Connect with us

ಮೈಕ್ ಪರ್ಮಿಷನ್ ವಿಚಾರವಾಗಿ ಉಡುಪಿಯ ಯಕ್ಷಗಾನದಲ್ಲಿ ಹೈಡ್ರಾಮ

Published

on

ಉಡುಪಿ : ಯಕ್ಷಗಾನ ಎಂಬುವುದು ಕರ್ನಾಟಕದ ಪ್ರಸಿದ್ಧ ಆರಾಧನಾ ಕಲೆಗಳಲ್ಲಿ ಒಂದು. ಆದರೆ ಈಗ ಅದಕ್ಕೆ ಬ್ರೇಕ್‌ ಕಾಟ ಶುರುವಾಗಿದೆ. ‘ಮೈಕ್‌ಗೆ ಅನುಮತಿ ಪಡೆದಿಲ್ಲ’ ಎಂಬ ಕಾರಣಕ್ಕೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿ ಶಿರ್ಲಾಲುವಿನಲ್ಲಿ ಘಟನೆ ನಡೆದಿದೆ. ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಆಯೋಜನೆಗೊಂಡಿದ್ದ ಪ್ರದರ್ಶನದಲ್ಲಿ ಪೊಲೀಸರು ಈ ರೂಲ್ಸ್‌ ಜಾರಿಗೆ ಮುಂದಾಗಿದ್ದಾರೆ.

ಅಜೆಕಾರು ಉಪನಿರೀಕ್ಷಕ ಶುಭಕರ್‌ ಅವರಿಂದ ರಾತ್ರಿ 10ರ ನಂತರ ಯಕ್ಷಗಾನ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತವಾಗಿದೆ. 10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಲಾಗಿದೆ. ಅಲ್ಲದೆ, ಆಯೋಜಕರನ್ನು ಅರೆಸ್ಟ್ ಮಾಡಲು ಕೂಡ ಪೊಲೀಸರು ಮುಂದಾಗಿದ್ದಾರೆ. ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗಲೇ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ವೇಳೆ ಕಿಡಿಕಾರಿದ ಗ್ರಾಮಸ್ಥರು, ಇಡೀ ಗ್ರಾಮದ ಜನರನ್ನು ಅರೆಸ್ಟ್‌ ಮಾಡಿ ಎಂದು ಹೈಡ್ರಾಮಾ ನಡೆಸಿದ್ದಾರೆ. ಕಾರ್ಯಕ್ರಮ ನಿಲ್ಲಿಸದಿದ್ದರೆ ಯಕ್ಷಗಾನ ಮಂಡಳಿ ಅಧ್ಯಕ್ಷನನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಎಫ್ಐಆರ್ ತೋರಿಸುವಂತೆ ದೂರು ದಾಖಲಾದ ಬಗ್ಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಗ್ರಾಮಸ್ಥರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಪೊಲೀಸರು ಸ್ಥಳದಿಂದ ತೆರಳಿದ್ದಾರೆ. ಜನವರಿ 10 ರಂದು ಪರವಾನಿಗೆಗೆ ಪಿಡಿಒ ಬಳಿ ಆಯೋಜಕರು ತೆರಳಿದ್ದು ವೇಳೆ ಮೂರು ದಿನಗಳ ರಜೆಯ ಕಾರಣಕ್ಕೆ ಅನುಮತಿ ದೊರಕಿರಲಿಲ್ಲ. ಜನವರಿ 13ರಂದು ಅನುಮತಿಗಾಗಿ ಆಯೋಜಕರು ಅಜೆಕಾರು ಠಾಣೆಗೆ ಹೋಗಿದ್ದರು.  ಪಂಚಾಯತ್ ಅನುಮತಿ ತರುವಂತೆ ಪೊಲೀಸರ ತಾಕಿತು ಮಾಡಿದ್ದಾರೆ. ಈ ಘಟನೆಗೆ ಸಂಬಧಪಟ್ಟಂತೆ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮಿ ಸೌಂಡ್ಸ್ ಮುಖ್ಯಸ್ಥ ಅಪ್ಪು ವಿರುದ್ಧವೂ ಕೇಸ್‌ ಹಾಕಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ .ಅರುಣ್ ಮುಂದಾಗಿದ್ದಾರೆ. ಆದೇಶ ಪಾಲಿಸದಿದ್ದರೆ ಆಯಾ ಠಾಣಾಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಸಿದ್ದಾರೆ. ಇದರಿಂದಾಗಿ ಪೊಲೀಸರಿಗೆ ಯಕ್ಷಗಾನದ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಬಾಂಬ್ ಬೆದರಿಕೆ ಹಿನ್ನಲೆ ಶಾಲೆಗೆ ರಜೆ ಘೋಷಣೆ

Published

on

ಮಂಗಳೂರು/ನವದೆಹಲಿ : ನೋಯ್ಡಾ ಮತ್ತು ನವದೆಹಲಿಯ ಎರಡು ಶಾಲೆಗಳಿಗೆ ಇಂದು (ಫೆ.7) ಬೆಳ್ಳಂಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ದೌಡಾಯಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಇಮೇಲ್ ಮೂಲಕ ಬೆದರಿಕೆ ಬಂದ ಕೂಡಲೇ ಶಾಲಾ ಆಡಳಿತ ಮಂಡಳಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲಾ ಆಡಳಿತ ಮಂಡಳಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಈಗಾಗಲೇ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬಂದವರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ. ಶಾಲಾ ಆವರಣವನ್ನು ಸುತ್ತುವರೆದ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ, ಅಲ್ಲದೆ ಕಾರ್ಯಾಚರಣೆಯಲ್ಲಿ ಶ್ವಾನ ದಳವೂ ಸೇರಿದೆ.

ಇದನ್ನೂ ಓದಿ : ಜೊಮಾಟೊ ಹೆಸರು ಎಟರ್ನಲ್ ಎಂದು ಬದಲು; ಏಕೆ ಈ ನಾಮ ಬದಲಾವಣೆ ?

ನೋಯ್ಡಾದ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನಕಲಿ ಇಮೇಲ್‌ಗಳನ್ನು ಕಳುಹಿಸಿದ್ದಕ್ಕಾಗಿ 9 ನೇ ತರಗತಿಯ ವಿದ್ಯಾರ್ಥಿಯನ್ನು ಬಂಧಿಸಿದ ಒಂದು ದಿನದ ಬಳಿಕ ಇಂದು ಮತ್ತೆ ಎರಡು ಶಾಲೆಗಳಿಗೆ ಬೆದರಿಕೆ ಬಂದಿರುವುದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಸದ್ಯ ಬಾಂಬ್ ಬೆದರಿಕೆ ಬಂದಿರುವ ಇಮೇಲ್ ನ ಮೂಲ ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸಲಾಗುತ್ತಿದೆ.

Continue Reading

FILM

ನಟ ಸೋನು ಸೂದ್ ವಿರುದ್ದ ಬಂಧನ ವಾರೆಂಟ್ ಜಾರಿ

Published

on

ಮಂಗಳೂರು/ಪಂಜಾಬ್ : ಖ್ಯಾತ ಬಾಲಿವುಡ್ ನಟ ಸೋನು ಸೂದ್ ವಿರುದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಲೂಧಿಯಾನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ವಾರೆಂಟ್ ಹೊರಡಿಸಿದ್ದಾರೆ. ಲುಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹದ ಆರೋಪ; ಖ್ಯಾತ ನಟಿ ಅರೆಸ್ಟ್

ಸಾಕ್ಷ್ಯ ಹೇಳಲು ಸೋನು ಸೂದ್ ಅವರಿಗೆ ನ್ಯಾಯಾಲಯಕ್ಕೆ ಬರುವಂತೆ ಸೂಚಿಸಲಾಗಿತ್ತು. ಆದರೆ ಅವರು ಹಾಜರಾಗಲು ವಿಫಲರಾದ ಕಾರಣ ಬಂಧನ ವಾರೆಂಟ್ ಹೊರಡಿಸಲಾಗಿದೆ. ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲುಧಿಯಾನ ನ್ಯಾಯಾಲಯವು ನಿರ್ದೇಶಿಸಿದೆ.ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಫೆ.10 ಕ್ಕೆ ಕೋರ್ಟ್ ನಿಗದಿಪಡಿಸಿದೆ.

ಸೋನು ಸೂದ್ ಪ್ರತಿಕ್ರಿಯೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದರ ಜೊತೆ ಮಾತನಾಡಿದ ಸೋನು ಸೂದ್, “ನಾನು ಯಾವುದಕ್ಕೂ ಬ್ರಾಂಡ್ ಅಂಬಾಸಿಡರ್ ಅಲ್ಲ, ನಾನು ಈಗಾಗಲೇ ನನ್ನ ವಕೀಲರ ಮೂಲಕ ಉತ್ತರಿಸಿದ್ದೇನೆ ಮತ್ತು ಫೆಬ್ರವರಿ 10 ರಂದು ಮತ್ತೆ ಉತ್ತರ ನೀಡುತ್ತೇನೆ. ಈ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದೆಲ್ಲ ಏನೆಂದು ನನಗೂ ತಿಳಿದಿಲ್ಲ. ಕೆಲವರು ಬೇಕೆಂದೇ ಮಾನ ಹರಾಜು ಹಾಕಲು ಈ ರೀತಿಯ ಕೆಲಸಗಳನ್ನು ಮಾಡುತ್ತಾರೆ. ಆದರೆ ಇದಕ್ಕೆಲ್ಲ ನಾನು ಹೆದರುವುದಿಲ್ಲ” ಎಂದು ಹೇಳಿದ್ದಾರೆ.

Continue Reading

DAKSHINA KANNADA

ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ ಇನ್ನಿ*ಲ್ಲ

Published

on

ಕಿನ್ನಿಗೋಳಿ : ಕಿನ್ನಿಗೋಳಿಯ ಐಕಳ ಪೊಂಪೈ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ. (62 )ಅವರು ಹೃದಯಘಾತದಿಂದ ಬುಧವಾರ ರಾತ್ರಿ ನಿ*ಧನ ಹೊಂದಿದರು.

ಮೂಲತಃ ಕಾಸರಗೋಡು ತಾಲೂಕಿನ ಬದಿಯಡ್ಕ ನಿವಾಸಿಯಾಗಿದ್ದ ಅವರು  1986ರಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ಪೊಂಪೈ ಕಾಲೇಜಿಗೆ ವರ್ಗಾವಣೆಗೊಂಡು 21 ವರ್ಷಗಳ ವರೆಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

ಸಮಾಜಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಮತ್ತು ಮುಖ್ಯಸ್ಥರಾಗಿ ಒಟ್ಟು 36 ವರ್ಷಗಳ ಸೇವೆಯನ್ನು ಸಲ್ಲಿಸಿದ್ದ ಅವರು ಮಂಗಳೂರು ವಿಶ್ವ ವಿದ್ಯಾನಿಲಯದ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಪೊಂಪೈ ಕಾಲೇಜಿನಲ್ಲಿ ಮೂರು ವರ್ಷಗಳ ಕಾಲ ಎನ್.ಎಸ್. ಎಸ್ ಕಾರ್ಯಕ್ರಮ ಅಧಿಕಾರಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ಹಲವು ವರ್ಷಗಳ ಕಾಲ ಸಹ ಕಾರ್ಯಕ್ರಮ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು‌ ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page