Connect with us

LATEST NEWS

BREAKING NEWS: ಹಿಜಾಬ್‌ ವಿವಾದ-ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಪತ್ರ

Published

on

ಬೆಂಗಳೂರು: ಹಿಜಾಬ್‌ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಏಕಸದಸ್ಯ ಆದೇಶ ಹೊರಡಿಸಿದ್ದಾರೆ.
ಇಂದು ವಾದ-ಪ್ರತಿವಾದ ಆಲಿಸಿ ವಿಸ್ತೃತ ಪೀಠ ರಚನೆ ಬಗ್ಗೆ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅವರು ಈ ಬಗ್ಗೆ ಎಷ್ಟು ಪೀಠದಲ್ಲಿ ವಿಚಾರಣೆ ನಡೆಸಬೇಕು ಎಂಬುವುದನ್ನು ತೀರ್ಮಾನಿಸಲಿದ್ದಾರೆ ಎಂದು ಹಾಲಿ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಆದೇಶ ಬರೆಸಿದ್ದಾರೆ. ಆದರೆ ಮಧ್ಯಂತರ ಆದೇಶ ನೀಡುವುದಿಲ್ಲ.


ವಿಸ್ತೃತ ಪೀಠ ಅಂದರೆ ಎರಡು ಅಥವಾ ಮೂರು, ಐದು ಅಥವಾ ಏಳು ಪೀಠ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ತೀರ್ಮಾನಿಸಲಿದ್ದಾರೆ. ಸದ್ಯ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

DAKSHINA KANNADA

ರೋಸ್ ಕಾರ್ಯಕ್ರಮದಲ್ಲಿ ಮಹಿಳೆಗೆ ಬಿಯರ್ ಬಾಟಲಿಯಿಂದ ಹಲ್ಲೆ, ಆರೋಪಿಯನ್ನು ಬಂಧಿಸದ ಪೊಲೀಸರು..!?

Published

on

ಮಂಗಳೂರು: ರೋಸ್ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೇಲೆ ವ್ಯಕ್ತಿಯೋರ್ವ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ಕೊಣಾಜೆಯ ಪಜೀರು ಚರ್ಚ್ ಹಾಲ್ ನಲ್ಲಿ ನಡೆದಿದೆ. ಪಜೀರು ಗ್ರಾಪಂ ಮಾಜಿ ಸದಸ್ಯೆ ಸುನಿತಾ ಲೋಬೊ ಹಲ್ಲೆಗೊಳಗಾದ ಮಹಿಳೆ. ವಲೇರಿಯನ್ ಡಿಸೋಜ ಹಲ್ಲೆಗೈದ ಆರೋಪಿ.

ಇಬ್ಬರೂ ಪಜೀರು ಗ್ರಾಮದವರಾಗಿದ್ದು, ಎರಡು ಕುಟುಂಬದ ಮಧ್ಯೆ ಹಳೆ ದ್ವೇಷ ಇತ್ತು ಎನ್ನಲಾಗಿದೆ.  ಜ.6ರಂದು ಸಂಬಂಧಿಕರ ರೋಸ್ ಕಾರ್ಯಕ್ರಮದಲ್ಲಿ ಸುನಿತಾ ಕುಟುಂಬ ಪಾಲ್ಗೊಂಡಿದ್ದು ಈ ವೇಳೆ ಮೈಗೆ ತಾಗಿದ ನೆಪದಲ್ಲಿ ಮಾತಿಗೆ ಮಾತು ಬೆಳೆದು ವಲೇರಿಯನ್ ಡಿಸೋಜ ಬೀಯರ್ ಬಾಟಲಿಯನ್ನು ತಂದು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ವಲೇರಿಯನ್ ತನ್ನ ಎರಡೂ ಕೈಯಲ್ಲಿ ಬಾಟಲಿ ಹಿಡ್ಕೊಂಡು ಬಂದು ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಆನಂತರ, ಮಹಿಳೆ ಜೊತೆಗಿದ್ದ ಪತಿ ಮತ್ತು ಮಗ ವಲೇರಿಯನ್ ಮೇಲೂ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆಯೂ ವಲೇರಿಯನ್ ಪ್ರತಿ ದೂರು ನೀಡಿದ್ದು ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣೆಗೆ ಬಿದ್ದ ಏಟಿನಿಂದಾಗಿ ಮಹಿಳೆ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆನಂತರ ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೇ ವೇಳೆ, ವಲೇರಿಯನ್ ಡಿಸೋಜ ಕೂಡ ಆಸ್ಪತ್ರೆಗೆ ದಾಖಲಾಗಿದ್ದು ಕಳೆದ ಹತ್ತು ದಿನಗಳಿಂದಲೂ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಾಗುತ್ತ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದಾನೆ. ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದ್ದರೂ, ಕೊಲೆಯತ್ನ ಪ್ರಕರಣ ದಾಖಲಿಸದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸುನಿತಾ ಲೋಬೊ ಆರೋಪಿಸಿದ್ದಾರೆ.

ಸುನೀತಾ ಲೋಬೋ 2015ರಲ್ಲಿ ಪಜೀರು ಗ್ರಾಮ ಪಂಚಾಯಿತಿ ಚುನಾವಣೆಗೆ ನಿಂತು ಗೆದ್ದಿದ್ದರು. ವಲೇರಿಯನ್ ಡಿಸೋಜ ತನ್ನ ಪತ್ನಿಗೆ ಕಾಂಗ್ರೆಸಿನಿಂದ ಟಿಕೆಟ್ ಪಡೆಯಲು ಪ್ರಯತ್ನ ಪಟ್ಟಿದ್ದ. ಆನಂತರ, ತನ್ನ ಪತ್ನಿಯನ್ನು ಪಕ್ಷೇತರ ನಿಲ್ಲಿಸಿ ಸುನಿತಾರನ್ನು ಸೋಲಿಸಲು ಪ್ರಯತ್ನಿಸಿದ್ದ. ಆದರೆ ಸುನಿತಾ ಲೋಬೊ ಅವರೇ ಚುನಾವಣೆಯಲ್ಲಿ ಗೆದ್ದಿದ್ದರು. ಅದೇ ಸಿಟ್ಟಿನಲ್ಲಿ ಪ್ರತಿ ಬಾರಿಯೂ ನಮ್ಮ ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಜಗಳಕ್ಕೆ ಬಂದು ಹಗೆ ತೀರಿಸಲು ನೋಡುತ್ತಿದ್ದಾನೆಂದು ಸುನಿತಾ ಹೇಳಿದ್ದಾರೆ. ಹಲ್ಲೆ ಘಟನೆಯನ್ನು ಉಳ್ಳಾಲ ಮಹಿಳಾ ಕಾಂಗ್ರೆಸ್ ಖಂಡಿಸಿದ್ದು, ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ವಲೇರಿಯನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಘಟನೆ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ಸಲ್ಲಿಕೆಯಾಗಿದೆ.

 

 

 

Continue Reading

bangalore

ಕಾನೂನು ಕಾಯುವವರೇ ಕಾಮುಕರಾದ್ರೆ..! ಹಿರಿಯ ಪೊಲೀಸ್ ಅಧಿಕಾರಿ ರಾಸಲೀಲೆ ವೀಡಿಯೋ ವೈರಲ್..!

Published

on

ಬೆಂಗಳೂರು: ರಾಜ್ಯದಲ್ಲಿ ಕಾನೂನು ಇಲಾಖೆಯೇ ತಲೆ ತಗ್ಗಿಸುವ ಪ್ರಕರಣವೊಂದು ನಡೆದಿದೆ. ಚಿನ್ನ ಸ್ಮಂಗ್ಲಿಗ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರನ್ಯಾ  ರಾವ್ ತಂದೆ ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್  ತನ್ನ ಕಚೇರಿಯಲ್ಲೇ ಪೊಲೀಸ್ ಡ್ರೆಸ್ ನಲ್ಲೇ ಮಹಿಳೆಯರ ಜೊತೆಗೆ ರಾಸಲೀಲೆ ನಡೆಸಿರುವುದು ಬೆಳಕಿಗೆ ಬಂದಿದೆ. ರಾಮಚಂದ್ರರಾವ್ ಮಹಿಳೆಯರನ್ನು ಅಪ್ಪಿಕೊಂಡು, ತಬ್ಬಿಕೊಂಡು, ಮುತ್ತು ನೀಡುವ ದೃಶ್ಯಗಳ ವಿಡಿಯೋ ರೀಲೀಸ್ ಆಗಿದೆ.

 

 

ಕಚೇರಿಯಲ್ಲಿ ಡ್ಯೂಟಿಯಲ್ಲಿರುವ ಸಂದರ್ಭವೇ ಇವರು ದೂರು ನೀಡಲು ಬರುವ ಬೇರೆ ಬೇರೆ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುವ ದೃಶ್ಯ ಸೀಕ್ರೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತರುವ ವಿಷಯ. ಮಹಿಳೆಯರನ್ನು ಬಲವಂತ ಮಾಡಿಲ್ಲದೇ ಇದ್ದರೂ, ಕಚೇರಿಯ ವೇಳೆಯಲ್ಲಿ ಪೊಲೀಸ್ ಡ್ರೆಸ್ ಧರಿಸಿ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ರಾಮಚಂದ್ರರಾವ್ ಸದ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿದ್ದಾರೆ.

 

ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದು ಹೇಳಿದರು.

Continue Reading

DAKSHINA KANNADA

ಫೆ.2 ರಿಂದ 11ರ ವರೆಗೆ ಮಾಣೂರು ಬ್ರಹ್ಮಕಲಶೋತ್ಸವ

Published

on

ಮಂಗಳೂರು : ಫೆ. 2 ರಿಂದ 11ರ ವರೆಗೆ  ನೀರುಮಾರ್ಗ ಮಾಣೂರು ಸುಬ್ರಾಯ ದೇವಸ್ಥಾನ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.

ಫೆ. 1 ರಂದು ಮಧ್ಯಾಹ್ನ 3 ರಿಂದ ನೀರುಮಾರ್ಗದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ, ಫೆ. 4 ರಂದು ಶ್ರೀ ನಾಗದೇವರ ಪ್ರತಿಷ್ಠೆ, ನಾಗದರ್ಶನ, ಆಶ್ಲೇಷಾ ಬಲಿ, ಫೆ. 5 ರಂದು ಮಾಣೂರು ಸುಬ್ರಾಯ ದೇವರ ಪ್ರತಿಷ್ಠೆ, ಧ್ವಜ ಪ್ರತಿಷ್ಠೆ, ಧ್ವಜಕಲಶಾಭಿಷೇಕ, ಫೆ. 6ರಂದು  ಗಣಪತಿದೇವರು, ಪಾರ್ವತಿ ದೇವಿ ಪ್ರತಿಷ್ಠೆ, ಚಂಡಿಕಾಹೋಮ ನಡೆಯಲಿದೆ.

ಫೆ.8 ರಂದು ಶ್ರೀ ಸುಬ್ರಾಯ ದೇವರಿಗೆ ಬ್ರಹ್ಮಕಲಶಾಭಿಷೇಕ, ಧ್ವಜಾರೋಹಣ, ಫೆ. 9ರಂದು ಮಾಣೂರು ರಥೋತ್ಸವ, ತೆಪ್ಪೋತ್ಸವ, ಕೆರೆ ದೀಪೋತ್ಸವ, ಫೆ. 10ರಂದು ರಾತ್ರಿ ರಥೋತ್ಸವ, ಧ್ವಜಾವರೋಹಣ, ರಕ್ತೇಶ್ವರಿ ನೇಮೋತ್ಸವ ಜರುಗಲಿದೆ.

ಇದನ್ನೂ ಓದಿ : ರಕ್ಷಿತಾ ಶೆಟ್ಟಿ ಬಗ್ಗೆ ಹೇಳಿದ್ದ ‘S’ ಕ್ಯಾಟಗರಿ ಪದದ ಅರ್ಥ ಬಿಚ್ಚಿಟ್ಟ ಅಶ್ವಿನಿ ಗೌಡ!

ಪ್ರತಿನಿತ್ಯ ಅನ್ನಸಂತರ್ಪಣೆ ನಡೆಯಲಿದೆ. ಪ್ರತಿನಿತ್ಯ ಧಾರ್ಮಿಕ ಕಾರ್ಯಕ್ರಮ,  ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page