Connect with us

MANGALORE

ಭಾರತಿ ಜಗದೀಶ್ ಕಾಕುಂಜೆಯವರ ಚೊಚ್ಚಲ ಕವನ ಸಂಕಲನ ” ಹಗಲು ಹೊಳೆವ ನಕ್ಷತ್ರ” ಬಿಡುಗಡೆ

Published

on

ಮಂಗಳೂರು: ಭಾರತಿ ಜಗದೀಶ್ ಕಾಕುಂಜೆ ಯವರ ಚೊಚ್ಚಲ ಕವನ ಸಂಕಲನ ” ಹಗಲು ಹೊಳೆವ ನಕ್ಷತ್ರ” ನವರಾತ್ರಿಯ ಆರಂಭದ ದಿನದಂದು ಕದ್ರಿ ಕಂಬಳ ಚಂದ್ರಿಕಾ ಬಡಾವಣೆಯ ಸ್ವಗೃಹ ” ವಜ್ರ” ದಲ್ಲಿ ಬಿಡುಗಡೆಯಾಯಿತು.

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕಾ ಬಳಗದ ನಿವೃತ್ತ ಪ್ರಸರಣಾಧಿಕಾರಿ ,ಸಾಹಿತಿ , ನಾಟಕಕಾರ ,ಕಲಾವಿದ ಕದ್ರಿ ನವನೀತ ಶೆಟ್ಟಿ ಅವರು ಕೃತಿ ಬಿಡುಗಡೆ ಮಾಡಿದರು.

ಸ್ವರ್ಗೀಯ ಜಗದೀಶ ಕಾಕುಂಜೆಯವರೊಂದಿಗಿನ ಎರಡು ದಶಕಗಳ ದಾಂಪತ್ಯ ಜೀವನದ ಆರಂಭದಿಂದ ಮೊದಲ್ಗೊಂಡು ವರ್ತಮಾನದ ದಿನಗಳ ತನಕದ ಸುಮಾರು 27 ವರ್ಷಗಳ ಅವಧಿಯಲ್ಲಿ ರಚಿಸಿದ 43 ಕವನಗಳನ್ನೊಳಗೊಂಡ ಕೃತಿ ಇದಾಗಿದೆ.

ಭಾರತಿಯವರು ಕನ್ನಡ ಎಂ.ಎ ಸ್ನಾತಕೋತ್ತರ ಪದವೀಧರೆ ಆಗಿದ್ದು ಕಾಲೇಜು ದಿನಗಳಿಂದಲೇ ಕಥೆ, ಕವನ ಬರವಣಿಗೆಯ ಆಸಕ್ತಿ ಹೊಂದಿದ್ದರು.

ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿ ದಾಮೋದರ ಪೈ, ಕರ್ನಾಟಕ ತುಳು ಅಕಾಡೆಮಿಯ ಮಾಜಿ ಸದಸ್ಯೆ, ಸಾಹಿತಿ ರೂಪಕಲಾ ಆಳ್ವ ಉಪಸ್ಥಿತರಿದ್ದರು.

ಹಾಗೇ ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ ಈ ಕೃತಿಯ ಪ್ರಕಾಶಕರಾಗಿದ್ದಾರೆ.

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading

MANGALORE

ಬಿಹಾರ ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಕರ್ನಾಟಕದ ಪೊಲೀಸ್ ಹೃದಯಘಾ*ತಕ್ಕೆ ಬ*ಲಿ

Published

on

ಮಂಗಳೂರು/ಬಿಹಾರ : ಬಿಹಾರದಲ್ಲಿ ನಡೆಯುತ್ತಿದ್ದ ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಕರ್ನಾಟಕ ಮೂಲದ ಕೆಎಸ್ಆರ್‌ಪಿಯ ಕಾನ್ಸ್ಟೇಬಲ್ ಒಬ್ಬರು ಹೃದಯಘಾ*ತಕ್ಕೆ ಬಲಿಯಾಗಿದ್ದಾರೆ. ವಿಜಯಪುರದ ರಾಜಕುಮಾರ್ ವಾಲಿಕಾರ್(32) ಮೃ*ತಪಟ್ಟವರು.

ಕೆಎಸ್ಆರ್‌ಪಿಯ ನಾಲ್ಕೈದು ಪಡೆಗಳು ಕಳೆದ ದಿನಗಳ ಹಿಂದೆ ವಿಧಾನಸಭೆ ಚುನಾವಣಾ ನಿಮಿತ್ತ ಬಿಹಾರಕ್ಕೆ ಹೋಗಿದ್ದವು. ಮಂಗಳವಾರ(ನ.11) ಕರ್ತವ್ಯದಲ್ಲಿದ್ದ ರಾಜಕುಮಾರ್ಗೆ ದಿಢೀರ್ ಎದೆ ನೋವು ಕಾಣಿಸಿದೆ. ಕುಸಿದು ಬಿದ್ದವರನ್ನು ಕಂಡು ತಕ್ಷಣ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ರಾಜಕುಮಾರ್ ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾ*ಣ ಬಿಟ್ಟಿದ್ದಾರೆ.

ಇನ್ನೂ ಓದಿ:ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ರಾಜಕುಮಾರ್ ಅವರ ಮೃ*ತದೇಹವನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತರಿಸಲಾಗಿತ್ತು. ಬಳಿಕ ವಿಜಯಪುರ ಬೂದಿಹಾಳ ಗ್ರಾಮಕ್ಕೆ ತಲುಪಿಸಲಾಯಿತು ಎಂದು ಕೆಎಸ್ಆರ್‌ಪಿಯ ಮೂಲಗಳಿಂದ ತಿಳಿದು ಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page