Connect with us

LATEST NEWS

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Published

on

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಮಿಲಿಟರಿ ಜನರಲ್(ನಿವೃತ್ತ), ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ.

ಕೆಲ ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದ ಮುಷರಫ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದ ಮುಷರಫ್ ಇಂದು ಕೊನೆಯುಸಿರೆಳೆದಿದ್ದಾರೆ.


ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ಪರ್ವೇಜ್ ಅವರ ಮೇಲೆ 2007ರಲ್ಲಿ ಪಾಕಿಸ್ತಾನದಲ್ಲಿ ಸಾಂವಿಧಾನಿಕ ತುರ್ತು ಪರಿಸ್ಥಿತಿ ಬಲವಂತವಾಗಿ ಹೇರಿಕೆ, ದೇಶದ್ರೋಹ ಎಸಗಿದ ಆರೋಪವಿತ್ತು.

ಪಾಕಿಸ್ತಾನದ ಮಿಲಿಟರಿ ಜನರಲ್‌ ಆಗಿದ್ದ ಪರ್ವೇಜ್ ಮುಷರಫ್‌ ನಂತರ ಬಲವಂತದಿಂದ ಪ್ರಧಾನಿ ಕೈಯಿಂದ ಅಧಿಕಾರ ಕಿತ್ತುಕೊಂಡವರು.

ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಿಲಿಟರಿ ಆಡಳಿತವನ್ನು ತಂದವರು. ಅದಾದ ನಂತರ ಅಧ್ಯಕ್ಷರಾಗಿ ಆಯ್ಕೆಯಾದರು. ಅವರ ಮೇಲೂ ಸಾಕಷ್ಟು ಭ್ರಷ್ಟಾಚಾರದ ಆರೋಪಗಳಿವೆ.
2016 ರಿಂದಲೂ ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ ಅವರು ದುಬೈನಲ್ಲಿ ವಾಸ ಮಾಡುತ್ತಿದ್ದರು.

ಅಂದಿನಿಂದ ಅವರು ಸ್ವದೇಶವಾದ ಪಾಕಿಸ್ತಾನಕ್ಕೂ ಮರಳಿರಲಿಲ್ಲ. ಪಾಕಿಸ್ತಾನದಲ್ಲಿ ಪರ್ವೇಜ್ ಮುಷರಫ್ ವಿರುದ್ಧ ದೇಶದ್ರೋಹದ ಪ್ರಕರಣವೂ ದಾಖಲಾಗಿತ್ತು. ವಿಚಾರಣೆಗೆ ಸ್ವದೇಶಕ್ಕೆ ಆಗಮಿಸುವಂತೆ ಕೋರ್ಟ್ ಹಲವು ಬಾರಿ ನೋಟಿಸ್ ನೀಡಿತ್ತು.

Advertisement
Click to comment

Leave a Reply

Your email address will not be published. Required fields are marked *

LATEST NEWS

ದೆಹಲಿ ಸ್ಫೋ*ಟ : ಡಿಎನ್‌ಎ ಪರೀಕ್ಷೆಯಿಂದ ಹೊರಬಿತ್ತು ಕಾರು ಚಲಾಯಿಸುತ್ತಿದ್ದುದು ಯಾರೆಂಬ ಸತ್ಯ!

Published

on

ಮಂಗಳೂರು/ನವದೆಹಲಿ :  ಕೆಂಪುಕೋಟೆ ಬಳಿ  ನ.10 ರಂದು ಸಂಭವಿಸಿದ ಸ್ಫೋ*ಟದಲ್ಲಿ 12 ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಸ್ಫೋಟಕ್ಕೆ ಬಳಸಲಾದ ಹೂಂಡೈ ಐ20 ಕಾರನ್ನು ಚಲಾಯಿಸುತ್ತಿದ್ದುದು ಯಾರೆಂಬುದು ಬಯಲಾಗಿದೆ. ಪುಲ್ವಾಮಾದ ವೈದ್ಯ ಉಮರ್ ನಬಿ ಎಂಬಾತನೇ ಕಾರು ಚಲಾಯಿಸುತ್ತಿದ್ದ ಎಂಬುದು ದೃಢಪಟ್ಟಿದೆ.

ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳಲ್ಲಿ ಮುಖವಾಡ ಧರಿಸಿದ್ದ ವ್ಯಕ್ತಿಯೊಬ್ಬ ಕಾರು ಚಾಲನೆ ಮಾಡಿದ್ದು ಕಂಡುಬಂದಿತ್ತು. ಕಾರನ್ನು ಚಾಲನೆ ಮಾಡಿದ ವ್ಯಕ್ತಿ ಪುಲ್ವಾಮಾದ ವೈದ್ಯ ಉಮರ್ ನಬಿ ಎಂದು ತನಿಖಾಧಿಗಳು ಗುರುತಿಸಿದ್ದು, ಡಿಎನ್‌ಎ ಪರೀಕ್ಷೆ ಮೂಲಕ  ಖಚಿತವಾಗಿದೆ.

ಸ್ಫೋಟಗೊಂಡ ಕಾರಿನಲ್ಲಿ ಶಂಕಿತನ ದೇಹದ ಭಾಗಗಳು ಪತ್ತೆಯಾಗಿದ್ದವು. ಬಳಿಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪುಲ್ವಾಮಾದಲ್ಲಿರುವ ಡಾ. ನಬಿ ಅವರ ತಾಯಿಯಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದರು.

ಇದನ್ನೂ ಓದಿ :WATCH VIDEO : ಎಲ್ಲರೆದುರು ರಶ್ಮಿಕಾ ಮಂದಣ್ಣಗೆ  ವಿಜಯ್ ದೇವರಕೊಂಡ ಸಿಹಿಮುತ್ತು; ವೀಡಿಯೋ ವೈರಲ್

ಸ್ಫೋಟದ ಸ್ಥಳದಿಂದ ಸಂಗ್ರಹಿಸಲಾದ ಡಿಎನ್ಎ ಮಾದರಿ ಹಾಗೂ ಆತನ ತಾಯಿಯ ಡಿಎನ್ಎ ಮಾದರಿಗಳೊಂದಿಗೆ ಹೋಲಿಕೆ ಮಾಡಲಾಗಿದೆ. ಕಾರನ್ನು ಡಾ.ಉಮರ್ ನಬಿ ಚಾಲನೆ ಮಾಡುತ್ತಿದ್ದರು ಎಂಬುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಯಾಗಿದೆ.

Continue Reading

LATEST NEWS

ನ.16ರಂದು ಮಣ್ಣಗುಡ್ಡೆ ಗುರ್ಜಿ

Published

on

ಮಂಗಳೂರು: ಶರವು ಶ್ರೀ ಮಹಾಗಣಪತಿ ದೇವರ 156ನೇ ದೀಪಾರಾಧನೆಯ ಉತ್ಸವ ಮಣ್ಣಗುಡ್ಡೆ ಗುರ್ಜಿ ನವೆಂಬರ್ 16ರಂದು ಭಾನುವಾರ ವೈಭವದಿಂದ ಜರುಗಲಿದೆ.


ಮಣ್ಣಗುಡ್ಡೆ ಗುರ್ಜಿ ಸೇವಾ ಸಮಿತಿ ಟ್ರಸ್ಟ್‌, ಮಣ್ಣಗುಡ್ಡ ಗುರ್ಜಿ ಸೇವಾ ಸಮಿತಿ ಮತ್ತು ಮಣ್ಣಗುಡ್ಡ ಗುರ್ಜಿ ಸೇವಾ ಸಮಿತಿ ಮಹಿಳಾ ಘಟಕದ ವತಿಯಿಂದ ಆಯೋಜಿಸಲ್ಪಡುವ ಗುರ್ಜಿ ಉತ್ಸವದಲ್ಲಿ ಗುರ್ಜಿ ಮುಂಭಾಗದಲ್ಲಿ ಭಜನಾ ಕಾರ್ಯಕ್ರಮ ನಡೆದು ಸಂಜೆ 6 ಗಂಟೆಯಿಂದ ಮಹಾಪೂಜೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದನ್ನೂ ಓದಿ: ಕುದ್ರೋಳಿ ಕ್ಷೇತ್ರದಲ್ಲಿ ಇಂದು ಭೈರವಾಷ್ಟಮಿ

ಸಂಜೆ 6.30ರಿಂದ ಸುದೀಕ್ಷ ಆರ್ ಸುರತ್ಕಲ್‌ ಇವರಿಂದ ನಾದಾರ್ಚನೆ, 8 ಗಂಟೆಗೆ ಸಭಾ ಕಾರ್ಯಕ್ರಮ, ರಾತ್ರಿ 9.30ರಿಂದ ನೃತ್ಯೋಲ್ಲಾಸ ಹಾಗೂ ಸಂಭವಾಮಿ ಯುಗೇ ಯುಗೇ (ದಶಾವತಾರ) ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

Continue Reading

FILM

WATCH VIDEO : ಎಲ್ಲರೆದುರು ರಶ್ಮಿಕಾ ಮಂದಣ್ಣಗೆ  ವಿಜಯ್ ದೇವರಕೊಂಡ ಸಿಹಿಮುತ್ತು; ವೀಡಿಯೋ ವೈರಲ್

Published

on

ಮಂಗಳೂರು/ಹೈದರಾಬಾದ್ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಂಬಂಧದ ಬಗೆಗಿನ ಸುದ್ದಿಯೇನು ಹೊಸತಲ್ಲ.  ಇವರಿಬ್ಬರ ಪ್ರೀತಿ, ಮದುವೆ ಬಗ್ಗೆ ಆಗಾಗ ಗಾಸಿಪ್‌ಗಳು ಹರಿದಾಡುತ್ತಿರುತ್ತವೆ. ಇದೀಗ ಈ ಗಾಸಿಪ್‌ಗೆ ಪುಷ್ಠಿ ಕೊಡುವ ವೀಡಿಯೋವೊಂದು ವೈರಲ್ ಆಗುತ್ತಿದೆ.

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಹೀಗಾಗಿ ಚಿತ್ರ ತಂಡ ನವೆಂಬರ್ 12 ರಂದು ಹೈದರಾಬಾದ್​ನಲ್ಲಿ ಸಕ್ಸಸ್ ಮೀಟ್ ಇಟ್ಟುಕೊಂಡಿತ್ತು. ಕಾರ್ಯಕ್ರಮಕ್ಕೆ ವಿಜಯ್ ದೇವರಕೊಂಡ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ರಶ್ಮಿಕಾ ಕಾಣುತ್ತಿದ್ದಂತೆ ವಿಜಯ್ ದೇವರಕೊಂಡ ನಕ್ಕಿದ್ದಾರೆ. ರಶ್ಮಿಕಾ ಕೈ ಹಿಡಿದು ಕುಲುಕಿದ್ದಾರೆ. ಬಳಿಕ ಕೈಗೆ ಮುತ್ತಿಕ್ಕಿದ್ದಾರೆ. ಇದರಿಂದ ರಶ್ಮಿಕಾ ಮತ್ತಷ್ಟು ಖುಷಿಕೊಂಡರು. ಸದ್ಯ  ಈ ವೀಡಿಯೋ ವೈರಲ್ ಆಗಿದೆ.

ಇದನ್ನೂ ಓದಿ :  ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಹುಭಾಷಾ ನಟಿ ನಯನ ತಾರಾ ದಂಪತಿ ಭೇಟಿ

ಈ ವೀಡಿಯೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಇವರದ್ದು ಬೆಸ್ಟ್ ಜೋಡಿ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page