Connect with us

LATEST NEWS

ಮದುವೆ ದಿನವೇ ಕೊರೊನಾಗೆ ಬಲಿಯಾದ ವರ…!!

Published

on

ಚಿಕ್ಕಮಗಳೂರು :ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.


ಇಂದು ಇವರ ಮದುವೆ ದಿನವಾಗಿದ್ದು, ಮಂಗಳವಾದ್ಯ ಕೇಳಬೇಕಾಗಿದ್ದ ಮನೆ ಈಗ ಶೋಕ ಸಾಗರದಲ್ಲಿ ಮುಳುಗಿದೆ.

ಪೃಥ್ವಿರಾಜ್​, ಹತ್ತು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಮರಳಿದ್ದ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪೃಥ್ವಿರಾಜ್​ ಮೃತಪಟ್ಟಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ವ್ಯಕ್ತಿ ನಿಗೂಢ ಸಾ*ವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್…ತನಿಖೆ ವೇಳೆ ಬಯಲಾಯ್ತು ಸ್ಫೋ*ಟಕ ಸತ್ಯ!

Published

on

ಮಂಗಳೂರು/ತುಮಕೂರು :  ತೋಟವೊಂದರಲ್ಲಿ  ವ್ಯಕ್ತಿಯ ಶವ ಸಿಕ್ಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ತೋಟವೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು. ತನಿಖೆ ವೇಳೆ ಶಾಕಿಂಗ್ ವಿಚಾರವೊಂದು ಬಯಲಾಗಿದೆ.

ಮದುವೆಯಾಗಿ ಮೂರು ತಿಂಗಳು…ಮುಹೂರ್ತವಿಟ್ಟ ಪತ್ನಿ!

ವ್ಯಕ್ತಿ ನಿಗೂಢ ಸಾ*ವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರೊಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊ*ಲೆ ಮಾಡಿರುವ ವಿಚಾರ ಬಯಲಾಗಿದೆ.

31 ವರ್ಷದ ಫರ್ಜಾನ, 24 ವರ್ಷದ ಧನರಾಜ್, 24 ವರ್ಷದ ವೆಂಕಟೇಶ್ ಮತ್ತು 24 ವರ್ಷದ ದರ್ಶನ್ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ ಕುಟುಂಬದವರ ನಿಶ್ಚಯದಂತೆ ಇದೇ ವರ್ಷ ಜನವರಿಯಲ್ಲಿ ಫರ್ಜಾನ ಎಂಬಾಕೆಯನ್ನ ವಿವಾಹವಾಗಿದ್ದ. ತಿಪಟೂರು ಪಟ್ಟಣದಲ್ಲಿ ವಾಸವಾಗಿದ್ದ ಮನ್ಸೂರ್ ಮಾರ್ಚ್ 4ರಂದು ಗುಜರಿ ಸಾಮಗ್ರಿ ತರಲೆಂದು ಹೋದವ ನಾಪತ್ತೆಯಾಗಿದ್ದ. ಆ ಬಳಿಕ ಕುಟುಂಬಸ್ಥರು ಆತನಿಗಾಗಿ ಹುಡುಕಾಟ ನಡೆಸಿದಾಗ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ತೋಟವೊಂದರಲ್ಲಿ ಶ*ವ ಪತ್ತೆಯಾಗಿತ್ತು.ಪೊಲೀಸರು ಈ ಪ್ರಕರಣದ ತನಿಖೆಗಿಳಿದಾಗ ಶಾ*ಕಿಂಗ್ ಮಾಹಿತಿಗಳು ಬಯಲಾಗಿವೆ.

ಇದನ್ನೂ ಓದಿ : ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಶಾಲಾ ಕಟ್ಟಡದಿಂದ ಜಿ*ಗಿದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ

ಪತ್ನಿ ಪರ್ಝಾನ ತನ್ನ ಪ್ರಿಯಕರ ಧನರಾಜ್ ಜೊತೆ ಸೇರಿ ಪತಿಯನ್ನು ಮುಗಿಸಲು ಪ್ರಿಯಕರನ ಗ್ಯಾಂಗ್ ಜೊತೆ ಪ್ಲ್ಯಾನ್ ಮಾಡಿದ್ದಾಳೆ. ಗುಜರಿ ವಸ್ತುಗಳು ಇರೋದಾಗಿ ಹೇಳಿ ಮನ್ಸೂರ್​​ ಗೆ ಕರೆ ಮಾಡಿ ಆರೋಪಿಗಳು ಕರೆಸಿಕೊಂಡಿದ್ದರು. ಆತ ಬರುತಿದ್ದಂತೆ ಹ*ಲ್ಲೆ ಮಾಡಿ ಕೊ*ಲೆ ಮಾಡಲಾಗಿತ್ತು. ಸದ್ಯ ಆರೋಪಿಗಳು ಜೈಲು ಪಾಲಾಗಿದ್ದಾರೆ.

Continue Reading

DAKSHINA KANNADA

ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ

Published

on

ಮಂಗಳೂರು : ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರ ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಮೂತ್ರಪಿಂಡ (ಕಿಡ್ನಿ) ಆರೈಕೆಯ  ಸೇವೆಯನ್ನು ಒತ್ತಿ ಹೇಳಿದೆ. ಮೂತ್ರಪಿಂಡದ ಆರೋಗ್ಯ ಮತ್ತು ರೋಗ ತಡೆಗಟ್ಟುವ ಆರೈಕೆಯ ಕುರಿತು ಜಾಗೃತಿ ಹೆಚ್ಚಿಸುವ ಈ ನೇತೃತ್ವವನ್ನು ಆಸ್ಪತ್ರೆಯ ನೆಫ್ರಾಲಜಿ ವಿಭಾಗವು ಕೈಗೊಂಡಿದೆ.

ಈ ವಿಭಾಗವು ಅತ್ಯಾಧುನಿಕ ಕಿಡ್ನಿ ಕಸಿ ಸೇವೆಯನ್ನು ಹಾಗೂ ದಕ್ಷಿಣಕನ್ನಡದ ಅತಿದೊಡ್ಡದಾದ ಡಯಾಲಿಸಿಸ್‌ ಘಟಕವನ್ನು ಹೊಂದಿದ್ದು, 24 ಗಂಟೆ ನಿರಂತರ ಸೇವೆಗೆ ಮುಡಿಪಾಗಿರುವ ಮತ್ತು ಹೆಚ್ಚು ಅನುಭವಿ ನೆಫ್ರಾಲಜಿಸ್ಟ್‌ಗಳನ್ನು ಹೊಂದಿರುವ ಏಕೈಕ ಘಟಕವಾಗಿದ್ದು, ಸದಾ ರೋಗಿಯ ಆರೈಕೆಗೆ ಮುಡಿಪಾಗಿರುವ ಗುರಿಯನ್ನು ಹೊಂದಿದೆ.

ಈ ಬಗ್ಗೆ ಮಾತನಾಡಿದ ಹಿರಿಯ ನೆಫ್ರಾಲಜಿ ತಜ್ಞ, ಡಾ ಅಶೋಕ್‌ ಭಟ್‌, ವಿಶ್ವ ಕಿಡ್ನಿ ದಿನ  ಮೂತ್ರಪಿಂಡದ ಆರೋಗ್ಯವನ್ನು ಆದ್ಯತೆಯನ್ನಾಗಿ ಪರಿಗಣಿಸುವಂತೆ ನೆನಪಿಸುವ ದಿನ. ರೋಗ ಲಕ್ಷಣಗಳು ಸಮಸ್ಯೆ ಮುಂದುವರಿದ ಹಂತ ತಲುಪಿದಾಗ ಗೋಚರವಾಗುವ ಕಾರಣದಿಂದ  ಸಾಕಷ್ಟು ರೋಗಿಗಳು ಆರಂಭಿಕ ಹಂತದಲ್ಲಿ ಸಮಸ್ಯೆಯ ಕುರಿತು ಅರಿವು ಹೊಂದಿರುವುದಿಲ್ಲ. ಆರೋಗ್ಯಕರ ಜೀವನಶೈಲಿ ಹೊಂದುವುದು, ರಕ್ತದೊತ್ತಡ ಮತ್ತು ಮಧುಮೇಹ ನಿಯಂತ್ರಣ, ಹೈಡ್ರೇಟ್‌ ಆಗಿರುವುದು, ನಿಯಮಿತ ರಕ್ತ, ಮೂತ್ರ ಹಾಗೂ ಆರೋಗ್ಯ ಪರೀಕ್ಷೆಯಿಂದ ಕಿಡ್ನಿ ರೋಗದ ಅಪಾಯವನ್ನು ತಗ್ಗಿಸಬಹುದು. ರೋಗ ತಡೆಗಟ್ಟುವುದೇ ದೀರ್ಘ ಕಾಲದ ಕಿಡ್ನಿ ಆರೋಗ್ಯಕ್ಕೆ ದಾರಿ. ಪ್ರತಿಯೊಬ್ಬರು ನೆಫ್ರೊಲಾಜಿ ತಜ್ಞರನ್ನು ಭೇಟಿ ಮಾಡಿ ಸಮಸ್ಯೆಗೆ ಸಲಹೆಯನ್ನು ಪಡೆಯಬೇಕು ಎಂದರು.

ಹಿರಿಯ ನೆಫ್ರಾಲಜಿ ತಜ್ಞ ಡಾ.ಸುಶಾಂತ್‌ ಕುಮಾರ್ ಮಾತನಾಡಿ, ಎಲ್ಲಾ ಕಿಡ್ನಿ ಸಮಸ್ಯೆಗೆ ಡಯಾಲಿಸಿಸ್‌ ಒಂದೇ ಪರಿಹಾರವಲ್ಲ. ಡಯಾಲಿಸಿಸ್‌ ಸಿಕೆಡಿಯಲ್ಲಿ 5ನೇ ಹಂತದಲ್ಲಿ ಅಥವಾ ತೀವ್ರ ಪ್ರಮಾಣದ ಸಮಸ್ಯೆಗಳು ಕಂಡು ಬಂದಾಗ ಆರಂಭಿಸಬೇಕಾಗುತ್ತದೆ. ಡಯಾಲಿಸಿಸ್‌ಗೆ ಹೋಲಿಸಿದಾಗ ಸಿಕೆಡಿ ಅಥವಾ ಕಿಡ್ನಿ ಫೆಲ್ಯೂರ್ ಸಮಸ್ಯೆಗೆ ಮೂತ್ರಪಿಂಡದ ಕಸಿ ಉತ್ತಮ ವಿಧಾನ. ಕಿಡ್ನಿ ಕಸಿ ಯಶಸ್ಸಿನ ಪ್ರಮಾಣವು ಹೆಚ್ಚಾಗಿದೆ. ಆದರೆ ಇದು ಸೂಕ್ತವಾದ ದಾನಿಗಳು ಸಿಕ್ಕಾಗ ಮಾತ್ರ ಸಾಧ್ಯ. ಮರಣ ಹೊಂದಿರುವವರಿಂದ ಅಂಗಾಂಗ ದಾನ ಪಡೆಯಲು ನಮ್ಮಲ್ಲಿ ಸರ್ಕಾರದ ಯೋಜನೆಯಾದ ಜೀವ ಸಾರ್ಥಕತೆ ಕಾರ್ಯಕ್ರಮವಿದೆ. ಅದೇ ರೀತಿ ಜೀವಂತ ದಾನಿಗಳಿಂದ ದಾನ ಪಡೆಯಲು ನಮ್ಮ ಆಸ್ಪತ್ರೆಯಲ್ಲಿ ಸಮಿತಿಯಿದ್ದು ಅಂಗಾಂಗ ದಾನ ಆ್ಯಕ್ಟ್‌ಗೆ ಅನುಗುಣವಾಗಿ ಎಲ್ಲಾ ರೀತಿಯ ಅನುಮತಿ, ಕಾನೂನು ಅಗತ್ಯತೆಗಳನ್ನು ಪೂರೈಸಲಾಗುತ್ತದೆ ಎಂದರು.

ಸೌಲಭ್ಯಗಳ ಕುರಿತು ಮಾತನಾಡಿದ ನೆಫ್ರಾಲಜಿ ವಿಭಾಗದ ಎಚ್‌ಒಡಿ ಡಾ.ಮಯೂರ್ ಪ್ರಭು, ಕೆಎಂಸಿ ಆಸ್ಪತ್ರೆ ಮಂಗಳೂರಿನಲ್ಲಿ ನಮ್ಮ ದಕ್ಷಿಣ ಕನ್ನಡದಲ್ಲೇ  ಅತಿದೊಡ್ಡ ಡಯಾಲಿಸಿಸ್‌  ಕೇಂದ್ರಗಳಲ್ಲಿ ಒಂದಾದ ಅಡ್ವಾನ್ಸ್ಡ್ ಡಯಾಲಿಸಿಸ್‌ ಸೇವೆ, ತಜ್ಞ ಮೂತ್ರಪಿಂಡ ಕಸಿ ತಂಡ ಮತ್ತು ಅಡ್ವಾನ್ಸ್ಡ್ ಡಯಾಗ್ನೋಸ್ಟಿಕ್‌ ಸೇವೆ ಬೆಂಬಲದ ಬಹು ವಿಭಾಗೀಯ ಚಿಕಿತ್ಸಾ ಸೇವೆಯನ್ನು ಒಳಗೊಂಡ ಸಮಗ್ರ ನೆಫ್ರಾಲಜಿ ಸೌಲಭ್ಯವನ್ನು ರೂಪಿಸಿದ್ದೇವೆ. ನಮ್ಮ ತಂಡವು ಅತಿದೊಡ್ಡ ತಜ್ಞರ ತಂಡವಾಗಿದ್ದು ವರ್ಷದ 365 ದಿನವೂ 24 ಗಂಟೆಗಳ ಆರೋಗ್ಯ ಸೇವೆಯನ್ನು ನೀಡುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್‌ ದಾ*ಳಿ

ನಾವು ರೋಗಿ ಕೇಂದ್ರಿತ ಸೇವೆಗಳಾದ ಬೆಡ್‌ಸೈಡ್‌ ಟ್ರೀಟ್‌ಮೆಂಟ್‌, ಐಸಿಯುನಲ್ಲಿ ಡಯಾಲಿಸಿಸ್‌ ಸೌಲಭ್ಯ, ಶೂನ್ಯ ಹರಡುವಿಕೆಯ ವಿಧಾನದೊಂದಿಗೆ ಎಚ್‌ಐವಿ ಮತ್ತು ಎಚ್‌ಬಿಎಸ್‌ಎಜಿ ಸೋಂಕಿತರಿಗೆ ವಿಶೇಷ ಡಯಾಲಿಸಿಸ್‌ ಸೌಲಭ್ಯ, ಸುಸಜ್ಜಿತ ಎಚ್‌ಡಿಎಫ್‌ ಡಯಾಲಿಸಿಸ್ ಘಟಕ ಮತ್ತು ನಿಯಮಿತ ಡಯಾಲಿಸಿಸ್ ಅಗತ್ಯವಿರುವ ಹಾಸಿಗೆ ಹಿಡಿದ ರೋಗಿಗಳಿಗೆ ಮೀಸಲಾದ ಸಾರಿಗೆ ಬೆಂಬಲವನ್ನು ಒದಗಿಸಲಾಗುತ್ತದೆ. ಈ ಪ್ರದೇಶದಲ್ಲಿ ರೋಗಿ-ಕೇಂದ್ರಿತ ನೆಫ್ರಾಲಜಿ ಸೇವೆಗಳನ್ನು ವಿಸ್ತರಿಸುವುದನ್ನು ಮುಂದುವರಿಸುವುದರೊಂದಿಗೆ ಮೂತ್ರಪಿಂಡದ ಕಾಯಿಲೆಗಳ ಜಾಗೃತಿ, ಆರಂಭಿಕ ಪತ್ತೆ ಮತ್ತು ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಬಲಪಡಿಸುವ ತನ್ನ ಬದ್ಧತೆಯನ್ನು ಆಸ್ಪತ್ರೆ ಪುನರುಚ್ಚರಿಸುತ್ತದೆ ಎಂದರು.

Continue Reading

LATEST NEWS

ಬೆಂಗಳೂರು: ಟಿಪ್ಪರ್‌ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಜೀವಾಂತ್ಯ!

Published

on

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್‌ ಲಾರಿ ಹರಿದು 4ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನ 21 ವರ್ಷದ ಕೃತಿಕಾ ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಲ್ಲಿ ಕೃತಿಕಾ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿನಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗೆಳತಿ ಹಂಸಾ ಜೊತೆ ಕೃತಿಕಾ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಚಲಿಸುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ, ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಕೂಟಿ ಚಲಾಯಿಸುತ್ತಿದ್ದ ಹಂಸಾ ಎಡಭಾಗಕ್ಕೆ ಬಿದ್ರೆ, ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಕೃತಿಕಾ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಶಾಲಾ ಕಟ್ಟಡದಿಂದ ಜಿ*ಗಿದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ

ಹಂಸಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಂಗೇರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಬಗ್ಗೆ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದೇನು?

ಮೈಸೂರು ರಸ್ತೆಯಲ್ಲಿರುವ ಆರ್.ಆರ್ ಆಸ್ಪತ್ರೆ ಎಕ್ಸಿಟ್ ಗೇಟ್ ನಲ್ಲಿ ಅಪಘಾತ ನಡೆದಿದೆ. ಇಬ್ಬರು ಮೆಡಿಕಲ್ ವಿದ್ಯಾರ್ಥಿನಿ ಬೈಕ್ ನಲ್ಲಿ ತೆರಳುತ್ತಿದ್ದರು. ಬೆಂಗಳೂರಿಂದ ಮೈಸೂರು ಕಡೆಗೆ ಹೋಗ್ತಿದ್ದ ಲಾರಿ ಡಿಕ್ಕಿ ಆಗಿದೆ. ಹಿಂಬದಿ ಸವಾರಿಣಿ ಸಾವನ್ನಪ್ಪಿದ್ದಾರೆ, ಚಾಲಕಿಗೆ ಗಾಯವಾಗಿದೆ. ಮೃತಳು ಆರ್.ಆರ್.ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page