Connect with us

LATEST NEWS

ಸರ್ಕಾರದ ಕೋವಿಡ್‌ ರೂಲ್ಸ್‌- ಸೊಂಟದಲ್ಲಿ ಗಂಟು ಕಟ್ಟಿದ ಲುಂಗಿ, ಕೆಳಗೆ ಪೂರ್ತಿ ಬಿಟ್ಟಂತಿದೆ..!

Published

on

ಮಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಮತ್ತು ನೈಟ್‌ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಇದರಿಂದ ಸಾಮಾನ್ಯ ಜನ, ಉದ್ಯಮಿಗಳು ಅದರಲ್ಲೂ ದುಡಿದು ತಿನ್ನುವ ಜನ ಕಂಗಾಲಾಗಿದ್ದಾರೆ.

ರಾಜ್ಯದ ಕೆಲವು ಜಿಲ್ಲೆ ಹಾಗೂ ನಗರಗಳಲ್ಲಿ ಹೊರತುಪಡಿಸಿ ಹಲವೆಡೆ ಕೋವಿಡ್‌ ಪ್ರಮಾಣ ಜಾಸ್ತಿ ಇಲ್ಲ. ಆದರೆ ರಾಜ್ಯ ಸರ್ಕಾರ ತನ್ನ ಮೂಗಿನ ನೇರಕ್ಕೆ ನಿಯಮಾವಳಿ ಮಾಡುತ್ತಿದೆಯೇ ಎಂಬ ಬಗ್ಗೆ ಆರೋಪ ಕೇಳಿಬಂದಿದೆ.

ಕರಾವಳಿಯ ಸಚಿವ ಶಾಸಕರ ಬಾಯಿ ಮುಚ್ಚಿ ಕೈಕಟ್ಟಿದ ಪರಿಸ್ಥಿತಿಯೇ?
ಕಳೆದ ಎರಡು ವರ್ಷಗಳಿಂದ ಕರೋನಾ ಕರಿನೆರಳಿನಲ್ಲಿ ಬೆಂದು ಬರಡಾಗಿದ್ದ ರಾಜ್ಯದ ವಾಣಿಜ್ಯ ಹೆಬ್ಬಾಗಿಲು ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಈಗ ತಾನೆ ತೆರೆದುಕೊಳ್ಳುತ್ತಿದೆ. ಇದರ ಜೊತೆ ತುಳುನಾಡಿನ ಧಾರ್ಮಿಕ ಆಚರಣೆಗಳಾದ ದೈವದ ಕೋಲ, ದೇವಸ್ಥಾನದ ಹಬ್ಬ, ಬ್ರಹ್ಮಕಲಶ ಹಾಗೂ ಕಂಬಳ, ಉರೂಸ್‌, ಕ್ರೈಸ್ತ ಧರ್ಮದ ಧಾರ್ಮಿಕ ಹಬ್ಬಗಳು ಈಗಷ್ಟೆ ಆರಂಭವಾಗಿವೆ.

ಹೂಮಾರುವವನಿಂದ ಹಿಡಿದು ಕ್ಯಾಟರಿಂಗ್‌ ಸೇರಿ ಪ್ರತಿಯೊಬ್ಬರಿಗೂ ಕೈಗೊಂದು ಉದ್ಯೋಗ ನೀಡುವ ಕೆಲಸ ನಡೆಯುತ್ತಿತ್ತು. ಇದೀಗ ಅದಕ್ಕೆಲ್ಲಾ ಬ್ರೇಕ್‌ ಬಿದ್ದಿದೆ. ದೇಶದಲ್ಲಿ ಬೆಂಗಳೂರು ನಗರ ಕೊರೋನಾದಿಂದ ರೆಡ್‌ಝೋನ್‌ನಲ್ಲಿದೆ. ಆದರೆ ರಾಜ್ಯ ಸರ್ಕಾರ ಬೆಂಗಳೂರು ಎಂದರೆ ಇಡೀ ಕರ್ನಾಟಕ ಎಂದುಕೊಂಡಂತಿದೆ.

ಸರ್ಕಾರದ ನಿಯಮಕ್ಕೆ ಗ್ರಾಮೀಣಭಿವೃದ್ದಿ ಸಚಿವ ಈಶ್ವರಪ್ಪ ಹೊರತುಪಡಿಸಿದರೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಕರಾವಳಿಯ ಶಾಸಕರದ್ದು ಕೈ ಕಟ್ಟಿ ಬಾಯಿ ಮುಚ್ಚಿ ಕುಳಿಕೊಂಡ ಪರಿಸ್ಥಿತಿ. ಕ್ಯಾಬಿನೆಟ್‌ ಸಭೆಯಲ್ಲಿ ಜಿಲ್ಲೆಯ ಪ್ರಭಾವಿ ಸಚಿವರಿದ್ದರೂ ಜಿಲ್ಲೆಯ ಜನರ ಭಾವನೆಗೆ ಧ್ವನಿಯಾಗದಿರುವುದು ಬೇಸರದ ಸಂಗತಿ.


ಲಾಕ್‌ಡೌನ್‌ ಒಂದೇ ಪರಿಹಾರವೇ?
ಲಾಕ್‌ಡೌನ್‌ ಹೊರತುಪಡಿಸಿದರೆ ಕೊರೋನಾಕ್ಕೆ ಬೇರೆ ಪರಿಹಾರ ಇಲ್ಲವೇ? ಖಂಡಿತಾ ಇದೆ ಎನ್ನುತ್ತಾರೆ ಕರಾವಳಿ ಆರ್ಥಿಕ ತಜ್ಞರು. ಮೊದಲಿಗೆ ಎಲ್ಲರಿಗೂ ವಾಕ್ಸಿನೇಷನ್‌ ಮಾಡಿಸಿ. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ.

ಸರ್ಕಾರಿ ಕಚೇರಿ, ಬ್ಯಾಂಕ್‌, ಮಾಲ್‌ ಸೇರಿದಂತೆ ಹಲವೆಡೆ ಮಾಸ್ಕ್‌ ಇಲ್ಲದೇ ಪ್ರವೇಶ ನೀಡಲೇಬೇಡಿ. ರೇಷನ್‌ ಕಿಟ್‌ ಕೊಡುವ ಸಂದರ್ಭ ಪ್ರತಿಯೊಬ್ಬರಿಗೂ ಗುಣಮಟ್ಟದ ಮಾಸ್ಕ್‌ ನೀಡಿ, ಮಾಸ್ಕ್‌ ಧರಿಸದೆ ನಗರಕ್ಕೆ ಕಾಲಿಡುವವರಿಗೆ ಹಿಡಿದು ದಂಡ ವಿಧಿಸಿ.

ಮದುವೆ ಸಮಾರಂಭಕ್ಕೆ ಕಟ್ಟುನಿಟ್ಟಿನ ರೂಲ್ಸ್‌ ಜಾರಿಗೊಳಿಸಿ, ರೂಲ್ಸ್‌ ತಪ್ಪಿದ್ದಲ್ಲಿ ಸಮಾರಂಭ ಆಯೋಜಕರಿಗೆ ದಂಡದೊಂದಿಗೆ, ಕಾನೂನು ಕ್ರಮ ಜರುಗಿಸಿ. ಅದು ಬಿಟ್ಟು ಒಂದಿಷ್ಟು ತಿಂಗಳು ಜನರನ್ನು ಬೇಕಾಬಿಟ್ಟಿಯಾಗಿ ಬಿಟ್ಟು ಮತ್ತೆ ಕೆಲವು ತಿಂಗಳು ಲಾಕ್‌ ಡೌನ್‌ನಿಂದ ಬಂಧಿಸಿಟ್ಟರೆ ಏನು ಪ್ರಯೋಜನ? ಸರ್ಕಾರದ ಈ ಮಾರ್ಗಸೂಚಿ ಗಮನಿಸುವಾಗ ಸೊಂಟದಲ್ಲಿ ಲುಂಗಿ ಗಂಟು ಹಾಕಿ ಕಟ್ಟಿ ಕೆಳಗೆ ಪೂರ್ತಿ ಬಿಟ್ಟಂತಿದೆ.

ಈಗಲಾದರೂ ಸರಕಾರದ ಜನಪ್ರತಿನಿಧಿ, ಅಧಿಕಾರಿ ವರ್ಗ ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಜನರ ಮೇಲಿರುವ ಕೊರೋನಾ ಹೊರೆಯನ್ನು ಕಡಿಮೆಗೊಳಿಸುವಲ್ಲಿ ಚಿಂತನೆ ನಡೆಸಬೇಕು. ಇಲ್ಲವಾದಲ್ಲಿ ಕೋರೋನಾಕ್ಕಿಂತಲೂ ಭೀಕರವಾದ ಸಾಮೂಹಿಕ ಆತ್ಮಹತ್ಯೆಯಂತಹ ಪ್ರಕರಣ ಹೆಚ್ಚಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಕುತ್ತಿಗೆಯವರೆಗೆ ಬಂದ ಸಾಲ
ಎರಡು ವರ್ಷದಿಂದ ಕೊರೋನಾ ಹೊಡೆತದಿಂದ ಆರ್ಥಿಕವಾಗಿ ಜರ್ಜರಿತವಾಗಿದ್ದ ಜನರು ಕಳೆದ 6 ತಿಂಗಳಿಂದ ಹಂತಹಂತವಾಗಿ ಲಾಕ್‌ಡೌನ್‌ ತೆರವಾಗಿತ್ತು.

ಆಗ ಹೊಸತೊಂದು ಭರವಸೆ ಮೂಡಿತ್ತು. ಆಗ ಹೊಸ ಹೊಸ ಉದ್ಯಮಕ್ಕೆ ಕೈ ಹಾಕಿದ್ದರು. ಆಗ ಬ್ಯಾಂಕ್‌ ಸಾಲ, ಕೈ ಸಾಲ ಪಡೆದಿದ್ದರು. ಮತ್ತೆ ಕೆಲವರು ಮೊದಲೇ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದರು.

ಅದರ ಜೊತೆ ಇದೀಗ ಮತ್ತೆ ಲಾಕ್‌ಡೌನ್‌ ಬಂದಿದೆ. ಆರ್ಥಿಕ ಹೊಡೆತ ಅಂತೂ ಗ್ಯಾರಂಟಿ. ಇದೀಗ ಹೊಸ ಉದ್ಯಮ, ಸಾಲದತ್ತ ಕೈಚಾಚಿದವರು ಸರ್ಕಾರದ ಸೂಚನೆಯಿಂದ ಕಂಗಾಲಾಗಿದ್ದಾರೆ. ಇದರಿಂದ ಈವರೆಗೆ ಸಾಲದ ಸುಳಿದವರು ದೇವರೇ ಗತಿ ತಲೆ ಮೇಲೆ ಕೈಹೊತ್ತಿದ್ದಾರೆ.

ಸರಕಾರಕ್ಕೆ ಕೊರೋನಾ ಮಾರ್ಗಸೂಚಿ ನೀಡುವ ತಜ್ಞರಲ್ಲಿ ವೈದ್ಯರು, ಸರಕಾರದ ಹಿರಿಯ ಅಧಿಕಾರಿಗಳು ಸೇರಿ ಹಲವರಿದ್ದಾರೆ. ಆದರೆ ಸಾಮಾನ್ಯರನ್ನು ಪ್ರತಿನಿಧಿಸುವವರಿಲ್ಲ. ಈ ಬಗ್ಗೆ ಸರಕಾರ ದೀರ್ಘ ಆಲೋಚನೆ ನಡೆಸಬೇಕಾಗಿದೆ.

LATEST NEWS

ಪರ್ಯಾಯ ಮೆರವಣಿಗೆಗೆ ಭಗವಾಧ್ವಜ ಮೂಲಕ ಚಾಲನೆ ಕೊಟ್ಟಿದ್ದು, ಪಾಕಿಸ್ತಾನ ಧ್ವಜ ಹಿಡಿದಲ್ಲ-ಶಾಸಕ ಯಶ್ಪಾಲ್

Published

on

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾಧಿಕಾರಿಗಳು ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಇದಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರಸಭೆಯ ಆಡಳಿತ ಅಧಿಕಾರಿಯಾಗಿದ್ದ ಹಿನ್ನೆಲೆಯಲ್ಲಿ ತಾನು ಭಾಗಿಯಾಗಿದ್ದೇನೆ ವಿನಃ ಯಾವುದೇ ರಾಜಕೀಯ ಕಾರಣಗಳಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಜಿಲ್ಲಾಧಿಕಾರಿ ಕೈಗೆ ಕೇಸರಿ ಧ್ವಜ ಕೊಟ್ಟಿರುವ ಉಡುಪಿ ಶಾಸಕ ಯಶಪಾಲ್  ಸುವರ್ಣ ಅವರು ಜಿಲ್ಲಾಧಿಕಾರಿ ಸ್ವರೂಪ ಪರ ಮಾತನಾಡಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಆಕ್ಷೇಪಕ್ಕೆ ಅರ್ಥ ಇಲ್ಲ, ಪರ್ಯಾಯ ಮೆರವಣಿಗೆ ಭಗವಾಧ್ವಜ ಮೂಲಕ ಚಾಲನೆ ಕೊಟ್ಟಿದ್ದಾರೆ. ಹಿಂದೆಯೂ ಕೂಡ ಇದೇ ರೀತಿ ಚಾಲನೆ ನೀಡಲಾಗುತ್ತಿತ್ತು. ಒಂದು ವೇಳೆ ಅವರು ಪಾಕಿಸ್ತಾನ ಧ್ವಜ ಕೊಟ್ಟಿದ್ದರೆ ಟೀಕೆ ಮಾಡಬೇಕಿತ್ತು. ಡಿಸಿ ಅವರ ಸ್ಥಾನದಲ್ಲಿ ಅಂದು ನಮಗೆ ಉಸ್ತುವಾರಿ ಸಚಿವರು ಲಭಣ್ಯವಿರುತ್ತಿದ್ದರೆ ಅವರಿಮದಲೇ ಭಗವಾಧ್ವ ಹಜ ಮೂಲಕ ಚಾಲನೆ ನೀಡುತ್ತಿದ್ದೆವು. ಆವಾ್ಗಲೂ ಇವರು ಇದೇ ರೀತಿ ಅವರನ್ನು ರಾಜೀನಾಮೆಗೆ ಒಒತ್ತಾಯಿಸುತ್ತಿದ್ರಾ ಎಂಬುವುದು ಪ್ರಶ್ನೆಯಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದವರ ಮೇಲೆ ಕ್ರಮ ಕೈಗೊಂಡಿಲ್ಲ. ಬೇರೆ ಬೇರೆ ಸಂದರ್ಭದಲ್ಲಿ ಪಾಕಿಸ್ತಾನ ಧ್ವಜ ಹರಿದಾಗ ಕಣ್ಣು ಮುಚ್ಚಿ ಕೂರುತ್ತಾರೆ.   ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆಯನ್ನು ಕೊಡಲಿ. ಇಲ್ಲವಾದರೆ ಅದೆಷ್ಟೇ ದೊಡ್ಡ ರಾಜಕೀಯ ನಾಯಕ ಬಂದ್ರೂ ಕೂಡಾ ಇನ್ಮುಂದೆ ನಾವು ಭಗವಾಧ್ವಜ ಮೂಲಕವೇ ಸ್ವಾಗತ ಕೊಡುತ್ತೇವೆ ಇದು ಅವರಿಗೆ ನನ್ನ ಓಪನ್ ಚಾಲೆಂಜ್.  ಪರ್ಯಾಯದ  ಯಶಸ್ಸನ್ನು ಇವರಿಗೆ ಸಹಿಸಲು ಆಗಲ್ಲ ಎಂದು ಟೀಕಿಸಿದ್ದಾರೆ. ಇನ್ನು ಉಡುಪಿ ಪರ್ಯಾಯಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಧೂ ಅವರು ಪ್ರಶ್ನಿಸಿ ವಾಗ್ದಾಳಿ ಮಾಡಿದ್ದಾರೆ.

 

Continue Reading

LATEST NEWS

ಉಡುಪಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ, ಕಾರಣ ನಿಗೂಢ

Published

on

ಉಡುಪಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ವಾಸವಾಗಿದ್ದ ಬಿಡಾರದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆದಿದೆ.

ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬರ್ಮವ್ವ ಮೃತ ಬಾಲಕಿ. ಖಾಸಗಿ ನಿವೇಶನದಲ್ಲಿದ್ದ ಜೋಪಡಿಯನ್ನು ಬಾಡಿಗೆ ಪಡೆದುಕೊಂಡು ಮೃತ ಬಾಲಕಿಯ ಹೆತ್ತವರು‌ ವಾಸವಾಗಿದ್ದರು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿಯಿಂದ ಈ ಕೃತ್ಯ ನಡೆದಿದೆ.

ನಗರ ಪೋಲಿಸ್  ಠಾಣೆಯ ಎಸ್ ಐ ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಮೃತ ದೇಹವನ್ನು ನೇಣು ಕುಣಿಕೆಯಿಂದ ತೆರವುಗೊಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

Continue Reading

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page