Connect with us

FILM

ಖ್ಯಾತ ಚಲನಚಿತ್ರ ನಿರ್ದೆಶಕ ರಾಮ್‌ ಗೋಪಾಲ್‌ ವರ್ಮಾ ಜೈಲಿಗೆ

Published

on

ಮಂಗಳೂರು/ಮುಂಬೈ : ತೆಲುಗು ಚಿತ್ರರಂಗದಲ್ಲಿ ವಿವಾದಗಳಿಗೆ ಕೇರಾಫ್ ಅಡ್ರೆಸ್ ರಾಮ್ ಗೋಪಾಲ್ ವರ್ಮಾ ಅಂದ್ರೆ  ತಪ್ಪಾಗಲ್ಲ. ಹೆಚ್ಚಾಗಿ ಅಡಲ್ಟ್ ಸಿನಿಮಾಗಳನ್ನು ಮಾಡಿ ಯುವಜನತೆ ಗಮನಸೆಳೆದಿದ್ದರು. ಮೇಲಾಗಿ ಇವರ ಚಿತ್ರಗಳ ಮೂಲಕ ಹಲವು ನಾಯಕಿಯರು ಸ್ಟಾರ್‌ ಗಿರಿ ಪಡೆದಿದ್ದಾರೆ ಎನ್ನಬಹುದು. ವರ್ಮಾ ನಿರ್ದೇಶನದ ಒಂದೇ ಒಂದು ಚಿತ್ರ ಅವರ ವೃತ್ತಿಜೀವನವನ್ನು ಬದಲಾಯಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದು ಇದೀಗ ರಾಮ್ ಗೋಪಾಲ್ ವರ್ಮಾರ ಕೊರಳಿಗೆ ಸುತ್ತಿಕೊಂಡಿದೆ. ಮುಂಬೈನ ಅಟಾರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಇತ್ತೀಚೆಗೆ ಈ ಪ್ರಕರಣದಲ್ಲಿ ಸಂಚಲನಕಾರಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರ್‌ಜಿವಿ ತಪ್ಪಿತಸ್ಥರಾಗಿದ್ದು, ಮೂರು ತಿಂಗಳ ಜೈಲು ಶಿಕ್ಷೆಯ ನೀಡಿದೆ. ಮಂಗಳವಾರ (ಜ.21) ತೀರ್ಪು ಪ್ರಕಟವಾಗಿದೆ. ರಾಮ್‌ಗೋಪಾಲ್‌ ವರ್ಮಾ ಕೋರ್ಟ್‌ಗೆ ಹಾಜರಾಗಬೇಕಿತ್ತು ಆದರೆ ವರ್ಮಾ ಕೋರ್ಟ್‌ಗೆ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ.

ಈ ಪ್ರಕರಣ ಕಳೆದ ಏಳು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಆರ್‌ಜಿವಿಗೆ ನೋಟಿಸ್‌ ನೀಡಿದರೂ ಕೋರ್ಟ್‌ಗೆ ಹಾಜರಾಗಿಲ್ಲ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ಆರ್‌ಜಿವಿ ರೂ.3.72 ಲಕ್ಷ ಪರಿಹಾರ ನೀಡಲು ಕೋರ್ಟ್‌ ಆದೇಶ ನೀಡಿದೆ. ಪಾವತಿಸಲು ವಿಫಲವಾದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.

FILM

ನಟ ಸೋನು ಸೂದ್ ವಿರುದ್ದ ಬಂಧನ ವಾರೆಂಟ್ ಜಾರಿ

Published

on

ಮಂಗಳೂರು/ಪಂಜಾಬ್ : ಖ್ಯಾತ ಬಾಲಿವುಡ್ ನಟ ಸೋನು ಸೂದ್ ವಿರುದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಲೂಧಿಯಾನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ವಾರೆಂಟ್ ಹೊರಡಿಸಿದ್ದಾರೆ. ಲುಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹದ ಆರೋಪ; ಖ್ಯಾತ ನಟಿ ಅರೆಸ್ಟ್

ಸಾಕ್ಷ್ಯ ಹೇಳಲು ಸೋನು ಸೂದ್ ಅವರಿಗೆ ನ್ಯಾಯಾಲಯಕ್ಕೆ ಬರುವಂತೆ ಸೂಚಿಸಲಾಗಿತ್ತು. ಆದರೆ ಅವರು ಹಾಜರಾಗಲು ವಿಫಲರಾದ ಕಾರಣ ಬಂಧನ ವಾರೆಂಟ್ ಹೊರಡಿಸಲಾಗಿದೆ. ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲುಧಿಯಾನ ನ್ಯಾಯಾಲಯವು ನಿರ್ದೇಶಿಸಿದೆ.ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಫೆ.10 ಕ್ಕೆ ಕೋರ್ಟ್ ನಿಗದಿಪಡಿಸಿದೆ.

ಸೋನು ಸೂದ್ ಪ್ರತಿಕ್ರಿಯೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದರ ಜೊತೆ ಮಾತನಾಡಿದ ಸೋನು ಸೂದ್, “ನಾನು ಯಾವುದಕ್ಕೂ ಬ್ರಾಂಡ್ ಅಂಬಾಸಿಡರ್ ಅಲ್ಲ, ನಾನು ಈಗಾಗಲೇ ನನ್ನ ವಕೀಲರ ಮೂಲಕ ಉತ್ತರಿಸಿದ್ದೇನೆ ಮತ್ತು ಫೆಬ್ರವರಿ 10 ರಂದು ಮತ್ತೆ ಉತ್ತರ ನೀಡುತ್ತೇನೆ. ಈ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದೆಲ್ಲ ಏನೆಂದು ನನಗೂ ತಿಳಿದಿಲ್ಲ. ಕೆಲವರು ಬೇಕೆಂದೇ ಮಾನ ಹರಾಜು ಹಾಕಲು ಈ ರೀತಿಯ ಕೆಲಸಗಳನ್ನು ಮಾಡುತ್ತಾರೆ. ಆದರೆ ಇದಕ್ಕೆಲ್ಲ ನಾನು ಹೆದರುವುದಿಲ್ಲ” ಎಂದು ಹೇಳಿದ್ದಾರೆ.

Continue Reading

FILM

ದೇಶದ್ರೋಹದ ಆರೋಪ; ಖ್ಯಾತ ನಟಿ ಅರೆಸ್ಟ್

Published

on

ಮಂಗಳೂರು/ಬಾಂಗ್ಲಾ : ಮಾಜಿ ಅಧ್ಯಕ್ಷ ಶೇಕ್ ಮುಜಿಬುರ್ ರೆಹಮಾನ್ ಮನೆಗೆ ಬಾಂಗ್ಲಾದೇಶದಲ್ಲಿ ಗಲಭೆ ಮತ್ತೆ ಭುಗಿಲೆದ್ದ ಹಿನ್ನಲೆ ಬೆಂಕಿ ಹಚ್ಚಲಾಗಿತ್ತು. ಇದರಿಂದ ಇಡೀ ಬಾಂಗ್ಲಾದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದ್ದು, ಇದೀಗ ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದ ಕಾರಣ ಭಾನುವಾರ (ಫೆ. 2) ರಾತ್ರಿ ಮೆಹರ್‌ನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಹೇಳಿದ್ದಾರೆ. ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ಅವರು ಟೀಕಿಸಿದ್ದರು ಎನ್ನಲಾಗಿದ್ದು, ಈ ವಿಷಯದ ಕುರಿತು ಪ್ರಶ್ನೆ ಮಾಡಲಾಗುತ್ತಿದೆ.

 

ಇದನ್ನೂ ಓದಿ : ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

 

ಮನೆ ದಾಳಿ :

ಮೆಹರ್ ಬಂಧನಕ್ಕೂ ಮೊದಲು ಬಾಂಗ್ಲಾದ ಜಮಲ್​ಪುರದ ಮನೆಯ ಮೇಲೆ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ಹಾಳು ಮಾಡಿದ್ದಾರೆ. ಮೆಹರ್ ಅವರ ಕುಟುಂಬ ಆ ಮನೆಯಲ್ಲಿ ವಾಸವಾಗಿದ್ದು, ಮೆಹರ್ ತಂದೆ ಇಂಜಿನಿಯರ್ ಮೊಹಮದ್ ಅಲಿಗೆ ಸೇರಿದೆ. ಸದ್ಯ ಪೊಲೀಸರು ಈ ವಿಷಯವನ್ನು ಸೂಕ್ಷ್ಮ ರೀತಿಯಲ್ಲಿ ತನಿಖೆ ನಡೆದುತ್ತಿದ್ದಾರೆ.

Continue Reading

FILM

ವೈರಲ್ ಪೋಸ್ಟ್ ನೋಡಿ ಅಭಿಮಾನಿಗಳಿಗೆ ಆಘಾತ; ಎರಡೇ ತಿಂಗಳಲ್ಲಿ ಪತಿಗೆ ಶಾಕ್ ಕೊಟ್ರಾ ಕೀರ್ತಿ ಸುರೇಶ್ ?

Published

on

ಮಂಗಳೂರು : ಮದುವೆ ಅನ್ನೋದು ಪ್ರತಿಯೊಬ್ಬರ ಬದುಕಿನ ಸುಂದರ ಕ್ಷಣ. ತಮ್ಮ ಬ್ಯೂಟಿ ಹಾಗೂ ನಟನೆಯ ಕೌಶಲ್ಯದಿಂದ ಪ್ರಖ್ಯಾತಿ ಪಡೆದಿರುವ ನಟಿ ಎಂದರೆ ಅದವೇ ಕೀರ್ತಿ ಸುರೇಶ್.  ತಮ್ಮ ಪ್ರೀತಿಯ ವಿಷಯವನ್ನು ಖಾಸಗಿಯಾಗಿಟ್ಟಿದ ಕೀರ್ತಿ ಸುರೇಶ್ ಸಂದರ್ಶನವೊಂದರಲ್ಲಿ ಮದುವೆಯ ನಂತರ ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದರು.

ಕೀರ್ತಿ ಸುರೇಶ್ ಡಿಸೆಂಬರ್ 12 ರಂದು ಗೋವಾದಲ್ಲಿ ತನ್ನ ಗೆಳೆಯನನ್ನು ವಿವಾಹವಾದರು. ಅವರ ಡೆಸ್ಟಿನೇಷನ್ ವೆಡ್ಡಿಂಗ್ ಡಿಸೆಂಬರ್ 11-12 ರಂದು ಗೋವಾದಲ್ಲಿ ನಡೆಯಿತು. ಕೀರ್ತಿ ಸುರೇಶ್ ಮೊದಲು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದರು, ಮತ್ತು ನಂತರ ಅವರ ಪತಿ ಆಂಟನಿ ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ವಿವಾಹವಾದರು. ಈ ಸಂದರ್ಭದಲ್ಲಿ ಕೀರ್ತಿ ಸುರೇಶ್ ತಮ್ಮ ಪತಿಗೆ ಲಿಪ್ ಲಾಕ್ ನೀಡಿದ್ದ ಪೋಟೋ ಭಾರೀ ವೈರಲ್‌ ಆಗಿತ್ತು.

ಮದುವೆಯ ಸಂಭ್ರಮ ಮುಗಿದ ನಂತರ, ಕೀರ್ತಿ ಸುರೇಶ್ ತಮ್ಮ ಸಿನಿಮಾ ಚಿತ್ರೀಕರಣಕ್ಕೆ ಮರಳಿದ್ದಾರೆ. ಕೀರ್ತಿ ಈ ವರ್ಷ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದು ಗೊತ್ತೇ ಇದೆ. ಅವರು ಬಾಲಿವುಡ್‌ನ ಯುವ ನಾಯಕ ವರುಣ್ ಧವನ್ ಜೊತೆಗೆ ಬೇಬಿ ಜಾನ್ ಚಿತ್ರದಲ್ಲಿ ನಟಿಸಿದ್ದರು. ಆದರೆ ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಯಾದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಸೋತಿತ್ತು. ಇದರಿಂದ ಕೀರ್ತಿ ಸುರೇಶ್ ನಿರಾಶೆಗೊಂಡಿದ್ದರು.

ಇದನ್ನೂ ಓದಿ: ಹನುಮಂತನಿಗೆ SSLC ಅಲ್ಲಿ ಸಿಕ್ಕಿರೋ ಅಂಕ ಎಷ್ಟು ಗೊತ್ತಾ..?

ಸತತವಾಗಿ ಈ ಸಿನಿಮಾ ಪ್ರಮೋಷನ್‌ಗೆ ಹೋದಾಗ ಎಂತಹ ಮಾಡರ್ನ್‌ ಡ್ರೆಸ್‌ ಇದ್ದರೂ ಕೀರ್ತಿ ತಾಳಿ ಧರಿಸಿದ್ದರು. ಇದನ್ನು ನೋಡಿದ ನೆಟ್ಟಿಗರು ಅವರನ್ನು ಹೊಗಳಿದ್ದರು. ಆದರೆ, ಈಗ ಅವರು ಕುತ್ತಿಗೆಯಲ್ಲಿ ತಾಳಿ ಇಲ್ಲದೆ ಕಾಣಿಸಿಕೊಂಡಿದ್ದಾರೆ.

ಹೌದು ಕೀರ್ತಿ ಸುರೇಶ್ ಇತ್ತೀಚೆಗೆ ತಮ್ಮ ಪತಿ ಜೊತೆಗಿನ ಫೋಟೋಶೂಟ್ ಅನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ, ಕೀರ್ತಿ ಕುತ್ತಿಗೆಯಲ್ಲಿ ಮಂಗಳಸೂತ್ರವಿಲ್ಲದೇ ಕಾಣಿಸಿಕೊಂಡರು. ಇದರಿಂದಾಗಿ ನೆಟ್ಟಿಗರು ಅವರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ತಾಳಿಗೆ ಎಕ್ಸಪೈರ್ ಡೇಟ್ ಆಗಿದೆ.  ಕೀರ್ತಿ ಸುರೇಶ್ ಅವರ ಕುತ್ತಿಗೆಯಲ್ಲಿ ಕೇವಲ ಎರಡು ತಿಂಗಳಲ್ಲೇ ತಾಳಿ ಮಾಯವಾಗಿದೆಯೇ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page