Connect with us

LATEST NEWS

ಒಂದು ಒಳ್ಳೇ ಸಿಹಿ ಸುದ್ದಿ..ಕ್ಯಾನ್ಸರ್​ ಸೇರಿ ಇತರ ಕಾಯಿಲೆಗಳಿಗೆ ರೆಡಿಯಾಗ್ತಿದೆ ವ್ಯಾಕ್ಸಿನ್ ..!

Published

on

ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳಿಗೆ ಹೊಸ ಲಸಿಕೆಯ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಬಹುದು ಎಂದು ತಜ್ಞರು ಹೇಳಿದ್ದಾರೆ. 2030ರ ವೇಳೆಗೆ ಕ್ಯಾನ್ಸರ್, ಹೃದಯ ರಕ್ತನಾಳದ, ಸ್ವಯಂ ನಿರೋಧಕ ಕಾಯಿಲೆಗಳು ಮತ್ತು ಇತರ ಕಾಯಿಲೆಗಳಿಗೆ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. 

ವಾಷಿಂಗ್ಟನ್: ಜಗತ್ತಿನಲ್ಲಿ ಅತೀ ಹೆಚ್ಚು ಜನರು ಸಾವನ್ನಪ್ಪುತ್ತಿರುವುದು ಕಿಲ್ಲರ್ಸ್ ಕ್ಯಾನ್ಸರಿಗೆ ಮತ್ತೊಂದು ಹೃದಯಾಘಾತಕ್ಕೆ. ಇದೀಗ ಒಂದು ಸಿಹಿ ಸುದ್ದಿಯನ್ನು ಸಂಶೋಧಕರು ನೀಡಿದ್ದಾರೆ.

ಈ ರೋಗಗಳಿಗೆ ಶೀಘ್ರದಲ್ಲೇ ವ್ಯಾಕ್ಸಿನ್ ಬರುತ್ತೆ ಎಂದು ಅಮೆರಿಕನ್ ತಜ್ಞರು ಹೇಳಿಕೆ ನೀಡಿದ್ದಾರೆ.

ಈ ದಶಕದ ಕೊನೆಯಲ್ಲಿ ಪ್ರಪಂಚದಾದ್ಯಂತದ ಕ್ಯಾನ್ಸರ್ ಮತ್ತು ಹೃದ್ರೋಗಿಗಳನ್ನು ಈ ಲಸಿಕೆ ಮೂಲಕ ಗುಣಪಡಿಸಲು ಸಾಧ್ಯವಾಗುತ್ತದೆ ಎನ್ನುತ್ತಿದೆ ಈ ಮಹತ್ವದ ಸಂಶೋಧನೆ.

ಪ್ರಮುಖ ಕೊರೊನಾ ವೈರಸ್ ಲಸಿಕೆ ತಯಾರಿಸುವ ಸಂಸ್ಥೆಯು ವಿವಿಧ ರೀತಿಯ ಗೆಡ್ಡೆಗಳನ್ನು ಗುರಿಯಾಗಿಸುವ ಕ್ಯಾನ್ಸರ್ ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಕೊರೊನೊವೈರಸ್ ಸಾಂಕ್ರಾಮಿಕ ರೋಗದಲ್ಲಿ ಲಸಿಕೆ ಸಂಶೋಧನೆಯು ಕ್ಯಾನ್ಸರ್ ಮತ್ತು ಹೃದ್ರೋಗಿಗಳಿಗೆ ಲಸಿಕೆಗಳನ್ನು ಕಂಡು ಹಿಡಿಯುವುದನ್ನು ವಿಜ್ಞಾನಿಗಳಿಗೆ ಸುಲಭಗೊಳಿಸಿದೆ.

ಕ್ಯಾನ್ಸರ್, ಹೃದಯರಕ್ತನಾಳದ ಮತ್ತು ಸ್ವಯಂ ನಿರೋಧಕ ಕಾಯಿಲೆಗಳು ಮತ್ತು ಇತರ ಪರಿಸ್ಥಿತಿಗಳನ್ನು ತಡೆಗಟ್ಟಲು ಜನರು ಶೀಘ್ರದಲ್ಲೇ ಲಸಿಕೆಯನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಔಷಧೀಯ ಸಂಸ್ಥೆ ಹೇಳಿದೆ.

ದಿ ಗಾರ್ಡಿಯನ್ ವರದಿಯ ಪ್ರಕಾರ, ಕೋವಿಡ್ ಲಸಿಕೆ ನಂತರ ಅಮೆರಿಕದ ತಜ್ಞರು ಈಗ ಅನೇಕ ರೀತಿಯ ಗೆಡ್ಡೆಗಳ ಕ್ಯಾನ್ಸರ್ ಅನ್ನು ತೊಡೆದುಹಾಕುವ ಲಸಿಕೆಯನ್ನು ತಯಾರಿಸುವಲ್ಲಿ ತೊಡಗಿದ್ದಾರೆ.

ಈ ಲಸಿಕೆಗಳು 2030 ರ ವೇಳೆಗೆ ಸಿದ್ಧವಾಗುತ್ತವೆ. ಲಸಿಕೆ ಸಿದ್ಧವಾದರೆ ಲಕ್ಷಾಂತರ ಜನರ ಜೀವ ಉಳಿಸಬಹುದು ಎಂದು ಅಧ್ಯಯನದಲ್ಲಿ ನಂಬಲಾಗಿದೆ.

ಔಷಧೀಯ ಕಂಪನಿ ಮಾಡರ್ನಾ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಪಾಲ್ ಬರ್ಟನ್ ಮಾತನಾಡಿ, ಸಂಸ್ಥೆಯು ಐದು ವರ್ಷಗಳಲ್ಲಿ ಎಲ್ಲಾ ರೀತಿಯ ರೋಗಗಳಿಗೆ ಚಿಕಿತ್ಸೆಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ನಾವು ಹೊಂದಿರುವ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿದೆ ಮತ್ತು ಇದು ಕನಿಷ್ಠ ನೂರಾರು ಜನರನ್ನಲ್ಲ ಲಕ್ಷಾಂತರ ಜೀವಗಳನ್ನು ಉಳಿಸುತ್ತದೆ.

ಪ್ರಪಂಚದಾದ್ಯಂತದ ಜನರಿಗೆ ವಿವಿಧ ರೀತಿಯ ಟ್ಯೂಮರ್ ಕ್ಯಾನ್ಸರ್‌ಗೆ ಲಸಿಕೆಗಳನ್ನು ಒದಗಿಸಲು ನಮಗೆ ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಭರವಸೆಯ ನುಡಿಗಳನ್ನು ಹೇಳಿದ್ದಾರೆ.

ಒಂದೇ ಚುಚ್ಚುಮದ್ದಿನಿಂದ ಅನೇಕ ರೀತಿಯ ಸೋಂಕುಗಳನ್ನು ತೊಡೆದು ಹಾಕಬಹುದು.

ದುರ್ಬಲ ಜನರು ಸಹ ಕೋವಿಡ್, ಫ್ಲೂ ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ನಿಂದ ರಕ್ಷಿಸಲ್ಪಡಬಹುದು ಎಂದು ನಾನು ಭಾವಿಸುತ್ತೇನೆ.

10 ವರ್ಷಗಳ ನಂತರ ನೀವು ನಿಜವಾಗಿಯೂ ಕಾಯಿಲೆಯ ಕಾರಣವನ್ನು ಗುರುತಿಸುವ ಮತ್ತು ಅದರ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗುವಂತಹ ಜಗತ್ತನ್ನು ನಾವು ತಲುಪುತ್ತೇವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

DAKSHINA KANNADA

ನಿರೂಪಕ ಸಾಯಿಹೀಲ್ ರೈಗೆ ಪಿತೃ ವಿಯೋಗ

Published

on

ಮಂಗಳೂರು : ಉದ್ಯಮಿ, ಸಾಯಿ ಭಕ್ತ, ನಿರೂಪಕ ಸಾಯಿಹೀಲ್ ರೈ ಅವರ ತಂದೆ,  ಬೋಳಾರ ಮಂಗಳಾದೇವಿ ನಿವಾಸಿ ಬೆಳ್ಳಿಪ್ಪಾಡಿ ಸತೀಶ್ ರೈ ಅಗರಿ (66) ಅವರು ಇಂದು(ಮಾ.20) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು.

ಮೃತರು ಪತ್ನಿ ಶೋಭಾ ರೈ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಬಿ. ಸಿ. ರೋಡ್, ಸಜೀಪ – ನಾಲ್ ಕೈ ತ್ತಾಯ ದೈವಸ್ಥಾನದ ಸಮೀಪ ಇರುವ “ಅಗರಿ ಮನೆ”  ಯಲ್ಲಿ ಸಂಜೆ 4.30 ರಿಂದ 7 ನಡೆಯಲಿದೆ.

 

Continue Reading

FILM

ಟಾಲಿವುಡ್‌ನ 25 ಖ್ಯಾತ ನಟ, ನಟಿಯರ ಮೇಲೆ ಕೇಸ್ ದಾಖಲು

Published

on

ಮಂಗಳೂರು/ಹೈದರಾಬಾದ್: ಟಾಲಿವುಡ್‌ನ 25 ಖ್ಯಾತ ನಟ, ನಟಿಯರಿಗೆ ತೆಲಂಗಾಣ ಪೊಲೀಸರು ಶಾಕ್ ಕೊಟ್ಟಿದ್ದಾರೆ.

ವಿಜಯ್‌ ದೇವರಕೊಂಡ, ಪ್ರಕಾಶ್‌ ರಾಜ್, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ನಿಧಿ ಅಗರವಾಲ್, ಕನ್ನಡದ ನಟಿ ಪ್ರಣೀತಾ ವಿರುದ್ದ ಕೇಸ್ ದಾಖಲಾಗಿದೆ.

32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ಸಲ್ಲಿಸಿದ ಅರ್ಜಿಯ ಮೇರೆಗೆ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 318 (4), ಸೆಕ್ಷನ್ 112, 49ರಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾಗೆ ಭರ್ಜರಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಯುವಜನರು ಹಾಳಾಗುತ್ತಿದ್ದಾರೆ. ಸಮಾಜದಲ್ಲಿ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಬೆಟ್ಟಿಂಗ್ ಆ್ಯಪ್‌ಗಳ ಆಘಾತಕಾರಿ ವಿಚಾರ ಗೊತ್ತಿದ್ದರೂ ಖ್ಯಾತ ನಟ, ನಟಿಯರು ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.

ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ದೂರು ಸಲ್ಲಿಕೆಯಾಗಿತ್ತು. ಈ ದೂರಿನ ಆಧಾರದ ಮೇಲೆ ನಟ, ನಟಿಯರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Continue Reading

LATEST NEWS

ಅಮೆರಿಕದಲ್ಲಿ ಭಾರತದ ಸಂಶೋಧಕ ಅರೆಸ್ಟ್; ಶೀಘ್ರವೇ ಗಡಿಪಾರು

Published

on

ಮಂಗಳೂರು/ನ್ಯೂಯಾರ್ಕ್ : ಅಮೆರಿಕದ ಜಾರ್ಜ್ ಟೌನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತ ಮೂಲದ ಸಂಶೋಧನಾ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬದರ್ ಖಾನ್ ಸೂರಿ ಬಂಧಿತ ವಿದ್ಯಾರ್ಥಿ.

ಸೂರಿ ಹಮಾಸ್ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಅಲ್ಲದೇ, ಶಂಕಿತ ಭಯೋತ್ಪಾದಕರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗಿದೆ.  ಈಗಾಗಲೇ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಸದ್ಯದಲ್ಲೇ ಗಡಿಪಾರು ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಸಹಾಯಕ ಕಾರ್ಯದರ್ಶಿ ಟ್ರಿಸಿಯಾ ಮೆಕ್‌ಲಾಫ್ಲಿನ್ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸೂರಿ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿನಿಮಯ ವಿದ್ಯಾರ್ಥಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಮಾಸ್ ಪ್ರಚಾರವನ್ನು ಸಕ್ರಿಯವಾಗಿ ಹರಡುತ್ತಿದ್ದರು ಮತ್ತು ಯೆಹೂದಿ ವಿರೋಧಿ ವಿಚಾರಗಳನ್ನು ಪ್ರಚಾರ ಮಾಡುತ್ತಿದ್ದರು. ಸೂರಿ ಚಟುವಟಿಕೆಗಳು INA ಸೆಕ್ಷನ್ 237(a) (4) (C) (i) ಅಡಿಯಲ್ಲಿ ಗಡಿಪಾರು ಮಾಡಲು ಅರ್ಹರೆಂದು ವಿದೇಶಾಂಗ ಕಾರ್ಯದರ್ಶಿ ಮಾರ್ಚ್ 15, 2025 ರಂದು ನಿರ್ಣಯ ಹೊರಡಿಸಿದ್ದರು ಎಂದು ತಿಳಿಸಿದ್ದಾರೆ.

ಡಾ. ಬದರ್ ಖಾನ್ ಸೂರಿ ವಾಷಿಂಗ್ಟನ್ ಡಿಸಿಯ ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಎಡ್ಮಂಡ್ ಎ. ವಾಲ್ಷ್ ಸ್ಕೂಲ್ ಆಫ್ ಫಾರಿನ್ ಸರ್ವೀಸ್‌ನಲ್ಲಿರುವ ಅಲ್ವಲೀದ್ ಬಿನ್ ತಲಾಲ್ ಸೆಂಟರ್ ಫಾರ್ ಮುಸ್ಲಿಂ-ಕ್ರಿಶ್ಚಿಯನ್ ಅಂಡರ್‌ಸ್ಟಾಂಡಿಂಗ್‌ನಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋ ಆಗಿದ್ದಾರೆ.

ಇದನ್ನೂ ಓದಿ : ಆ‌ರ್.ಜಿ ಕರ್‌ ಪ್ರಕರಣ : 7 ತಿಂಗಳ ಬಳಿಕ ಪೋಷಕರ ಕೈ ಸೇರಿತು ಮರಣ ಪ್ರಮಾಣ ಪತ್ರ

2020 ರಲ್ಲಿ ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ನೆಲ್ಸನ್ ಮಂಡೇಲಾ ಸೆಂಟರ್ ಫಾರ್ ಪೀಸ್ ಅಂಡ್ ಕಾನ್ಫ್ಲಿಕ್ಟ್ ರೆಸಲ್ಯೂಷನ್‌ನಿಂದ ಶಾಂತಿ ಮತ್ತು ಸಂಘರ್ಷ ಅಧ್ಯಯನ ವಿಚಾರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page