Connect with us

LATEST NEWS

ಒಂದು ಒಳ್ಳೇ ಸಿಹಿ ಸುದ್ದಿ..ಕ್ಯಾನ್ಸರ್​ ಸೇರಿ ಇತರ ಕಾಯಿಲೆಗಳಿಗೆ ರೆಡಿಯಾಗ್ತಿದೆ ವ್ಯಾಕ್ಸಿನ್ ..!

Published

on

ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳಿಗೆ ಹೊಸ ಲಸಿಕೆಯ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಬಹುದು ಎಂದು ತಜ್ಞರು ಹೇಳಿದ್ದಾರೆ. 2030ರ ವೇಳೆಗೆ ಕ್ಯಾನ್ಸರ್, ಹೃದಯ ರಕ್ತನಾಳದ, ಸ್ವಯಂ ನಿರೋಧಕ ಕಾಯಿಲೆಗಳು ಮತ್ತು ಇತರ ಕಾಯಿಲೆಗಳಿಗೆ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. 

ವಾಷಿಂಗ್ಟನ್: ಜಗತ್ತಿನಲ್ಲಿ ಅತೀ ಹೆಚ್ಚು ಜನರು ಸಾವನ್ನಪ್ಪುತ್ತಿರುವುದು ಕಿಲ್ಲರ್ಸ್ ಕ್ಯಾನ್ಸರಿಗೆ ಮತ್ತೊಂದು ಹೃದಯಾಘಾತಕ್ಕೆ. ಇದೀಗ ಒಂದು ಸಿಹಿ ಸುದ್ದಿಯನ್ನು ಸಂಶೋಧಕರು ನೀಡಿದ್ದಾರೆ.

ಈ ರೋಗಗಳಿಗೆ ಶೀಘ್ರದಲ್ಲೇ ವ್ಯಾಕ್ಸಿನ್ ಬರುತ್ತೆ ಎಂದು ಅಮೆರಿಕನ್ ತಜ್ಞರು ಹೇಳಿಕೆ ನೀಡಿದ್ದಾರೆ.

ಈ ದಶಕದ ಕೊನೆಯಲ್ಲಿ ಪ್ರಪಂಚದಾದ್ಯಂತದ ಕ್ಯಾನ್ಸರ್ ಮತ್ತು ಹೃದ್ರೋಗಿಗಳನ್ನು ಈ ಲಸಿಕೆ ಮೂಲಕ ಗುಣಪಡಿಸಲು ಸಾಧ್ಯವಾಗುತ್ತದೆ ಎನ್ನುತ್ತಿದೆ ಈ ಮಹತ್ವದ ಸಂಶೋಧನೆ.

ಪ್ರಮುಖ ಕೊರೊನಾ ವೈರಸ್ ಲಸಿಕೆ ತಯಾರಿಸುವ ಸಂಸ್ಥೆಯು ವಿವಿಧ ರೀತಿಯ ಗೆಡ್ಡೆಗಳನ್ನು ಗುರಿಯಾಗಿಸುವ ಕ್ಯಾನ್ಸರ್ ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಕೊರೊನೊವೈರಸ್ ಸಾಂಕ್ರಾಮಿಕ ರೋಗದಲ್ಲಿ ಲಸಿಕೆ ಸಂಶೋಧನೆಯು ಕ್ಯಾನ್ಸರ್ ಮತ್ತು ಹೃದ್ರೋಗಿಗಳಿಗೆ ಲಸಿಕೆಗಳನ್ನು ಕಂಡು ಹಿಡಿಯುವುದನ್ನು ವಿಜ್ಞಾನಿಗಳಿಗೆ ಸುಲಭಗೊಳಿಸಿದೆ.

ಕ್ಯಾನ್ಸರ್, ಹೃದಯರಕ್ತನಾಳದ ಮತ್ತು ಸ್ವಯಂ ನಿರೋಧಕ ಕಾಯಿಲೆಗಳು ಮತ್ತು ಇತರ ಪರಿಸ್ಥಿತಿಗಳನ್ನು ತಡೆಗಟ್ಟಲು ಜನರು ಶೀಘ್ರದಲ್ಲೇ ಲಸಿಕೆಯನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಔಷಧೀಯ ಸಂಸ್ಥೆ ಹೇಳಿದೆ.

ದಿ ಗಾರ್ಡಿಯನ್ ವರದಿಯ ಪ್ರಕಾರ, ಕೋವಿಡ್ ಲಸಿಕೆ ನಂತರ ಅಮೆರಿಕದ ತಜ್ಞರು ಈಗ ಅನೇಕ ರೀತಿಯ ಗೆಡ್ಡೆಗಳ ಕ್ಯಾನ್ಸರ್ ಅನ್ನು ತೊಡೆದುಹಾಕುವ ಲಸಿಕೆಯನ್ನು ತಯಾರಿಸುವಲ್ಲಿ ತೊಡಗಿದ್ದಾರೆ.

ಈ ಲಸಿಕೆಗಳು 2030 ರ ವೇಳೆಗೆ ಸಿದ್ಧವಾಗುತ್ತವೆ. ಲಸಿಕೆ ಸಿದ್ಧವಾದರೆ ಲಕ್ಷಾಂತರ ಜನರ ಜೀವ ಉಳಿಸಬಹುದು ಎಂದು ಅಧ್ಯಯನದಲ್ಲಿ ನಂಬಲಾಗಿದೆ.

ಔಷಧೀಯ ಕಂಪನಿ ಮಾಡರ್ನಾ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಪಾಲ್ ಬರ್ಟನ್ ಮಾತನಾಡಿ, ಸಂಸ್ಥೆಯು ಐದು ವರ್ಷಗಳಲ್ಲಿ ಎಲ್ಲಾ ರೀತಿಯ ರೋಗಗಳಿಗೆ ಚಿಕಿತ್ಸೆಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ನಾವು ಹೊಂದಿರುವ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿದೆ ಮತ್ತು ಇದು ಕನಿಷ್ಠ ನೂರಾರು ಜನರನ್ನಲ್ಲ ಲಕ್ಷಾಂತರ ಜೀವಗಳನ್ನು ಉಳಿಸುತ್ತದೆ.

ಪ್ರಪಂಚದಾದ್ಯಂತದ ಜನರಿಗೆ ವಿವಿಧ ರೀತಿಯ ಟ್ಯೂಮರ್ ಕ್ಯಾನ್ಸರ್‌ಗೆ ಲಸಿಕೆಗಳನ್ನು ಒದಗಿಸಲು ನಮಗೆ ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಭರವಸೆಯ ನುಡಿಗಳನ್ನು ಹೇಳಿದ್ದಾರೆ.

ಒಂದೇ ಚುಚ್ಚುಮದ್ದಿನಿಂದ ಅನೇಕ ರೀತಿಯ ಸೋಂಕುಗಳನ್ನು ತೊಡೆದು ಹಾಕಬಹುದು.

ದುರ್ಬಲ ಜನರು ಸಹ ಕೋವಿಡ್, ಫ್ಲೂ ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ನಿಂದ ರಕ್ಷಿಸಲ್ಪಡಬಹುದು ಎಂದು ನಾನು ಭಾವಿಸುತ್ತೇನೆ.

10 ವರ್ಷಗಳ ನಂತರ ನೀವು ನಿಜವಾಗಿಯೂ ಕಾಯಿಲೆಯ ಕಾರಣವನ್ನು ಗುರುತಿಸುವ ಮತ್ತು ಅದರ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗುವಂತಹ ಜಗತ್ತನ್ನು ನಾವು ತಲುಪುತ್ತೇವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಇವನು ಮನುಷ್ಯನಲ್ಲ ನರರೂಪದ ರಾಕ್ಷಸ..! ತಾಯಿ ಹಾಗೂ ಹೆಂಡತಿಯನ್ನು ಕೊಂದು ಮಿದುಳಿನಿಂದ ಮಾಂಸ ಹೊರತೆಗೆದು ತಿಂದ ಪಾಪಿ..!

Published

on

ಲಕ್ನೋ: ಹೆಂಡ್ತಿ ಹಾಗೂ ತಾಯಿಯನ್ನು ಕೊಲೆ ಮಾಡಿದ ವ್ಯಕ್ತಿಯೊಬ್ಬ ಬಳಿಕ ಅವರ ತಲೆಯನ್ನು ಇಟ್ಟಿಗೆಯಿಂದ ಜಜ್ಜಿ ತಲೆಯ ಮಾಂಸವನ್ನು ಹೊರತೆಗೆದು ತಿಂದಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಸಂತ್ರಸ್ತರ ಕೂಗಾಟ ಕೇಳಿ ಅಲ್ಲಿಗೆ ಓಡಿ ಬಂದ ಅಕ್ಕಪಕ್ಕದ ಮನೆಯವರ ಮುಂದೆಯೇ ಈ ಭೀಭತ್ಸ ಕೃತ್ಯ ನಡೆದಿದ್ದು, ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

ಕೊಲೆಯಾದ ಮಹಿಳೆಯರ ಕಿರುಚಾಟ ಕೇಳಿ ಎಚ್ಚರಗೊಂಡ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿದಾಗ, ಆರೋಪಿ ಸಿಕಂದರ್ ಮಾಂಸದ ತುಂಡುಗಳನ್ನು ಅವರ ಮೇಲೆ ಎಸೆಯಲು ಆರಂಭಿಸಿದ್ದಾನೆ. ಇದು ಅಲ್ಲಿದ್ದವರಲ್ಲಿ ಭೀತಿಗೆ ಹಾಗೂ ಗೊಂದಲಕ್ಕೆ ಕಾರಣವಾಗಿದೆ. ನಂತರ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು 30 ವರ್ಷದ ಸಿಕಂದರ್ ಗುಪ್ತಾ ಎಂದು ಗುರುತಿಸಲಾಗಿದೆ. ಈತ ಮುಂಬೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ಸುಮಾರು ಒಂದು ತಿಂಗಳ ಹಿಂದಷ್ಟೇ ಗ್ರಾಮಕ್ಕೆ ಮರಳಿದ್ದ. ಸಿಕಂದರ್ ಗುಪ್ತಾ ಮದ್ಯ ಮತ್ತು ಗಾಂಜಾ ವ್ಯಸನಿಯಾಗಿದ್ದು, ಆಗಾಗ್ಗೆ ತನ್ನ ಹೆಂಡತಿ ಮತ್ತು ತಾಯಿಯ ಮೇಲೆ ಹಲ್ಲೆ ಮಾಡುತ್ತಿದಿದ್ದಲ್ಲದೇ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪೊಲೀಸರು ಹೇಳುವ ಪ್ರಕಾರ, ಸಿಕಂದರ್ ಮೊದಲು ತನ್ನ ಹೆಂಡತಿ ಪ್ರಿಯಾಂಕಾ (28) ಮತ್ತು ತಾಯಿ ರೂನಾ ದೇವಿ (60) ಅವರ ಮೇಲೆ ಮನೆಯ ಮೇಲ್ಛಾವಣಿಯ ಮೇಲೆ ಕೋಲುಗಳಿಂದ ಹಲ್ಲೆ ನಡೆಸಿದ್ದಾನೆ. ನಂತರ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಕೊಂಡು ಅವರ ತಲೆಗಳನ್ನು ಪದೇ ಪದೇ ಒಡೆದು, ಇಬ್ಬರನ್ನೂ ಸ್ಥಳದಲ್ಲೇ ಕೊಂದಿದ್ದಾನೆ. ಬಳಿಕ ಶವಗಳನ್ನು ವಿರೂಪಗೊಳಿಸಿ, ತಲೆಬುರುಡೆಯಿಂದ ಮಾಂಸವನ್ನು ತೆಗೆದು, ಇಡೀ ಗ್ರಾಮದವರ ಮುಂದೆ ಅದನ್ನು ಸೇವಿಸಿದ್ದಾನೆ.

ಇದನ್ನೂ ಓದಿ: ಹಾಸನ: ಕಾಡಾನೆ ದಾ*ಳಿಗೆ ಬ*ಲಿಯಾದ ಮಹಿಳೆ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಡಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯ ಮಾನಸಿಕ ಸ್ಥಿತಿಯನ್ನು ಸಹ ಪರಿಶೀಲಿಸುತ್ತಿದ್ದಾರೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಮಿಶ್ರಾ ಹೇಳಿದ್ದಾರೆ.

Continue Reading

INTERNATIONAL

‘ಈಗಲೇ ಇರಾನ್‌ನಿಂದ ಹೊರಡಿ’ ಅಮೆರಿಕನ್‌ ಪ್ರಜೆಗಳಿಗೆ ಎಚ್ಚರಿಕೆ ಸಂದೇಶ

Published

on

ವಾಷಿಂಗ್ಟನ್:‌ ಅಮೆರಿಕ-ಇರಾನ್‌ ಉದ್ವಿಗ್ನತೆ ಮಹತ್ವದ ಘಟ್ಟ ತಲುಪುತ್ತಿರುವಂತೆ ತೋರುತ್ತಿದೆ. ಕಾರಣ, ಈಗಲೇ ಇರಾನ್‌ ನಿಂದ ಹೊರಡಿ, ಅಮೆರಿಕ ಸರ್ಕಾರದ ಸಹಾಯವನ್ನು ಅವಲಂಬಿಸಬೇಡಿ. ನಿಮ್ಮದೇ ಯೋಜನೆ ರೂಪಿಸಿಕೊಳ್ಳಿ ಎಂದು ಹೇಳಿದೆ. ಹೀಗಾಗಿ ಅಮೆರಿಕ ವಿದೇಶಾಂಗ ಇಲಾಖೆ ಹೊರಡಿಸಿದ ತುರ್ತು ಭದ್ರತಾ ಎಚ್ಚರಿಕೆ ಜಗತ್ತನ್ನೇ ಬೆಚ್ಚಿಬೀಳಿಸಿದೆ.


‌ಹೌದು, ಇರಾನ್‌ನ ಸರ್ವೋಚ್ಚ ನಾಯಕ ಆಯತೋಲ್ಲಾ ಖಮೇನಿ ಆಡಳಿತ ವಿರೋಧಿಸಿ ದೇಶಾದ್ಯಾಂತ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಎರಡು ವಾರಗಳನ್ನು ಪೂರೈಸಿರುವ ಪ್ರತಿಭಟನೆಯಿಂದ ಸಂಭವಿಸಿರುವ ಹಿಂಸಾಚಾರದಲ್ಲಿ 600 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಮೆರಿಕ ತನ್ನ ಪ್ರಜೆಗಳಿಗೆ ಇರಾನ್‌ ತೊರೆಯುವಂತೆ ಎಚ್ಚರಿಕೆ ನೀಡಿದೆ.

ಇರಾನ್‌ನಾದ್ಯಂತ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿವೆ ಮತ್ತು ಹಿಂಸಾಚಾರ ಹೆಚ್ಚಾಗಬಹುದು ಎಂದು ಅಮೆರಿಕ ಎಚ್ಚರಿಸಿದೆ. ಇದು ಪ್ರತಿಭಟನಾಕಾರರ ಬಂಧನ, ಗಲಭೆಯಿಂದಾಗಿ ದೈನಂದಿನ ಜೀವನಕ್ಕೆ ತೀವ್ರ ಅಡ್ಡಿಗಳಿಗೆ ಕಾರಣವಾಗಬಹುದು ಎಂದು ಅಮೆರಿಕ ತಿಳಿಸಿದೆ.

ಇರಾನ್‌ ಸರ್ಕಾರವು ಮೊಬೈಲ್‌, ಲ್ಯಾಂಡ್‌ಲೈನ್‌ ಮತ್ತು ಇಂಟರ್ನೆಟ್‌ ನೆಟ್‌ವರ್ಕ್‌ ಅನ್ನು ನಿರ್ಬಂಧಿಸಿದೆ ಎಂದು ಹೇಳಿದೆ. ಅಲ್ಲದೆ ಹಲವಾರು ವಿಮಾನಯಾನ ಸಂಸ್ಥೆಗಳು ಇರಾನ್‌ಗೆ ಮತ್ತು ಅಲ್ಲಿಂದ ಬರುವ ವಿಮಾನಗಳನ್ನು ಸೀಮಿತಗೊಳಿಸಿವೆ ಅಥವಾ ರದ್ದುಗೊಳಿಸಿವೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಭಾರತೀಯರಿಗೆ ಗುಡ್ ನ್ಯೂಸ್ : ವೀಸಾ ಮುಕ್ತ ಪ್ರಯಾಣ ಘೋಷಿಸಿದ ಜರ್ಮನಿ

‘ನಿರಂತರ ಇಂಟರ್ನೆಟ್‌ ಕಡಿತ ಇರುವುದರಿಂದ ಪರ್ಯಾಯ ಸಂವಹನ ವಿಧಾನಗಳನ್ನು ಯೋಜಿಸಬೇಕು ಮತ್ತು ಸುರಕ್ಷಿತವಾಗಿದ್ದರೆ, ಅರ್ಮೇನಿಯಾ ಅಥವಾ ಟರ್ಕಿ ಮೂಲಕ ಭೂಮಾರ್ಗದಲ್ಲಿ ಇರಾನ್‌ನಿಂದ ಹೊರಡುವುದನ್ನು ಪರಿಗಣಿಸಬೇಕು’ ಎಂದು ಎಚ್ಚರಿಕೆಯಲ್ಲಿ ಸೂಚಿಸಲಾಗಿದೆ.

Continue Reading

LATEST NEWS

ಇತ್ತ ಯೋಧ ಸಾ*ವು…ಅತ್ತ ಹೆಣ್ಣು ಮಗು ಜನನ…ಹಸುಗೂಸಿನೊಂದಿಗೆ ಸ್ಟ್ರೆಚರ್‌ನಲ್ಲಿ ಬಂದು ಅಂತಿಮ ದರ್ಶನ ಪಡೆದ ಪತ್ನಿ!

Published

on

ಮಂಗಳೂರು/ಮಹಾರಾಷ್ಟ್ರ : ಆತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಪತ್ನಿ ಗರ್ಭಿಣಿಯಾಗಿದ್ದ ಕಾರಣ ಪಿತೃತ್ವ ರಜೆ ಪಡೆದು ಹುಟ್ಟೂರಿಗೆ ಬಂದಿದ್ರು. ಅತ್ತ ಪತ್ನಿಗೆ ಹೆರಿಗೆ ನೋ*ವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಆಗಮನಕ್ಕಾಗಿ ಯೋಧನ ಕುಟುಂಬ ಕಾಯುತ್ತಿತ್ತು. ಆದ್ರೆ, ವಿಧಿಯಾಟ ಬೇರೆಯೇ ಆಗಿತ್ತು.

ಹೌದು, ಪತ್ನಿಗೆ ಬೇಕಾದ ಅಗತ್ಯ ವಸ್ತುಗಳನ್ನು ತರಲು ಬೈಕ್ ನಲ್ಲಿ ತೆರಳಿದ್ದ ಯೋಧ ಅಪ*ಘಾತಕ್ಕೀಡಾಗಿ ಪ್ರಾ*ಣ ಕಳೆದುಕೊಂಡಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ನಡೆದಿರೋದು ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ.

35 ವರ್ಷದ ಪ್ರಮೋದ್ ಜಾಧವ್ ಮೃ*ತ ಯೋಧ. ಮಿನಿ ಟ್ರಕ್  ಬೈಕ್‌ಗೆ ಡಿ*ಕ್ಕಿಯಾಗಿ ಪ್ರಮೋದ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಕೊನೆಯು*ಸಿರೆಳೆದಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಅವರ ಪತ್ನಿ ರುತುಜಾ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದಾರೆ.

ಇದನ್ನೂ ಓದಿ : ಶಬರಿಮಲೆಗೆ ಹೋಗಿ ಬಂದ ದಿನವೇ ಕ್ರೌ*ರ್ಯ ಮೆರೆದ ಪತಿ; ಪತ್ನಿಯ ಕೊಂ*ದು ನದಿಗೆ ಎಸೆದ ಪಾಪಿ

ಪತಿಗೆ ವಿದಾಯ ಹೇಳಲು ಪುಟ್ಟ ಕಂದಮ್ಮನೊಂದಿಗೆ ಪತ್ನಿ ಸ್ಟ್ರೆಚರ್ ನಲ್ಲಿ ಬಂದ ದೃಶ್ಯ ಕರುಳು ಹಿಂಡುವಂತಿತ್ತು.  ಈ ದೃಶ್ಯ  ಕಂಡು ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page