Connect with us

DAKSHINA KANNADA

ಮಂಗಳೂರಿನಲ್ಲಿ ಮತ್ತೊಂದು ಮಾನವ ಅಸ್ಥಿಪಂಜರ ಪತ್ತೆ..! ಪೊಲೀಸ್ ಪರಿಶೀಲನೆ

Published

on

ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಮಾನವ ಅಸ್ಥಿ ಪಂಜರ ಪತ್ತೆಯಾಗಿದೆ.  ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಸ್ಥಿಪಂಜರ ಶುಕ್ರವಾರ ಪತ್ತೆಯಾಗಿದೆ.

ನಗರದ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಸಮೀಪದ ಪಾಳು ಬಿದ್ದ ಮನೆಯ ಅಂಗಳದಲ್ಲಿ ಈ ಮಾನವ ಅಸ್ಥಿಪಂಜರ ಪತ್ತೆಯಾಗಿದೆ,

ಮಾಹಿತಿ ತಿಳಿದ ತಕ್ಷಣ ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿ ತನಿಖೆ ಆರಂಭಿಸಿದ್ದಾರೆ.

ವಾರದ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಮಾಲಾಡಿ ಕೋರ್ಟ್ ಬಳಿ ಅಸ್ಥಿಪಂಜರದ ಮೂಳೆಗಳು ಸಿಕ್ಕಿ ಬಳಿಕ  ಆ ಪ್ರಕರಣ ಕೊಲೆಯಾಗಿ ಮಾರ್ಪಟ್ಟಿತ್ತು.

 

DAKSHINA KANNADA

ಉಳ್ಳಾಲ: ತಾನು ಕಲಿತ ಶಾಲೆಯಲ್ಲೇ ನೇಣುಹಾಕಿಕೊಂಡು ಯುವಕ ಆತ್ಮಹ*ತ್ಯೆ

Published

on

ಉಳ್ಳಾಲ: ಯುವಕನೋರ್ವ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಘಟನೆ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇ 19ರಂದು ನಡೆದಿದೆ.

ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.

ವೃತ್ತಿಯಲ್ಲಿ ಪೇಂಟರ್‌ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕಿಕೊಂಡು ಹೋದಾಗ ಮನೆಯ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು.

ಬಳಿಕ ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹ*ತ್ಯೆ

ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಘಟನೆ ಸಂಬಂಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Continue Reading

DAKSHINA KANNADA

ಬೆಂಗಳೂರಿನಲ್ಲಿ ಮಳೆಯ ಆರ್ಭಟ; ಮಂಗಳೂರು ನಿವಾಸಿ ಸಹಿತ ಇಬ್ಬರ ಸಾವು

Published

on

ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿನ್ನೆಯ ದಿನ (ಮೇ.19) ಗೋಡೆ ಕುಸಿದು ಓರ್ವ ಮಹಿಳೆ ಮೃತಪಟ್ಟಿದ್ದಳು. ಇದೀಗ ಭಾರೀ ಮಳೆಗೆ ಮತ್ತಿಬ್ಬರು ಬಲಿಯಾದ ಘಟನೆ ಸಿಲಿಕಾಸ್ ಸಿಟಿಯ ಬಿಟಿಎಂ ಲೇಔಟ್‌ನ ಎರಡನೇ ಹಂತದ ಎನ್.ಎಸ್ ಪಾಳ್ಯದಲ್ಲಿ ನಡೆದಿದೆ.

ಮನಮೋಹನ್ ಕಾಮತ್ (63), ದಿನೇಶ್ (12) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮಂಗಳೂರು ಮೂಲದ ಮನಮೋಹನ್ ಕಾಮತ್ ಹಾಗೂ ನೇಪಾಳ ಮೂಲದ ಭರತ್ ಅವರು ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಭಾರೀ ಮಳೆಗೆ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ನಲ್ಲಿ ನೀರು ತುಂಬಿತ್ತು. ನಿನ್ನೆ ಸಂಜೆ 6.30ಕ್ಕೆ ಇಬ್ಬರು ಮೋಟಾರ್ ಮೂಲಕ ಮಳೆ ನೀರು ತೆರವು ಮಾಡಲು ಹೋಗಿದ್ದರು.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಮೇಲೆ ಜೈಲಲ್ಲೇ ಹಲ್ಲೆ

ಮೋಟಾರ್ ಮೂಲಕ ಮಳೆ ನೀರು ತೆರವು ಮಾಡುವಾಗ ಎಲೆಕ್ಟ್ರಿಕ್ ಶಾಕ್ ಹೊಡೆದು ಮನಮೋಹನ್ ಕಾಮತ್ ಮತ್ತು ದಿನೇಶ್ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್‌ಮೆಂಟ್‌ ನಲ್ಲಿ ಪವರ್ ಕಟ್ ಮಾಡಲಾಗಿದ್ದು, ಬ್ಯಾರಿಕೇಡ್ ಕೂಡ ಹಾಕಲಾಗಿದೆ. ಇಬ್ಬರ ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Continue Reading

DAKSHINA KANNADA

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಮೇಲೆ ಜೈಲಲ್ಲೇ ಹಲ್ಲೆ ಯತ್ನ

Published

on

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾಣಾಪಾಯದಿಂದ ಪಾರಾಗಿದ್ದಾರೆ.

ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಸೋಮವಾರ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್‌ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಏಕಾಏಕಿ ಕಲ್ಲು ಹಾಗೂ ಮಾರಕಾಯುಧಗಳಿಂದ ದಾಳಿ ಮಾಡಲಾಗಿದ್ದು, ಇದರಿಂದ ನೌಷಾದ್‌ಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಚೊಟ್ಟೆ ನೌಷಾದ್ ಹಿನ್ನಲೆ ನೋಡೋದಾದ್ರೆ ಆರೋಪಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್, ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಇತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಪ್ರತಿಕ್ರಿಯೆ:

ಇನ್ನು ನಗರದ ಜೈಲಿನಲ್ಲಿ ಚೊಟ್ಟೆ ನೌಷಾದ್ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂದಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕ್ವಾರಂಟೈನ್ ಸೆಲ್ ವಿಭಾಗದ ವಿಚಾರಣಾ ಬಂದಿಗಳು ಜೈಲಿನ‌ ಕಚೇರಿ ಮುಂಭಾಗ ನಿಂತು, ಬಿ ಬ್ಯಾರಕ್ ಖೈದಿಗಳನ್ನು ಗೂರಾಯಿಸಿದ್ದರು. ಈ ಕಾರಣಕ್ಕಾಗಿ ಪರಸ್ಪರ ಅವ್ಯಾಚ ಶಬ್ದಗಳೊಂದಿಗೆ ಬೈದಾಡಿಕೊಂಡು ಕೂಗಾಡಿದ್ದರು.

ಇದನ್ನೂ ಓದಿ: ಮನೆ ಮುಂದೆ ಕಟ್ಟಿದ್ದ 3 ಹಸುಗಳ ಕಳ್ಳತನ

ಸಿಮೆಂಟ್ ಬ್ಲಾಕ್‌ನ್ನು ಒಡೆದು ಅದರ ತುಂಡುಗಳನ್ನು ಎಸೆದಿದ್ದರು. ಬಿ‌ ಬ್ಯಾರಕ್‌ನ ಖೈದಿಗಳು ಮಧ್ಯ ದ್ವಾರದ ಗೇಟ್‌ನ್ನು ದೂಡಿ ಹೊರಬಂದು ಕಛೇರಿಯ ಡೋರಿನ ಗ್ಲಾಸ್‌ನ್ನು ಕೈನಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ವಿಚಾರಣಾ ಸಿಬಂದಿ ಒಬ್ಬನಿಗೆ ಕಾಲಿಗೆ ರಕ್ತ ಗಾಯವಾಗಿದೆ. ಮಂಗಳೂರಿನ ಕಾರಾಗೃಹದ ಅಧೀಕ್ಷಕರು, ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page