Connect with us

LATEST NEWS

ಮೀನುಗಾರರ ಬದುಕನ್ನೆ ಕಸಿದ ವರುಣ: ಸಮುದ್ರಪಾಲಾದ ನೂರಕ್ಕೂ ಅಧಿಕ ದೋಣಿಗಳು

Published

on

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸೋಮವಾರ ಸುರಿದ ಭಾರಿ ಮಳೆ ನಾಡದೋಣಿ ಮೀನುಗಾರರ ಬದುಕನ್ನೆ ಕಸಿದುಕೊಂಡಿದೆ.

ಆದಾಯಕ್ಕೆ ಆಧಾರವಾಗಿದ್ದ ದೋಣಿಗಳು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದು ಬಡ ಮೀನುಗಾರರು ದಿಕ್ಕು ತೋಚದಂತಾಗಿದ್ದಾರೆ. ಈ ಬಾರಿ ಮಳೆಗಾಲ ಪ್ರಾರಂಭದ ದಿನಗಳಲ್ಲಿ ಇವರು ಉತ್ತಮ ಮೀನುಗಾರಿಕೆ ನಡೆಸಿದರು.


ಸಿಗಡಿ, ಮೀನುಗಳು ಹೇರಳವಾಗಿ ದೊರೆತು ಕೈ ತುಂಬಾ ಆದಾಯವಾಗಿತ್ತು. ಆದರೆ ಸೋಮವಾರ ಸಂಭವಿಸಿದ ಮೇಘಸ್ಪೋಟ ಎಲ್ಲವನ್ನು ಕಸಿದುಕೊಂಡಿದೆ.

ಮೀನುಗಾರಿಕೆಗೆ ತೆರಳಲು ಕಡಲತೀರದಲ್ಲಿ ಲಂಗರು ಹಾಕಿದ್ದ ದೋಣಿಗಳು ಮಳೆಯ ನೀರಿನ ರಭಸಕ್ಕೆ ಸಮುದ್ರದ ಪಾಲಾಗಿವೆ. ಅನೇಕ ದೋಣಿಗಳನ್ನು ಮೀನುಗಾರರು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ.

ಮುಂಡಳ್ಳಿ, ಬಂದರ, ತೆಂಗಿನಗುಂಡಿ ಹಾಗೂ ಅಳ್ವೆಕೋಡಿ ಭಾಗದಲ್ಲಿ ನೆರೆಗೆ 130 ಮೀನುಗಾರರ ದೋಣಿಗಳಿಗೆ ಸಂಪೂರ್ಣ ಹಾನಿಯಾಗಿದೆ. 75 ದೋಣಿಗಳಿಗೆ ಭಾಗಶಃ ಹಾನಿಯಾಗಿದೆ. 208 ದೋಣಿಗಳ ಬಲೆ ಸಮುದ್ರ ಪಾಲಾಗಿದೆ.


ಲಕ್ಷ್ಮಿ ನಾರಾಯಣ ನಾಯ್ಕ ಎಂಬುವವರ ಮನೆಯ ಮೇಲೆ ಗುಡ್ಡ ಕುಸಿದು ಅನಂತನಾಯ್ಕ(35), ಮಗಳು ಲಕ್ಷ್ಮಿ ನಾಯ್ಕ, (40) ಮೊಮ್ಮಗ ಪ್ರವೀಣ್ (16) ಒಟ್ಟು ನಾಲ್ಕು ಜನ ಭೂಸಮಾಧಿಯಾಗಿದ್ದರು.
ಭಟ್ಕಳದಲ್ಲಿ ಮಹಾ ಮಳೆಯಿಂದ ಒಟ್ಟಾರೆ ಅಂದಾಜು 40 ಕೋಟಿ ನಷ್ಟವಾಗಿದೆ. 1500 ಹೆಚ್ಚಿನ ಅಂಗಡಿಗಳಿಗೆ ನೀರು ನುಗ್ಗಿ ನಷ್ಟವಾಗಿದೆ.

ಮೀನುಗಾರಿಕಾ ದೋಣಿಗಳಿಗೆ ಹಾನಿ ಆಗಿದೆ, ಇವೆಲ್ಲದಕ್ಕೂ ಪರಿಹಾರ ನೀಡುವುದರ ಜೊತೆಗೆ ಸಾವನಪ್ಪಿದ ಕುಟುಂಬದ ಮಕ್ಕಳಿಗೆ ಸರ್ಕಾರದ ವತಿಯಿಂದ ಶಿಕ್ಷಣದ ವೆಚ್ಚ ಭರಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page