Connect with us

BELTHANGADY

ಬೆಳ್ತಂಗಡಿ: ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ-9 ಮಂದಿ ವಿರುದ್ಧ FIR

Published

on

ಬೆಳ್ತಂಗಡಿ: ಬುಡಕಟ್ಟು ಮಹಿಳೆಯೊಬ್ಬರ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಹಲವು ಮಂದಿ ಗ್ರಾಮಸ್ಥರ ಸಮ್ಮುಖದಲ್ಲೇ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಎ. 19ರಂದು ನಡೆದಿದೆ ಎನ್ನಲಾಗಿದೆ.


ಆರೋಪಿಗಳನ್ನು ಸಂದೀಪ್ (30), ಸಂತೋಷ್ (29), ಗುಲಾಬಿ (55), ಸುಗುಣ (30), ಕುಸುಮಾ (38), ಲೋಕಯ್ಯ (55), ಅನಿಲ್ (35), ಲಲಿತಾ (40) ಮತ್ತು ಚನ್ನಕೇಶವ (40) ಎಂದು ಗುರುತಿಸಲಾಗಿದೆ.

ಎಲ್ಲ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 35 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಗುಂಪೊಂದು ತನ್ನ ಬಟ್ಟೆ ಹರಿದು ಅರೆಬೆತ್ತಲು ಮಾಡಿ ವೀಡಿಯೊವನ್ನೂ ಚಿತ್ರೀಕರಿಸಿದೆ ಎಂದು ಮಹಿಳೆ ದೂರು ನೀಡಿದ್ದರು. ಅಕ್ಕ ಹಾಗೂ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆಪಾದಿಸಲಾಗಿತ್ತು.

ಆರೋಪಿಗಳೆಲ್ಲರೂ ಅದೇ ಗ್ರಾಮದವರು. ದೂರು ನೀಡಿದ ಮಹಿಳೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಅವರ ಅಕ್ಕ ವಾಸ್ತವ್ಯ ಇದ್ದ ಸರ್ಕಾರಿ ಭೂಮಿಯನ್ನು ಅಳತೆ ಮಾಡಲು ಕಂದಾಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಧಿಕಾರಿಗಳ ಕಾರ್ಯಕ್ಕೆ ಆರೋಪಿಗಳು ಆಕ್ಷೇಪಿಸಿದರು ಎನ್ನಲಾಗಿದ್ದು, ಸರ್ವೆ ಮಾಡಲು ಬಂದ ಅಧಿಕಾರಿಗಳನ್ನು ಸ್ಥಳದಿಂದ ವಾಪಾಸು ಕಳುಹಿಸಿದ್ದರು.

ಬಿಜೆಪಿ ಮುಖಂಡನ ನೇತೃತ್ವದ ತಂಡದಿಂದ ಕೃತ್ಯ ನಡೆದಿರುವುದಾಗಿ ದಲಿತ ಪರ ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

 

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BELTHANGADY

ಬೆಳ್ತಂಗಡಿ: ತೋಟದ ಬೇಲಿಗೆ ಡಿ*ಕ್ಕಿ ಹೊಡೆದ ಕಾರು

Published

on

ಬೆಳ್ತಂಗಡಿ: ಇಂದು ಮುಂಜಾನೆ(ಮೇ.19) ದಿಡುಪೆ-ಪೈಚಾರು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ-ಕಲ್ಮಂಜ-ಧರ್ಮಸ್ಥಳ ರಸ್ತೆಯ ಒಂಜರೆಬೈಲು ಎಂಬಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ತೋಟದ ಬೇಲಿಗೆ ಡಿ*ಕ್ಕಿ ಹೊಡೆದಿದೆ.


ಈ ಕಾರಿನಲ್ಲಿ ಬೆಂಗಳೂರು ಮೂಲದ ಇಬ್ಬರು ಪ್ರಯಾಣಿಸುತ್ತಿದ್ದರು. ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿದ್ರೆಯ ಮಂಪರು ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಬೇಲಿಯನ್ನು ದಾಟಿ ಮುಂದುವರಿಯುತ್ತಿದ್ದರೆ ಆಳವಾದ ಕಣಿವೆಗೆ ಬೀಳುವ ಸಾಧ್ಯತೆ ಇತ್ತು. ಹಾಗೂ ಸಮೀಪದಲ್ಲಿ ವಿದ್ಯುತ್ ಕಂಬವು ಇದೆ. ಕಾರು ಬೇಲಿಗೆ ಸಿಲುಕಿಕೊಂಡ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರಿನೊಳಗೆ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾ*ವು

ಈ ರಸ್ತೆಯು ಅನೇಕ ಶಿಥಿಲ ಕಿರು ಸೇತುವೆ, ಕಡಿದಾದ ತಿರವುಗಳನ್ನು ಹೊಂದಿದ್ದು, ಇಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಲಾಗಿದೆ.

Continue Reading

BELTHANGADY

ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ ನಲ್ಲಿ ನಿಗೂಢ ಸಾ*ವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

Published

on

ಬೆಳ್ತಂಗಡಿ: ಏರೋ ಸ್ಪೇಸ್ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದ ಬೆಳ್ತಂಗಡಿಯ ಯುವತಿ ಆಕಾಂಕ್ಷ ನಿಗೂಢವಾಗಿ ಸಾ*ವನ್ನಪ್ಪಿದ ಘಟನೆ ಪಂಜಾಬ್‌ನಲ್ಲಿ ನಡೆದಿದ್ದು, ತನಿಖೆ ಆರಂಭಿಸಿದ ಪೊಲೀಸರಿಗೆ ಟ್ವಿಸ್ಟ್ ಸಿಕ್ಕಿದೆ.

ಸರ್ಟಿಫಿಕೇಟ್ ಪಡೆಯಲು ಹೋಗಿದ್ದ ಆಕೆ ತಾನು ಕಲಿತ ಫಗ್ವಾರ ಎಲ್‌ ಪಿಯು ಕಾಲೇಜಿನ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಲೇಜಿಗೆ ಹೋಗಿದ್ದ ಆಕೆ ಅಲ್ಲಿನ ಕೇರಳ ಮೂಲದ ಪ್ರಾಧ್ಯಾಯಪಕರನ್ನು ಭೇಟಿ ಮಾಡಲು ಹೋಗಿದ್ದು, ಈ ವೇಳೆ ಅವರಿಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆಖಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ : ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು

ಬೋಳಿಯಾರ್ ನಿವಾಸಿಗಳಾದ ಸಿಂಧೂ ದೇವಿ ಮತ್ತು ಸುರೇಂದ್ರ ದಂಪತಿ ಪುತ್ರಿಯಾಗಿರುವ ಆಕಾಂಕ್ಷ ಪಂಜಾಬ್‌ನ ಎಲ್‌ ಪಿ ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಆರು ತಿಂಗಳ ಹಿಂದೆಯಷ್ಟೇ ಏರೋಸ್ಪೇಸ್‌ ಇಂಜಿನಿಯರ್‌ ಆಗಿ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಅಲ್ಲದೇ, ಜಪಾನ್‌ಗೆ ಉದ್ಯೋಗಕ್ಕೆ ಹೋಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಆಕೆಯ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.

ಅತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವೇ?

ಅತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಆಕಾಂಕ್ಷಾ ಪಂಜಾಬ್ ನ ಫಗ್ವಾರದಲ್ಲಿರುವ ಲವ್ಲಿ ಪ್ರೊಫೆಸನಲ್ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ ಎಂಬಾತನನ್ನು ಪ್ರೀತಿಸುತ್ತಿದ್ದರೆನ್ನಲಾಗಿದೆ. ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆ. ಪಂಜಾಬ್ ತೆರಳಿದ್ದ ಆಕಾಂಕ್ಷಾ ಅವರು ಮ್ಯಾಥ್ಯೂ ಮನೆಗೆ ಹೋಗಿ ಜಗಳವಾಡಿದ್ದು, ಬಳಿಕ ವಿಶ್ವವಿದ್ಯಾನಿಲಯದಲ್ಲೂ ಆತನ ಜೊತೆ ಜಗಳವಾಡಿದ್ದಾರೆ. ಬಳಿಕ ಆತನ ಕಚೇರಿಯಿಂದ ಹೊರಬಂದು ಅದೇ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಆಕಾಂಕ್ಷಾರಿಗೆ ಪ್ರೊಫೆಸರ್ ಕಿರುಕುಳ ನೀಡುತ್ತಿದ್ದ ಎಂಬ ಆರೋಪವೂ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿಗಳು ಮುಂದಿನ ತನಿಖೆಯಿಂದ ತಿಳಿದು ಬರಬೇಕಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page