Connect with us

BELTHANGADY

ಪತಿಯಿಂದ ಪತ್ನಿಗೆ ಚೂರಿ ಇರಿ*ತ..! ಆರೋಪಿಯನ್ನು ಬೆನ್ನಟ್ಟಿ ಪೊಲೀಸರಿಗೊಪ್ಪಿಸಿದ ಮನೆಮಂದಿ

Published

on

ಪುತ್ತೂರು: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ.

ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (40 ವ) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಹಕೀಂ ಮತ್ತು ಸಜರಾ ಅವರ ವಿವಾಹ 15 ವರ್ಷಗಳ ಹಿಂದೆ ನಡೆದಿತ್ತು. ವಿವಾಹವಾದ ಕೆಲ ವರ್ಷಗಳ ಬಳಿಕ ಹಕೀಂ ಸಜರಾ ಅವರಿಗೆ ಚಿತ್ರಹಿಂಸೆ ನೀಡಲು ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಸಜರಾ ಅವರು ಕಳೆದ ಮೂರು ವರ್ಷಗಳಿಂದ ಜೋರುಕಟ್ಟೆಯಲ್ಲಿರುವ ತನ್ನ ತವರು ಮನೆಗೆ ಬಂದು ಮಕ್ಕಳೊಂದಿಗೆ ನೆಲೆಸಿದ್ದರು. ಶುಕ್ರವಾರ(ಜು.26) ಮಧ್ಯಾಹ್ನ ವೇಳೆ ಚೂರಿ ಹಿಡಿದುಕೊಂಡು ಬಂದಿದ್ದ ಹಕೀಂ ಏಕಾಏಕಿಯಾಗಿ ಸಜರಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ತಡೆಯಲು ಬಂದ ತಂದೆ ಮಹಮ್ಮದ್ ಅವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ.

ಕಾರ್ಕಳ: ಕಟ್ಟಡವೊಂದರಲ್ಲಿ ಭಾರೀ ಶಬ್ದದೊಂದಿಗೆ ಭೀಕರ ಸ್ಫೋಟ, ಬೆಚ್ಚಿಬಿದ್ದ ಕಾರ್ಕಳ ಜನತೆ.!

ಹಲ್ಲೆ ನಡೆಸಿ ಪರಾರಿಯಾದ ಹಕೀಂನನ್ನು ಮನೆಮಂದಿ ಹಾಗೂ ಹೆತ್ತವರು ಸೇರಿಕೊಂಡು ಬೆನ್ನಟ್ಟಿ ಪಿಲಿಗೂಡು ಎಂಬಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕೈ, ಹೊಟ್ಟೆ ಮತ್ತು ಬೆನ್ನಿನ ಭಾಗಕ್ಕೆ ಗಾಯಗಳಾಗಿರುವ ಸಜರಾ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
1 Comment

Leave a Reply

Your email address will not be published. Required fields are marked *

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

READ IN ENGLISH : https://www.nammakudlaenglish.com/entry-to-tourist-spots-in-belthangady-banned-from-today/

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

BELTHANGADY

ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

Published

on

ಬೆಳ್ತಂಗಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃ*ತಪಟ್ಟು ಹಲವರು ಗಂ*ಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ ರಾತ್ರಿ ನಡೆದಿದೆ.

ಮೃ*ತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸಿಡಿಲು ಬ*ಡಿದು ಅವಳಿ ಹೆಣ್ಣುಮಕ್ಕಳ ಸಹಿತ ದಂಪತಿ ಸಜೀವ ದ*ಹನ!

ಘಟನೆಯಲ್ಲಿ ಹತ್ತಕ್ಕೂ ಹೆಚ್ವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃ*ತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಭಾರೀ ಮಳೆಗೆ ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ಬಿದ್ದ ಮರ

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರ ಬಿದ್ದು ದಂಪತಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ನಡೆದಿದೆ.

ಕಡಿರುದ್ಯವಾರ ಗ್ರಾಮದ ಎರ್ಮಾಲ ಪಲ್ಕೆ ನಿವಾಸಿಗಳಾದ ಗುಮ್ಮಣ್ಣ ಮತ್ತು ವಿಮಲಾ ಗಾಯಗೊಂಡವರು. ತಾಲೂಕಿನಾದ್ಯಂತ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಮಣ್ಣು ಸಡಿಲಗೊಂಡು ಮರ ಬಿದ್ದಿದೆ.

ಇದನ್ನೂ ಓದಿ: ಕೇರಳ: ಬ್ರಿಟಿಷ್ ಎಫ್-35 ಫೈಟರ್ ಜೆಟ್ ತುರ್ತು ಭೂಸ್ಪರ್ಶ

ಸ್ಥಳೀಯರ ಸಹಕಾರದಿಂದ ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡ ಮರವೇ ಸ್ಕೂಟರ್ ಮೇಲೆ ಬಿದ್ದಿದ್ದು ಅದೃಷ್ಟವಶಾತ್ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page