Connect with us

BELTHANGADY

‘ನನಗೆ ಮುಸ್ಲಿಮರ ಮತ ಬೇಡ, ಹಿಂದುಗಳ ಮತಗಳಷ್ಟೇ ಸಾಕು’

Published

on

ಬೆಳ್ತಂಗಡಿ: ‘ನಾನು ಧೈರ್ಯದಿಂದ ಹಾಗೂ ತಾಕತ್ತಿನಿಂದ ಹೇಳ್ತೇನೆ. ಸಂಘದ ಹಿರಿಯರು ನನ್ನನ್ನು ಮತ್ತೆ ಓಟಿಗೆ ನಿಲ್ಲುವಂತೆ ಸೂಚಿಸಿದರೆ ನನಗೆ ಮುಸ್ಲಿಮರ ಮತಗಳು ಬೇಡ, ಹಿಂದುಗಳ ಮತಗಳಷ್ಟೇ ಸಾಕು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.


ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ ನನಗೆ ಮುಸ್ಲಿಮರ ಮತಗಳು ಬೇಡ ಕೇವಲ ಹಿಂದುಗಳ ಮತ ಮಾತ್ರ ಸಾಕು ಏಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು.

ಅಲ್ಲದೆ ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರವನ್ನು ಕೂಡ ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ. ಅಷ್ಟೇ ಅಲ್ಲದೆ ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಈ ಕಾರಣಕ್ಕೆ ನನಗೆ ಕೇವಲ ಹಿಂದೂಗಳ ವೋಟ್ ಮಾತ್ರ ಸಾಕು’ ಎಂಬ ಆಕ್ರೋಶಭರಿತ ಹೇಳಿಕೆ ನೀಡಿದರು.

BELTHANGADY

ಬೆಳ್ತಂಗಡಿ: ತೋಟದ ಬೇಲಿಗೆ ಡಿ*ಕ್ಕಿ ಹೊಡೆದ ಕಾರು

Published

on

ಬೆಳ್ತಂಗಡಿ: ಇಂದು ಮುಂಜಾನೆ(ಮೇ.19) ದಿಡುಪೆ-ಪೈಚಾರು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ-ಕಲ್ಮಂಜ-ಧರ್ಮಸ್ಥಳ ರಸ್ತೆಯ ಒಂಜರೆಬೈಲು ಎಂಬಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ತೋಟದ ಬೇಲಿಗೆ ಡಿ*ಕ್ಕಿ ಹೊಡೆದಿದೆ.


ಈ ಕಾರಿನಲ್ಲಿ ಬೆಂಗಳೂರು ಮೂಲದ ಇಬ್ಬರು ಪ್ರಯಾಣಿಸುತ್ತಿದ್ದರು. ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿದ್ರೆಯ ಮಂಪರು ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಬೇಲಿಯನ್ನು ದಾಟಿ ಮುಂದುವರಿಯುತ್ತಿದ್ದರೆ ಆಳವಾದ ಕಣಿವೆಗೆ ಬೀಳುವ ಸಾಧ್ಯತೆ ಇತ್ತು. ಹಾಗೂ ಸಮೀಪದಲ್ಲಿ ವಿದ್ಯುತ್ ಕಂಬವು ಇದೆ. ಕಾರು ಬೇಲಿಗೆ ಸಿಲುಕಿಕೊಂಡ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರಿನೊಳಗೆ ಉಸಿರುಗಟ್ಟಿ ನಾಲ್ವರು ಮಕ್ಕಳು ಸಾ*ವು

ಈ ರಸ್ತೆಯು ಅನೇಕ ಶಿಥಿಲ ಕಿರು ಸೇತುವೆ, ಕಡಿದಾದ ತಿರವುಗಳನ್ನು ಹೊಂದಿದ್ದು, ಇಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳಲಾಗಿದೆ.

Continue Reading

BELTHANGADY

ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ ನಲ್ಲಿ ನಿಗೂಢ ಸಾ*ವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

Published

on

ಬೆಳ್ತಂಗಡಿ: ಏರೋ ಸ್ಪೇಸ್ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದ ಬೆಳ್ತಂಗಡಿಯ ಯುವತಿ ಆಕಾಂಕ್ಷ ನಿಗೂಢವಾಗಿ ಸಾ*ವನ್ನಪ್ಪಿದ ಘಟನೆ ಪಂಜಾಬ್‌ನಲ್ಲಿ ನಡೆದಿದ್ದು, ತನಿಖೆ ಆರಂಭಿಸಿದ ಪೊಲೀಸರಿಗೆ ಟ್ವಿಸ್ಟ್ ಸಿಕ್ಕಿದೆ.

ಸರ್ಟಿಫಿಕೇಟ್ ಪಡೆಯಲು ಹೋಗಿದ್ದ ಆಕೆ ತಾನು ಕಲಿತ ಫಗ್ವಾರ ಎಲ್‌ ಪಿಯು ಕಾಲೇಜಿನ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಲೇಜಿಗೆ ಹೋಗಿದ್ದ ಆಕೆ ಅಲ್ಲಿನ ಕೇರಳ ಮೂಲದ ಪ್ರಾಧ್ಯಾಯಪಕರನ್ನು ಭೇಟಿ ಮಾಡಲು ಹೋಗಿದ್ದು, ಈ ವೇಳೆ ಅವರಿಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆಖಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ : ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು

ಬೋಳಿಯಾರ್ ನಿವಾಸಿಗಳಾದ ಸಿಂಧೂ ದೇವಿ ಮತ್ತು ಸುರೇಂದ್ರ ದಂಪತಿ ಪುತ್ರಿಯಾಗಿರುವ ಆಕಾಂಕ್ಷ ಪಂಜಾಬ್‌ನ ಎಲ್‌ ಪಿ ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಆರು ತಿಂಗಳ ಹಿಂದೆಯಷ್ಟೇ ಏರೋಸ್ಪೇಸ್‌ ಇಂಜಿನಿಯರ್‌ ಆಗಿ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಅಲ್ಲದೇ, ಜಪಾನ್‌ಗೆ ಉದ್ಯೋಗಕ್ಕೆ ಹೋಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಆಕೆಯ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ.

ಅತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವೇ?

ಅತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಆಕಾಂಕ್ಷಾ ಪಂಜಾಬ್ ನ ಫಗ್ವಾರದಲ್ಲಿರುವ ಲವ್ಲಿ ಪ್ರೊಫೆಸನಲ್ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ ಎಂಬಾತನನ್ನು ಪ್ರೀತಿಸುತ್ತಿದ್ದರೆನ್ನಲಾಗಿದೆ. ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆ. ಪಂಜಾಬ್ ತೆರಳಿದ್ದ ಆಕಾಂಕ್ಷಾ ಅವರು ಮ್ಯಾಥ್ಯೂ ಮನೆಗೆ ಹೋಗಿ ಜಗಳವಾಡಿದ್ದು, ಬಳಿಕ ವಿಶ್ವವಿದ್ಯಾನಿಲಯದಲ್ಲೂ ಆತನ ಜೊತೆ ಜಗಳವಾಡಿದ್ದಾರೆ. ಬಳಿಕ ಆತನ ಕಚೇರಿಯಿಂದ ಹೊರಬಂದು ಅದೇ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಆಕಾಂಕ್ಷಾರಿಗೆ ಪ್ರೊಫೆಸರ್ ಕಿರುಕುಳ ನೀಡುತ್ತಿದ್ದ ಎಂಬ ಆರೋಪವೂ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿಗಳು ಮುಂದಿನ ತನಿಖೆಯಿಂದ ತಿಳಿದು ಬರಬೇಕಾಗಿದೆ.

 

Continue Reading

BELTHANGADY

ಬೆಳ್ತಂಗಡಿ : ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು

Published

on

ಬೆಳ್ತಂಗಡಿ: ಏರೋ ಸ್ಪೇಸ್ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದ ಬೆಳ್ತಂಗಡಿಯ ಯುವತಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್‌ನಲ್ಲಿ ಮೇ.17 ರಂದು ನಡೆದಿದೆ.

ಅಕಾಂಕ್ಷ ಎಸ್‌.ಎನ್‌ (22) ನಿಗೂಢವಾಗಿ ಸಾವನ್ನಪ್ಪಿದ ಯುವತಿ. ಇವರು ಸಿಂಧೂ ದೇವಿ ಮತ್ತು ಸುರೇಂದ್ರ ದಂಪತಿಗಳ ಪುತ್ರಿಯಾಗಿದ್ದು, ಪಂಜಾಬ್‌ನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಆರು ತಿಂಗಳ ಹಿಂದೆಯಷ್ಟೇ ಏರೋಸ್ಪೇಸ್‌ ಇಂಜಿನಿಯರ್‌ ಆಗಿ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಇದನ್ನೂ ಓದಿ: ಸೈಂಟ್‌ ಮೇರಿಸ್‌ ದ್ವೀಪಕ್ಕೆ ಇಂದಿನಿಂದ ಪ್ರವೇಶ ನಿರ್ಬಂಧ

ಅಲ್ಲದೇ ಜಪಾನ್‌ಗೆ ಉದ್ಯೋಗಕ್ಕೆ ಹೋಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪಂಜಾಬ್‌ ಎಲ್‌.ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್‌ ಪಡೆಯಲು ತೆರಳಿದ್ದರು. ಈ ಕುರಿತು ತನ್ನ ಮನೆಯವರಿಗೆ ಕರೆ ಮಾಡಿ ಹೇಳಿದ್ದರು ಎಂದು ತಿಳಿದು ಬಂದಿದೆ. ಆದರೆ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ

ಪಂಜಾಬ್‌ನ ಜಲಂದರ್‌ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೇ 17 ರ ರಾತ್ರಿಯೇ ಮನೆ ಮಂದಿ ಪಂಜಾಬ್‌ಗೆ ತೆರಳಿದ್ದಾರೆ. ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ತಂದೆ ಆರೋಪ ಮಾಡುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page