ್ತ್ರಚಿಕಿತ್ಸಾ ತಂಡದ ನೇತೃತ್ವವನ್ನು ಡಾ. ಅರ್ಥಿಕಾ ಶೆಟ್ಟಿ ವಹಿಸಿದ್ದರು. ತಂಡದಲ್ಲಿ ಡಾ. ಟಿ.ವಿ. ತಂತ್ರಿ (ಅನಸ್ಥೀಷಿಯಾ), ಡಾ. ಭರತ್ ಶೆಟ್ಟಿ (ರೇಡಿಯಾಲಜಿ) ಹಾಗೂ ಡಾ. ರೋಹನ್ ಶೆಟ್ಟಿ (ಆಂತ್ರ ಶಸ್ತ್ರಚಿಕಿತ್ಸೆ) ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅರ್ಥಿಕಾ ಶೆಟ್ಟಿ, ಎಂಡೋಮೆಟ್ರಿಯೊಸಿಸ್ ಲಕ್ಷಣಗಳು ಇತರ ಸಾಮಾನ್ಯ ಸಮಸ್ಯೆಗಳೊಂದಿಗೆ ಹೊಂದಿಕೆಯಾಗುವುದರಿಂದ ಹಲವಾರು ಮಹಿಳೆಯರಿಗೆ ಸರಿಯಾದ ನಿರ್ಣಯ ತಡವಾಗುತ್ತದೆ ಎಂದರು. ಎಕ್ಸಿಷನ್ ಶಸ್ತ್ರಚಿಕಿತ್ಸೆ ಎಂಡೋಮೆಟ್ರಿಯೊಸಿಸ್‌ಗೆ ಅತ್ಯುತ್ತಮ ಚಿಕಿತ್ಸೆ ವಿಧಾನವಾಗಿದ್ದು, ಸಮಯೋಚಿತ ನಿರ್ಣಯ ಮತ್ತು ಮಿನಿಮಲ್ ಇನ್ವೇಸಿವ್ ಶಸ್ತ್ರಚಿಕಿತ್ಸೆಯಿಂದ ನೋವು ಕಡಿಮೆಯಾಗುವುದರ ಜೊತೆಗೆ ಸಂತಾನೋತ್ಪತ್ತಿ ಸಾಧ್ಯತೆಗಳನ್ನು ಹೆಚ್ಚಿಸಬಹುದು ಎಂದರು.

ಇದನ್ನೂ ಓದಿ : ತನ್ನ ಉದ್ಯೋಗಿಗಳಿಗೆ ‘ಮನೆಯಿಂದಲೇ ಊಟದ ಬಾಕ್ಸ್’ ತರುವಂತೆ ಸೂಚಿಸಿದ ಇನ್ಫೋಸಿಸ್!

ಸಂಕೀರ್ಣ ಸ್ತ್ರೀರೋಗ ಸಮಸ್ಯೆಗಳಿಗೆ ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುವಲ್ಲಿ ಎಜೆ ಆಸ್ಪತ್ರೆ ಮುಂದುವರಿದಿದೆ ಎಂದು ಆಸ್ಪತ್ರೆ ತಿಳಿಸಿದೆ.

 

Continue Reading

DAKSHINA KANNADA

ಉಳ್ಳಾಲ : ಗಾಂ*ಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರ ಬಂಧನ, ಓರ್ವ ಪರಾರಿ

Published

on

ಉಳ್ಳಾಲ : ಗಾಂ*ಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 51,500 ರೂಪಾಯಿ ಬೆಲೆ ಬಾಳುವ ಒಂದು ಕೆ.ಜಿ. 110 ಗ್ರಾಂ ತೂಕದ ಗಾಂಜಾ ಮತ್ತು ನಗದು 520  ರೂಪಾಯಿ, ಎರಡು ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡಿನ  ಮಂಜೇಶ್ವರ ತಾಲೂಕಿನ ಉಪ್ಪಳದ  ಶೇಕ್ ಅರ್ಬಾಜ್ ಮತ್ತು ರಶೀದ್ ಆಲ್ವಿನ್ ಬಂಧಿತ ಅರೋಪಿಗಳು. ಇನ್ನೋರ್ವ ಆರೋಪಿ ಮಂಜೇಶ್ವರದ ಅಲ್ತಾಫ್ ಪರಾರಿಯಾಗಿದ್ದಾನೆ. ಗುರುವಾರ(ಮಾ.12) ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗ್ರೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಮೂವರು ವ್ಯಕ್ತಿಗಳು ಗಾಂ*ಜಾವನ್ನು ತಂದು ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು  ಸಿಬ್ಬಂದಿಯನ್ನು ಒಳಗೊಂಡ  ತಂಡವು ದಾ*ಳಿ ನಡೆಸಿದೆ.

ಈ ವೇಳೆ  ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಗಾಂ*ಜಾ ಮತ್ತು ಇತರ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಕಳೆದ ಎಂಟು ವರ್ಷಗಳಿಂದ ಮೌನವಾಗಿದ್ದೆ…ಇನ್ನು ಸಾಧ್ಯವಿಲ್ಲ…ಬ್ರೇಕಪ್ ಆಡಿಯೋ ವೈರಲ್ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್!

ಈ ಸಂದರ್ಭದಲ್ಲಿ ಆರೋಪಿ ಅಲ್ತಾಫ್ ಎಂಬಾತ ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Continue Reading

DAKSHINA KANNADA

ಗೇರು ಸಂಶೋಧನಾ ನಿರ್ದೇಶನಾಲಯದಿಂದ ರಾಧಾಕೃಷ್ಣ ಇಟ್ಟಿಗುಂಡಿರಿಗೆ ಸನ್ಮಾನ

Published

on

ಪುತ್ತೂರು : ಭಾ.ಕೃ.ಸಂ.ಪ – ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು  ಕೃಷಿಕ ರಾಧಾಕೃಷ್ಣ ಇಟ್ಟಿಗುಂಡಿಯವರ ಸಾಧನೆ ಗುರುತಿಸಿ ಸನ್ಮಾನಿಸಿದೆ.

ಗೇರು ಬೆಳೆಯಲ್ಲಿ ಮೌಲ್ಯವರ್ಧಿತ ಉತ್ಪನ್ನಗಳ ಕೊಡುಗೆಗಾಗಿ ಮತ್ತು ಅವುಗಳ ವಿಸ್ತರಣೆಯಲ್ಲಿ  ರಾಧಾಕೃಷ್ಣ ಇಟ್ಟಿಗುಂಡಿ ಗಮನಾರ್ಹ ಪಾತ್ರವಹಿಸಿದ್ದಾರೆ. ಅವರ ಕೊಡುಗೆಯನ್ನು ಗುರುತಿಸಿ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯವು ಉತ್ತಮ ಗೇರು ಉದ್ಯಮಿ ಎಂಬುದಾಗಿ ಸನ್ಮಾನಿಸಿದೆ.

ಇದನ್ನೂ ಓದಿ : 50 ಅಡಿ ಎತ್ತರದಿಂದ ಬಿದ್ದ ಲಾರಿ; ಮನೆ ಜಸ್ಟ್ ಮಿಸ್…ತಪ್ಪಿದ ಭಾರೀ ಅನಾಹುತ!

ಇನ್ನೂ ಹೆಚ್ಚಿನ ಸಾಧನೆಗೈದು ಗೇರು ಬೆಳೆಯ ಅಭಿವೃದ್ಧಿಗೆ ಕಾರಣರಾಗಲಿ ಎಂಬ ಹಾರೈಕೆಯೊಂದಿಗೆ  ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page