Connect with us

LATEST NEWS

ತಾಯಂದಿರಿಗೆ ಗುಡ್‌ನ್ಯೂಸ್: ಇನ್ನು ಮುಂದೆ ಮಕ್ಕಳಿಗೆ ರೈಲಿನಲ್ಲಿ ವಿಶೇಷ ಆಸನ..

Published

on

ಲಖನೌ: ಪೋಷಕರು ತನ್ನ ಸಣ್ಣ ಮಕ್ಕಳನ್ನು ರೈಲುಗಳಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥಿತ ವಿಶೇಷ ಆಸನವನ್ನು ರೂಪಿಸುವ ಸಿಹಿ ಸುದ್ದಿಯನ್ನು ರೈಲ್ವೇ ಇಲಾಖೆ ನೀಡಿದೆ.


ಇನ್ನು ಮುಂದೆ ರೈಲುಗಳಲ್ಲಿ ಮಕ್ಕಳಿಗಾಗಿಯೇ ‘ಬೇಬಿ ಬರ್ತ್’ ಇರಲಿದೆ. ಇದರಿಂದ ಹೆಣ್ಣು ಮಕ್ಕಳಿಗೆ ಅದರಲ್ಲೂ ಹಾಲುಣಿಸುವ ಶಿಶುವಿನೊಂದಿಗೆ ಪ್ರಯಾಣಿಸುವ ಮಹಿಳೆಯರಿಗೆ ಅತ್ಯಂತ ಪ್ರಯೋಜನವಾಗಲಿದೆ.


770 ಮಿ.ಮೀ ಉದ್ದ ಹಾಗೂ 255 ಮಿ.ಮಿ ಎತ್ತರದ ಬೇಬಿ ಬರ್ತ್‌ಗಳನ್ನು ರೈಲಿನಲ್ಲಿ ಅಳವಡಿಸಲಾಗಿದ್ದು ರೈಲ್ವೇ ಇಲಾಖೆ ಈ ಮೂಲಕ ಹೊಸ ಸೌಲಭ್ಯವನ್ನು ಪರಿಚಯಿಸಿದೆ.

LATEST NEWS

ಕಾಣಿಕೆ ಡಬ್ಬಿ ಒಡೆದು ಕಳ್ಳತನ; ಕಿಡಿಗೇಡಿಗಳು ಪರಾರಿ

Published

on

ಮಲ್ಪೆ : ಕರಾವಳಿ ದೈವ, ದೇವರ ಆರಾಧನೆಗೆ ಹೆಸರಾದ ನಾಡು. ಆದರೆ ಇಂತಹ ಪುಣ್ಯ ಭೂಮಿಯಲ್ಲೂ ದುಷ್ಕೃತ್ಯಗಳು ಹೆಚ್ಚಾಗುತ್ತಿದೆ. ಇದೀಗ ದೈಸ್ಥಾನದ ಡಬ್ಬಿಯನ್ನೇ ಹೊಡೆದು , ಕಳ್ಳತ ಮಾಡಿ, ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.

ಮಲ್ಪೆಯ ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿ ಇಟ್ಟಿದಂತಹ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಹಣವನ್ನು ಕಳವು ಮಾಡಿ ಖದೀಮರು ಪರಾರಿಯಾಗಿದ್ದಾರೆ.

ಎ.19 ರಂದು ಸಂಜೆ 6 ರಿಂದ 8.45 ರ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕಾಣಿಕೆ ಡಬ್ಬಿಯಲ್ಲಿದ್ದ 15ಸಾವಿರ ಹಣ ಕಳವು ಮಾಡಲಾಗಿರುವ ಕುರಿತು ಮಲ್ಪೆ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.

Continue Reading

bangalore

ಜನಿವಾರಕ್ಕೆ ಕತ್ತರಿ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು : ಸಿಎಂ ಸಿದ್ಧರಾಮಯ್ಯ

Published

on

ಬೆಂಗಳೂರು : ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಸಿ.ಎಂ.ಸಿದ್ಧರಾಮಯ್ಯ ಮಾತನಾಡಿದ್ದಾರೆ. “ಸಿಇಟಿ ಪರೀಕ್ಷೆ ವೇಳೆ ಬೀದರ್, ಶಿವಮೊಗ್ಗ, ಸಾಗರ, ಧಾರವಾಡಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಜನಿವಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು :

“ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಬೇಕು. ಜನಿವಾರವನ್ನು ಕೇವಲ ಬ್ರಾಹ್ಮಣ ಸಮಾಜದವರಷ್ಟೇ ಹಾಕುವುದಿಲ್ಲ. ಬೇರೆ ಬೇರೆ ಸಮುದಾಯಗಳು ಪವಿತ್ರ ದಾರವನ್ನು ಧರಿಸುತ್ತಿದ್ದಾರೆ. ಆ ಎಲ್ಲ ಸಮುದಾಯಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಜನಿವಾರ ಪ್ರಕರಣಕ್ಕೆ ಶಾಶ್ವತ ಪರಿಹಾರ :

ಸಿಇಟಿಯಲ್ಲಿ ನಡೆದ ಜನಿವಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಸರಕಾರ, ಈ ಸಂಬಂಧ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ನಿರ್ಧರಿಸಿದೆ. ಇಂಥ ಘಟನೆ ಪುನರಾವರ್ತನೆ ಆಗದಿರಲು ಶಾಶ್ವತ ಪರಿಹಾರ ಕಂಡು ಕೊಳ್ಳಲು ಈಗ ಸರಕಾರ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ಉದ್ದೇಶಿಸಿದೆ.

Continue Reading

DAKSHINA KANNADA

ಉಡುಪಿ : ಪತ್ರಕರ್ತ ರಾಮ್ ಅಜೆಕಾರ್ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ

Published

on

ಉಡುಪಿ : ಕನ್ನಡ ರಿಪೋರ್ಟರ್ ರಾಮ್ ಅಜೆಕಾರ್‌ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಆಯಕೆಯಾಗಿದ್ದಾರೆ.

ಹಿರಿಯ ಉದ್ಯಮಿ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿಯಿಂದ ನೀಡಲಾಗುವ ಪ್ರಶಸ್ತಿಗೆ ಪತ್ರಕರ್ತ ರಾಮ್ ಅಜೆಕಾರ್ ವರ ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಶೀರ್ಷಿಕೆಯಡಿಯ ಸುದ್ಧಿ ಆಯ್ಕೆಯಾಗಿದೆ. ಕನ್ನಡಪ್ರಭ ಪತ್ರಿಕೆಯಲ್ಲಿ ಈ ಸುದ್ಧಿ ಬಿಡುಗಡೆಯಾಗಿತ್ತು.

ದತ್ತಿನಿಧಿಯಿಂದ ನೀಡಲಾಗುವ ಈ ಪ್ರಶಸ್ತಿಯು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ ೩ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page