Connect with us

LATEST NEWS

ಇನ್ಮುಂದೆ ವಾಟ್ಸಾಪ್‌ನಲ್ಲಿ ವಾಯ್ಸ್‌ ಮೆಸೇಜ್ ಕೂಡಾ ಸ್ಟೇಟಸ್ ಹಾಕ್ಬೋದು…!

Published

on

ಬೆಂಗಳೂರು: ಮೆಟಾ-ಮಾಲೀಕತ್ವದ ವಾಟ್ಸಾಪ್ ಈಗಾಗಲೇ ಅನೇಕ ಹೊಸ ಫೀಚರ್‌ಗಳನ್ನು ಪರಿಚಯಿಸಿದ್ದು ಇನ್ಮುಂದೆ ವಾಟ್ಸಾಪ್ ಸ್ಟೇಟಸ್‌ನಲ್ಲಿ 30 ಸೆಕೆಂಡಿನ ವಾಯ್ಸ್‌ ಮೆಸೇಜನ್ನು ಕೂಡಾ ಹಾಕಬಹುದಾಗಿದೆ. ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದ್ದು, ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಿಸಿಕೊಳ್ಳಲಿದೆ.


ಜನಪ್ರಿಯ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದ್ದು, ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಈ ಅಪ್ಲಿಕೇಶನ್ ಬಳಸುತ್ತಿದ್ದಾರೆ.

ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್ ದಿನಕ್ಕೊಂದು ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸ್​ಆ್ಯಪ್ ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಅನ್ನು ಪರಿಚಯಿಸಿದ ಬಳಿಕ ಸ್ಟೇಟಸ್ ನಲ್ಲಿ ವಾಯ್ಸ್ ನೋಟ್ ಹಾಕುವ ಫೀಚರ್ ಪರಿಚಯಿಸಲು ಮುಂದಾಗಿದೆ.

ಇದೀಗ ಮತ್ತೊಂದು ವೈಶಿಷ್ಟ್ಯವನ್ನು ಪರಿಚಯ ಮಾಡಿದೆ . ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದ್ದಾಗಿದ್ದು, ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ.

ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಾಗಿತ್ತು. ಆದರೆ ಇನ್ನೂ ಮುಂದೆ, ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ.

30 ಸೆಕೆಂಡ್​ಗಳ ಕಾಲ ಇದು ಇರಲಿದೆ. ಮುಂದಿನ ವಾರದಿಂದಲೇ ಎಲ್ಲರಿಗೂ ಬಳಕೆಗೆ ಸಿಗಲಿದೆ ಎನ್ನಲಾಗುತ್ತಿದೆ. ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದ್ದು, ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ತೆರೆದಾಗ ಅಲ್ಲಿ ಬಳಕೆದಾರರಿಗೆ ಅವರದ್ದೇ ನಂಬರ್ ಕಾಣಸಿಗುತ್ತದೆ.

ಅದರ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸುವ ಹೊಸ ಫೀಚರ್ ದೊರೆಯಲಿದೆ. ಈ ಮೆಸೇಜ್ ಚಾಟ್ ಬಾಕ್ಸ್​ನಲ್ಲಿ ಬಳಕೆದಾರರಿಗೆ ಎಲ್ಲ ರೀತಿಯ ಆಯ್ಕೆ ದೊರೆಯಲಿದ್ದು, ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ರವಾನೆ ಮಾಡಬಹುದಾಗಿದೆ.

ಅಲ್ಲದೆ, ಅಗತ್ಯ ದಾಖಲೆಗಳನ್ನು ಕೂಡ ಸೇವ್ ಮಾಡಬಹುದಾಗಿದೆ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page