Connect with us

DAKSHINA KANNADA

ವಿಶ್ವದಲ್ಲಿ ಹಿಂದೂ ಧರ್ಮ ಬಿಟ್ಟರೆ ಬೇರೆಲ್ಲವೂ ಮತಗಳು: ಪ್ರಶಿಕ್ಷಣ ವರ್ಗದಲ್ಲಿ  ಗಣೇಶ್ ಕಾರ್ಣಿಕ್ ಹೇಳಿಕೆ 

Published

on

 ವಿಶ್ವದಲ್ಲಿ ಹಿಂದೂ ಧರ್ಮ ಬಿಟ್ಟರೆ ಬೇರೆಲ್ಲವೂ ಮತಗಳು ಪ್ರಶಿಕ್ಷಣ ವರ್ಗದಲ್ಲಿ  ಗಣೇಶ್ ಕಾರ್ಣಿಕ್ ಹೇಳಿಕೆ..!

ಮಂಗಳೂರು:ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ಕಾಪಿಕಾಡು ನಿರ್ವಿಕಲ್ಪ ಸಭಾಂಗಣದಲ್ಲಿ  ಹಮ್ಮಿಕೊಂಡ ಬಿಜೆಪಿ ಮಂಗಳೂರು ಮಂಡಲ ಪ್ರಶಿಕ್ಷಣ ವರ್ಗ ವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವದಲ್ಲಿ ಹಿಂದೂ ಧರ್ಮ ಬಿಟ್ಟರೆ ಬೇರೆಲ್ಲವೂ ಮತಗಳು, ಅವರವರ ಮಾತಿಗೆ ಸಂಬಂಧಿಸಿದ ಮತಗಳಾಗಿವೆ. ಸೆಕ್ಯುಲರಿಸಂ ಅನ್ನುವ ಮೂಲ ಅರ್ಥ ಬದಲಾವಣೆಯಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು.

ಸಂವಿಧಾನ ಕರಡು ರಚನೆಯಾದ ಬಳಿಕ ಪಾರ್ಲಿಮೆಂಟಿನಲ್ಲಿ ಡಿಬೆಟ್ ನಡೆಸಲು ಸದನದಲ್ಲಿ ಒಪ್ಪಿಸಿದ ದಿನ. ಸಂವಿಧಾನ ಧಿಕ್ಕರಿಸಿ ಬಾಂಬ್ ದಾಳಿ ನಡೆದ ದಿನದಂದು ದೇಶ ನಿರ್ಮಾಣದ ಚಿಂತನೆಗೆ ಪ್ರಶಿಕ್ಷಣ ವರ್ಗವನ್ನು ನಡೆಸಲಾಗುತ್ತಿದೆ.

ರಾಷ್ಟ್ರೀಯ ಸಮಗ್ರತೆ, ಗಾಂಧಿ ಪ್ರಣೀತ ಸಮಾಜವಾದ, ಸರ್ವಪಂಥ ಸಮಭಾವ, ಪ್ರಜಾಪ್ರಭುತ್ವದಲ್ಲಿ ನಂಬಿಕೆ, ಮೌಲ್ಯಾಧಾರಿತ ರಾಜಕಾರಣ ಸಿದ್ಧಾಂತಗಳ ಮೇಲೆ ಬಿಜೆಪಿ ಕಾರ್ಯಕರ್ತರು ಮುನ್ನಡೆಯಬೇಕಿದೆ.ಬಿಜೆಪಿ ಭಿನ್ನ ಪಕ್ಷವಾಗಿ ಹೊರಹೊಮ್ಮುವ ಮೂಲಕ ಭಿನ್ನ ಆಡಳಿತವನ್ನು ದೇಶಕ್ಕೆ ನೀಡಿದೆ. ಉಳ್ಳಾಲದಂತಹ ಹಲವು  ಕಡೆಗಳಲ್ಲಿ ಪ್ರತ್ಯೇಕದವಾದ ಕೂಗಿದೆ.  ಭಾರತೀಯ ರಾಷ್ಟ್ರೀಯ ವಿಚಾರಧಾರೆಯನ್ನು ಬಿಂಬಿಸುವ ನೂತನ ಶಿಕ್ಷಣ ನೀತಿ ಕೇಂದ್ರ ಶೀಘ್ರದಲ್ಲೇ ಜಾರಿಗೊಳಿಸಲಿದೆ.

ರಾಷ್ಟ್ರೀಯ ಸಮಗ್ರತೆ, ಆತ್ಮವಿಶ್ವಾಸ,  ಉದ್ಯೋಗ ಸೃಷ್ಟಿ ಮಾಡುವ ಯೋಜನೆಗಳು, ಸ್ವಚ್ಛ ಭಾರತದ ಕಲ್ಪನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ  ಬಿಜೆಪಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು  ಉಪಸ್ಥಿತರಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಎಜೆ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ಸು

Published

on

ಮಂಗಳೂರು: ಎಂಡೋಮೆಟ್ರಿಯೊಸಿಸ್ ಜಾಗೃತಿ ಮಾಸದ ಅಂಗವಾಗಿ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಂಡೋಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮಹಿಳೆಯರಿಗೆ ಅಪರೂಪದ ಮಿನಿಮಲ್ ಇನ್ವೇಸಿವ್ (ಲ್ಯಾಪರೋಸ್ಕೋಪಿಕ್) ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಎಂಡೋಮೆಟ್ರಿಯೊಸಿಸ್ ಮತ್ತು ಅಡೆನೊಮಯೋಸಿಸ್ ಮಹಿಳೆಯರಲ್ಲಿ ಸಾಮಾನ್ಯವಾಗಿದ್ದರೂ ಹಲವು ಬಾರಿ ಸರಿಯಾದ ಸಮಯದಲ್ಲಿ ಗುರುತಿಸಲಾಗದೆ ತೀವ್ರ ಹೊಟ್ಟೆ ಕೆಳಭಾಗದ ನೋವು, ನೋವಿನೊಂದಿಗೆ ಮುಟ್ಟು ಮತ್ತು ಸಂತಾನೋತ್ಪತ್ತಿ ಸಮಸ್ಯೆಗಳಿಗೆ ಕಾರಣವಾಗುತ್ತದೆ

36 ವರ್ಷದ ಮಹಿಳೆ ಸುಮಾರು 10 ವರ್ಷಗಳಿಂದ ತೀವ್ರ ಹೊಟ್ಟೆ ನೋವು, ಮುಟ್ಟಿನ ಸಮಯದಲ್ಲಿ  ರಕ್ತಸ್ರಾವ ಮತ್ತು ತೀವ್ರ ಮಾಸಿಕ ನೋವಿನಿಂದ ಬಳಲುತ್ತಿದ್ದರು. ಪರೀಕ್ಷೆಯಲ್ಲಿ ಅವರಿಗೆ ಐಲಿಯೋಕೋಲಿಕ್ ಭಾಗವನ್ನು ಒಳಗೊಂಡ ಸ್ಟೇಜ್ IV ಎಂಡೋಮೆಟ್ರಿಯೊಸಿಸ್ ಇರುವುದಾಗಿ ಪತ್ತೆಯಾಯಿತು. ಅವರಿಗೆ ಲ್ಯಾಪರೋಸ್ಕೋಪಿಕ್ ಎಂಡೋಮೆಟ್ರಿಯೊಸಿಸ್ ಎಕ್ಸಿಷನ್ ಶಸ್ತ್ರಚಿಕಿತ್ಸೆ ಹಾಗೂ ಐಲಿಯೋಕೋಲಿಕ್ ನೊಡ್ಯೂಲ್ ತೆಗೆದುಹಾಕುವ ಸಂಕೀರ್ಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಯಿತು.

ಮತ್ತೊಂದು ಪ್ರಕರಣದಲ್ಲಿ, 34 ವರ್ಷದ ಮಹಿಳೆಗೆ ಡಿಫ್ಯೂಸ್ ಪೋಸ್ಟೀರಿಯರ್ ವಾಲ್ ಅಡೆನೊಮಯೋಸಿಸ್ ಜೊತೆಗೆ ಸ್ಟೇಜ್ IV ಎಂಡೋಮೆಟ್ರಿಯೊಸಿಸ್ ಪತ್ತೆಯಾಯಿತು. ಅವರಿಗೆ ಲ್ಯಾಪರೋಸ್ಕೋಪಿಕ್ ಎಂಡೋಮೆಟ್ರಿಯೊಸಿಸ್ ಎಕ್ಸಿಷನ್ ಶಸ್ತ್ರಚಿಕಿತ್ಸೆ ನಡೆಸಿ ನಂತರ ಮೈಕ್ರೋವೇವ್ ಅಬ್ಲೇಷನ್ ಮೂಲಕ ಚಿಕಿತ್ಸೆ ನೀಡಲಾಯಿತು. ಇದರಿಂದ ನೋವು ಕಡಿಮೆಯಾಗುವ ಜೊತೆಗೆ ಭವಿಷ್ಯದಲ್ಲಿ ಗರ್ಭಧಾರಣೆಯ ಅವಕಾಶವನ್ನು ಉಳಿಸಿಕೊಳ್ಳಲು ಸಹಾಯವಾಗುತ್ತದೆ

ಈ ಶಸ್ತ್ರಚಿಕಿತ್ಸಾ ತಂಡದ ನೇತೃತ್ವವನ್ನು ಡಾ. ಅರ್ಥಿಕಾ ಶೆಟ್ಟಿ ವಹಿಸಿದ್ದರು. ತಂಡದಲ್ಲಿ ಡಾ. ಟಿ.ವಿ. ತಂತ್ರಿ (ಅನಸ್ಥೀಷಿಯಾ), ಡಾ. ಭರತ್ ಶೆಟ್ಟಿ (ರೇಡಿಯಾಲಜಿ) ಹಾಗೂ ಡಾ. ರೋಹನ್ ಶೆಟ್ಟಿ (ಆಂತ್ರ ಶಸ್ತ್ರಚಿಕಿತ್ಸೆ) ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅರ್ಥಿಕಾ ಶೆಟ್ಟಿ, ಎಂಡೋಮೆಟ್ರಿಯೊಸಿಸ್ ಲಕ್ಷಣಗಳು ಇತರ ಸಾಮಾನ್ಯ ಸಮಸ್ಯೆಗಳೊಂದಿಗೆ ಹೊಂದಿಕೆಯಾಗುವುದರಿಂದ ಹಲವಾರು ಮಹಿಳೆಯರಿಗೆ ಸರಿಯಾದ ನಿರ್ಣಯ ತಡವಾಗುತ್ತದೆ ಎಂದರು. ಎಕ್ಸಿಷನ್ ಶಸ್ತ್ರಚಿಕಿತ್ಸೆ ಎಂಡೋಮೆಟ್ರಿಯೊಸಿಸ್‌ಗೆ ಅತ್ಯುತ್ತಮ ಚಿಕಿತ್ಸೆ ವಿಧಾನವಾಗಿದ್ದು, ಸಮಯೋಚಿತ ನಿರ್ಣಯ ಮತ್ತು ಮಿನಿಮಲ್ ಇನ್ವೇಸಿವ್ ಶಸ್ತ್ರಚಿಕಿತ್ಸೆಯಿಂದ ನೋವು ಕಡಿಮೆಯಾಗುವುದರ ಜೊತೆಗೆ ಸಂತಾನೋತ್ಪತ್ತಿ ಸಾಧ್ಯತೆಗಳನ್ನು ಹೆಚ್ಚಿಸಬಹುದು ಎಂದರು.

ಇದನ್ನೂ ಓದಿ : ತನ್ನ ಉದ್ಯೋಗಿಗಳಿಗೆ ‘ಮನೆಯಿಂದಲೇ ಊಟದ ಬಾಕ್ಸ್’ ತರುವಂತೆ ಸೂಚಿಸಿದ ಇನ್ಫೋಸಿಸ್!

ಸಂಕೀರ್ಣ ಸ್ತ್ರೀರೋಗ ಸಮಸ್ಯೆಗಳಿಗೆ ಸಂತಾನೋತ್ಪತ್ತಿ ಸಾಮರ್ಥ್ಯ ಉಳಿಸುವ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುವಲ್ಲಿ ಎಜೆ ಆಸ್ಪತ್ರೆ ಮುಂದುವರಿದಿದೆ ಎಂದು ಆಸ್ಪತ್ರೆ ತಿಳಿಸಿದೆ.

 

Continue Reading

DAKSHINA KANNADA

ಉಳ್ಳಾಲ : ಗಾಂ*ಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರ ಬಂಧನ, ಓರ್ವ ಪರಾರಿ

Published

on

ಉಳ್ಳಾಲ : ಗಾಂ*ಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 51,500 ರೂಪಾಯಿ ಬೆಲೆ ಬಾಳುವ ಒಂದು ಕೆ.ಜಿ. 110 ಗ್ರಾಂ ತೂಕದ ಗಾಂಜಾ ಮತ್ತು ನಗದು 520  ರೂಪಾಯಿ, ಎರಡು ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡಿನ  ಮಂಜೇಶ್ವರ ತಾಲೂಕಿನ ಉಪ್ಪಳದ  ಶೇಕ್ ಅರ್ಬಾಜ್ ಮತ್ತು ರಶೀದ್ ಆಲ್ವಿನ್ ಬಂಧಿತ ಅರೋಪಿಗಳು. ಇನ್ನೋರ್ವ ಆರೋಪಿ ಮಂಜೇಶ್ವರದ ಅಲ್ತಾಫ್ ಪರಾರಿಯಾಗಿದ್ದಾನೆ. ಗುರುವಾರ(ಮಾ.12) ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗ್ರೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಮೂವರು ವ್ಯಕ್ತಿಗಳು ಗಾಂ*ಜಾವನ್ನು ತಂದು ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು  ಸಿಬ್ಬಂದಿಯನ್ನು ಒಳಗೊಂಡ  ತಂಡವು ದಾ*ಳಿ ನಡೆಸಿದೆ.

ಈ ವೇಳೆ  ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಗಾಂ*ಜಾ ಮತ್ತು ಇತರ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಕಳೆದ ಎಂಟು ವರ್ಷಗಳಿಂದ ಮೌನವಾಗಿದ್ದೆ…ಇನ್ನು ಸಾಧ್ಯವಿಲ್ಲ…ಬ್ರೇಕಪ್ ಆಡಿಯೋ ವೈರಲ್ ಬಗ್ಗೆ ರಶ್ಮಿಕಾ ಮಂದಣ್ಣ ಪೋಸ್ಟ್!

ಈ ಸಂದರ್ಭದಲ್ಲಿ ಆರೋಪಿ ಅಲ್ತಾಫ್ ಎಂಬಾತ ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Continue Reading

DAKSHINA KANNADA

ಗೇರು ಸಂಶೋಧನಾ ನಿರ್ದೇಶನಾಲಯದಿಂದ ರಾಧಾಕೃಷ್ಣ ಇಟ್ಟಿಗುಂಡಿರಿಗೆ ಸನ್ಮಾನ

Published

on

ಪುತ್ತೂರು : ಭಾ.ಕೃ.ಸಂ.ಪ – ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು  ಕೃಷಿಕ ರಾಧಾಕೃಷ್ಣ ಇಟ್ಟಿಗುಂಡಿಯವರ ಸಾಧನೆ ಗುರುತಿಸಿ ಸನ್ಮಾನಿಸಿದೆ.

ಗೇರು ಬೆಳೆಯಲ್ಲಿ ಮೌಲ್ಯವರ್ಧಿತ ಉತ್ಪನ್ನಗಳ ಕೊಡುಗೆಗಾಗಿ ಮತ್ತು ಅವುಗಳ ವಿಸ್ತರಣೆಯಲ್ಲಿ  ರಾಧಾಕೃಷ್ಣ ಇಟ್ಟಿಗುಂಡಿ ಗಮನಾರ್ಹ ಪಾತ್ರವಹಿಸಿದ್ದಾರೆ. ಅವರ ಕೊಡುಗೆಯನ್ನು ಗುರುತಿಸಿ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯವು ಉತ್ತಮ ಗೇರು ಉದ್ಯಮಿ ಎಂಬುದಾಗಿ ಸನ್ಮಾನಿಸಿದೆ.

ಇದನ್ನೂ ಓದಿ : 50 ಅಡಿ ಎತ್ತರದಿಂದ ಬಿದ್ದ ಲಾರಿ; ಮನೆ ಜಸ್ಟ್ ಮಿಸ್…ತಪ್ಪಿದ ಭಾರೀ ಅನಾಹುತ!

ಇನ್ನೂ ಹೆಚ್ಚಿನ ಸಾಧನೆಗೈದು ಗೇರು ಬೆಳೆಯ ಅಭಿವೃದ್ಧಿಗೆ ಕಾರಣರಾಗಲಿ ಎಂಬ ಹಾರೈಕೆಯೊಂದಿಗೆ  ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page