Connect with us

LATEST NEWS

ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್‌ ಮುಖರ್ಜಿ ಇನ್ನಿಲ್ಲ..!

Published

on

ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್‌ ಮುಖರ್ಜಿ ಇನ್ನಿಲ್ಲ..!

ನವದೆಹಲಿ :  ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್‌ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಮಸ್ಯೆ ಉದ್ಭವವಾಗಿತ್ತು.

ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು. ಆದರೆ, ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು.

ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ವೇಳೆ ಅವರು ಶಾಶ್ವತ ಕೋಮಾಕ್ಕೆ ಜಾರಿದ್ದರು.

ಆದರೆ, ಎಷ್ಟೇ ಪ್ರಯತ್ನ ನಡೆಸಿದರು ಪ್ರಣಬ್‌ ಮುಖರ್ಜಿ ಚಿಕಿತ್ಸೆಗೆ ಸ್ಪಂದಿಸಿಲ್ಲ. ಹೀಗಾಗಿ ಸಂಜೆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ.

ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದರು.

ಮಾಜಿ ರಾಷ್ಟ್ರಪತಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ , ಕಾಂಗ್ರೆಸ್ ನಾಯಕರುಗಳು, ಸಂಸದರು ರಾಜಕೀಯ ನಾಯಕರು ಅವರು ಸಂತಾಪ ವ್ಯಕ್ತಪಡಿಸಿದ್ದರು.

 

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರಿನ ಬಿಜೆಪಿ ಮುಖಂಡನ ಪುತ್ರನ ವಂಚನೆ ಪ್ರಕರಣದಲ್ಲಿ ಭೂಗತ ಪಾತಕಿ ಎಂಟ್ರಿ !?

Published

on

ಪುತ್ತೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ ರಾವ್ ಓರ್ವ ಯುವತಿಯನ್ನು ಪ್ರೀತಿಸಿ ಗರ್ಭಿಣಿ ಮಾಡಿದ್ದ ಪ್ರಕರಣದಲ್ಲಿ ಈಗ ಭೂಗತ ಪಾತಕಿ ಕಲಿ ಯೋಗೀಶ್ ಎಂಟ್ರಿಯಾಗಿದೆ.

ವರದಿಗಾರರೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ​​ ಕರೆ ಮಾಡಿದ ವ್ಯಕ್ತಿ, ಕೃಷ್ಣ ಜೆ.ರಾವ್‌ ಜೈಲಿನಿಂದ ಹೊರ ಬಂದ ಮೇಲೆ ಯುವತಿಯನ್ನು ಮದುವೆ ಆಗಿಲ್ಲ ಎಂದಾದರೆ ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ ನೀಡಿದ್ದು, ಅಷ್ಟೇ ಅಲ್ಲದೆ, ಹಿಂದೂ ಸಂಘಟನೆ ಮತ್ತು ಬಿಜೆಪಿ ನಾಯಕರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದ ಆಡಿಯೋ ವೈರಲ್ ಆಗಿದೆ.

ವರದಿಗಾರರೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೇಶ್ ಅಂತೇಳಿ ಕರೆ ಮಾಡಿದ ವ್ಯಕ್ತಿ, ಬಿಜೆಪಿ ಮುಖಂಡನ ಪುತ್ರನ ಪ್ರಕರಣದ ಬಗ್ಗೆ ನಮಗೂ ದೂರು ಬಂದಿದೆ. ಓರ್ವ ಯುವತಿಯನ್ನು ಗಭಿ೯ಣಿ ಮಾಡಿ ಮೋಸ ಮಾಡಿದ್ದು, ಈಗ ಜೈಲಿನಲ್ಲಿ ಇರಬೇಕು. ಅನ್ಯಾಯವಾಗಿದೆ ಎಂದು ದೂರು ಬಂದಿದೆ. ಸಂತ್ರಸ್ತೆ ಮನೆಯವರ ಪರ ರಾಜಕೀಯದವರು ಯಾರೂ ನಿಲ್ಲುತ್ತಿಲ್ಲ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಹಿಂದೂ ಅಲ್ಲವೇ? ಅವರ ಬಳಿ ಹಣವಿಲ್ಲ ಅಂತ ಬಿಟ್ಟುಬಿಡುವುದಾ ಹಿಂದೂ ಸಂಘಟನೆ ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು: ಪ್ರೀತಿಸಿ ವಂಚನೆ, ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ಮೈಸೂರಿನಲ್ಲಿ ಅರೆಸ್ಟ್

ನಾನು ಹೇಳುವುದು ಇಷ್ಟೇ ಎರಡು ಸಮುದಾಯದರು ಕೂತು ಮಾತನಾಡಿ ಇತ್ಯರ್ಥ ಮಾಡಿ ಯುವತಿಯೊಂದಿಗೆ ಆ ಯುವಕನ ಮದುವೆ ಮಾಡಬೇಕು. ಜೈಲಿನಿಂದ ಹೊರ ಬಂದ ಮೇಲೆ ಹಿಂದೂ ಸಂಘಟನೆಗಳು ಮುಂದೆ ನಿಂತು ಮದುವೆ ಮಾಡಿಸಲಿ. ಒಂದು ವೇಳೆ ಮದುವೆ ಆಗಿಲ್ಲ ಅಂದರೆ ಆರೋಪಿ ಕೃಷ್ಣ ಜೆ.ರಾವ್​ಗೆ ಗುಂಡು ಹೊಡೆಯುತ್ತೇವೆ ಬದುಕುವುದೇ ಬೇಡ ಎಂದು ಹೇಳಿದ್ದಾನೆ.

ಮತ್ತೆ ಮಾತು ಮುಂದುವರೆಸಿದ ವ್ಯಕ್ತಿ, ನಟ ಗಣೇಶ್-ಶಿಲ್ಪಾ ವಿಚಾರದಲ್ಲೂ ಹೀಗೇ ಆಗಿತ್ತು. ಆವಾಗ ನನ್ನ ಬಾಸ್ ರವಿ ಪೂಜಾರಿ ಜನ ಕಳಿಸಿದ್ದರು. ಗಣೇಶ್-ಶಿಲ್ಪಾ ಮದುವೆಯನ್ನು ನಾವೇ ಮಾಡಿಸಿದ್ದು ಎಂದಿದ್ದಾರೆ.

 

Continue Reading

DAKSHINA KANNADA

“ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧವನ್ನು ಪುನರಾವರ್ತಿಸುವಂತಿಲ್ಲ” ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

Published

on

ಮಂಗಳೂರು/ಬೆಂಗಳೂರು: ಇನ್ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ, ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಹೈಕೋರ್ಟ್ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಇಂದು ಆದೇಶ ನೀಡಿದೆ.

ಕೋಮುಗಲಭೆಗಳಿಗೆ ಪ್ರಚೋದನೆ ನೀಡುವ ಭಾಷಣ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ದೂರುದಾರು ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂತು.

ಸರ್ಕಾರದ ಪರ ವಕೀಲರು ಮತ್ತು ಹರೀಶ್ ಪೂಂಜ ಪರ ವಕೀಲರು ಸಮಯಾವಕಾಶ ಕೇಳಿದರು. ಆದರೆ ಇಬ್ರಾಹಿಂ ಪರ ವಕೀಲ ಎಸ್ ಬಾಲನ್ ಅವರು ಸಮಯಾವಕಾಶ ನೀಡುವುದನ್ನು ವಿರೋಧಿಸಿ ವಾದ ಪ್ರಾರಂಭಿಸಿದರು. ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸದೇ ಇದ್ದರೆ ಅವರು ಅಪರಾಧವನ್ನು ಪುನರಾವರ್ತಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಿ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಪಡೆಯುತ್ತಾರೆ. ಇದು ಸರಿಯಾದ ಕ್ರಮವಲ್ಲ ಎಂದು ಎಸ್ ಬಾಲನ್ ವಾದಿಸಿದರು.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆ ಇಟ್ಟ ಹೆಡ್‌ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ತಸ್ಲಿಂ ಸೇರಿ 5 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಆಗಸ್ಟ್ 0 7ರವರೆಗೆ ತಡೆಯಾಜ್ಞೆ ಮುಂದುವರೆಸಿ “ಅರ್ಜಿದಾರ ಹರೀಶ್ ಪೂಂಜ ಯಾವುದೇ ದ್ವೇಷ ಭಾಷಣ, ಈಗಾಗಲೇ ಅವರ ವಿರುದ್ಧ ದಾಖಲಾಗಿರುವ ಅಪರಾಧಿಕ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

Continue Reading

DAKSHINA KANNADA

ಲಂಚಕ್ಕೆ ಬೇಡಿಕೆ ಇಟ್ಟ ಹೆಡ್‌ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ; ತಸ್ಲಿಂ ಸೇರಿ 5 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

Published

on

ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಕಾರಿನ ದಾಖಲೆಯನ್ನು ದೂರುದಾರರಿಗೆ ವಾಪಸು ನೀಡಲು 50 ಸಾವಿರ ಲಂಚ ಬೇಡಿಕೆ ಇಟ್ಟು ಬಳಿಕ 5 ಸಾವಿರ ಲಂಚ ಪಡೆಯುವಾಗ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಸ್ಲಿಂ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಚಿನ್ನದಂಗಡಿಗೆ ನುಗ್ಗಿ 3 ಕೆಜಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿಯಾದ ಕಳ್ಳರು

ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page