Connect with us

DAKSHINA KANNADA

ಸಮಾಜದ ಎಲ್ಲಾ ವರ್ಗದ ಜನರಿಗೆ ನೆರವು ನೀಡುವುದು ಧರ್ಮ: ಐಕಳ ಹರೀಶ್ ಶೆಟ್ಟಿ

Published

on

ಮಂಗಳೂರು: ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ. ಸಮಾಜದಲ್ಲಿ ಎಲ್ಲಾ ಸಮಾಜದ ಸಂಘಟನೆಯೂ ಇದೇ ರೀತಿಯ ಯೋಚನೆಯಲ್ಲಿ ಯೋಜನೆ ರೂಪಿಸಬೇಕು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.


ಅವರು ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಡುಬೈಲ್ ನಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಜಮೀನಿಗೆ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ನಾಮಕರಣ ಮಾಡುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯ ಯೋಜನೆಗಳಿಗೆ ದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು ಮೂರುವರೆ ಕೋಟಿ ರೂ.ಗೂ ಮಿಕ್ಕಿದ ಮೊತ್ತವನ್ನು ಒಕ್ಕೂಟದ ಯೋಜನೆಗಳಿಗೆ ಒದಗಿಸಿ ಸೂಕ್ತ ನಿವೇಶನ ಪಡೆಯುವಲ್ಲಿ ಹಾಗೂ ನೆರವು ನೀಡುವ ಯೋಜನೆಗಳಿಗೆ ಸಹಕರಿದ್ದಾರೆ ಎಂದರು.

ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ನಿರ್ಮಾಣಗೊಂಡ ಬಳಿಕ ಬಿಪಿಲ್ ಕಾರ್ಡುದಾರರಿಗೆ ಮದುವೆಗೆ ಹಾಲ್ ನ್ನು ಉಚಿತವಾಗಿ ನೀಡಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಇಲ್ಲಿ ಅವಕಾಶ ನೀಡಲಾಗುವುದು ಎಂದವರು ತಿಳಿಸಿದರು.

ದಾನಿಗಳ ನೆರವನ್ನು ಪಡೆದು ಸುಮಾರು 15 ಕೋಟಿ ರೂ. ಮೊತ್ತವನ್ನು ಸಂಗ್ರಹಿಸಿ ಅವಿಭಜಿತ ದ.ಕ. ಜಿಲ್ಲೆಯ ಅಲ್ಲದೆ ಇತರೆಡೆಯ ಬಂಟ ಸಮಾಜ ಮತ್ತು ಇತರ ಸಮಾಜದ ಅರ್ಹರಿಗೆ ಸಹಾಯ ಹಸ್ತದ ನೆರವನ್ನು 30 ಲಕ್ಷ ರೂಪಾಯಿಗೂ ಮಿಕ್ಕಿದ ಮೊತ್ತದಲ್ಲಿ ಪ್ರತೀ ತಿಂಗಳು ನೀಡಲಾಗುತ್ತಿದೆ ಎಂದರು.

ಸಮಾಜ ಸೇವಕ ಕನ್ಯಾಸ ಸದಾಶಿವ ಶೆಟ್ಟಿ ಅವರು ಸಂಕೀರ್ಣವನ್ನು ಉದ್ಘಾಟಿಸಿ, ಮಾತನಾಡಿ ಇಂದು ಸಮಾಜದಲ್ಲಿ ಬಂಟ ಸಮಾಜವು ಸಮರ್ಥ ಸಂಘಟನೆಯ ಮೂಲಕ ಬೆಳೆದು ಕೊನೆಯ ವ್ಯಕ್ತಿಯನ್ನು ತಲುಪಲು ಸಾಧ್ಯವಾಗುತ್ತಿದೆ, ಒಕ್ಕೂಟದ ಕಾರ್ಯವೈಖರಿಯನ್ನು ಗುರುತಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ಮೂಲಕ ಈ ಸಂಕೀರ್ಣ ಕೆಲಸ ಮಾಡಬೇಕು ಎಂದರು.

ನಾಗೇಶ್ ಶೆಟ್ಟಿ ಮಸ್ಕತ್, ಬಪ್ಪನಾಡು ಮನೋಹರ ಶೆಟ್ಟಿ, ಕಾಂಗ್ರೆಸ್ ನಾಯಕ ಮಿಥುನ್ ರೈ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಮೂಲ್ಕಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುಭಾಷ್ ಶೆಟ್ಟಿ ಮೂಲ್ಕಿ, ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯ ಯೋಗೀಶ್ ಕೋಟ್ಯಾನ್, ಉಳ್ತೂರು ಮೋಹನ್‌ದಾಸ್ ಶೆಟ್ಟಿ, ಪಟ್ಲ ಸತೀಶ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಸಂತೋಷ್‌ಕುಮಾರ್ ಹೆಗ್ಡೆ, ಶಶಿಧರ ಶೆಟ್ಟಿ ಇನ್ನಂಜೆ, ಪ್ರವೀಣ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಮತ್ತಿತರರು ಇದ್ದರು.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page