Connect with us

DAKSHINA KANNADA

ಕರಾವಳಿ ಉತ್ಸವ ಮೈದಾನದಲ್ಲಿ ಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ

Published

on

ಮಂಗಳೂರು: ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್‌ಸಿಎಫ್ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕ ಮೇಳವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.

ಬಳಿಕ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.

ಈ ಅಂತರ್ಜಲ ಸುರಂಗವು ಹಲವು ಪ್ರಬೇದದ ಮೀನುಗಳೊಂದಿಗೆ ಸುಂದರ ಮತ್ಸ್ಯ ಲೋಕವನ್ನು ಸೃಷ್ಟಿಸಿ ಮಂಗಳೂರಿನ ಜನತೆಗೆ ರಸದೌತಣವನ್ನು ನೀಡಲು ಸಜ್ಜಾಗಿವೆ.

ಅಲ್ಲದೆ, ರೊಬೊಟಿಕ್ ಅನಿಮಲ್ ಶೋದಲ್ಲಿ ದೈತ್ಯಾಕಾರದ ವನಮೃಗಗಳು ಹಾಗೂ ಅವುಗಳ ಘರ್ಜನೆ ದಟ್ಟಾರಣ್ಯದಲ್ಲಿ ವಿಹರಿಸಿದ ಅನುಭವವನ್ನು ನೀಡಲಿದೆ.

ಈ ಮೊದಲು ಮಂಗಳೂರಿಗೆ ಸೋವಲ್ಡ್, ಅಕ್ವಾ ಶೋ, ಬರ್ಡ್ ಶೋ, ತಾಜ್‌ಮಹಲ್‌ನಂತಹ ವಿನೂತನ ರೀತಿಯ ಮೆಗಾ ಶೋಗಳನ್ನು ನೀಡಿರುವ ಈ ಸಂಸ್ಥೆ ಪ್ರತಿ ಬಾರಿಯೂ ಹೊಚ್ಚ ಹೊಸ ಶೋಗಳನ್ನು ನೀಡುತ್ತಾ ಬಂದಿದೆ.

ಈ ರಾಷ್ಟ್ರೀಯ ಗ್ರಾಹಕರ ಮೇಳವು ಸಂಪೂರ್ಣ ಕುಟುಂಬಕ್ಕಾಗಿ ಪಿಂಗ್ ಮತ್ತು ಮನರಂಜನಾ ಮೇಳವಾಗಿರುತ್ತದೆ.

ರಾಷ್ಟ್ರೀಯ ಗ್ರಾಹಕರ ಮೇಳವು ವ್ಯಾಪಾರ ಮಳಿಗೆಗಳೊಂದಿಗೆ, ವಿಶೇಷ ಮತ್ತು ಅತ್ಯಧಿಕ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಆಕರ್ಷಿಸಲಿದೆ.

ಗೃಹ ಬಳಕೆ ಉತ್ಪನ್ನಗಳು, ಅಡುಗೆ ಮನೆ ಉತ್ಪನ್ನಗಳು, ಕೈಮಗ್ಗದ ಉತ್ಪನ್ನಗಳು, ಕರುಶಲ, ಉತ್ಪನ್ನಗಳು, ಡ್ರೆಸ್ ಮೆಟೀರಿಯಲ್ ಫ್ಯಾರನ್ ಪಾದರಕ್ಷೆಗಳು, ಆಟಿಕೆಗಳು, ಆಹಾರೋತ್ಪನ್ನಗಳು ಮತ್ತು ಇನ್ನೂ ಹಲವಾರು ಉತ್ಪನ್ನಗಳು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಲಭ್ಯವಾಗಲಿದೆ.

ಮನೋರಂಜನಾ ವಿಭಾಗದಲ್ಲಿ ಟೋರಾ ಟೋರಾ, ಡ್ಯಾಶಿಂಗ್ ಕಾರ್, ಜಾಯಿಂಟ್ ಸ್ಟೀಲ್, ಡ್ರಾಗನ್ ಟೇನ್, ಮೆದ್ರಿ ಕೊಲಂಬಸ್, 30 ಶೋಸ್, ಸೇರಿ ಹೌಸ್, ಏ‌ ಶಾಟ್, ಸ್ಟೇಸ್ ಜೆಟ್, ಇತ್ಯಾದಿಗಳು ಇವೆ.

ಮನೋರಂಜನೆಗೆ ಸಂಜೆ 4ರಿಂದ 9ರವರೆಗೆ ಮನೋರಂಜನೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಅವಕಾಶವಿರುತ್ತದೆ.

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಮತ್ತು ಎನ್‌ಸಿಎಫ್ ವತಿಯಿಂದ ಚೈತನ್ಯ ಹಾಗೂ ವಿಜಯ ಕುಮಾರ್ ಮತ್ತು ನಿಸರ್ಗ ಪಬ್ಲಿಸಿಟಿಯ ಮಂಜುನಾಥ್ ಉಪಸ್ಥಿತರಿದ್ದರು.

DAKSHINA KANNADA

ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ ಇನ್ನಿ*ಲ್ಲ

Published

on

ಕಿನ್ನಿಗೋಳಿ : ಕಿನ್ನಿಗೋಳಿಯ ಐಕಳ ಪೊಂಪೈ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ. (62 )ಅವರು ಹೃದಯಘಾತದಿಂದ ಬುಧವಾರ ರಾತ್ರಿ ನಿ*ಧನ ಹೊಂದಿದರು.

ಮೂಲತಃ ಕಾಸರಗೋಡು ತಾಲೂಕಿನ ಬದಿಯಡ್ಕ ನಿವಾಸಿಯಾಗಿದ್ದ ಅವರು  1986ರಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ಪೊಂಪೈ ಕಾಲೇಜಿಗೆ ವರ್ಗಾವಣೆಗೊಂಡು 21 ವರ್ಷಗಳ ವರೆಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

ಸಮಾಜಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಮತ್ತು ಮುಖ್ಯಸ್ಥರಾಗಿ ಒಟ್ಟು 36 ವರ್ಷಗಳ ಸೇವೆಯನ್ನು ಸಲ್ಲಿಸಿದ್ದ ಅವರು ಮಂಗಳೂರು ವಿಶ್ವ ವಿದ್ಯಾನಿಲಯದ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಪೊಂಪೈ ಕಾಲೇಜಿನಲ್ಲಿ ಮೂರು ವರ್ಷಗಳ ಕಾಲ ಎನ್.ಎಸ್. ಎಸ್ ಕಾರ್ಯಕ್ರಮ ಅಧಿಕಾರಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ಹಲವು ವರ್ಷಗಳ ಕಾಲ ಸಹ ಕಾರ್ಯಕ್ರಮ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು‌ ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

Published

on

ಮಂಗಳೂರು: ತನ್ನ ಪತ್ನಿಯನ್ನು ಕುಡಿದ ಅಮಲಿನಲ್ಲಿ ಪತಿ ಕೊಂದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣದ ಮುಖ್ಯ ಆರೋಪಿ ಪತಿಗೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ನಿನ್ನೆ (ಫೆ.6) ತೀರ್ಪು ನೀಡಿದೆ.

ಸುಳ್ಯದ ತೋಡಿಕಾನ ಅಂಡ್ಯಡ್ಕ ಸಿಆರ್‌ಸಿ ಕ್ವಾಟ್ರರ್ಸ್ ನಿವಾಸಿ ರಾಜ (64) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.

ರಾಜ ತನ್ನು ಪತ್ನಿ ಕಮಲಾ (57) ಎಂಬಾಕೆಯನ್ನು ಕೊಲೆಗೈದ ಆರೋಪದಲ್ಲಿ ಸಿಕ್ಕಿಬಿದ್ದಿದ್ದ. 2022ರ ಸೆ.4ರಂದು ದಂಪತಿ ರಾಜಾ ಮತ್ತು ಕಮಲಾ ರಬ್ಬರ್ ಮ್ಯಾಪಿಂಗ್ ಕೆಲಸ ಕೇಳುತ್ತಾ ಬೆಳ್ತಂಗಡಿ ಕೊಯೂರು ಗ್ರಾಮದ ಅಲೆಕ್ಕಿ ಎಂಬಲ್ಲಿನಧರ್ಣಪ್ಪ ಗೌಡರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇವರಿಗೆ ರಬ್ಬರ್ ತೋಟದ ಶೆಡ್‌ನಲ್ಲೇ ವಾಸ್ತವ್ಯಕ್ಕೆ ಅವಕಾಶ ನೀಡಲಾಗಿತ್ತು.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಪ್ರಸ್ತುತ ಆರೋಪಿಗೆ ನ್ಯಾಯಲಯವು ಜಾವಾವಧಿ ಶಿಕ್ಷೆ ವಿಧಿಸಿ ಕಮಲಾ ಸಾವಿಗೆ ನ್ಯಾಯ ನೀಡಿದೆ.

 

Continue Reading

DAKSHINA KANNADA

ಸುರತ್ಕಲ್: ಡ್ರೆಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಭಾರೀ ನಷ್ಟ

Published

on

ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್‌ನ ಪೂವ ಆರ್ಕೆಡ್‌ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ.

ಸುಟ್ಟು ಕರಕಲಾಗಿದ್ದ ಮಳಿಗೆಯು ಕೃಷ್ಣಾಪುರ ನಿವಾಸಿ ಶಮೀಮ್ ಎಂಬವರಿಗೆ ಸೇರಿದ್ದು, ಬಟ್ಟೆ ಬರೆಗಳು ಹಾಗೂ ಯಂತ್ರೋಪಕರಣಗಳು ಸೇರಿ ಕೋಟಿ ರೂ. ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಂಗಡಿಯ ಮೇಲ್ಛಾವಣಿಯಲ್ಲಿನ ಬಟ್ಟೆ ವಿನ್ಯಾಸ ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆ ಕ್ಷಣಾರ್ಧದಲ್ಲಿ ಇಡೀ ಮಳಿಗೆಯನ್ನು ಸುಟ್ಟು ಭಸ್ಮ ಮಾಡಿತು.

ಇದನ್ನೂ ಓದಿ : ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಮೂರು ಮತ್ತು ಎಂಆರ್ ಪಿಎಲ್ ನ ಒಂದು ಅಗ್ನಿ ನಿರೋಧಕ ವಾಹನಗಳು ಸತತ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page