Connect with us

DAKSHINA KANNADA

ಕಾರ್ಮಿಕರ ನಡುವೆ ಹೊಯ್ ಕೈ..!! ಹೊಡೆದಾಟದಲ್ಲಿ ಸುಸ್ತಾದ ಕಾರ್ಮಿಕ.. ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾ*ವು

Published

on

ಉಡುಪಿ:  ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳಾಡಿ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃ*ತ ಪಟ್ಟ  ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಜಿ.ಎ.ಸಿದ್ದಿಕ್ (40ವ.)ಮೃ*ತಪಟ್ಟ ಕಾರ್ಮಿಕರಾಗಿದ್ದಾರೆ. ಸಿದ್ದಿಕ್ ಮೂಲತ: ಹಾಸನ ಜಿಲ್ಲೆ ಸಕಲೇಶಪುರ ಆನೆಮಹಲ್ ನಿವಾಸಿಯಾಗಿದ್ದು ಹಲವು ವರ್ಷಗಳಿಂದ ನೆಲ್ಯಾಡಿಯಲ್ಲಿ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದು ಪತ್ನಿ, ಮಕ್ಕಳೊಂದಿಗೆ ಆಲಂಪಾಡಿಯಲ್ಲಿ ವಾಸ್ತವ್ಯವಿದ್ದರು. ಇತ್ತೀಚಿನ ಕೆಲ ಸಮಯದಿಂದ ಮೆಕ್ಯಾನಿಕ್ ವೃತ್ತಿ ಬಿಟ್ಟು ಬೇರೆ ಕೆಲಸ ನಿರ್ವಹಿಸುತ್ತಿದ್ದರು.

ಸಿದ್ದಿಕ್ ಹಾಗೂ ನೆಲ್ಯಾಡಿಯ ಪ್ರಶಾಂತ ಎಂಬವರನ್ನು ಬೋಪಣ್ಣ ಎಂಬವರು ಇಂಟರ್‌ಲಾಕ್ ಅಳವಡಿಕೆ ಕೆಲಸಕ್ಕೆಂದು ಬ್ರಹ್ಮಾವರಕ್ಕೆ ಕರೆದೊಯ್ದಿದ್ದರು ಎನ್ನಲಾಗಿದೆ. ಬ್ರಹ್ಮಾವರದ ಹಾರಾಡಿ ನಿವಾಸಿ ಅರುಣ್ ಆಲ್ಪ್ರೇಡ್ ಎಂಬವರ ಅಂಗಳದಲ್ಲಿ ಎಪ್ರಿಲ್‌ 10 ರಂದು ಬೆಳಗ್ಗೆ ಕೆಲಸ ಮಾಡುತ್ತಿದ್ದಾಗ ಕಾರ್ಮಿಕರ ನಡುವೆ ಜಗಳ ನಡೆದಿದೆ. ಸಹ ಕಾರ್ಮಿಕರೊಂದಿಗಿನ ಜಗಳ ಮತ್ತು ಹೊಡೆದಾಟದಿಂದ ಸಿದ್ದಿಕ್‌ ಸುಸ್ತಾಗಿದ್ದರು. ಇದನ್ನು ಗಮನಿಸಿದ ಸಹ ಕಾರ್ಮಿಕರು ಅವರನ್ನು ಮಧ್ಯಾಹ್ನ ಚಿಕಿತ್ಸೆ ಬಗ್ಗೆ ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಸಿದ್ದಿಕ್ ದಾರಿ ಮಧ್ಯೆಯೇ ಮೃ*ತಪಟ್ಟಿರುವುದಾಗಿ ವರದಿಯಾಗಿದೆ.

ಹೊಡೆದಾಟಕ್ಕೂ ಮೊದಲು ಸಿದ್ದಿಕ್ ಅವರ ಮೊಬೈಲ್‌ಗೆ ಯಾರದ್ದೋ ಫೋನ್ ಕರೆ ಬಂದಿದ್ದು, ಆ ಬಳಿಕ ಅವರು ಮಾನಸಿಕವಾಗಿ ಕುಗ್ಗಿದಂತೆ ಕಂಡು ಬಂದಿದ್ದರು ಎಂದು ಸಹ ಕಾರ್ಮಿಕರು ತಿಳಿಸಿರುವುದಾಗಿ ಸಿದ್ದೀಕ್ ಅವರ ಪತ್ನಿ ಮೈಮುನಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಮೈಮುನಾ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾ*ವು ಪ್ರಕರಣ ದಾಖಲಾಗಿದೆ.

 

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

DAKSHINA KANNADA

ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

Published

on

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ 20 ರಂದು ಮತ್ತೆ ಕೈದಿಗಳ ನಡುವೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.

ಅಡುಗೆ ಕೆಲಸ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು.

ಇದನ್ನೂ ಓದಿ: ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ.

ಬರ್ಕೆ ಪೊಲೀಸರು ಜೈಲು ಆವರಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page