Connect with us

LATEST NEWS

ದಿನ ಭವಿಷ್ಯ 23-11-2025: ಇಂದು ಈ ರಾಶಿಯವರಿಗೆ ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ!

Published

on

2025 ನವೆಂಬರ್ 23ರ ಭಾನುವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

ಮೇಷ ರಾಶಿ: ಯಾವುದನ್ನಾದರೂ ನಿಮ್ಮದೊಂದೇ ದೃಷ್ಟಿಯಿಂದ ನೋಡಲಾಗದು. ಪ್ರಯಾಣ ದೂರವೆನಿಸದರೂ ಮಾಡುವುದು ಅನಿವಾರ್ಯ. ನೆಮ್ಮದಿಯನ್ನು ಭಂಗ ಮಾಡುವ ವಿಚಾರವನ್ನು ಮರೆಯುವುದು ಉತ್ತಮ. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಶತ್ರುಗಳನ್ನು ಬೌದ್ಧಿಕವಾಗಿ ಸೋಲಿಸಬಹುದು. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಕನಸನ್ನು ಕಾಣುವುದು ಯಥಾರ್ಥವಾಗಿರಿಸಿಕೊಳ್ಳಿ. ರಾಜಕಾರಣಿಗಳ ಕೆಲಸಕ್ಕೆ ಪ್ರಶಂಸೆಯು ಸಿಗುವುದು. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಗೊತ್ತಿಲ್ಲದಂತೆ ವಿರೋಧಿ ಗುಂಪಿಗೆ ಸೇರುವಿರಿ. ನಿಮ್ಮ ಅಮೂಲ್ಯ ವಸ್ತುಗಳ ಹರಣವಾಗಬಹುದು. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಂಪತ್ತಿನ ರಕ್ಷಣೆಯನ್ನು ಮಾಡಿಕೊಳ್ಳುವುದು ಇಂದು ಅಸಾಧ್ಯವಾಗುವುದು. ನಿಮ್ಮ ಅಮೂಲ್ಯ ವಸ್ತುವನ್ನು ನಿಮಗೆ ಗೊತ್ತಿಲ್ಲದೇ ಇನ್ನೊಬ್ಬರಿಗೆ ಕೊಟ್ಟು ಬಿಡುವಿರಿ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಗೋಚರ ಅತೀ ಉತ್ತಮವಾಗಿದ್ದು ಬುಧ ವಕ್ರಿಯಾಗಿದ್ದಾನೆ. ಹಾಗಾಗಿ ಸಾಮಾಜಿಕ ಚಟುವಟಿಕೆಯಲ್ಲಿ ಯಶಸ್ಸು ಸಿಗಲಿದ್ದು ಶತ್ರುಗಳಿಂದಲೂ ಜಯವನ್ನು ಕಾಣುತ್ತೀರಿ. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಕಳೆದುಹೋಗಬಹದು. ಅನಾರೋಗ್ಯದ ಕಾರಣ ವಿಶ್ರಾಂತಿ ಅನಿವಾರ್ಯವಾಗುವುದು.

ಮಿಥುನ ರಾಶಿ: ಕೆಲಸದಲ್ಲಿ ನಿಮ್ಮ ಹೆಸರು ಏರುತ್ತದೆ. ಹಿರಿಯರಿಂದ ಶ್ಲಾಘನೆ. ಅಸಾಮಾನ್ಯ ಜವಾಬ್ದಾರಿ ಬಂದು ಅದು ನಿಮಗೆ ದೊಡ್ಡ ಅವಕಾಶವಾಗಬಹುದು. ಇಂದು ನಿಮ್ಮ ಜವಾಬ್ದಾರಿಯವ ಕೆಲಸಗಳ ಜೊತೆ ಸಹೋದ್ಯೋಗಿಯ ಕಾರ್ಯವನ್ನೂ ಮಾಡಬೇಕಾದೀತು. ನಿಮ್ಮ ಬಾಲಿಶವಾದ ಮಾತುಗಳು ನಿಮ್ಮ ವ್ಯಕ್ತಿತ್ವವನ್ನು ತೋರಿಸುವುದು. ವಿದ್ಯಾಭ್ಯಾಸದ ವಿಚಾರಕ್ಕೆ ವಾಗ್ವಾದವಾಗಬಹುದು. ಕೆಲಸದಲ್ಲಿ ಪಯತ್ನಪೂರ್ವಕ ಹಿನ್ನಡೆ ಮಾಡಿಸುವರು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು.‌ ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಒಂದು ಸಣ್ಣ ಬದಲಾವಣೆ ನಿಮ್ಮ ಜೀವನಕ್ಕೆ ದೃಢತೆ ನೀಡುತ್ತದೆ.

ಕಟಕ ರಾಶಿ: ಇಂದು ನಿಮ್ಮಲ್ಲಿ ಹತಾಶೆಯ ಭಾವನೆ ಹೆಚ್ಚಾಗಬಹುದು. ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸುತ್ತೀರಿ. ಶೈಕ್ಷಣಿಕ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಗಳಿವೆ.ನಿಮಗೆ ಇಂದು ಸಹೋದರರಿಂದ ಬೆಂಬಲ ಸಿಗಲಿದೆ.ನಿಮಗೆ ಹೊಸ ಕೆಲಸವನ್ನು ಪ್ರಾರಂಭಿಸಲು ಇಂದು ಅತ್ಯಂತ ಶುಭ ದಿನವಾಗಿದೆ. ಪ್ರಯಾಣವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ಮಾತಿನಲ್ಲಿ ಮಾಧುರ್ಯವಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಗಟ್ಟಿಯಾಗುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಸುಖಮಯ ಜೀವನ ನಿಮ್ಮದಾಗುತ್ತದೆ.

ಸಿಂಹ ರಾಶಿ: ಇಂದು ನಿಮಗೆ ವೃತ್ತಿ ಜೀವನದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಸಂಬಂಧಗಳಲ್ಲಿ ಹೊಸ ರೋಚಕ ತಿರುವುಗಳಿರುತ್ತವೆ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ನೀವು ಕೆಲಸದ ಹೆಚ್ಚುವರಿ ಜವಾಬ್ದಾರಿಗಳನ್ನು ಪಡೆಯುತ್ತೀರಿ. ಎಚ್ಚರಿಕೆಯಿಂದ ವಾಹನ ಚಲಾಯಿಸಿ. ವೃತ್ತಿಪರ ಜೀವನದಲ್ಲಿ, ಹೊಸ ಉದ್ಯೋಗದ ಪ್ರಸ್ತಾಪವನ್ನು ಪಡೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ.

ಕನ್ಯಾ ರಾಶಿ: ಯಾರೊಂದಿಗೋ ಮಾತುಕತೆ ನಿಮ್ಮ ಜೀವನದ ಹೊಸ ದಿಕ್ಕು ತೋರಿಸಬಹುದು. ಕಲಾತ್ಮಕ ಪ್ರೇರಣೆ ಹೆಚ್ಚಾಗುತ್ತದೆ. ಚರಾಸ್ತಿಯ ಖರೀದಿಯ ಬಗ್ಗೆ ಆಪ್ತರಿಂದ ಒತ್ತಾಯವು ಬರಬಹುದು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ದೌರ್ಬಲ್ಯವನ್ನು ಹಿಮ್ಮೆಟ್ಟಿಸುವುದು ಕಷ್ಟವಾದೀತು. ಸರಳವಾಗಿರಲು ಇರುವುದು ನಿಮಗೆ ಆಗದು. ಇನ್ನೊಬ್ಬರ ಜೊತೆ ಮಾತನಾಡುವಾಗ ಹೆದರಿಕೆ ಇರುವುದು. ನೆಮ್ಮದಿಯನ್ನು ಏಕಾಂತದಲ್ಲಿ ಪಡೆದುಕೊಳ್ಳುವಿರಿ. ಕೆಲಸದಲ್ಲಿ ನಿಮ್ಮ ಸೂಚನೆಗಳಿಗೆ ವಿಶೇಷ ಪ್ರಾಮುಖ್ಯ ಸಿಗುತ್ತದೆ. ಒಬ್ಬ ಅನಿರೀಕ್ಷಿತ ವ್ಯಕ್ತಿಯಿಂದ ಶುಭ ಸುದ್ದಿ. ಮನಸ್ಸಿಗೆ ಆಳವಾದ ಶಾಂತಿ ಲಭಿಸುತ್ತದೆ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಂಡು ಯಾವುದರೊಂದು ಕಾರ್ಯದಲ್ಲಿ ತೊಡಗಿ.

ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ನಿಮ್ಮ ಜೀವನದಲ್ಲಿ ಏರಿಳಿತಗಳಿರುತ್ತವೆ. ಕುಟುಂಬ ಸದಸ್ಯರಿಂದ ಬೆಂಬಲ ಸಿಗಲಿದೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಲಾಭವಿದೆ, ಆದರೆ ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ತಾಳ್ಮೆಯಿಂದಿರುವುದು ಮುಖ್ಯವಾಗುತ್ತದೆ. ನಿಮ್ಮ ಸ್ನೇಹಿತರ ಸಹಾಯದಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ. ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ದಿನಚರಿ ಅಸ್ತವ್ಯಸ್ತವಾಗಲಿದೆ. ಮನೆಯಲ್ಲಿ ವಾದ ವಿವಾದಗಳಿಂದ ದೂರವಿರಿ. ಇಂದು, ಕಠಿಣ ಪರಿಶ್ರಮದ ನಂತರವೇ ಯಶಸ್ಸು ಸಿಗಲಿದೆ.

ವೃಶ್ಚಿಕ ರಾಶಿ: ಹಣಕಾಸಿನಿಂದ ಸ್ವಲ್ಪ ಐಷಾರಾಮಿ ಖರ್ಚು ಮಾಡಿಕೊಳ್ಳಬಹುದು. ಶ್ರಮಕ್ಕೆ ತಕ್ಕ ಪ್ರೋತ್ಸಾಹ ಅಥವಾ ಬಡ್ತಿ ಸಿಗುತ್ತದೆ. ಕುಟುಂಬದವರ ಬೆಂಬಲ ಸಿಗುತ್ತದೆ. ರಸ್ತೆಯಲ್ಲಿ ಎಚ್ಚರಿಕೆ, ಇತರರ ಜಗಳಕ್ಕೆ ಎಳೆಯಲ್ಪಡಬೇಡಿ. ವ್ಯಾಪಾರದಲ್ಲಿ ವಿಸ್ತರಣೆಗೆ ಅವಕಾಶವಿರುತ್ತದೆ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಮಾತಿನಲ್ಲಿ ಸೌಮ್ಯತೆ ಇರುತ್ತದೆ, ಆದರೆ ಅಜ್ಞಾತ ಭಯದಿಂದ ಮನಸ್ಸು ತೊಂದರೆಗೊಳಗಾಗಬಹುದು. ಸಂಭಾಷಣೆಯಲ್ಲಿ ಸಮತೋಲನದಿಂದಿರಿ ಮತ್ತು ಅನಗತ್ಯ ವಾದಗಳನ್ನು ತಪ್ಪಿಸಲು ಪ್ರಯತ್ನಿಸಿ. ಹಿರಿಯ ಬ್ರಾಹ್ಮಣನಿಗೆ ದಾನ ಮಾಡಿ.

ಧನು ರಾಶಿ: ಇಂದು ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ, ಆದರೆ ನೀವು ಕೆಲಸದ ಸ್ಥಳದಲ್ಲಿ ಹೆಚ್ಚು ಶ್ರಮಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಮಾತಿನಲ್ಲಿ ಕಠೋರತೆಯ ಪರಿಣಾಮವಿರುತ್ತದೆ. ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸುವಿರಿ. ಸ್ವಭಾವದಲ್ಲಿ ಕಿರಿಕಿರಿ ಇರುತ್ತದೆ. ಸ್ವಯಂ ನಿಯಂತ್ರಣದಲ್ಲಿರಿ ಮತ್ತು ಅತಿಯಾದ ಕೋಪವನ್ನು ತಪ್ಪಿಸಿ. ಕಚೇರಿಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಇಂದು, ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯೊಂದಿಗೆ ಮಾಡಿದ ಕೆಲಸವು ಶುಭ ಫಲಿತಾಂಶಗಳನ್ನು ನೀಡುತ್ತದೆ.

ಮಕರ ರಾಶಿ: ಮಾತಿನಲ್ಲಿ ಮಾಯಾಶಕ್ತಿ ಇಟ್ಟುಕೊಂಡು ಜನರನ್ನು ಸುಲಭವಾಗಿ ಸೆಳೆಯುತ್ತೀರಿ. ಉದ್ಯಮವು ಯಶಸ್ಸಿನ ಒಂದೊಂದೇ ಹಂತವನ್ನು ಏರಲಿದೆ. ಸಹೋದರರ ಬಾಂಧವ್ಯವು ಸಡಿಲಾಗುವುದು. ಇಂದಿನ‌ ಕಾರ್ಯದಲ್ಲಿ ರೋಚಕತೆ ಕಾಣಿಸುವುದು. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಅಲೋಚಿಸುವಿರಿ. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಆರ್ಥಿಕತೆಯನ್ನು ದೃಢವಾಗಿ ಇಟ್ಟುಕೊಳ್ಳಬೇಕು. ನಿಮ್ಮ ನಿರ್ಧಾರವನ್ನು ಬದಲು ಮಾಡಿದ್ದಕ್ಕೆ ಬೇಸರವಾದೀತು. ಹೇಳಲಾಗದ ಒಂದು ವಿಚಾರವನ್ನು ಹೇಳಲು ಭಯವು ನಿಮ್ಮನ್ನು ಕಾಡಬಹುದು. ಹೊಸ ಕಲ್ಪನೆಗಳು ತೀವ್ರವಾಗಿ ಚಲಿಸುತ್ತವೆ. ಒಂದು ಸಣ್ಣ ಸಂಭಾಷಣೆ ಜೀವನದ ದೊಡ್ಡ ತಿರುವಾಗಬಹುದು.

ಕುಂಭ ರಾಶಿ: ಇಂದು ನೀವು ಕೆಲಸದಲ್ಲಿ ಶುಭ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಪ್ರಗತಿಗೆ ಸುವರ್ಣಾವಕಾಶಗಳು ದೊರೆಯಲಿವೆ. ಇಂದು ನಿಮ್ಮ ಭಾವನೆಗಳು ಏರುಪೇರಾಗಬಹುದು. ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹಣದ ಹರಿವಿಗೆ ಹೊಸ ದಾರಿಗಳು ಸಿಗಲಿವೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಬಟ್ಟೆ ಖರೀದಿಗೆ ಹಣ ವ್ಯಯವಾಗಬಹುದು.

ಮೀನ ರಾಶಿ: ಕೆಲಸಗಳಲ್ಲಿ ಹೊಸ ಅವಕಾಶಗಳು ಉದಯಿಸುವಂತೆ, ಅಪ್ರತೀಕ್ಷಿತ ವ್ಯಕ್ತಿ ನಿಮ್ಮ ಜೀವನಕ್ಕೆ ಪ್ರೇರಣೆ ನೀಡಬಹುದು. ಹೊರಗಿನ ಆಹಾರವು ನಿಮ್ಮ ಮೇಲೆ ಇಂದು ದುಷ್ಪರಿಣಾಮ ಬೀರಿ, ಅದನ್ನು ತ್ಯಜಿಸುವಿರಿ. ಪೂರ್ವಾಗ್ರಹವಿಲ್ಲದೇ ಮಾತನಾಡುವುದು ಸೂಕ್ತ. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು.‌ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಯಶಸ್ಸನ್ನು ಪಡೆಯುವ ಹಂಬಲದಿಂದ ಏನಾದರೂ ಮಾಡಿಕೊಳ್ಳುವಿರಿ. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಮನೋಬಲ ಹೆಚ್ಚಾಗಿ, ನಿರಾಕರಿಸಿದ್ದ ಯೋಜನೆಗಳು ಮತ್ತೆ ಶುಭ ಸೂಚನೆ ಕೊಡುತ್ತವೆ. ಸಂಜೆಯಲ್ಲಿ ಅತಿ ಸಣ್ಣ ಘಟನೆ ದೊಡ್ಡ ಸಂದೇಶ ನೀಡಬಹುದು. ನಕಾರಾತ್ಮಕತೆಗೆ ಅವಕಾಶ ಬೇಡ. ಪ್ರಯಾಣವು ಅನಿವಾರ್ಯವಾದರೆ ಮಾಡಿ. ಅನಗತ್ಯ ಖರ್ಚನ್ನು ನಿಲ್ಲಿಸುವಿರಿ.

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading

LATEST NEWS

ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

Published

on

ಭಾರತದ ಮಾಜಿ ಆಲ್‌ರೌಂಡರ್ ಆರ್‌ ಅಶ್ವಿನ್ ತಮ್ಮ ಅಧಿಕೃತ ಎಕ್ಸ್‌ಖಾತೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಚಿತ್ರವನ್ನು ಪೋಸ್ಟ್ ಮಾಡಿದ್ದು, ನೆಟ್ಟಿಗರು ಶಾಕ್ ಆಗಿದ್ದಾರೆ.

ಹೌದು, ಅಶ್ವಿನ್ ಆಗಾಗೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅನೇಕ ರೀತಿಯ ಸಂತೋಷದ ಕ್ಷಣಗಳಿರುವ ಫೋಟೋ, ವೀಡಿಯೋ ಹಂಚಿಕೊಳ್ಳುತ್ತಾರೆ. ಇದನ್ನ ಅಭಿಮಾನಿಗಳು ಕೂಡ ಇಷ್ಟಪಟ್ಟು ಮೆಚ್ಚುಗೆ ಸೂಚಿಸುತ್ತಾರೆ. ಆದರೆ ಈ ಬಾರಿ ಇದಕ್ಕೆ ತದ್ವಿರುದ್ದವೆಂಬಂತೆ ಎರಡು ಚಿತ್ರಗಳ ಕೊಲಾಜ್ ಅನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಒಂದು ಬದಿಯಲ್ಲಿ ಸನ್ನಿ ಲಿಯೋನ್ ಅವರ ಚಿತ್ರವನ್ನು ಹೊಂದಿದ್ದರೆ, ಇನ್ನೊಂದು ಬದಿಯಲ್ಲಿ ಚೆನ್ನೈನ ಸಾಧು ಬೀದಿಯ ಚಿತ್ರವಿದೆ. ಇದು ಸಾಕಷ್ಟು ಅಭಿಮಾನಿಗಳ ಚಿಂತೆಗೀಡು ಮಾಡಿತ್ತು. ಆದರರೆ ಆಟಗಾರನ ಚಟುವಟಿಕೆಯ ಹಿಂದಿನ ತರ್ಕವನ್ನು ಅರ್ಥಮಾಡಿಕೊಳ್ಳುವಲ್ಲಿ ನೆಟ್ಟಿಗರು ಯಶಸ್ವಿಯಾಗಿದ್ದಾರೆ.

ಈ ಎರಡು ಚಿತ್ರಗಳ ಕೊಲಾಜ್ ಅರ್ಥವೇನು?
ಅಶ್ವಿನ್ ಅವರು ಪೋಸ್ಟ್ ಮಾಡಿರುವ ಎರಡು ಪೋಟೋಗಳ ಅರ್ಥವನ್ನು ಅಭಿಮಾನಿಗಳು ಗೆಸ್ ಮಾಡಿದ್ದಾರೆ. ಅಷ್ಟಕ್ಕೂ ಆಲ್‌ರೌಂಡರ್ ಈ ಫೋಟೋ ಮೂಲಕ ತಮಿಳುನಾಡು ಆಲ್‌ರೌಂಡರ್ ಸನ್ನಿ ಸಂಧು ಬಗ್ಗೆ ಗಮನಸೆಳೆಯುವ ಪ್ರಯತ್ನ ಮಾಡಿದ್ದರು. ಇತ್ತೀಚೆಗೆ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20ಯಲ್ಲಿ ಪಾದಾರ್ಪಣೆ ಮಾಡಿ ಗಮನಸೆಳೆದಿದ್ದರು.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ (ಡಿ.08) ಸೌರಾಷ್ಟ್ರ ವಿರುದ್ಧ ನಡೆದ ಪಂದ್ಯದಲ್ಲಿ ಸಂಧು ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. ತಮಿಳುನಾಡು ಪರ ತಮ್ಮ ಎರಡನೇ ಪಂದ್ಯವನ್ನು ಆಡಿದ ಸನ್ನಿ, ಸಾಯಿ ಸುದರ್ಶನ್ (55 ಎಸೆತಗಳಲ್ಲಿ 101*) ಅವರೊಂದಿಗೆ ಕೇವಲ 9 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ 37 ರನ್‌ಗಳ ನಿರ್ಣಾಯಕ ಜೊತೆಯಾಟವಾಡಿದರು. ಇದು ಅವರ ತಂಡದ ಗೆಲುವಿಗೆ ಕಾರಣವಾಯಿತು.

ಇದನ್ನೂ ಓದಿ: ಮುರಿದುಬಿದ್ದ ಮದುವೆ: ಟಿ20 ಸರಣಿಗೆ ಅಭ್ಯಾಸ ಆರಂಭಿಸಿದ ಸ್ಮೃತಿ ಮಂಧನಾ

22 ವರ್ಷದ ಸನ್ನಿ ಸಂಧುರನ್ನು ಮುಂಬರುವ ಐಪಿಎಲ್ ನಲ್ಲಿ ಫ್ರಾಂಚೈಸಿಗಳು ಅನ್‌ಕ್ಯಾಪ್ಡ್ ಆಲ್‌ರೌಂಡರ್‌ ಆಗಿ ಆಯ್ಕೆ ಮಾಡಿಕೊಳ್ಳಬಹುದು ಅನ್ನೋ ಸೂಚನೆಯನ್ನೂ ಅಶ್ವಿನ್ ತಮ್ಮ ಪೋಸ್ಟ್‌ನ ಮೂಲಕ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page