Connect with us

DAKSHINA KANNADA

ಪುತ್ತೂರು: ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಶಿಕ್ಷಕ ದಂಪತಿ ಮೇಲೆ ದೌರ್ಜನ್ಯ ಆರೋಪ

Published

on

ಪುತ್ತೂರು: ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ  ಮೇಲೆ ದೌರ್ಜನ್ಯ ಎಸಗಿರುವ ಹೇಯ ಕೃತ್ಯದ ಆರೋಪ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.


ಕಡಬ ತಾಲೂಕಿನ ಕಾಣಿಯೂರಿನ ನಿವಾಸಿಗಳಾದ ಶಿವರಾಮ ಗೌಡ ಮತ್ತು ಬೇಬಿ ದೌರ್ಜನ್ಯಕ್ಕೊಳಗಾದ ಶಿಕ್ಷಕರಾಗಿದ್ದಾರೆ. ಶಿಕ್ಷಕ ದಂಪತಿಗಳೂ ತನ್ನ ಮನೆಯ ಸುರಕ್ಷತೆಗಾಗಿ ವರ್ಷಗಳ ಹಿಂದೆ ಸಿಸಿ ಕ್ಯಾಮಾರ ಅಳವಡಿಸಿದ್ದರು.

ದಂಪತಿ ವಾಸಿಸುವ ಭಾಗದಲ್ಲಿ ಅಕ್ರಮ‌ಮರ, ಮರಳು ಸಾಗಾಟ ದಂಧೆ ಹೆಚ್ಚಾಗಿ ನಡೆಯುತ್ತಿದ್ದ ಹಿನ್ನೆಲೆ ದಂಧೆಕೋರರು ಕ್ಯಾಮಾರ ತೆಗೆಯುವಂತೆ ಒತ್ತಡವನ್ನು ಹಾಕಿದ್ದಾರೆ.

ಆದರೆ ಕ್ಯಾಮರಾ ತೆಗೆಯದ ಕೋಪಕ್ಕೆ ಇದೀಗ ದಂಪತಿಗಳ ಮನೆಗೆ ನುಗ್ಗಿ ಹಲ್ಲೆಯನ್ನ ನಡೆಸಿದ್ದಾರೆ.

ಸಿಸಿ ಕ್ಯಾಮರಾದಿಂದ ಅಕ್ರಮ ಬಯಲಾಗುವ ಕಾರಣಕ್ಕಾಗಿ ದಂಧೆಕೋರರು ಈ ಕೃತ್ಯವನ್ನು ಮಾಡಿದ್ದಾರೆ. ಇನ್ನೂ ಮರ ಕಡಿದ ಬಗ್ಗೆ ದೂರು ನೀಡಲು ಹೋದಂತಹ ಸಂದರ್ಭಲ್ಲೂ ಅರಣ್ಯ ಇಲಾಖೆ,

ಪೋಲೀಸ್ ಇಲಾಖೆಯಿಂದಲೂ ಅಸಹಕಾರ ದೊರೆತಿರುವ ಬಗ್ಗೆ ಶಿಕ್ಷಕ ದಂಪತಿಗಳು ಮಾಧ್ಯಮದ ಮುಂದೆ ಹೇಳಿದ್ದು, ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದಾರೆ.

DAKSHINA KANNADA

ತಲಪಾಡಿ: ಟ್ಯಾಂಕರ್ ಗೆ ಗುದ್ದಿದ ಕಾರು, ತಪಾಸಣೆ ವೇಳೆ ಕಾರಿನಲ್ಲಿ ಸಿಕ್ತು ಲಕ್ಷಾಂತರ ಮೌಲ್ಯದ ಡ್ರಗ್ಸ್..!

Published

on

ಉಳ್ಳಾಲ: ಕಾರೊಂದು ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದು ಕಾರಿನೊಳಗೆ ಲಕ್ಷಾಂತರ ರೂ. ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ತಲಪಾಡಿಯಲ್ಲಿ ಇಂದು ನಡೆದಿದೆ.

ಮಂಗಳೂರಿನಿಂದ‌ ಉಪ್ಪಳದ ಕಡೆಗೆ ಬರುತ್ತಿದ್ದ ಕಾರು ತಲಪಾಡಿಯ ಆರ್ ಟಿಓ ಚೆಕ್ ಪೋಸ್ಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ  ಆದಮ್‌ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಪೊಲೀಸರು ತನಿಖೆಗೆ ಕಾರನ್ನು ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಸುಮಾರು 78 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಕಾರು ಚಾಲಕ ಸಿದ್ಧೀಕ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಸಿದ್ಧೀಕ್ ಮತ್ತು ಆದಮ್ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

 

Continue Reading

DAKSHINA KANNADA

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ; ಪ್ರಕರಣ ದಾಖಲು

Published

on

ಬಂಟ್ವಾಳ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಳಿತಪಡ್ಪು ನಿವಾಸಿ ಇದಿನಬ್ಬ ಎಂಬವರ ಮಗ ಮಹಮ್ಮದ್ ರಾಝಿಮ್ (23) ಎಂಬಾತ ಕಾಣೆಯಾಗಿರುವ ಯುವಕನಾಗಿದ್ದಾನೆ.

ರಾಝಿಮ್ ಕಾರ್ಕಳದ ಕಂಪೆನಿಯ ಲಾರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಡಿಸೆಂಬರ್ 5 ರಂದು ಮನೆಯಿಂದ ಕಾರ್ಕಳಕ್ಕೆ ಕೆಲಸಕ್ಕೆಂದು ಹೋದ ಈತ ಸಂಜೆ ಮನೆಗೆ ಬಾರದೆ ಕಾಣೆಯಾಗಿದ್ದಾನೆ.

ಇದನ್ನೂ ಓದಿ: ಸುರತ್ಕಲ್‌: ಒಂಟಿ ವೃದ್ಧೆ ಮನೆಯಲ್ಲಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಈತನ ಸುಳಿವಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Continue Reading

BANTWAL

ಬಂಟ್ವಾಳ: ರಸ್ತೆ ಅಗೆದು ಜಲ್ಲಿ ಹಾಕಿ ಹೋದವರು ನಾಪತ್ತೆ; ಅಣ್ಣಳಿಕೆಯಿಂದ ಕೊಯಿಲದವರೆಗಿನ ರಸ್ತೆಗಿಲ್ಲ ಡಾಂಬರ್ ಭಾಗ್ಯ

Published

on

ಬಂಟ್ವಾಳ: ರಸ್ತೆಯನ್ನು ಅಗೆದು ಜಲ್ಲಿ ಹಾಕಿ ಹೋದವರು ಪತ್ತೆಯಿಲ್ಲ, ಡಾಂಬರ್‌ಗಾಗಿ ಕಾದು ಕಾದು ಸುಸ್ತಾದ ರಸ್ತೆಯ ಜಲ್ಲಿಕಲ್ಲುಗಳು ವಾಹನ ಮೇಲೆ ದಾಳಿ ಮಾಡುತ್ತಿದ್ದು, ವಾಹನ ಸವಾರರಿಗೆ ಅಪಾಯದ ಕರೆಗಂಟೆ ಬಾರಿಸಿದೆ.


ಇದು ಬಂಟ್ವಾಳ ಮೂಡಬಿದಿರೆ ರಸ್ತೆಯ ಅಣ್ಣಳಿಕೆಯಿಂದ ಕೊಯಿಲವರೆಗಿನ ಒಂದುಕಾಲು ಕಿ.ಮೀ‌.ರಸ್ತೆಯ ದುರಾವಸ್ಥೆ! ಹೇಳುವವರು ಇಲ್ಲ, ಕೇಳುವರು ಇಲ್ಲ… ಅನ್ನುವ ಸ್ಥಿತಿ ಎದುರಾಗಿದ್ದು, ಕಳೆದ ಒಂದು ವರ್ಷಗಳಿಂದ ಇಲ್ಲಿನ ಜನರು ರಸ್ತೆಯಲ್ಲಿ ಓಡಾಟ ಮಾಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.

ಇದು ಝಿಗ್‌ ಜ್ಯಾಗ್‌ ರಸ್ತೆಯಾಗಿದ್ದು ನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಓಡಾಟ ನಡೆಸುತ್ತಿವೆ. ಜನರು ಸಾವಿನ ಭಯದಿಂದ ಸಂಚರಿಸುವಂತಾಗಿದೆ. ಪಿಡಬ್ಲ್ಯೂ ಇಲಾಖೆಗೆ ಸೇರಿದ ರಸ್ತೆ ಇದಾಗಿದ್ದು, ರಸ್ತೆಯ ಡಾಂಬರೀಕರಣಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಯೂ ಆರಂಭವಾಗಿದೆ ಆದರೆ ಕಾಮಗಾರಿ ಇನ್ನೂ ಮುಗಿಯುತ್ತಿಲ್ಲ.

ಇದನ್ನೂ ಓದಿ: ಸುರತ್ಕಲ್‌: ಒಂಟಿ ವೃದ್ಧೆ ಮನೆಯಲ್ಲಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಡಾಂಬರು ಹಾಕಲೆಂದು‌ ರಸ್ತೆಯನ್ನು ಅಗೆದು ತಿಂಗಳುಗಳು ಕಳೆದಿವೆಯಾದರೂ ಇನ್ನೂ ಡಾಂಬರು ಹಾಕಿಲ್ಲ. ಇದ್ದ ರಸ್ತೆಯನ್ನು ಅಗೆದು ಜಲ್ಲಿ ಹಾಕಿ ತಿಂಗಳಾಗುತ್ತಾ ಬಂದಿದ್ದು, ಇನ್ನೂ ಧೂಳು ಮಿಶ್ರಿತ ಜಲ್ಲಿ ಕಲ್ಲು ಮೇಲೆ ಡ್ಯಾನ್ಸ್ ಮಾಡುತ್ತಾ ಕುಂಟುತ್ತಾ, ಉರುಳುತ್ತಾ ಸಾಗಬೇಕಾಗಿರುವ ಸ್ಥಿತಿ ಉಂಟಾಗಿದೆ ಎಂಬ ಆರೋಪ ಇಲ್ಲಿನ‌ ಜನರದ್ದಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page