Connect with us

LATEST NEWS

ದಿನ ಭವಿಷ್ಯ: ಈ ರಾಶಿಯವರು ವ್ಯವಹಾರದಲ್ಲಿ ಹೊಸ ದಿಕ್ಕಿನತ್ತ ಗಮನ ಹರಿಸುತ್ತೀರಿ

Published

on

2025 ಜುಲೈ 6ರ ಭಾನುವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

ಮೇಷ ರಾಶಿ: ಈ ದಿನ ಹಿರಿಯರಿಂದ ಮೆಚ್ಚುಗೆ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಸ್ಪಷ್ಟತೆ ಇಡೀ ದಿನ ಉಪಯೋಗವಾಗುತ್ತದೆ. ಈ ವೇಳೆ ಇತರ ಆದಾಯದ ಮೂಲಗಳೂ ಪ್ರಾರಂಭವಾಗಬಹುದು. ಕುಟುಂಬದಲ್ಲಿ ನೆಮ್ಮದಿ ಕಾಣಬಹುದು. ಆದರೆ ಒಂದಷ್ಟು ತಾಳ್ಮೆ ಇಡುವುದು ಸಹ ಮುಖ್ಯ. ಸ್ನೇಹಿತರಿಂದ ಒಳ್ಳೆಯ ಸುದ್ದಿ ಸಿಗಬಹುದು.

ವೃಷಭ ರಾಶಿ: ವೃಷಭ ರಾಶಿಯ ಮಂದಿಗೆ ಇಂದು ಬಹಳ ಉತ್ತಮ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಧನಾತ್ಮಕತೆ ಇರಲಿದೆ. ಬಹಳ ಸಮಯದಿಂದ ನೀವು ಬಯಸಿದ ಕೆಲಸವೊಂದು ಪರಿಣಾಮಕಾರಿಯಾಗಿ ಮುಗಿಯಲಿದೆ. ನಿಮ್ಮ ಕೆಲಸಗಳಲ್ಲಿನ ಅಡೆತಡೆ ನಿವಾರಣೆಯಾಗಲಿದೆ. ಹೊಸದಾಗಿ ನೀವು ಉದ್ಯೋಗ ಹುಡುಕುತ್ತಿದ್ದರೆ ಉತ್ತಮ ಅವಕಾಶ ಪಡೆಯುವ ಸಾಧ್ಯತೆ ಇದೆ.

ಮಿಥುನ: ಈ ದಿನವು ಮಿಥುನ ರಾಶಿಯವರಿಗೆ ಯಶಸ್ಸಿನಿಂದ ಕೂಡಿರುತ್ತದೆ, ಆದರೂ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಕೆಲಸದ ಸ್ಥಳದಲ್ಲಿ ನೀವು ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಪಡೆಯುತ್ತೀರಿ. ಕಲೆಯ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ವ್ಯಾಪಾರಕ್ಕೆ ಉತ್ತಮ ಸಮಯ. ಆರೋಗ್ಯದಲ್ಲಿ ತೊಂದರೆಯಾಗುವ ಸಾಧ್ಯತೆ ಇದೆ, ಎಚ್ಚರದಿಂದಿರಿ. ನಿಮ್ಮ ಅಧಿಕಾರಿಗಳೊಂದಿಗೆ ವಾಗ್ವಾದವಾಗಬಹುದು. ನಿಮ್ಮ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು, ನೀವು ಕೆಟ್ಟ ಜನರ ಸಹವಾಸಕ್ಕೆ ಬರಬಹುದು. ನಿಮ್ಮ ಮಾನಸಿಕ ಸಮತೋಲನವನ್ನು ನೀವು ಕಳೆದುಕೊಳ್ಳಬಾರದು, ಇದರಿಂದಾಗಿ ನಿಮ್ಮ ಕೆಲಸಕ್ಕೆ ಅಡ್ಡಿಯಾಗುವುದಿಲ್ಲ.

ಕರ್ಕಾಟಕ ರಾಶಿ: ಏನೇ ಮಾಡಿದರೂ ನಿಮ್ಮನ್ನು ಸುಮ್ಮನೆ ಇರಲು ಬಿಡರು. ನಿಮ್ಮ ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದು ಸಾಧಿಸುವಿರಿ. ಅದಕ್ಕೆ ದೈವಬಲವೂ ಇರಲಿದೆ. ಉದ್ಯೋಗದಲ್ಲಿ ಸ್ವಲ್ಪ ಏರಳಿತಗಳನ್ನು ಎದುರಿಸಬೇಕಾದೀತು. ‌ಇಂದು ನಿಮ್ಮ ಸಂಬಂಧದಲ್ಲಿ ಅನಗತ್ಯ ಮಾತುಗಳು, ವಿವಾದಗಳು ಉಂಟುಮಾಡಬಹುದು. ಸುಲಭವಾಗಿ ಏನನ್ನೂ ಒಪ್ಪಿಕೊಳ್ಳಲಾರಿರಿ. ಆರೋಗ್ಯವಾಗಿರಲು ಚಿಕಿತ್ಸೆಯನ್ನು ನಿರಂತರ ಮಾಡುವುದು ಅವಶ್ಯಕ. ಸಕಾರಾತ್ಮಕ ಆಲೋಚನೆ ನಿಮ್ಮನ್ನು ಸರಿ ದಾರಿಗೆ ಕೊಂಡೊಯ್ಯಬಹುದು. ಪ್ರೀತಿಪಾತ್ರರ ಜೊತೆ ಹೆಚ್ಚು ಸಲುಗೆಯಿಂದ ಇರುವಿರಿ. ನಿಮ್ಮ ಕಷ್ಟಕ್ಕೆ ಆದವರನ್ನು ಮರೆಯಬೇಡಿ. ವೈವಾಹಿಕ ಜೀವನವನ್ನು ಹೊಂದಾಣಿಕೆಯಿಂದ ನಡೆಸಬೇಕಾಗುವುದು. ಒಬ್ಬರಮೇಲೆ ಒಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತ ಇಂದು ಇರಬಹುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು.

ಸಿಂಹ ರಾಶಿ: ಅನಿರೀಕ್ಷಿತ ಅತಿಥಿಯೊಬ್ಬರು ಬರಬಹುದು. ಸ್ನೇಹಿತನ ಆರೋಗ್ಯ ಸಲಹೆಯು ಗೇಮ್ ಚೇಂಜರ್ ಆಗಬಹುದು. ನೀವು ಆತ್ಮವಿಶ್ವಾಸದಿಂದ ಪ್ರಮುಖ ಪ್ರೆಸೆಂಟೇಷನ್ ಮಾಡುತ್ತೀರಿ. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ನಿಮ್ಮ ಮನಸ್ಸು ಹಗುರವಾಗುತ್ತದೆ. ಸ್ನೇಹಿತರೊಂದಿಗೆ ಒಂದು ಆಕಸ್ಮಿಕ ಪ್ರವಾಸವು ನೆನಪಿನ ದಿನವಾಗಿ ಬದಲಾಗಬಹುದು.

ಕನ್ಯಾ ರಾಶಿ: ಕೆಲಸದಲ್ಲಿ ಸ್ಪಷ್ಟತೆ ಅಗತ್ಯ. ಗೊಂದಲದ ನಿರ್ಧಾರಗಳಿಂದ ದೂರವಿರಿ. ಹಳೆಯ ಸಾಲ ಅಥವಾ ಬಾಕಿ ಬಾಧಿಸಬಹುದು. ಮನೆಯ ಹಿರಿಯರ ಸಲಹೆ ಉಪಯೋಗಿ. ಸಂಬಂಧಗಳಲ್ಲಿ ಸುಧಾರಣೆ ಕಾಣಬಹುದು. ಕುಟುಂಬದ ಸದಸ್ಯರಿಂದ ಶುಭವಾರ್ತೆ ಕೇಳುವ ಸಾಧ್ಯತೆ ಇದೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆದಾಯದ ವಿಷಯಗಳು ಸುಧಾರಿಸುತ್ತವೆ.

ತುಲಾ ರಾಶಿ: ಇಂದು ತುಲಾ ರಾಶಿಯ ಜನರು ಇಂದು ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಹಿಂದಿನ ಕೆಲವು ಕೆಲಸಗಳೂ ಪೂರ್ಣಗೊಳ್ಳಲಿವೆ. ನೀವು ನಿಮ್ಮ ಕುಟುಂಬದೊಂದಿಗೆ ಎಲ್ಲೋ ವಾಕ್ ಮಾಡಲು ಹೋಗಬಹುದು. ಗೌರವ ಹೆಚ್ಚಾಗಲಿದೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಈ ಸಮಯದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು, ಒಳ್ಳೆಯ ಸಮಯಕ್ಕಾಗಿ ತಾಳ್ಮೆಯಿಂದ ಕಾಯುವ ಅವಶ್ಯಕತೆಯಿದೆ. ಉತ್ತಮ ಸ್ಥಿತಿಯಲ್ಲಿರಿ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರಿಗೆ ಈ ದಿನ ಬಹಳ ಉತ್ತಮ ದಿನವಾಗಿರಲಿದೆ. ನಿಮ್ಮಲ್ಲಿ ದೊಡ್ಡ ಹಣಕಾಸು ವಿಚಾರದಲ್ಲಿ ಧನಾತ್ಮಕ ಬದಲಾವಣೆ ಇರಲಿದೆ. ಪ್ರೀತಿಯ ವಿಚಾರದಲ್ಲಿ ಶುಭಕರ ದಿನ. ಹಳೆಯ ಬಾಕಿಗಳು ಮರುಪಾವತಿಯಾಗಲಿದೆ. ಹಲವು ಖುಷಿಯ ವಿಚಾರಗಳಲ್ಲಿ ನೀವು ಭಾಗಿಯಾಗುತ್ತೀರಿ.

ಧನು ರಾಶಿ: ಕೆಲಸದ ಒತ್ತಡ ಹೆಚ್ಚಾಗಬಹುದು. ಹಣದ ನಿರ್ವಹಣೆ ಜಾಗರೂಕವಾಗಿ ಮಾಡಬೇಕು. ಕುಟುಂಬದವರಿಗೆ ಸಮಯ ಕೊಡೋದು ಮುಖ್ಯ. ಸ್ನೇಹಿತರಿಂದ ಸಹಾಯ ಲಭಿಸಬಹುದು. ಆರೋಗ್ಯದಲ್ಲಿ ಸಣ್ಣ ಸವಾಲುಗಳನ್ನು ನಿರ್ವಹಿಸಬಲ್ಲಿರಿ. ಧೈರ್ಯ ಮತ್ತು ಸ್ಪಷ್ಟತೆಯಿಂದ ಮುಂದೆ ನಡೆಯಿರಿ. ನೀವು ಯಶಸ್ಸನ್ನು ಪಡೆಯುತ್ತೀರಿ.

ಮಕರ ರಾಶಿ: ನಿಮ್ಮ ಆರೋಗ್ಯ ಸ್ಥಿರವಾಗಿದೆ, ಆದರೆ ನಿಮ್ಮ ಗುರಿ ಸಂಪೂರ್ಣ ಫಿಟ್‌ನೆಸ್ ಆಗಿರಬೇಕು. ಆರ್ಥಿಕವಾಗಿ, ನೀವು ಉತ್ತಮ ಹಾದಿಯಲ್ಲಿದ್ದೀರಿ. ಕುಟುಂಬದ ಯುವ ಸದಸ್ಯರ ಯಶಸ್ಸು ಮನೆಯನ್ನು ಹೆಮ್ಮೆಯಿಂದ ತುಂಬುತ್ತದೆ. ವಾಹನ ಚಲಾಯಿಸುವಾಗ ಜಾಗರೂಕರಾಗಿರಿ. ನೀವು ಬಹಳ ದಿನಗಳಿಂದ ನೋಡುತ್ತಿದ್ದ ಆ ಕನಸಿನ ಮನೆಯನ್ನು ನೀವು ಕೊನೆಗೂ ಹೊಂದಬಹುದು.

ಕುಂಭ ರಾಶಿ: ಕುಂಭ ರಾಶಿಯವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ನೀವು ಕೆಲವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಬಹುದು. ಕುಟುಂಬದ ಸಂತೋಷವನ್ನು ಪಡೆಯಬಹುದು, ವಿದ್ಯಾರ್ಥಿಗಳು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ, ನೀವು ರಿಯಲ್ ಎಸ್ಟೇಟ್ನಲ್ಲಿ ವ್ಯವಹರಿಸಬಹುದು, ನೀವು ಖರೀದಿ ಮತ್ತು ಮಾರಾಟದಲ್ಲಿ ಲಾಭವನ್ನು ಪಡೆಯಬಹುದು. ಎಲ್ಲೋ ಹೊರಗೆ ಹೋಗಬೇಕಾಗಬಹುದು. ವ್ಯಾಪಾರದಲ್ಲಿ ಹೊಸ ಜನರನ್ನು ಭೇಟಿ ಮಾಡುವಿರಿ.

ಮೀನ: ಮುಖ್ಯ ಕೆಲಸಗಳಿಗೆ ಪೂರ್ವ ಸಿದ್ಧತೆ, ಸಮಾನ ಮನಸ್ಕರ ಸಮಾಗಮ. ಹಳೆಯ ಒಡನಾಡಿಗಳ ಭೇಟಿಯ ನಿರೀಕ್ಷೆ. ಇಂದು ವ್ಯಾಪಾರಕ್ಕೆ ಉತ್ತಮ ದಿನವಾಗಿದೆ ಆದರೆ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಮೊದಲು ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ, ನಂತರ ಹಣ ಗಳಿಸುವ ಬಗ್ಗೆ ಯೋಚಿಸಿ. ಯಾವುದೇ ಕೆಲಸದ ಒಳ್ಳೆಯ ಮತ್ತು ಕೆಟ್ಟ ಅಂಶಗಳನ್ನು ಪರಿಶೀಲಿಸದೆ ಯಾವುದೇ ಕೆಲಸವನ್ನು ತರಾತುರಿಯಲ್ಲಿ ಮಾಡಬೇಡಿ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಜಾಗರೂಕರಾಗಿರಿ. ಸಮಸ್ಯೆಗಳು ಉದ್ಭವಿಸಬಹುದು.

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading

DAKSHINA KANNADA

ಪಡೀಲ್ : ಬೈಕ್‌ಗೆ ಗೂಡ್ಸ್ ಟೆಂಪೋ ಡಿ*ಕ್ಕಿ; ಸವಾರ ಸಾ*ವು

Published

on

ಮಂಗಳೂರು : ಗೂಡ್ಸ್‌ ಟೆಂಪೋವೊಂದು ಬೈಕ್‌ಗೆ ಡಿ*ಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃ*ತ ದುರ್ದೈವಿ.

ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆ ಕಟ್ಟಿದ್ದ ಸಜೇಶ್ :

ಸಜೇಶ್, ಮಂಗಳೂರಿನ  ಶೋರೂಮ್‌ ಒಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತನ್ನ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪ ತಿರುವಿನಲ್ಲಿ ಟೆಂಪೋ ಡಿ*ಕ್ಕಿ ಹೊಡೆದಿದ್ದು, ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್  ಗಂ*ಭೀರವಾಗಿ ಗಾ*ಯಗೊಂಡಿದ್ದ ಸಜೇಶ್ ಕೊನೆಯು*ಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ಶ*ವವಾಗಿ ಪತ್ತೆ

ಸಜೇಶ್‌  ಸಣ್ಣ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆಯೊಂದನ್ನು ಕಟ್ಟಿ ಒಬ್ಬರೇ ವಾಸಿಸುತ್ತಿದ್ದ ಎನ್ನಲಾಗಿದೆ.

Continue Reading

FILM

ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ಶ*ವವಾಗಿ ಪತ್ತೆ

Published

on

ಮಂಗಳೂರು/ಕೇರಳ : ಮಲಯಾಳಂ ಚಿತ್ರರಂಗದಲ್ಲಿ ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ತನ್ನ ಮನೆಯಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 27 ವರ್ಷ ವಯಸ್ಸಾಗಿತ್ತು. ಕೇರಳದ ಪಯ್ಯನ್ನೂರಿನ ನಿವಾಸದಲ್ಲಿ ಹರಿಮುರಳಿ ಶ*ವ ಪತ್ತೆಯಾಗಿದೆ.

ಸಾ*ವಿಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲನಟನಾಗಿ ಖ್ಯಾತಿ : 

ಹರಿಮುರಳಿ, 2004 ರಲ್ಲಿ  ಲಾಲ್ ಜೋಸ್ ನಿರ್ದೇಶನದ ಹಾಗೂ ದಿಲೀಪ್ ಅಭಿನಯದ ಮಲಯಾಳಂ ಚಿತ್ರ ರಸಿಕನ್’ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಬಳಿಕ  ಅಣ್ಣನ್ ತಂಬಿ, ಮದಂಪಿ, ಡಾನ್ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲ ನಟನಾಗಿ ಅಭಿನಯಿಸಿ ಖ್ಯಾತರಾಗಿದ್ದರು.

ಇದನ್ನೂ ಓದಿ : ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಕೊನೆಗೊಳಿಸಿದ ‘ಬಿಂದಾಸ್‌’ ನಟಿ

ಬಳಿಕ  ಶಿಕ್ಷಣವನ್ನು ಮುಂದುವರಿಸುವ ಸಲುವಾಗಿ ಕೆಲವು ವರ್ಷ ನಟನೆಯಿಂದ ದೂರ ಉಳಿದಿದ್ದರು. ನಂತರ ಪೃಥ್ವಿರಾಜ್, ಸುಕುಮಾರನ್ ಅಭಿನಯದ ಅಮರ್ ಅಕ್ಬರ್ ಆ್ಯಂಟನಿ ಚಿತ್ರದಲ್ಲಿ ಕಿರಿಯ ಸಹೋದರನ ಪಾತ್ರದ ಮೂಲಕ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದರು. ಅಲ್ಲದೇ, ಹರಿಮುರಳಿ ವಿಎಫ್ ಎಕ್ಸ್ ಆರ್ಟಿಸ್ಟ್ ಆಗಿಯೂ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page