Connect with us

LATEST NEWS

ಮಾಜಿ ರಾಜ್ಯಸಭಾ ಸಂಸದ, ಹಿರಿಯ ಪತ್ರಕರ್ತ ಚಂದನ್ ಮಿತ್ರಾ ನಿಧನ..

Published

on

ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ನಿಧನರಾಗಿದ್ದಾರೆ.

ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ ನೀಡಿದ್ದು, ಟ್ವೀಟ್ ಮಾಡಿ ತಮ್ಮ ನೋವು ಹಂಚಿಕೊಂಡಿದ್ದಾರೆ.

ಕಳೆದ ರಾತ್ರ ನಮ್ಮ ತಂದೆ ಚಂದನ್ ಮಿತ್ರಾ ಅವರು ನಿಧನರಾಗಿದ್ದು, ಕಳೆದ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಚಂದನ್ ಮಿತ್ರಾ ದೆಹಲಿಯ ದಿ ಪಯೋನಿಯರ್ ಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಅಲ್ಲದೆ ಅವರು ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು – ಮೊದಲಿಗೆ 2003 ರಿಂದ 2009 ರವರೆಗೆ ನಾಮನಿರ್ದೇಶಿತ ಸಂಸದರಾಗಿ ಮತ್ತು 2010 ರಿಂದ 2016 ರವರೆಗೆ ಮಧ್ಯಪ್ರದೇಶದಿಂದ ಭಾರತೀಯ ಜನತಾ ಪಕ್ಷದ ಸಂಸದರಾಗಿ ಆಯ್ಕೆಯಾಗಿದ್ದರು.  2018 ರಲ್ಲಿ ಮಿತ್ರಾ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದರು.

ಇನ್ನು ಇಂದು ನಿಧನರಾದ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರ ಸಾವಿಗೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದು, ‘ಚಂದನ್ ಮಿತ್ರ ಅವರು ತಮ್ಮ ಬುದ್ಧಿಶಕ್ತಿ ಮತ್ತು ಒಳನೋಟಗಳಿಂದ ನೆನಪಿನಲ್ಲಿ ಉಳಿಯುತ್ತಾರೆ.

ಅವರು ಮಾಧ್ಯಮ ಹಾಗೂ ರಾಜಕೀಯ ಜಗತ್ತಿನಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

DAKSHINA KANNADA

ಜಪ್ಪಿನಮೊಗರು ನಾರಾಯಣಗುರು ಮಂದಿರದಲ್ಲಿ ಆರೋಗ್ಯ ತಪಾಸಣಾ ಶಿಬಿರ

Published

on

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಭಾನುವಾರ(ಫೆ.08) ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಆಯೋಜಿಸಲಾಗಿತ್ತು.

ಕಂಕನಾಡಿ ಗರೋಡಿಯ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಮೊಕ್ತೇಸರ ಚಂದ್ರನಾಥ್ ಅತ್ತಾವರ  ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯವನ್ನು ದೇವರು ಕರುಣಿಸುತ್ತಾರೆ ಎಂಬುದು  ನಮ್ಮ ನಂಬಿಕೆ. ಆದರೆ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರವೂ ಇದೆ. ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ. ಹಾಗಿರುವಾಗ ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರಬೇಕೆಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ. ಸಹಕಾರಿ ಸಂಘಗಳ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ಪ್ರಯೋಜನ ಲಭಿಸುತ್ತಿದ್ದು, ಅದರ ಪ್ರಯೋಜನ ಪಡೆಯಬೇಕೆಂದರು.  ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಮನೋಜ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ :WATCH VIDEO : ಉಡುಪಿ : ಕಬ್ಯಾಡಿಯಲ್ಲಿ ಕಾಂಪೌಂಡ್‌ನಲ್ಲಿ ಅಡ್ಡಾಡಿದ ಚಿರತೆ; ವೀಡಿಯೋ ವೈರಲ್!

ಕದ್ರಿಯ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಹಾಗೂ ಮುಕ್ಕ ಶ್ರೀನಿವಾಸ್ ಇನಿಸ್ಟಿಟ್ಯೂಟ್‌ ಆಫ್‌ ಡೆಂಟಲ್ ಸಾಯನ್ಸ್ ಇದರ ತಜ್ಞ ವೈದ್ಯರು ವೈದ್ಯಕೀಯ ತಪಾಸಣೆಯನ್ನು ನಡೆಡಿಕೊಟ್ಟರು.

Continue Reading

LATEST NEWS

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ಆಕಸ್ಮಿಕ ಬೆಂಕಿ ದುರಂತ

Published

on

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರ ಘಡಕ್ಕೆ ಸಂಚರಿಸುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ಬಸ್ಸನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು. ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮದ್ಯವೆಂದು ಸ್ಪಿರಿಟ್ ಸೇವಿಸಿ ಯುವಕ ಸಾವು; ಇಬ್ಬರ ಬಂಧನ

ಚಾಲಕನ ತಕ್ಷಣದ ಕ್ರಮದಿಂದಾಗಿ ಸಂಭವಿಸಬಹುದಾದ ಭಾರಿ ಅವಘಡ ತಪ್ಪಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲವೆಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ದೇಶದ ಆರ್ಥಿಕ ಪ್ರಗತಿಗೆ ಪೂರಕವಾಗಿದೆ ಕೇಂದ್ರ ಬಜೆಟ್ : ಎಸ್.ಎಸ್.ನಾಯಕ್

Published

on

ಮಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ವರ್ಷದ ಬಜೆಟ್‌ ದೇಶದ ಆರ್ಥಿಕ ಪ್ರಗತಿಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಹಿರಿಯ ಲೆಕ್ಕಪರಿಶೋಧಕ, ಆರ್ಥಿಕ ತಜ್ಞ ಎಸ್‌. ಎಸ್‌. ನಾಯಕ್‌  ಅಭಿಪ್ರಾಯ ಪಟ್ಟಿದ್ದಾರೆ. ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ ವತಿಯಿಂದ ಲೇಡಿಹಿಲ್‌ ನ ಸೀ ವ್ಯೂ ಹೊಟೇಲ್‌ ಸಭಾಂಗಣದಲ್ಲಿ ಶನಿವಾರ(ಫೆ.07)ಏರ್ಪಡಿಸಿದ್ದ ಡಿ ಕೋಡಿಂಗ್ ಯೂನಿಯನ್ ಬಜೆಟ್ 2026 ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ ಎಂದು ಕೆಲವರು ಟೀಕೆ ಮಾಡುತ್ತಾರೆ. ಆದರೆ ಇಂತಹ ಆರೋಪದಲ್ಲಿ ಹುರುಳಿಲ್ಲ. ಏಕೆಂದರೆ ಬಜೆಟ್‌ನ್ನು ಪೂರ್ತಿಯಾಗಿ ಓದಿ ಆರ್ಥೈಸಿಕೊಳ್ಳದವರು ಮಾತ್ರ ಈ ರೀತಿಯಾಗಿ ಹೇಳಿಕೆ ನೀಡುತ್ತಾರೆ ಎಂದರು.

ಈ ಬಜೆಟ್‌ನಲ್ಲಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಯಾವುದೇ ಹೆಚ್ಚುವರಿ ತೆರಿಗೆಯನ್ನು ಹಾಕದೆ ಜನರಿಗೆ ಅನೇಕ ಪ್ರಯೋಜನಗಳನ್ನು ನೀಡಿದೆ. ಭಾರತವು ಜಗತ್ತಿನ ಅತಿ ವೇಗದ ಆರ್ಥಿಕ ಶಕ್ತಿಯಾಗಿ ಮೂಡಿಬರುತ್ತಿದ್ದು, ಅದಕ್ಕೆ ಪೂರಕವಾಗಿ ಈ ಬಜೆಟ್‌ ಬಂದಿದೆ.  ಬಂಡವಾಳ ವೆಚ್ಚದಲ್ಲಿ ಏರಿಕೆಯಾಗಿದ್ದು, 12.20 ಲಕ್ಷ ಕೋಟಿ ರೂಪಾಯಿ  ಮೀಸಲಿಡಲಾಗಿದೆ. ಇದು ಬಜೆಟ್‌ ಗಾತ್ರದ ಶೇಕಡಾ 22.80 ಆಗಿದ್ದು, ಆರ್ಥಿಕ ಪ್ರಗತಿಗೆ ಪೂರಕವಾಗಿದೆ. ಮುಂಬರುವ ದಿನಗಳಲ್ಲಿ ದೇಶದ ನಂ.1 ಆರ್ಥಿಕ ಶಕ್ತಿಯಾಗಿ ಮೂಡಿಬರಲು ಸಹಾಯಕವಾಗಿದೆ ಎಂದರು.

ಇದನ್ನೂ ಓದಿ : ಮಂಗಳೂರು : ಕೆಎಂಸಿ ಆಸ್ಪತ್ರೆಯಲ್ಲಿ ‘ಕ್ಯಾನ್ಸರ್ ತಪ್ಪಿಸೋಣ’ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕೆನರಾ ಬ್ಯಾಂಕ್‌ ಮಂಗಳೂರು ವೃತ್ತ ಕಚೇರಿಯ ಜನರಲ್‌ ಮ್ಯಾನೇಜರ್‌ ಮತ್ತು ಮುಖ್ಯಸ್ಥ  ಮಂಜುನಾಥ್‌ ಬಿ. ಸಿಂಘೈ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಒಮಾನ್ ದೇಶದ ಸಿಬಿಎಫ್‌ಎಸ್‌- ಸೆಂಟರ್‌ ಫಾರ್‌ ಟ್ರೈನಿಂಗ್‌ ಇದರ ನಿರ್ದೇಶಕ ಡಾ.ಕೆ. ರಾಜೇಶ್‌ ನಾಯಕ್‌, ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ನ ಅಧ್ಯಕ್ಷ ಯು.ರಾಮರಾವ್‌ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page