Connect with us

DAKSHINA KANNADA

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆಯಿಲ್ಲ-ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ: ರಾಜೇಶ್ ಪವಿತ್ರನ್

Published

on

ಮಂಗಳೂರು: ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಹಾಗಾಗಿ ನಾವು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿದ್ದೇವೆ ಎಂದು ಹಿಂದೂ ಮಹಾ ಸಭಾ ಸಂಘಟನೆಯ ರಾಜ್ಯ ಅಧ್ಯಕ್ಷ ರಾಜೇಶ್‌ ಪವಿತ್ರನ್‌ ತಿಳಿಸಿದ್ದಾರೆ.


ಅವರು ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ನೀವೇ ನಾಯಕರಾಗಿ, ನಿಮ್ಮ ಸಮಸ್ಯೆಗಳನ್ನು ಬಗೆ ಹರಿಸಿ ಕೊಳ್ಳಿ’ ಎಂಬುದಾಗಿ ಸ್ಪರ್ಧಾಕಾಂಕ್ಷಿಗಳಿಗೆ ಕರೆ ನೀಡುತ್ತಿದ್ದೇವೆ.

ಎಲ್ಲಾ 224 ಕ್ಷೇತ್ರಗಳ ಬಗ್ಗೆ ಗಮನ ಹರಿಸುತ್ತಿದ್ದೇವೆ. ಈಗಾಗಲೇ ಹಲವಾರು ಸ್ಪರ್ಧಾಕಾಂಕ್ಷಿಗಳಿಂದ ಅರ್ಜಿ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ಕ್ಷೇತ್ರ ಹೊರತು ಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಿಂದ ಅರ್ಜಿಗಳು ಬಂದಿವೆ. 83 ಮಂದಿ ಸ್ಪರ್ಧಿಗಳ ಮೊದಲ ಪಟ್ಟಿ ಮುಂದಿನ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಹಿಂದೂ ಮಹಾ ಸಭಾ ಪುನಶ್ಚೇತನ ಸಂಕಲ್ಪ ಸಮಾವೇಶದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.


ಹಿಂದೂ ಮಹಾ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವುದರಿಂದ ನಮ್ಮನ್ನು ತಡೆಯಲು ರಾಜ್ಯದ ಬಿಜೆಪಿ ನಾಯಕರಿಂದ ಮತ್ತು ಸರಕಾರದಿಂದ ಪ್ರಯತ್ನಗಳು ನಡೆಯುತ್ತಿವೆ. ನನ್ನ ಮೇಲೆ ಬೇರೆ ಬೇರೆ ಕೇಸು ಹಾಕಿ ಆರೇಳು ಬಾರಿ ಜೈಲಿಗೆ ಹಾಕುವ ಪ್ರಯತ್ನ ನಡೆದಿದೆ.

ಚುನಾವಣೆಯಲ್ಲಿ ಗೆದ್ದು, ಅಧಿಕಾರಕ್ಕೆ ಬರುವ ತನಕ ನಮ್ಮನ್ನು ಬಳಸಿಕೊಂಡು ಬಳಿಕ ಕಸದ ತೊಟ್ಟಿಗೆ ಮತ್ತು ಜೈಲಿಗೆ ಹಾಕಲು ಯತ್ನ ನಡೆಯುತ್ತಿದೆ. ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಹಿಂದೂಗಳು ತಂಡೋಪತಂಡವಾಗಿ ನಮ್ಮ ಜತೆ ಬರುತ್ತಿದ್ದಾರೆ. ಎಲ್ಲಾ ಶಕ್ತಿಗಳನ್ನು ಒಟ್ಟುಗೂಡಿಸಿ ಸ್ಪರ್ಧಿಸುತ್ತಿದ್ದೇವೆ.

‘ನಿಮ್ಮ ಅಖಾಡ ನೇರವಾಗಿರಲಿ. ಹಿಂದಿನಿಂದ ಚೂರಿ ಹಾಕುವುದು ಬೇಡ’ ಎಂದು ತಿಳಿಸ ಬಯಸುತ್ತೇವೆ ಎಂದರು. ಕಾರ್ಕಳ ಕ್ಷೇತ್ರದಲ್ಲಿ ಪ್ರಮೋದ್‌ ಮುತಾಲಿಕ್ ಸ್ಪರ್ಧೆ ವಿಚಾರದ ಬಗ್ಗೆ ಕೇಳಿದಾಗ, ಮುತಾಲಿಕ್‌ ಅವರು ಇದುವರೆಗೆ ನಮ್ಮ ಜತೆ ಚರ್ಚಿಸಿಲ್ಲ. ಅವರು ಬೆಂಬಲ ಯಾಚಿಸಿದರೆ ಬೆಂಬಲ ನೀಡುವ ಸಾಧ್ಯತೆ ಬಗ್ಗೆ ಪರಿಶೀಲಿಸುತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿಂದೂ ಮಹಾ ಸಭಾ ರಾಜ್ಯ ಪ್ರಭಾರಿ ರಾಜೇಶ್‌ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ಮುರಳಿ ಅವರು ಉಪಸ್ಥಿತರಿದ್ದರು.

DAKSHINA KANNADA

ಬಿಜೆಪಿ ಮಡಿಲಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್

Published

on

ಕಿನ್ನಿಗೋಳಿ: ಕಟೀಲು, ಕಿನ್ನಿಗೋಳಿ ಮತ್ತು ಮೆನ್ನಬೆಟ್ಟು ಪಂಚಾಯತ್ ಗಳು ಸೇರಿ ಮೇಲ್ದರ್ಜೆಗೇರಿದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ ಮೊದಲ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಿಜೆಪಿ ಮಡಿಲಿಗೆ ಸೇರಿದೆ ಹಿನ್ನೆಲೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ನರೇಂದ್ರ ಮೋದಿಯವರ ಕಲ್ಪನೆಯಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಒಂಭತ್ತು ವರ್ಷಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ; ನಾಳೆ ಮಂಗಳೂರಿನ ಮಹಾವೀರ ವೃತ್ತದ ನವೀಕೃತ ಕಲಶ ಲೋಕಾರ್ಪಣೆ

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಕಿನ್ನಿಗೋಳಿ ಮತ್ತು ಬಜಪೆಯನ್ನು ಅಭಿವೃದ್ದಿಪಡಿದಬೇಕು ಎಂಬ ಉದ್ದೇಶದಿಂದ ಎರಡೂ ಪಂಚಾಯತ್ ಗಳನ್ನು ಮೇಲ್ದರ್ಜೆಗೇರಿಸಿದ್ದೇವೆ, ಈ ಮೂಲಕ ಎರಡೂ ಪಂಚಾಯತ್ ಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Continue Reading

DAKSHINA KANNADA

ಒಂಭತ್ತು ವರ್ಷಗಳ ಸುದೀರ್ಘ ಕಾಯುವಿಕೆಗೆ ಕೊನೆಗೂ ತೆರೆ; ನಾಳೆ ಮಂಗಳೂರಿನ ಮಹಾವೀರ ವೃತ್ತದ ನವೀಕೃತ ಕಲಶ ಲೋಕಾರ್ಪಣೆ

Published

on

ಮಂಗಳೂರು: ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ ಜಂಕ್ಷನಿನ ಮಹಾವೀರ ವೃತ್ತದಲ್ಲಿ ಕಲಶ ಪುನರ್ ನಿರ್ಮಾಣ ಕಾಮಗಾರಿ ಪೂಣಗೊಂಡಿದ್ದು, ನಾಳೆ (ಜ. 24) ಸಂಜೆ 5.30 ಕ್ಕೆ ಲೋಕಾರ್ಪಣೆ ಆಗಲಿದೆ. ಇದರೊಂದಿಗೆ 9 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಬೀಳಲಿದೆ.

ಮಂಗಳೂರು ಜೈನ ಸೊಸೈಟಿಯ ಮುಂದಾಳತ್ವದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಬೃಹತ್ ಕಲಶ ಮತ್ತು ವೃತ್ತ ನಿರ್ಮಾಣಗೊಂಡಿದೆ.

ಮಂಗಳೂರು ಜೈನ ಸೊಸೈಟಿಯ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆ ನೆರವೇರಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಧಾನ ಸಭಾಧ್ಯಕ್ಷ ಡಾ. ಯು.ಟಿ. ಖಾದರ್ ನಾಮಫಲಕ ಅನಾವರಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬೃಜೇಶ್‌ಚೌಟ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮೂಡಾ ಮಾಜಿ ಅಧ್ಯಕ್ಷ ಕೆ. ಸುರೇಶ್ ಬಲ್ಲಾಳ್ ಹಾಗೂ ಸ್ಥಳೀಯ ಮಾಜಿ ಕಾರ್ಪೊರೇಟರ್ ಸಂದೀಪ್ ಗರೋಡಿ ಭಾಗವಹಿಸಲಿದ್ದಾರೆ ಎಂದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯ ನಂತರ ಭಾರತದಲ್ಲಿ ಅತ್ಯಂತ ಕಠಿಣ ಕೆಲಸ ಮಾಡುವ ವ್ಯಕ್ತಿ ಇವರಂತೆ: ಶಶಿ ತರೂರ್‌ ಹೇಳಿದ್ಯಾರನ್ನ?

ಮಂಗಳೂರಿನ ಹೆಬ್ಬಾಗಿಲು ಎಂದೆನಿಸಿರುವ ಪಂಪ್‌ವೆಲ್‌ಜಂಕ್ಷನ್‌ನಲ್ಲಿ 2016 ರಲ್ಲಿ ಮೇಲ್ಸೇತುವೆ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಗೊಂಡಿದ್ದ ಈ ಕಲಶ ಇದೀಗ ವಿಶಿಷ್ಟ ವೈಭವದೊಂದಿಗೆ ಮರು ನಿರ್ಮಾಣಗೊಂಡಿದೆ. ವೃತ್ತದ ಸುತ್ತ ರೇಲಿಂಗ್, ಅಲಂಕಾರಿಕ ದೀಪಗಳನ್ನು ಮತ್ತು ಗ್ರಾನೈಟ್ ಅಳವಡಿಸಲಾಗಿದ್ದು, ಹೊಸ ಕಾಂತಿಯೊಂದಿಗೆ ಕಂಗೊಳಿಸುತ್ತಿದೆ. ರಾತ್ರಿ ವೇಳೆ ಕಲರ್‌ಫುಲ್ ಆಗಿ ಗೋಚರಿಸುತ್ತಿದೆ. ಪ್ರವಾಸಿಗರಿಗೆ ಮತ್ತು ದೂರದ ಊರುಗಳಿಂದ ಬರುವವರಿಗೆ ಮಹಾವೀರ ವೃತ್ತದ ಈ ಕಲಶ ಕಾಣಿಸಿದೊಡನೆ ‘ಮಂಗಳೂರು ಬಂದಿದೆ’ ಎಂಬ ಅನುಭವ ಮೂಡಿಸಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಢಿಯಲ್ಲಿ ಕಾರ್ಯದರ್ಶಿ ಸಚಿನ್ ಕುಮಾರ್ ಜೈನ್, ಕೋಶಾಧಿಕಾರಿ ಕೆ. ವಿಜೇಶ್ ವಿದ್ಯಾಧರ್ ಮುಂತಾದವರು ಇದ್ದರು.

Continue Reading

DAKSHINA KANNADA

ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂಬ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ

Published

on

ಬಂಟ್ವಾಳ: ಉಡುಪಿ ಜಿಲ್ಲಾಧಿಕಾರಿಗಳು ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿದ್ದಕ್ಕೆ ಉಡುಪಿಯಲ್ಲಿ ಕೆಲವರಿಂದ ಟೀಕೆಗಳು ಬಂತು. ಅದರ ಮುಂದುವರಿದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯಾಗಿದ್ದವರು ಕೇಸರಿ ಧ್ವಜವನ್ನು ಮತ್ತು ಇತರೆ ಯಾವುದೇ ಧರ್ಮದ ಧ್ವಜವನ್ನು ಹಾಕಬಾರದು ಎನ್ನುವ ಹೇಳಿಕೆ ಕೊಟ್ಟಿದ್ದೆ. ಆದರೆ ಅದು, ಮಾಧ್ಯಮದಲ್ಲಿ ನಾನು ದೇವಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂದು ಹೇಳಿದೆ ಎಂದು ಬಿಂಬಿಸಲಾಗಿದೆ. ನಾನು ಹೇಳಿರುವುದು ಒಂದು ನಿರ್ದಿಷ್ಟ ವಿಷಯದ ಬಗ್ಗೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಇದೀಗ ಸ್ಪಷ್ಟನೆ ನೀಡಿದ್ದಾರೆ.


ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಈಗ ನಾನು ಸ್ಪಷ್ಟನೆ ನೀಡುತ್ತಿದ್ದೇನೆ. ಜಿಲ್ಲಾಧಿಕಾರಿಗಳು ಧಾರ್ಮಿಕ ಧ್ವಜವನ್ನು ಹಾಕಬಾರದು ಎನ್ನುವ ನಾನು ಹೇಳಿಕೆ ನೀಡಿದ ವಿಚಾರಕ್ಕೆ ಈಗಲೂ ಬದ್ಧನಾಗಿದ್ದೇನೆ.

ಅದರಲ್ಲೂ ಸರಕಾರಿ ನೌಕರರು, ಹಿರಿಯ ಅಧಿಕಾರಿಗಳು ಒಂದು ಧರ್ಮಕ್ಕೆ ಸೀಮಿತವಾದ ಬಾವುಟಗಳನ್ನು ಹಾಕಬಾರದು ಎನ್ನುವುದನ್ನ ಹೇಳಿದ್ದೇನೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬಾರದು ಎಂದು ರಮಾನಾಥ ರೈ ಮತ್ತೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ದೇಗುಲಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ರಮಾನಾಥ ರೈ; ಮಾಜಿ ಸಚಿವರ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರು ಮಾತನಾಡುತ್ತಾ ಹಿಂದೂ ದೇವಾಲಯಗಳಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದು ಹೇಳಿದ್ದಾರೆ ಎಂದು ಬಿಜೆಪಿ ನಾಯಕರು, ಕಾರ್ಯಕರ್ತರು ರೈಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page