Connect with us

LATEST NEWS

ಕೊರೊನಾ ವೈರಸ್ ಜೊತೆಯಲ್ಲೇ ಕಾಡುತ್ತಿದೆ ಭೀಕರ ಬ್ಲ್ಯಾಕ್ ಫಂಗಸ್..!

Published

on

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಭಾರೀ ಆತಂಕ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ  ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಕುರಿತಂತೆ ವಿಕ್ಟೋರಿಯಾ ಆಸ್ಪತ್ರೆ ಇಎನ್ ಟಿ ಮುಖ್ಯಸ್ಥ ಡಾ.ಎಚ್.ಎಸ್ ಸತೀಶ್ ನೇತೃತ್ವದಲ್ಲಿ ರಚಿಸಿರುವ ತಜ್ಞರ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸೋಮವಾರ ಮಹತ್ವದ ಸಭೆ  ನಡೆಸಿ ಬಳಿಕ ಮಾತನಾಡಿದರು.

ಬ್ಲ್ಯಾಕ್ ಫಂಗಸನ್ನು ಅಧಿಸೂಚಿತ ಕಾಯಿಲೆ ಎಂದು  ಪರಿಗಣಿಸಿದೆ.  ಹೀಗಾಗಿ ಯಾವುದೇ ವೈದ್ಯರು ಈ ಕಾಯಿಲೆಯನ್ನು ಮುಚ್ಚಿಡುವಂತಿಲ್ಲ.

 

 

ಅತಿಯಾದ ಸ್ಟಿರಾಯ್ಡ್  ಬಳಕೆಯೂ ಬ್ಲ್ಯಾಕ್ ಫಂಗಸ್ಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಇಲ್ಲದೆ ಸ್ಟಿರಾಯ್ಡ್ ಬಳಸುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆಯನ್ನೂ ಸರ್ಕಾರ ನೀಡಿದೆ.

ಮತ್ತೊಂದೆಡೆ, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇಂದಿನಿಂದ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಧಾನ ಚಿಕಿತ್ಸಾ ಘಟಕ ಹಾಗೂ ಗುರುವಾರದಿಂದ ರಾಜ್ಯಾದಾದ್ಯಂತ ಆರು ಕಡೆ ಪ್ರಾದೇಶಿಕ ಚಿಕಿತ್ಸಾ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ, ಮೈಸೂರು ವೈದ್ಯಕೀಯ ಕಾಲೇಜು, ಶಿವಮೊಗ್ಗ ವೈದ್ಯಕೀಯ ಕಾಲೇಜು, ಮಣಿಪಾಲ, ಮಂಗಳೂರಿನ ವೆನ್ ಲಾಕ್, ಕಲಬುರಗಿಯ ಜಿಮ್ಸ್, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ…

ಸಚಿವ ಡಾ.ಸುಧಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

DAKSHINA KANNADA

ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ ಪೂರ್ಣ; ಸಂತ್ರಸ್ತರ ನೆನಪಿನ ಪಾರ್ಕ್‌ ಬಳಿ ಶ್ರದ್ಧಾಂಜಲಿ ಸಲ್ಲಿಕೆ

Published

on

ಮಂಗಳೂರು: ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 15 ವರ್ಷ ತುಂಬುತ್ತಿದೆ.

ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ.

ಗುರುವಾರ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಣಂಬೂರು ಎಸಿಪಿ ಕೆ ಶ್ರೀಕಾಂತ್ , ತಹಶೀಲ್ದಾರ್ ನವೀನ್ ಕುಮಾರ್ ಉಪಸ್ಥಿತರಿದ್ದರು.

ಏನಿದು ಘಟನೆ?

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬೈನಿಂದ ಮಂಗಳೂರಿಗೆ ಬಂದ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಎಲ್ಲ ಸುರಕ್ಷಾ ಸಂಕೇತಗಳನ್ನು ಆಧರಿಸಿಯೇ ಇಳಿದಿತ್ತು. ಆದರೆ ರನ್‌ವೇಯಲ್ಲಿ ನಿಲ್ಲಬೇಕಾದ ವಿಮಾನವು ನೇರವಾಗಿ ಮುಂದಕ್ಕೆ ಚಲಿಸುತ್ತಲೇ ಸೂಚನಾ ಗೋಪುರದ ಕಂಬಗಳಿಗೆ ಡಿಕ್ಕಿಯಾಗಿ, ಅದನ್ನು ತುಂಡರಿಸಿ ಆಳ ಪ್ರದೇಶಕ್ಕೆ ಉರುಳಿ ಬಿತ್ತು.

ಬೆಂಕಿ ಹತ್ತಿಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃ*ತರಾಗಿದ್ದರು. ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸಹಿತ 166 ಮಂದಿ ಪ್ರಯಾಣಿಸುತ್ತಿದ್ದರು. ಅಪ*ಘಾತದಲ್ಲಿ 8 ಮಂದಿ ಮಾತ್ರ ಬದುಕುಳಿದಿದ್ದರು.

ಮುಖ್ಯ ಪೈಲಟ್‌ನ ನಿರ್ಲಕ್ಷ್ಯ, ಸಹ ಪೈಲಟ್‌ನ ಸಲಹೆ ಪಾಲಿಸದೆ ಇದ್ದದ್ದೇ ಈ ದುರ್ಘಟನೆಗೆ ಕಾರಣ ಎಂದು ನಂತರ ನಡೆದ ತನಿಖೆಯಲ್ಲಿ ಪತ್ತೆಯಾಯಿತು.

Continue Reading

FILM

ವೀಕ್ಷಕರಿಗೆ ಗುಡ್​ ಬೈ ಹೇಳಲು ಮುಂದಾದ ಕನ್ನಡದ ಟಾಪ್ ಸೀರಿಯಲ್ ಸೀತಾರಾಮ

Published

on

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಾಕಷ್ಟು ಜನಪ್ರಿಯ ಧಾರಾವಾಹಿಗಳಲ್ಲಿ ಸೀತಾರಾಮ ಧಾರಾವಾಹಿಯು ಕೂಡ ಒಂದು. ಇತ್ತೀಚೆಗಂತೂ ಈ ಧಾರವಾಹಿ ಸಖತ್‌ ಆಗಿ ಸೌಂಡ್‌ ಮಾಡಿತ್ತಾ ಪ್ರೇಕ್ಷಕರ ಗಮನ ಸೆಳೆದಿತ್ತು. ಆದರೆ ಇದೀಗ ಸೀತಾರಾಮ ಧಾರಾವಾಹಿಯು ತನ್ನ ಕಥೆಗೆ ಅಂತ್ಯ ಹಾಡುತ್ತಿದೆ.

ಹೌದು.. 2023 ಜುಲೈ 17ರಂದು ಸೀತಾ ರಾಮ ಧಾರಾವಾಹಿ ತೆರೆಗೆ ಬಂದಿತ್ತು. ಆದ್ರೆ 2025ಕ್ಕೆ ವೀಕ್ಷಕರಿಗೆ ಗುಡ್‌ ಬೈ ಹೇಳುತ್ತಿದೆ. ಈಗಾಗಲೇ 400 ಎಪಿಸೋಡ್‌ಗಳನ್ನು ಪೂರೈಸಿದೆ. ಮೇ 20ರಂದು ಈ ಧಾರಾವಾಹಿಯ ಕೊನೆಯ ದಿನದ ಶೂಟಿಂಗ್‌ ಮುಗಿಸಿದೆ. ಇಡೀ ತಂಡದವರು ಕೇಕ್‌ ಕಟ್‌ ಮಾಡಿ, ಸೀರಿಯಲ್‌ಗೆ ಮುಕ್ತಾಯ ಹೇಳಿದ್ದಾರೆ. ಅಷ್ಟೇ ಅಲ್ಲದೆ ಈ ಸಂದರ್ಭದಲ್ಲಿ ಎಲ್ಲರೂ ಭಾವುಕರಾಗಿದ್ದಾರೆ.

ಕೊನೆಯ ದಿನದ ಶೂಟಿಂಗ್‌ನಲ್ಲಿ ನಟ ಗಗನ್‌ ಚಿನ್ನಪ್ಪ, ವೈಷ್ಣವಿ ಗೌಡ, ಪದ್ಮಕಲಾ ಡಿ ಎಸ್‌, ಕಲಾಗಂಗೋತ್ರಿ ಮಂಜು, ಮುಖ್ಯಮಂತ್ರಿ ಚಂದ್ರು, ಸಿಂಧು ರಾವ್‌, ಪೂಜಾ ಲೋಕೇಶ್‌, ಜಯದೇವ್‌ ಮೋಹನ್‌, ಅಶೋಕ್‌ ಶರ್ಮಾ, ರೀತು ಸಿಂಗ್‌ ನೇಪಾಳ, ಪೂರ್ಣಚಂದ್ರ ಮುಂತಾದವರು ಭಾಗವಹಿಸಿದ್ದರು.

ಇದನ್ನೂ ಓದಿ: ಐಪಿಎಲ್ 2025: ಎಲ್ಲಿ ನಡೆಯಲಿದೆ ಗೊತ್ತಾ ಪ್ಲೇಆಫ್‌ – ಫೈನಲ್ ಪಂದ್ಯ?

ಇನ್ನು ಸೀತಾರಾಮ ಧಾರಾವಾಹಿಯ ನಟಿ ವೈಷ್ಣವಿ ಗೌಡ ತಮ್ಮ ಇನ್ಸ್‌ಸ್ಟಾಗ್ರಾಂ ಪೇಜ್‌ನಲ್ಲಿ ಸೀರಿಯಲ್ ಬಗ್ಗೆ ಬರೆದುಕೊಂಡಿದ್ದಾರೆ. “ಈ ಅಂತ್ಯವು ಉತ್ತಮವೊಂದರ ಆರಂಭ ಮಾತ್ರ. ನನ್ನ ವೃತ್ತಿಜೀವನದ ಅತ್ಯಂತ ಸ್ಮರಣೀಯ ಪ್ರಾಜೆಕ್ಟ್‌ಗಳಲ್ಲಿ ಇದು ಒಂದಾಗಿದೆ. ಇದನ್ನು ಮಾಡಿದವರಿಗೆ ಧನ್ಯವಾದ ಹೇಳುತ್ತೇನೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಸೀತಾ ಎಂದು ಸಹಿ ಹಾಕುತ್ತಿದ್ದೇನೆ. ಆದರೆ ಶೀಘ್ರದಲ್ಲೇ ಅದ್ಭುತವಾದ ಯೋಜನೆಯೊಂದಿಗೆ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಭರವಸೆ ನೀಡುತ್ತೇನೆ” ಅಂತ ಹೇಳಿಕೊಂಡಿದ್ದಾರೆ.

Continue Reading

LATEST NEWS

ಐಪಿಎಲ್ 2025: ಎಲ್ಲಿ ನಡೆಯಲಿದೆ ಗೊತ್ತಾ ಪ್ಲೇಆಫ್‌ – ಫೈನಲ್ ಪಂದ್ಯ?

Published

on

ಮಂಗಳೂರು/ನವದೆಹಲಿ: ಐಪಿಎಲ್​ 2025 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಪ್ಲೇಆಫ್‌ ಹಾಗೂ ಫೈನಲ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಫೈನಲ್ ಪಂದ್ಯ ನಡೆಯುವ ಸ್ಥಳವನ್ನು ಘೋಷಿಸಲಾಗಿದೆ.

ಹೌದು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಉದ್ವಿಗ್ನತೆ ಕಾರಣದಿಂದ ಒಂದು ವಾರದ ಕಾಲ ಮುಂದೂಡಿಕೆಯಾಗಿದ್ದ 18ನೇ ಸೀಸನ್ ನ ಐಪಿಎಲ್ ಇದೀಗ ಮತ್ತೆ ಆರಂಭವಾಗಿದೆ. ಜೂನ್ 3ರಂದು ಫೈನಲ್ ನಡೆಯಲಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಯಾದ ಮೊಹಮ್ಮದ್ ಶಮಿ; ಬಿಜೆಪಿ ಸೆರ್ತಾರಾ ಟೀಮ್‌ ಇಂಡಿಯಾ ವೇಗಿ

ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಪ್ಲೇಆಫ್‌ಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 70 ಲೀಗ್ ಪಂದ್ಯಗಳ ನಂತರ, ಪ್ಲೇ ಆಫ್‌ನ ಮೊದಲೆರಡು ಪಂದ್ಯಗಳಾದ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್ ಪಂದ್ಯವು ನ್ಯೂ ಚಂಡೀಗಡ್‌ನ ಮುಲ್ಲನ್‌ಪುರದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾಗೆಯೇ ಜೂನ್‌ 1ರಂದು ನಡೆಯಲಿರುವ ಕ್ವಾಲಿಫೈಯರ್ 2 ಮತ್ತು ಜೂನ್ 3ರಂದು ಅಂತಿಮ ಪ್ರಶಸ್ತಿ ಕಾದಾಟ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page