Connect with us

LATEST NEWS

ಪ್ರವಾಸಕ್ಕೆ ಹೋದವರ ಮಾಹಿತಿಗಾಗಿ ಹೆಲ್ಪ್‌ಲೈನ್ ..! 35 ವರ್ಷಗಳ ಬಳಿಕ ಕಾಶ್ಮೀರ ಕಣಿವೆ ಬಂದ್‌ ..!

Published

on

ಮಂಗಳೂರು/ ಪಹಲ್ಗಾಮ್‌ : ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಿನ್ನೆ (ಏ.22) ಉಗ್ರರು ದಾಳಿ ನಡೆಸಿದ್ದು, ಇಬ್ಬರು ಕನ್ನಡಿಗರು ಹತ್ಯೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ವಾಪಸ್‌ ಕರೆತರಲು ರಾಜ್ಯ ಸರಕಾರ ಪ್ರಯತ್ನ ಪಡುತ್ತಿದೆ. ಹಾಗಾಗಿ ಪ್ರವಾಸಕ್ಕೆ ತೆರಳಿರುವವರ ಮಾಹಿತಿ ನೀಡುವಂತೆ ಪ್ರವಾಸ ನಿರ್ವಹಣೆದಾರರನ್ನು ಕೋರಿದ್ದಾರರೆ.

ಸಂಬಂಧಿಕರು, ಸ್ನೇಹಿತರು ಪ್ರವಾಸಿಕರ ಮಾಹಿತಿಯನ್ನು ಈ ಕೆಳಕಂಡ ಹೆಲ್ಪ್‌ಲೈನ್‌ ಸಂಖ್ಯೆಗೆ ಕರೆ ಮಾಡಿ ತಿಳಿಸುವಂತೆ ಕೋರಲಾಗಿದೆ.

ಹೆಲ್ಪಲೈನ್ ಸಂಖ್ಯೆಗಳು :

080-43344334

* 080-43344335

* 080-43344336

* 080-43344342

ಕಾಶ್ಮೀರ ಕಣಿವೆ ಬಂದ್ :

ಪಹಲ್ಲಾಮ್ ಪ್ರವಾಸಿ ತಾಣದಲ್ಲಿ ನಡೆದ ಉಗ್ರ ದಾಳಿ ಖಂಡಿಸಿ ಇಂದು (ಏ,23) ಬಂದ್ ಕರೆಗೆ ಎಲ್ಲಾ ವರ್ಗದ ಸಂಘಟನೆಗಳು ಬೆಂಬಲ ನೀಡಿದ್ದರಿಂದ 35 ವರ್ಷಗಳಲ್ಲಿ ಮೊದಲ ಬಾರಿಗೆ ಕಾಶ್ಮೀರ ಕಣಿವೆಯಲ್ಲಿ ಬುಧವಾರ ಬಂದ್‌ ಆಚರಿಸಲಾಗುತ್ತಿದೆ. ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶ್ರೀನಗರದಲ್ಲಿ ಹೆಚ್ಚಿನ ಅಂಗಡಿಗಳು, ಇಂಧನ ಕೇಂದ್ರಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಂದ್ ಆಗಿವೆ . ಭಯೋತ್ಪಾದಕ ದಾಳಿಯನ್ನು ಪ್ರತಿಭಟಿಸಿ ಕಾಶ್ಮೀರದ ಹಲವಾರು ಪ್ರಮುಖ ಪತ್ರಿಕೆಗಳು ಬುಧವಾರ ತಮ್ಮ ಮುಖಪುಟಗಳನ್ನು ಕಪ್ಪು ಬಣ್ಣದಲ್ಲಿ ಮುದ್ರಿಸಿವೆ.

DAKSHINA KANNADA

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ

Published

on

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್‌ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 1,65,000 ರೂಪಾಯಿ ಹಣವನ್ನು ಪಡೆದು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂಪಾಯಿ ಹಣವನ್ನು ಪಡೆದು ನಂಬಿಕೆ ದ್ರೋಹ ಎಸಗಿರುವುದಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

ಆರೋಪಿಯ ವಿರುದ್ದ ಈಗಾಗಲೇ ಅನಧಿಕೃತ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಬಿ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

 

Continue Reading

LATEST NEWS

ಭಾರತ-ಪಾಕ್ ಉದ್ವಿಗ್ನತೆ: ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಸಂಗ್ರಹಗಾರ ಸಮೀಪ ಅಣಕು ಕಾರ್ಯಾಚರಣೆ

Published

on

ಉಡುಪಿ: ಪೆಹಲ್ಗಾಮ್ ದುರ್ಘಟನೆ ಮತ್ತು ಪಾಕ್ ಮೇಲೆ ಭಾರತೀಯ ಸೇನೆಯ ಕಾರ್ಯಾಚರಣೆ ನಂತರ ದೇಶದ ಹಲವೆಡೆ ಮಾಕ್ ಡ್ರಿಲ್ ಮಾಡಲಾಗುತ್ತಿದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐ.ಎಸ್.ಪಿ.ಆರ್.ಎಲ್ ಕಚ್ಚಾತೈಲ ಸಂಗ್ರಹಗಾರ ಸಮೀಪ ಅಣಕು ಕಾರ್ಯಾಚರಣೆ ನಡೆಸಲಾಯ್ತು. ಡ್ರೋನ್ ಮೂಲಕ ಸಿಡಿಮದ್ದು ತುಂಬಿದ ಬಾಂಬ್ ದಾಳಿ ಮೂಲಕ ಬೆಂಕಿ ಸೃಷ್ಟಿಸಲಾಯ್ತು. ತಕ್ಷಣದಲ್ಲಿಯೇ ಸೈರನ್ ಮೊಳಗಿ ಎಚ್ಚರಿಕೆ ಗಂಟೆ ಬಾರಿಸಿದ್ದು, ಐ.ಎಸ್.ಪಿ.ಆರ್.ಎಲ್ ನ ಬೆಂಕಿ ನಂದಕ ವಾಹನವು ಕಂಪನಿಯ ಒಳಭಾಗದಲ್ಲಿ ಬೆಂಕಿ ಆರಿಸಿತು.

ಕೆಲವೇ ಕ್ಷಣಗಳಲ್ಲಿ ಅದಾನಿ ಕಂಪನಿಯ ಫೈರ್ ಇಂಜಿನ್, ಕಾರ್ಕಳದ ಅಗ್ನಿ ಶಾಮಕ ವಾಹನವು ಹೊರಭಾಗದ ಕಾರ್ಯಾಚರಣೆಯಲ್ಲಿ ಕೈಜೋಡಿಸಿತು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ, ಸಾರ್ವಜನಿಕರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯಿತು. ಬಾಂಬ್ ನಿಷ್ಕ್ರಿಯದಳ, ಶ್ವಾನದಳ ಆಗಮಿಸಿ, ಸ್ಥಳದಲ್ಲಿ ಸಜೀವ ಬಾಂಬ್‌ಗಳ ಇರುವಿಕೆಯ ಬಗ್ಗೆ ಪರಿಶೀಲನಾ ಕಾರ್ಯಗಳನ್ನು ಕೈಗೊಂಡರು.

ಇದನ್ನೂ ಓದಿ: ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

ಘಟನೆ ನಡೆದ 40 ನಿಮಿಷದ ಒಳಗಾಗಿ ಮಂಗಳೂರಿನ ಎಸ್.ಡಿ.ಆರ್.ಎಫ್ ತಂಡವು ಸ್ಥಳಕ್ಕೆ ಆಗಮಿಸಿತು. 270 ಕ್ಕೂ ಹೆಚ್ಚು ಸಿಬ್ಬಂದಿಗಳು ಸೇರಿ ತಾಲೀಮು ನಡೆಸಿದರು. ಜಿಲ್ಲಾಡಳಿತದ ಎಲ್ಲಾ ಇಲಾಖೆಗಳು ಅಣಕು ಕಾರ್ಯಾಚರಣೆಯಲ್ಲಿ ಭಾಗಿಯಾದವು.

 

 

 

 

Continue Reading

DAKSHINA KANNADA

ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

Published

on

ಮಂಗಳೂರು/ಬೆಂಗಳೂರು: ಬೆಳ್ತಂಗಡಿ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಆಕಾಂಕ್ಷ ನಿಗೂಢ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಆಕಾಂಕ್ಷ ಸಾವಿನ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಪ್ರಕರಣ ಕುರಿತು ನಾನು ರಾಜ್ಯ ಮುಖ್ಯಕಾರ್ಯದರ್ಶಿಯವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ. ಅಲ್ಲದೇ ಆಕಾಂಕ್ಷ ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ ನಲ್ಲಿ ನಿಗೂಢ ಸಾ*ವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page