Connect with us

LATEST NEWS

ಎಚ್ಚರ!! ಆನ್​ಲೈನ್ ಇನ್ವೆಸ್ಟ್​ಮೆಂಟ್ ಮಾಡುವ ನಕಲಿ ಗ್ಯಾಂಗ್​ ಪತ್ತೆ

Published

on

ಮಂಗಳೂರು/ಬೆಂಗಳೂರು: ಬೆಂಗಳೂರಿನ ಆರೋಪಿಗಳ ತಂಡವೊಂದು ವ್ಯಕ್ತಿಯೊಬ್ಬರಿಗೆ 88 ಲಕ್ಷ ರೂ. ವಂಚಿಸಿದ್ದು, ಸದ್ಯ ಸೈಬರ್ ಪೊಲೀಸರು ಬಲೆಗೆ ಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇನ್ವೆಸ್ಟ್ ಮೆಂಟ್ ಆ್ಯಡ್ ಬರುತ್ತಿದೆ ಎಂದು ನಂಬಿ ಮೋಸ ಹೋಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕೆಲವು ಟೀಂಗಳು ಫೇಕ್ ಆ್ಯಡ್ ಗಳನ್ನ ಕೊಟ್ಟು ಅಮಾಯಕರಿಗೆ ಲಕ್ಷಾಂತರ ರೂ. ಟೋಪಿ ಹಾಕಿರುವ ಘಟನೆ ನಡೆಯುತ್ತಲೇ ಇದೆ. ಈ ಘಟನೆಯೂ ಅಂತಹದ್ದೇ ಆಗಿದ್ದು, ಶ್ರೀನಿವಾಸ್ ರೆಡ್ಡಿ, ಆಕಾಶ್, ಪ್ರಕಾಶ್, ಸುನೀಲ್ ಕುಮಾರ್, ಸಾಯಿ ಪ್ರಜ್ವಲ್, ರವಿಶಂಕರ್, ಮಧುಸೂಧನ್ ರೆಡ್ಡಿ, ಸುರೇಶ್, ಕಿಶೋರ್ ಕುಮಾರ್, ಓಬಲ್ ರೆಡ್ಡಿ ಎಂಬ ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಕ್ತಿಗೆ 88 ಲಕ್ಷ ರೂ. ವಂಚನೆ ಮಾಡಿದ್ದ ಸೈಬರ್ ಕದೀಮರು ನಂತರ ಫೋನ್ ಸ್ವಿಚ್ಡ್ ಆಫ್ ಮಾಡಿ ನಾಪತ್ತೆಯಾಗಿದ್ದರು. ತನಿಖೆ ಕೈಗೊಂಡ ಪೊಲೀಸರು ಹಣ ವರ್ಗಾವಣೆ ಮಾಡಿದ್ದ ವಿವಿಧ ಖಾತೆಗಳ ಖಾತೆದಾರರ ಮಾಹಿತಿ ಸಂಗ್ರಹ ಮಾಡಿದಾಗ ಅದು ಯಶವಂತಪುರದಲ್ಲಿದ್ದ 10 ಆರೋಪಿಗಳಿಗೆ ಸಂಬಂಧಪಟ್ಟಿದ್ದು ಎಂದು ಗೊತ್ತಾಗಿದೆ. ಕೂಡಲೇ ಕಾರ್ಯಚರಣೆಗಿಳಿದ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಸಂಬಂಧಪಟ್ಟ ತ್ಯಾಗರಾಜ‌ನಗರ, ಸದಾಶಿವನಗರದ ಕಚೇರಿಗಳ ಮೇಲೆ ದಾಳಿ‌ ಮಾಡಿದಾಗ 51 ಮೊಬೈಲ್ಸ್, 2 ಲ್ಯಾಪ್ ಟಾಪ್, 2 CPU, 108 ಪಾಸ್ ಬುಕ್ ಗಳು ಮತ್ತು ಚೆಕ್ ಬುಕ್ ಗಳು, 480 ಸಿಮ್ ಕಾರ್ಡ್ ಗಳು, 27 ಎಟಿಎಂ ಕಾರ್ಡ್ ಗಳು, 42 ರಬ್ಬರ್ ಸ್ಟಾಂಪ್, 103 ಉದ್ಯಮ್ ಮತ್ತು ಜಿಎಸ್ ಟಿ ದಾಖಲೆಗಳು, 230 ಕರೆಂಟ್ ಅಕೌಂಟ್ ದಾಖಲಾತಿಗಳು ಸಿಕ್ಕಿವೆ

ಮೊಬೈಲ್ ಆ್ಯಪ್ ಮೂಲಕ ಮೋಸ :

ಸಾಮಾಜಿಕ ಜಾಲತಾಣದಲ್ಲಿ ಇನ್ವೆಸ್ಟ್​ಮೆಂಟ್ ಬಗ್ಗೆ ಜಾಹೀರಾತು ನೀಡುತ್ತಿದ್ದರು. ಮಾರ್ಕೆಂಟಿಂಗ್ ಲಿಂಕ್ ಕ್ಲಿಕ್ ಮಾಡಿದವರು ವಾಟ್ಸ್​ಪ್ ಗ್ರೂಪ್ ಸೇರುತ್ತಿದ್ದರು. ಬಳಿಕ Brandy Speed ಆ್ಯಪ್ ಇನ್ಸ್ಟಾಲ್ ಮಾಡಲು ಪುಸಲಾಯಿಸುತ್ತಿದ್ದರು. ಆ್ಯಪ್ ಇನ್ಸ್ಟಾಲ್ ಮಾಡಿದವರಿಗೆ ಹಣ ಡಬಲ್ ಮಾಡಿಕೊಡುವ ಆಮೀಷವೊಡ್ಡುತ್ತಿದ್ದರು. ಕಳ್ಳರ ಮಾತು ನಂಬಿ ಸಾರ್ವಜನಿಕರು ವಿವಿಧ ಖಾತೆಗಳಿಗೆ ಹಣ ಹಾಕುತ್ತಿದ್ದರು. ಬಳಿಕ ಹಾಕಿರೋ ಹಣವಾಗಲಿ ಲಾಭದ ಹಣವಾಗಲಿ ವಾಪಸ್ ಬರುತ್ತಿರಲಿಲ್ಲ. ಇದರಿಂದ ಮೋಸ ಹೋಗಿದ್ದೇವೆ ಎಂದು ಜನರಿಗೆ ಅರಿವಾಗುತ್ತಿತ್ತು. ಇನ್ನೂ ಈ 10 ಆರೋಪಿಗಳಲ್ಲಿ ಕೆಲವರು ಅಕೌಂಟ್ ಹೋಲ್ಡರ್ ಆಗಿದ್ದು, ಇನ್ನು ಕೆಲವರು ಏಜೆಂಟ್ ಗಳಾಗಿದ್ದಾರೆ. ಇವರೆಲ್ಲ ದುಬೈನಲ್ಲಿ ಕೂತು ಸೈಬರ್ ವಂಚನೆ ಜಾಲ ಆಪರೇಟ್ ಮಾಡೋ ಕಿಂಗ್ ಪಿನ್ ಗಳಿಗೆ ಸಹಾಯ ಮಾಡ್ತಿದ್ರು ಅನ್ನೋ ವಿಚಾರವೂ ಗೊತ್ತಾಗಿದ್ದು, ದುಬೈನಲ್ಲಿರೋ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ಸದ್ಯ ಆರೋಪಿಗಳ ಅಕೌಂಟ್ ಗಳಿಗೆ ಸಂಬಂಧಿಸಿದಂತೆ ಎನ್ ಸಿಆರ್ ಪೋರ್ಟನಲ್ಲಿ 1467 ದೂರುಗಳು ದಾಖಲಾಗಿರೋದು ಪತ್ತೆಯಾಗಿದೆ. ಉತ್ತರ ವಿಭಾಗ ಸೈಬರ್ ಪೊಲೀಸರು ತನಿಖೆ ಮುಂದುವರಿಸಿದ್ದು ಸೈಬರ್ ಜಾಲದ ಮತ್ತಷ್ಟು ರಹಸ್ಯ ಹೊರತೆಗೆಯಲು ಮುಂದಾಗಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ ..?’ ; ಸ್ವಾಮೀಜಿ ಪ್ರಶ್ನೆಗೆ ಕೊಹ್ಲಿ ಹೇಳಿದ್ದೇನು ಗೊತ್ತಾ ..?

Published

on

VIRAL : ಭಾರತೀಯರ ನೆಚ್ಚಿನ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಈ ಬಾರಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದಾರೆ. ಬಳಿಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ತಾವು ಆರಾಧಿಸುವಂತಹ ಪ್ರೇಮಾನಂದ ಮಹಾರಾಜ್ ಸ್ವಾಮೀಜಿಯ ವಾಸಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರೇಮಾನಂದ ಮಹಾರಾಜರು ವಿರಾಟ್ ಕೊಹ್ಲಿಗೆ ‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ..? ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಅಚ್ಚರಿಯ ಉತ್ತರ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿಲ್ಲದಿದ್ದಾಗ, ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದರು. ಅಲ್ಲಿಂದ ಆಶೀರ್ವಾದ ಪಡೆದ ನಂತರ, ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ ಕೊಹ್ಲಿ ಭಾರತವನ್ನು ಚಾಂಪಿಯನ್ ಮಾಡಿದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದ್ದರು. ಈಗ ಮತ್ತೊಮ್ಮೆ ಕೊಹ್ಲಿ ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ಬಾರಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿದ್ದು, ಕೊಹ್ಲಿ ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ : ‘ಆಪರೇಷನ್‌ ಸಿಂದೂರ್’ ನಂತರದ ಮುಂದಿನ ಕ್ರಮದ ಕುರಿತು ಇಂದು ಮಹತ್ವದ ಸಭೆ

ಕೊಹ್ಲಿ ಸ್ವಾಮೀಜಿಯನ್ನು ಭೇಟಿಯಾದ ಸಂದರ್ಭ, ಮಹಾರಾಜ್ ಜಿ ಕೊಹ್ಲಿ ಬಳಿ ‘ನಿಜಕ್ಕೂ ನೀವು ಸಂತೋಷವಾಗಿದ್ದೀರಾ..?’ ಎಂದು ಕೇಳಿದರು. ಅದಕ್ಕೆ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ ಕೊಹ್ಲಿ. ಕೊಹ್ಲಿ ದಂಪತಿ ಜೊತೆ ಸ್ವಾಮೀಜಿ  ಬಹಳ ಹೊತ್ತು ಮಾತನಾಡಿದ್ದಾರೆ. ಇನ್ನು ಮಹಾರಾಜ್ ಜೀ ಹೇಳುತ್ತಿರುವುದನ್ನು ಕೊಹ್ಲಿ ಗಮನವಿಟ್ಟು ಕೇಳುತ್ತಿದ್ದರು. ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾದ ನಂತರ ಕೊಹ್ಲಿ ಮತ್ತು ಅನುಷ್ಕಾ ತುಂಬಾ ಸಂತೋಷದಿಂದ ಕಾಣುತ್ತಿದ್ದರು. ಇಬ್ಬರ ಮುಖದಲ್ಲೂ ತೃಪ್ತಿಯ ಭಾವ ಸ್ಪಷ್ಟವಾಗಿ ಕಾಣುತ್ತಿತ್ತು.

Continue Reading

LATEST NEWS

ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಪೋ*ಟ, ಐವರಿಗೆ ಗಂ*ಭೀರ ಗಾಯ

Published

on

ಉಡುಪಿ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರಿದಿರುವ ನಡುವೆಯೇ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಫೋ*ಟಗೊಂಡು, ಐವರು ಗಂ*ಭೀರ ಗಾಯಗೊಂಡಿದ್ದಾರೆ.

ನಿನ್ನೆ (ಮೇ.13) ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂ*ಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂ*ಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಷ್ಟಕ್ಕೂ ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನವಷ್ಟೆ.

ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕೆ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

ಈ ಸಂದರ್ಭ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಅಧಿಕಾರಿಗಳು ಹಾಗೂ ಬಂದರಿನಲ್ಲಿ ನೂರಾರು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.
ಜೊತೆಗೆ ಕರಾವಳಿ ಕಾವಲು ಪಡೆಯ ಶಸ್ತ್ರಸಜ್ಜಿತ ಸಿಬ್ಬಂದಿಗಳು ಬೋಟ್‌ನಲ್ಲಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ: ಆದಂಪುರ್‌ ವಾಯುನೆಲೆಯಲ್ಲಿ ಪ್ರಧಾನಿ ಮೋದಿ

ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ನೀಡಲಾಗಿದೆ. ಮೀನುಗಾರರು 3 ಬೋಟ್‌ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ ಎಂದು ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಹೇಳಿದ್ದಾರೆ.

Continue Reading

LATEST NEWS

‘ಆಪರೇಷನ್‌ ಸಿಂದೂರ್’ ನಂತರದ ಮುಂದಿನ ಕ್ರಮದ ಕುರಿತು ಇಂದು ಮಹತ್ವದ ಸಭೆ

Published

on

ಮಂಗಳೂರು/ನವದೆಹಲಿ : ಉಗ್ರರಿಗ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಈಗಾಗಲೇ ‘ಆಪರೇಶನ್ ಸಿಂಧೂರ್’ ಆರಂಭವಾಗಿದೆ. ಆದರೆ ಇದರ ಮುಂದಿನ ಕ್ರಮ ಏನು ಎಂಬ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಹಿನ್ನಲೆಯಲ್ಲಿಇಂದು (ಮೇ.14) ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿ ಉನ್ನತ ಮಟ್ಟದ ಚರ್ಚೆಗಳು ನಡೆಯಲಿದೆ.

ಮೋದಿಯವರು ಭದ್ರತೆ ಕುರಿತ ಸಂಪುಟ ಸಮಿತಿಯ (CCS) ನಿರ್ಣಾಯಕ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ‘ಆಪರೇಷನ್ ಸಿಂದೂರ್’ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಘಟನೆಗಳನ್ನು ಚರ್ಚಿಸುವ ಜತೆಗೆ, ಪಾಕಿಸ್ತಾನದ ವಿರುದ್ಧ ಕಾರ್ಯತಂತ್ರದ ಪ್ರತಿಕ್ರಿಯೆಯನ್ನು ರೂಪಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ : ‘ವ್ಯಾಪಾರ ರಿಯಾಯಿತಿ ಬದಲು ಕದನ ವಿರಾಮಕ್ಕೆ ಸಹಾಯ ಮಾಡಿದ್ದೇನೆ…’ : ಟ್ರಂಪ್ ಹೇಳಿಕೆಯನ್ನು ವಿರೋಧಿಸಿದ ಭಾರತ

‘ಆಪರೇಷನ್‌ ಸಿಂದೂರ್’ ನಂತರ ಭಾರತವು ತನ್ನ ಮುಂದಿನ ಕ್ರಮದ ಬಗ್ಗೆ ಯೋಚಿಸುತ್ತಿರುವಾಗ ಇಂದಿನ ಸಭೆಯು ಮಹತ್ವದ್ದಾಗಿದೆ. ರಕ್ಷಣ, ಗೃಹ, ವಿದೇಶಾಂಗ ಮತ್ತು ಗುಪ್ತಚರ ಸಂಸ್ಥೆಗಳ ಪ್ರಮುಖ ಸಚಿವರು ಮತ್ತು ಉನ್ನತ ಅಧಿಕಾರಿಗಳನ್ನೊಳಗೊಂಡ ಸಿಸಿಎಸ್‌ ಸಭೆಯು, ಮಿಲಿಟರಿ ಮತ್ತು ಗುಪ್ತಚರ ವಲಯದಲ್ಲಿ ಭಾರತದ ಸನ್ನದ್ಧತೆಯ ಕುರಿತು ಚರ್ಚಿಸಲಾಗುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page