Connect with us

LATEST NEWS

ದಿನ ಭವಿಷ್ಯ 15-02-2026: ಇಂದು ಈ ರಾಶಿಯವರಿಗೆ ಹಣಕಾಸಿನಲ್ಲಿ ದೂರದ ಮೂಲಗಳಿಂದ ಲಾಭ ಸಿಗಬಹುದು!

Published

on

2026 ಫೆಬ್ರವರಿ 15ರ ಭಾನುವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

ಮೇಷ ರಾಶಿ: ಇಂದು ನಿಮ್ಮ ಶಕ್ತಿ ಮತ್ತು ಉತ್ಸಾಹ ಉತ್ತುಂಗದಲ್ಲಿರುತ್ತದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು ಅನುಕೂಲ ದಿನ. ಕೆಲಸದಲ್ಲಿ ನಿಮ್ಮ ನಾಯಕತ್ವ ಗುಣಗಳು ಎದ್ದು ಕಾಣುತ್ತವೆ ಮತ್ತು ಹಿರಿಯರ ಮೆಚ್ಚುಗೆ ಪಡೆಯುತ್ತೀರಿ. ಆದರೆ ತ್ವರಿತ ನಿರ್ಧಾರಗಳಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಿ. ಹಣಕಾಸಿನಲ್ಲಿ ಹೂಡಿಕೆಗೆ ಒಳ್ಳೆಯ ಅವಕಾಶ ಬರಬಹುದು. ಪ್ರೀತಿಯ ವಿಷಯದಲ್ಲಿ ನಿಮ್ಮ ಪಾಲುದಾರರೊಂದಿಗೆ ತಿಳುವಳಿಕೆಯ ಮಾತುಕತೆ ಮುಖ್ಯ. ಆರೋಗ್ಯದಲ್ಲಿ ವ್ಯಾಯಾಮಕ್ಕೆ ಸಮಯ ನೀಡಿ. ಸಂಜೆ ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ಮಾನಸಿಕ ಶಾಂತಿ ದೊರೆಯುತ್ತದೆ.

ವೃಷಭ ರಾಶಿ: ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯಿಂದ ಮನಸ್ಸಿಗೆ ಕಿರಿಕಿರಿ. ಯಾರ ಬಳಿಯೋ ಹಣವನ್ನು ಹೊಂದಿಸಿ ಮಿತ್ರರಿಗೆ ಕೊಡುವಿರಿ. ನಿಮ್ಮ ಬಣ್ಣದ ಮಾತುಗಳು ಕೆಲವು ಅವಧಿಗೆ ಮಾತ್ರ ಸೀಮಿತ. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.

ಮಿಥುನ ರಾಶಿ: ಇಂದು ನಿಮ್ಮ ಮನಸ್ಸು ಚುರುಕಾಗಿರುತ್ತದೆ, ಮತ್ತು ನಿಮಗೆ ಹೊಸ ವಿಷಯಗಳನ್ನು ಕಲಿಯಲು ಅಥವಾ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ಅವಕಾಶವಿರುತ್ತದೆ. ಕೆಲಸದಲ್ಲಿ ನಿಮ್ಮ ಆಲೋಚನೆಗಳಿಗೆ ಪ್ರಾಮುಖ್ಯತೆ ನೀಡಬಹುದು, ಆದರೆ ಒಂದೇ ಬಾರಿಗೆ ಹಲವಾರು ಕೆಲಸಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಮನಸ್ಸು ಅಲೆದಾಡಬಹುದು, ಆದ್ದರಿಂದ ಒಂದು ಕೆಲಸದ ಮೇಲೆ ಕೇಂದ್ರೀಕರಿಸುವುದು ಉತ್ತಮ. ಹಠಾತ್ ವೆಚ್ಚಗಳು ಉದ್ಭವಿಸಬಹುದು, ಆದ್ದರಿಂದ ನಿಮ್ಮ ಬಜೆಟ್ ಬಗ್ಗೆ ಜಾಗರೂಕರಾಗಿರಿ.

ಕರ್ಕಾಟಕ ರಾಶಿ: ಇಂದು ನಿಮ್ಮ ಭಾವನಾತ್ಮಕ ಬುದ್ಧಿವಂತಿಕೆ ಹೆಚ್ಚಾಗಿರುತ್ತದೆ. ಕುಟುಂಬ ಮತ್ತು ಮನೆಯ ವಿಷಯಗಳಲ್ಲಿ ಸಕಾರಾತ್ಮಕ ಬದಲಾವಣೆಗಳು ಆಗಬಹುದು. ಕೆಲಸದಲ್ಲಿ ನಿಮ್ಮ ಆತ್ಮೀಯತೆ ಮತ್ತು ಸಹಕಾರ ಮನೋಭಾವ ಮೆಚ್ಚುಗೆ ಪಡೆಯುತ್ತದೆ. ಹಣಕಾಸಿನಲ್ಲಿ ಕುಟುಂಬದ ಸದಸ್ಯರಿಂದ ಸಹಾಯ ಸಿಗಬಹುದು. ಪ್ರೀತಿಯ ಸಂಬಂಧದಲ್ಲಿ ಆಳವಾದ ತಿಳುವಳಿಕೆ ಬೆಳೆಯುತ್ತದೆ. ನಿಮ್ಮ ಆರೈಕೆಯ ಸ್ವಭಾವವು ಇತರರಿಗೆ ಆಧಾರವಾಗುತ್ತದೆ. ಆರೋಗ್ಯದಲ್ಲಿ ಪಾಚನಕ್ರಿಯೆಗೆ ಗಮನ ಕೊಡಿ. ಸಂಜೆ ಧಾರ್ಮಿಕ ಕಾರ್ಯಕ್ಕೆ ಸಮಯ ನೀಡಿ. ಚಂದ್ರನ ಆರಾಧನೆ ಶಾಂತಿ ನೀಡುತ್ತದೆ.

ಸಿಂಹ ರಾಶಿ: ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು.

ಕನ್ಯಾ ರಾಶಿ: ಬದುಕಿನ ತಿರುವಿಗೆ ಸ್ನೇಹಿತರ ಕೊಡುಗೆ ಬಹಳ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸ್ನೇಹಿತರಲ್ಲಿ ವ್ಯವಹರಿಸಿ. ಬಟ್ಟೆ ವ್ಯಾಪಾರಿಗಳಿಗೆ ಉತ್ತಮ ಮಾರಾಟ, ಲಾಭವಾಗುವುದು. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು. ಪರರಿಗೆ ನೋವಾಗದಂತೆ ಸ್ಪಂದಿಸುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ.

ತುಲಾ ರಾಶಿ: ಹಳೆಯ ಸಂಬಂಧವು ಮತ್ತೆ ಚಿಗುರಬಹುದು. ಆಕಸ್ಮಿಕವಾಗಿ ಶುಭ ಸಮಾಚಾರವು ಬರಬಹುದು ಎಂಬ ನಿರೀಕ್ಷೆಯು ಸುಳ್ಳಾಗುವುದು. ಏನು ಬೇಕಾದರೂ ಮಾಡಬಹುದು, ಆದರೆ ಏನೂ ಆಗದು. ನಿಮ್ಮ ಮಾತುಗಳು ಖಾರವಾಗುವುದು. ಕೋಪಕ್ಕೆ ಸರಿಯಾದ ಕಾರಣವಿರಲಿ. ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಕಾಣಿಸುವುದು. ನಿಮ್ಮ ಜವಾಬ್ದಾರಿಯ ಕಾರ್ಯಕ್ಕೆ ಕೆಲವು ಅಡೆತಡೆಗಳು ಬರಬಹುದು.

ವೃಶ್ಚಿಕ ರಾಶಿ: ಇಂದು ನಿಮ್ಮ ಮನಸ್ಸಿಗೆ ಹೊಸ ಆಲೋಚನೆಗಳು ಬರುತ್ತವೆ, ಮತ್ತು ನೀವು ವಿಭಿನ್ನವಾದದ್ದನ್ನು ಮಾಡಲು ಬಯಸುತ್ತೀರಿ. ನಿಮ್ಮ ಕೆಲಸದಲ್ಲಿ ಬದಲಾವಣೆ ಅಥವಾ ಹೊಸ ಯೋಜನೆಯನ್ನು ನೀವು ಪರಿಗಣಿಸಬಹುದು. ಹಣದ ವಿಷಯದಲ್ಲಿ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಸ್ನೇಹಿತರೊಂದಿಗೆ ಸಂಭಾಷಣೆಗಳು ಉತ್ತಮವಾಗಿರುತ್ತವೆ ಮತ್ತು ನಿಮ್ಮ ಮನಸ್ಸು ಹಗುರವಾಗಿರುತ್ತದೆ.

ಧನು ರಾಶಿ: ಇಂದು ನಿಮ್ಮ ಆಶಾವಾದ ಮತ್ತು ಸಾಹಸಿಕ ಮನೋಭಾವ ತುಂಬಿರುತ್ತದೆ. ಕೆಲಸದಲ್ಲಿ ವಿಸ್ತರಣೆ ಮತ್ತು ಬೆಳವಣಿಗೆಗೆ ಅವಕಾಶಗಳು ಬರುತ್ತವೆ. ಹೊಸ ಜ್ಞಾನ ಮತ್ತು ಕೌಶಲ್ಯಗಳನ್ನು ಕಲಿಯಲು ಉತ್ತಮ ದಿನ. ಹಣಕಾಸಿನಲ್ಲಿ ದೂರದ ಮೂಲಗಳಿಂದ ಲಾಭ ಸಿಗಬಹುದು. ಪ್ರೀತಿಯ ಸಂಬಂಧದಲ್ಲಿ ಸ್ವಾತಂತ್ರ್ಯ ಮತ್ತು ವಿಶ್ವಾಸದ ಸಮತೋಲನ ಮುಖ್ಯ. ಕುಟುಂಬದಲ್ಲಿ ನಿಮ್ಮ ಉತ್ಸಾಹ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ. ಆರೋಗ್ಯದಲ್ಲಿ ತೊಡೆಗಳ ವ್ಯಾಯಾಮ ಮಾಡಿ. ಪ್ರಯಾಣದ ಯೋಗ ಇದೆ. ಗುರುವಿನ ಆರಾಧನೆ ಮಾಡಿ. ನಿಮ್ಮ ದೂರದೃಷ್ಟಿ ನಿಮ್ಮ ಸಂಪತ್ತು.

ಮಕರ ರಾಶಿ: ಇಂದು ನಿಮ್ಮ ಶಿಸ್ತು ಮತ್ತು ಜವಾಬ್ದಾರಿಯುತ ಸ್ವಭಾವ ಗುರುತಿಸಲ್ಪಡುತ್ತದೆ. ಕೆಲಸದಲ್ಲಿ ನಿಮ್ಮ ಪ್ರಾಯೋಗಿಕ ವಿಧಾನ ಯಶಸ್ಸು ತರುತ್ತದೆ. ದೀರ್ಘಕಾಲೀನ ಗುರಿಗಳತ್ತ ಸ್ಥಿರವಾಗಿ ಮುಂದುವರಿಯಿರಿ. ಹಣಕಾಸಿನಲ್ಲಿ ಸಂಪ್ರದಾಯಿಕ ಹೂಡಿಕೆಗಳು ಒಳ್ಳೆಯದಾಗಿರುತ್ತವೆ. ಪ್ರೀತಿಯ ಸಂಬಂಧದಲ್ಲಿ ಬದ್ಧತೆ ಮತ್ತು ಸ್ಥಿರತೆ ಮೆಚ್ಚುಗೆ ಪಡೆಯುತ್ತದೆ. ಕುಟುಂಬದಲ್ಲಿ ನಿಮ್ಮ ಆಧಾರಸ್ತಂಭದ ಪಾತ್ರ ಪ್ರಶಂಸನೀಯವಾಗಿರುತ್ತದೆ. ಆರೋಗ್ಯದಲ್ಲಿ ಮೊಣಕಾಲುಗಳ ಆರೈಕೆ ಮುಖ್ಯ. ಶನಿದೇವರ ಪೂಜೆ ಮಾಡಿ. ನಿಮ್ಮ ತಾಳ್ಮೆ ಮತ್ತು ದೃಢತೆ ನಿಮ್ಮ ಶಕ್ತಿ. ಕಷ್ಟಪಟ್ಟು ಕೆಲಸ ಮಾಡಿದರೆ ಫಲ ಖಂಡಿತ.

ಕುಂಭ ರಾಶಿ: ಸೌಂದರ್ಯದಿಂದ ಸ್ತ್ರೀಯರು ಆಕರ್ಷಕವಾಗಿ ಕಾಣುವಿರಿ. ಸಣ್ಣ ವ್ಯವಹಾರಗಳಿಂದ ನೀವು ಹೆಚ್ಚಿನ ಲಾಭವನ್ನು ಪಡೆಯುವಿರಿ. ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ಎಂತಹ ಕಷ್ಟದಲ್ಲಿಯೂ ನೀವು ನಿಮ್ಮವರನ್ನು ಬಿಟ್ಟುಕೊಡಲಾರಿರಿ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮಲ್ಲಿ ಯಾರೂ ಸಾಧಿಸದಿರುವ ಹಾಗೂ ತಾನು ಸಾಧಿಸಿದೆನೆಂಬ ತೃಪ್ತಿ.

ಮೀನ ರಾಶಿ: ಆಲೋಚನೆಗಳು ಕಾರ್ಯರೂಪಕ್ಕೆ ಬರಲು ಸಾಧ್ಯವಾಗದೇ ಇರಬಹುದು. ಆಹಾರದಲ್ಲಿ ಎಣ್ಣೆಯ ಪದಾರ್ಥ ಮತ್ತು ಖಾರದ ಪದಾರ್ಥಗಳನ್ನು ಕಡಿಮೆ ಮಾಡಿ. ನಿಮ್ಮ ಹಣಕಾಸಿನೊಂದಿಗೆ ಸಮತೋಲನವನ್ನು ಕಾಪಾಡಿಕೊಳ್ಳಿ. ಮನೆಯಲ್ಲಿ ವಾತಾವರಣವು ಉತ್ತಮವಾಗಿರುತ್ತದೆ ಮತ್ತು ನಿಮಗೆ ಹತ್ತಿರವಿರುವ ಯಾರೊಂದಿಗಾದರೂ ಮಾತನಾಡುವುದರಿಂದ ನಿಮಗೆ ಸಂತೋಷವಾಗುತ್ತದೆ.

DAKSHINA KANNADA

ಬಜೆಟ್ ನಲ್ಲಿ ದ.ಕ ಜಿಲ್ಲೆ ಸಹಿತ ಕರಾವಳಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ, ಇದು ಅಮಲುಪ್ರೇರಿತ ಸರ್ಕಾರ-ಸತೀಶ್ ಕುಂಪಲ

Published

on

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶವನ್ನು ಕಡೆಗಣಿಸಿದ್ದಾರೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾತ್ರ ಗಮನ ಹರಿಸಿದ್ದಾರೆಯೇ ಹೊರತು ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಕರಾವಳಿಯ ಜನರು ಈ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನು ಹೊಂದಿದ್ದರು. ಈ ಭಾಗದ ಶಾಸಕರು ವಿಧಾನ ಮಂಡಲದ ಅಧಿವೇಶನಗಳಲ್ಲಿ ಹಲವು ಪ್ರಸ್ತಾಪಗಳನ್ನು ಮುಂದಿಟ್ಟಿದ್ದರು. ಆದರೆ ಯಾವುದಕ್ಕೂ ಅನುದಾನ ಒದಗಿಸಿಲ್ಲ ಎಂದರು. ಅಲ್ಪ ಸಂಖ್ಯಾತ ಸಮುದಾಯಗಳನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರನ್ನು ಓಲೈಸುವ ವೋಟ್ ಬ್ಯಾಂಕ್ ಬಜೆಟ್ ಇದಾಗಿದೆ.

ಸಾಲ ಮಾಡುವ ಕೆಲಸವನ್ನು ಮಾತ್ರ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಸಾಲದ ಮೊತ್ತ 5 ಲಕ್ಷ ಕೋಟಿ ರೂಪಾಯಿಗೆ ಏರಿದೆ.  2013 ರಲ್ಲಿ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಾಲದ ಮೊತ್ತ 1.23 ಲಕ್ಷ ಕೋಟಿ ರೂಪಾಯಿ ಇತ್ತು. ಅಂದಿನಿಂದ ಸಾಲವನ್ನೇ ಮಾಡುತ್ತಾ ಬಂದಿದ್ದಾರೆ ಎಂದು ಟೀಕಿಸಿದರು.  ಹಾಲು ಉತ್ಪಾದಕರ ಪ್ರೋತ್ಸಾಹ ಧನ 9 ತಿಂಗಳುಗಳಿಂದ ಪಾವತಿಯಾಗಿಲ್ಲ.

ಸುಮಾರು 900 ಕೋಟಿ ರೂ. ಬಾಕಿ ಇದೆ. ವಿವಿಧ ನಿಗಮಗಳಿಗೆ ಅನುದಾನ ಕಡಿಮೆ ಮಾಡಿದೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರ ನಿಗಮಗಳಿಗೆ ಅನುದಾನ ಕಡಿಮೆ ಮಾಡುವ ಮೂಲಕ ಅನ್ಯಾಯ ಎಸಗಿದೆ. ಇದೊಂದು ಅಮಲು ಪ್ರೇರಿತ ಸರಕಾರ. ಕಂಬಳ ಕ್ರೀಡೆಗೆ ಅನುದಾನ ಒದಗಿಸಿಲ್ಲ. ದ.ಕ. ಉಡುಪಿ ಜಿಲ್ಲೆಯಲ್ಲಿ ಐಟಿ ಉದ್ಯಮಕ್ಕೆ ಅನುದಾನ ನೀಡಿಲ್ಲ. ಮೀನುಗಾರಿಕೆಗೆ ಯಾವುದೇ ಹೊಸ ಯೋಜನೆ ಇಲ್ಲ. ಕಡಲ ಕೊರೆತ ಸಮಸ್ಯೆಗೆ ಪರಿಹಾರ ಇಲ್ಲ. ಅಭಿವೃದ್ಧಿಗೆ ಮಾರಕವಾದ ಬಜೆಟ್ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕೊಟ್ಟಾರಿ , ಬಿಜೆಪಿ ಮುಖಂಡ ನಿತಿನ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

 

Continue Reading

DAKSHINA KANNADA

ಬಿಜೆಪಿ ಮಾಡಿದ ಕೆಲಸಗಳಿಗೆ ಕಾಂಗ್ರೆಸ್‌ ಕ್ರೆಡಿಟ್ ಪಡೆದುಕೊಳ್ತಿರೋದು ನಾಚಿಕೇಡು-ಶಾಸಕ ಕಾಮತ್ ಗರಂ

Published

on

ಮಂಗಳೂರು:  ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಮಸ್ಯೆ ಇರುವ ಕಡೆಗಳಲ್ಲಿ ಅನುದಾನ ಮಂಜೂರು ಆಗಿದೆ ಎಂದು 28 ಜಾಗಗಳಿಗೆ ತೆರಳಿ ಕಾಮಗಾರಿಗೆ ಅನುದಾನ ನೀಡಲಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕರು ದಿನನಿತ್ಯ ಪತ್ರಿಕೆಗಳಲ್ಲಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿರಂತರವಾಗಿ ಒತ್ತಡ ಹೇರಿದ ಫಲವಾಗಿ ಪ್ರಕೃತಿ ವಿಕೋಪದಡಿ ಹಲವು ಕಡೆಗಳಲ್ಲಿ ಕಾಮಗಾರಿ ಮಾಡಲು ಅನುದಾನ ಮಂಜೂರು ಮಾಡಲಾಗಿದೆ. ಆದರೆ ಒಂದು ರೂಪಾಯಿ ಕೆಲಸ ಮಾಡದೆ ಅದರ ಕ್ರೆಡಿಟ್‌ ಅನ್ನು ಕಾಂಗ್ರೆಸ್ಸಿಗರು ಪಡೆಯುತ್ತಿದ್ದಾರೆ ಎಂದು ದೂರಿದರು.

ಸರಕಾರಕ್ಕೆ ಅದರದ್ದೇ ಆದ ನಿಯಮಗಳಿವೆ. ಅದನ್ನು ಮೀರಿ ಯಾರೂ ಹೋಗಬಾರದು. ಆದರೆ ವೇದವ್ಯಾಸ್ ಕಾಮತ್‌ ಪ್ರಯತ್ನ ಪಟ್ಟು ಈ ಬಗ್ಗೆ ಅಧಿವೇಶನದಲ್ಲಿ ಮಾತನಾಡಿ ಕಷ್ಟಪಟ್ಟು  ತಂದಿರುವ ಅನುದಾನದ ವಿಚಾರಗಳನ್ನು ತಮ್ಮದೆಂದು ಬಿಂಬಿಸುವುದನ್ನು ಖಂಡಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ತರಲಾಗದೆ ಹತಾಶರಾಗಿ ಕಾಂಗ್ರೆಸ್ ನಾಯಕರು  ಇದು ನಾನೇ ತಂದ್ದು ಎಂದು ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ನೀಡೋದು ಸಣ್ಣತನ. ಕಾಂಗ್ರೆಸ್ಸಿಗರ  ಪ್ರಚಾರದ ಭರಾಟೆಯಲ್ಲಿ ನಿಜವಾಗಿಯೂ ಅನ್ಯಾಯವಾಗುತ್ತಿರುವ ಆಶಾ ಕಾರ್ಯಕರ್ತರಿಗೆ ಇವರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ವೇದವ್ಯಾಸ್‌ ಆಶಾ ಕಾರ್ಯಕರ್ತರನ್ನು ಬೀದಿಪಾಲು ಮಾಡುವ ಕೆಲಸ ನಿಲ್ಲಿಸಿ. ಇದನ್ನು ಬಿಜೆಪಿ ಪಕ್ಷ ಒಪ್ಪಲ್ಲ.  ಮುಂದೆ ನಮ್ಮ ಸರ್ಕಾರ ಕೂಡಾ ಬರುತ್ತದೆ. ರಾಜ್ಯಸರ್ಕಾರದ ಆರೋಗ್ಯ ಇಲಾಖೆಯಿಂದ ಅನುದಾನ ತರುವ ಕೆಲಸ ನಾವು ಮಾಡುತ್ತೇವೆ. ಕೇಂದ್ರ ಸರಕಾರದ ಜೊತೆ ಮಾತನಾಡಿ ಅವರ ನೋವಿಗೆ ಬಿಜೆಪಿ ಸ್ಪಂದಿಸುವುದಾಗಿ ನುಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Continue Reading

LATEST NEWS

ದೇವಸ್ಥಾನದ ಸ್ನಾನಗೃಹದಲ್ಲಿ ಇಬ್ಬರು ಯುವತಿಯರ ಶವ ಪತ್ತೆ

Published

on

ಗಾಂಧೀನಗರ: ದೇವಾಲಯದ ಆವರಣದಲ್ಲಿ ಇಬ್ಬರು ಯುವತಿಯರ ಮೃತದೇಹಗಳು ಪತ್ತೆಯಾಗಿರುವ ಘಟನೆ ಗುಜರಾತ್‌ ಗಾಂಧೀನಗರದ ಸೂರತ್‌ನ ಸ್ವಾಮಿನಾರಾಯಣ ದೇವಾಲಯದಲ್ಲಿ ನಡೆದಿದೆ.


ದೇವಾಲಯದ ಆವರಣದಲ್ಲಿರುವ ಸ್ನಾನಗೃಹದಲ್ಲಿ ಇಬ್ಬರು ಯುವತಿಯರು ಶವವಾಗಿ ಪತ್ತೆಯಾಗಿದ್ದಾರೆ. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಇಬ್ಬರು ಹುಡುಗಿಯರು ಮನೆಯಿಂದ ಕಾಲೇಜಿಗೆ ಹೊರಟಿದ್ದು, ಆದರೆ ಮಧ್ಯಾಹ್ನದ ವೇಳೆಗೆ ಹಿಂತಿರುಗಲಿಲ್ಲ. ಬಳಿಕ ಮಾಹಿತಿ ತಿಳಿದ ಪೊಲೀಸರು ಹುಡುಕಾಟ ಆರಂಭಿಸಿದ್ದು, ಫೋನ್‌ಗಳ ಲೊಕೇಷನ್‌ ಆಧರಿಸಿ ದೇವಾಲಯ ಸಂಕೀರ್ಣದಲ್ಲಿ ಕೊನೆಯದಾಗಿ ಇದ್ದ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದರು. ಶನಿವಾರವೂ ಮುಂದುವರಿದ ಹುಡುಕಾಟದಲ್ಲಿ ಅವರ ಸ್ಕೂಟರ್‌ಗಳು ನಿಂತಿರುವುದು ಕಂಡುಬಂದಿದೆ.

ದೇವಾಲಯದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಹುಡುಗಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಲಾಕ್‌ ಆಗಿದ್ದ ಸ್ನಾನಗೃಹದ ಬಾಗಿಲನ್ನು ಒಡೆದು ಒಳನುಗ್ಗಿದಾಗ ಹುಡುಗಿಯರು ಸತ್ತಿರುವುದು ಕಂಡುಬಂದಿದೆ. ಅವರ ದೇಹದ ಬಳಿ ಬಿದ್ದಿದ್ದ ಒಂದು ಸಿರಿಂಜ್ ಮತ್ತು ಮೂರು ಬಾಟಲಿ ವಿಷಕಾರಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ದುರಂತ: ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ

ಯುವತಿಯರ ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page