Connect with us

DAKSHINA KANNADA

ನಾಗರಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಕಾರ್ಪೊರೇಟರ್ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಡಿವೈಎಫ್ಐ ಒತ್ತಾಯ

Published

on

ಉರ್ವಸ್ಟೋರ್ ಸುಂಕದಕಟ್ಟೆಯ ನಾಗರಿಕರು ಕುಡಿಯುವ ನೀರಿನ ಸಮಸ್ಯೆಗೆ ಸ್ಥಳೀಯ ಕಾರ್ಪೊರೇಟರ್ ತನ್ನ ಜವಾಬ್ದಾರಿತನಕ್ಕೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು ಡಿವೈಎಫ್ಐ ನೇತೃತ್ವದಲ್ಲಿ ಮನಪಾ ಮೇಯರ್ ಆಯುಕ್ತರಿಗೆ ಮನವಿ ಸಲ್ಲಿಸಿದರು. 

ಮಂಗಳೂರು: ಉರ್ವಸ್ಟೋರ್ ಸುಂಕದಕಟ್ಟೆಯ ನಾಗರಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಧೀರ್ಘ ಕಾಲದಿಂದ ಅನುಭವಿಸುತ್ತಿದ್ದು, ಅದನ್ನು ಪರಿಹರಿಸಬೇಕಾದ ಸ್ಥಳೀಯ ಕಾರ್ಪೊರೇಟರ್ ತನ್ನ ಜವಾಬ್ದಾರಿಯನ್ನು ಮರೆತು ನಾಗರಿಕರ ಮೇಲೆಯೇ ಎಗರಾಡಿ ಅಸಂಬದ್ಧ ಮಾತುಗಳನ್ನಾಡಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು ಡಿವೈಎಫ್ಐ ನೇತೃತ್ವದಲ್ಲಿ ಮನಪಾ ಮೇಯರ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದಲ್ಲಿ ತಲೆದೋರಿದ ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕೆ ಅಲ್ಪಸ್ವಲ್ಪ ಸುಧಾರಿಸಿದ್ದು, ಅದನ್ನು ಶಾಶ್ವತವಾಗಿ ಪರಿಹರಿಸಬೇಕು ಹಾಗೂ ಸ್ಥಳೀಯ ನಾಗರಿಕರು ಸಮಸ್ಯೆಯಲ್ಲಿದ್ದಾಗ ಅತ್ತ ಕಡೆ ಮುಖ ಮಾಡದೆ, ಸಮಸ್ಯೆ ಅಲ್ಪಸ್ವಲ್ಪ ಸುಧಾರಣೆ ಕಂಡಾಗ ದಿಢೀರ್ ಭೇಟಿ ನೀಡಿ ಅಸಂಬದ್ಧ ಮಾತುಗಳನ್ನಾಡಿದ ಸ್ಥಳೀಯ ಬಿಜೆಪಿ ಕಾರ್ಪೊರೇಟರ್ ರವರು ಮೇಯರ್, ಆಯುಕ್ತರು, ಶಾಸಕರಿಗೆ ಮನವಿ ಮಾಡಿದ್ದೇ ದೊಡ್ಡ ಅಪರಾಧ ಎನ್ನುವ ರೀತಿಯಲ್ಲಿ ಪ್ರತಿ ಮನೆಗೆ ಹೋಗಿ ನಿಮ್ಮ ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ, ದಲಿತರಿಗೆ ನೀಡಿದ ಎಲ್ಲಾ ಸವಲತ್ತುಗಳನ್ನು ನಿಲ್ಲಿಸುವುದಾಗಿ ಬಹಿರಂಗ ಬೆದರಿಕೆ ಹಾಕಿರುವುದು ದಲಿತ ವಿರೋಧಿ ಹಾಗೂ ಸಂವಿಧಾನ ವಿರೋಧಿ ಹೇಳಿಕೆಯಾಗಿದೆ.

ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ಐ ಒತ್ತಾಯಿಸಿದೆ.

ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾ ನಾಯಕರಾದ ಸಂತೋಷ್ ಬಜಾಲ್, ಸಿಪಿಐಎಮ್ ಜಿಲ್ಲಾ ಮುಖಂಡರಾದ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ನಾಯಕರಾದ ಪ್ರಶಾಂತ್ ಎಂ ಬಿ, ಪ್ರದೀಪ್, ಸುಖೇಶ್, ಪ್ರಶಾಂತ್ ಆಚಾರ್ಯ, ಸ್ಥಳೀಯ ಹಿರಿಯ ನಾಗರಿಕರಾದ ಪದ್ಮನಾಭ ಕುಲಾಲ್, ತಮ್ಮಣ್ಣ ಮಬೆನ್, ಗಂಗಾಧರ್, ರಾಮ ಪೂಜಾರಿ, ಕುಶಲ, ದಿವ್ಯ, ಶಿಲ್ಪಾ, ಸುರೇಖಾ, ವಂದನಾ, ನಾಗವೇಣಿ, ಸರೋಜಾ, ನೇಬಿಸಾ ಬಾನು ಸೂಕ್ಷ್ಮ ಮುಂತಾದವರು ಉಪಸ್ಥಿತರಿದ್ದರು.

DAKSHINA KANNADA

ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

Published

on

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂ*ಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾ*ವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.

ಇದನ್ನೂ ಓದಿ: WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂ*ಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

Continue Reading

DAKSHINA KANNADA

WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

Published

on

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ : 

ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದ ಸುಹಾಸ್ ಶೆಟ್ಟಿ ಹತ್ಯೆಯ ವೀಡಿಯೋ, ಸಿಸಿ ಕ್ಯಾಮೆರಾದ ವೀಡಿಯೋ ಈಗಾಗಲೇ ವೈರಲ್ ಆಗಿವೆ. ಇದೀಗ ಮತ್ತೊಂದು ವೀಡಿಯೋ ವೈರಲ್ ಆಗಿದೆ.

ಸಿನಿಮೀಯ ರೀತಿಯಲ್ಲಿ ಕಾರ್ ಚೇಸಿಂಗ್ ಮಾಡಿ ಭೀಕರವಾಗಿ ಸುಹಾಸ್ ಶೆಟ್ಟಿ ಹ*ತ್ಯೆ ಮಾಡಲಾಗಿದೆ. ಕೊ*ಲೆ ಆರೋಪಿ ಸಫ್ವಾನ್ ಚಲಾಯಿಸುತ್ತಿದ್ದ ಮೀನು ಸಾಗಾಟದ ಪಿಕಪ್ ವಾಹನ ಕಾರನ್ನು ಚೇಸ್ ಮಾಡಿ ಡಿ*ಕ್ಕಿ ಹೊಡೆಯುವ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಮೀನು ಸಾಗಾಟದ ವಾಹನ ಓವರ್ ಟೇಕ್ ಮಾಡುತ್ತಿದ್ದಂತೆಯೇ ಅಲ್ಲಿ ಜನ ಸೇರಿದ್ದರು. ವಾಹನ ಡಿ*ಕ್ಕಿ ಹೊಡೆದು ಅಟ್ಟಾಡಿಸಿಕೊಂಡು ಹೋಗುವಾಗಲೂ ಜನರು ಮೂಕ ಪ್ರೇಕ್ಷಕರಂತೆ ನಿಂತಿದ್ದರು.

ನಾಳೆ(ಮೇ.25) ಬಜಪೆ ಚಲೋ :

ಮೇ 1 ರಂದು ಸಂಜೆ 7 ಗಂಟೆಗೆ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಪಕ್ಕಾ ಪ್ರೀ ಪ್ಲ್ಯಾನ್ಡ್ ಮರ್ಡರ್ ಎಂದು ಹಿಂದೂ ಸಂಘಟನೆಗಳು ಹೇಳಿದ್ದು, ಈ ಕೃ*ತ್ಯದಲ್ಲಿ ಮೂವತ್ತಕ್ಕೂ ಅಧಿಕ ಜನ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕಾಂಕ್ರೀಟ್‌ ಮಿಕ್ಸಿಂಗ್‌ ವಾಹನದಡಿಗೆ ಬಿದ್ದು ಮಹಿಳೆ ಸಾ*ವು

ಸುಹಾಸ್ ಪ್ರಕರಣವನ್ನು ಎನ್ ಐ ಎ ಗೆ ಒಪ್ಪಿಸಲು ಹಿಂದೂ ಸಂಘಟನೆಗಳ ಆಗ್ರಹಿಸುತ್ತಿದೆ. ಮತ್ತೊಂದೆಡೆ, ನಾಳೆ ಮಧ್ಯಾಹ್ನ ಮೂರು ಗಂಟೆಗೆ ಬಜಪೆ ಚಲೋ  ಹಮ್ಮಿಕೊಳ್ಳಲಾಗಿದೆ. ಬಜ್ಪೆ ಶಾರಾದ ಮಂಟಪದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದ್ದು,  ಜಿಲ್ಲೆಯಾದ್ಯಂತ ಸಾವಿರಾರು ಜನ ಸೇರುವ ನಿರೀಕ್ಷೆಯಿದೆ.

Continue Reading

DAKSHINA KANNADA

ಸಿಇಟಿ ಫಲಿತಾಂಶ ಪ್ರಕಟ: ಇಲ್ಲಿದೆ ಟಾಪ್​ ರ್ಯಾಂಕ್​ ಪಡೆದಿರುವವರ ಪಟ್ಟಿ

Published

on

ಮಂಗಳೂರು/ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ.


ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಕೆಇಎ ಕಚೇರಿಯಲ್ಲಿ ಇಂದು ಸಿಇಟಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಆ ಪೈಕಿ 3ಲಕ್ಷದ 11 ಸಾವಿರ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದರು.

ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ 98.67 ಶೇಕಡಾ ಅಂಕ ಗಳಿಸುವುದರೊಂದಿಗೆ ಭವೇಶ್ ಜಯಂತಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ 99.33 ಶೇಕಡಾ ಅಂಕದೊಂದಿಗೆ ಎರಡನೇ ರ್ಯಾಂಕ್ ಪಡೆದಿದ್ದಾರೆ. 99 ಶೇಕಡಾ ಪಡೆದು ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ್ಯಾಂಕ್ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದರು.

ಪಶು ವೈದ್ಯಕೀಯ ವಿಭಾಗದಲ್ಲಿ ಯಲಹಂಕದ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ರ್ಯಾಂಕ್, ಹೆಚ್ಎಸ್ಆರ್ ಲೇಔಟ್ ನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆತ್ರೇಯ ನ್ಯಾಷನಲ್ ಪಬ್ಲಿಕ್ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ರ್ಯಾಂಕ್ ಹಾಗೂ ಮಂಗಳೂರಿನ ವಳಚ್ಚಿಲ್ ನ ಎಕ್ಸ್ ಪರ್ಟ್ ಕಾಲೇಜಿನ ಸಫಲ್ ಶೆಟ್ಟಿ ಮೂರನೇ ರ್ಯಾಂಕ್ ಗಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ

ಇನ್ನು ಡಿ ಫಾರ್ಮ್ ವಿಭಾಗದಲ್ಲಿ ಆತ್ರೆಯಾ ವೆಂಕಟಚಲಂ ಪ್ರಥಮ ಸ್ಥಾನ, ಭವೇಶ್ ಜಯಂತಿ ದ್ವಿತೀಯ ಸ್ಥಾನ, ಹರೀಶ್ ರಾಜ್ ತೃತೀಯ ಸ್ಥಾನ ಪಡೆದಿದ್ದಾರೆ. ವೆಟರ್ನರಿ ಪ್ರಾಕ್ಟಿಕಲ್ ವಿಭಾಗದಲ್ಲಿ ರಕ್ಷಿತಾ.ವಿ.ಪಿ ಪ್ರಥಮ ರ್ಯಾಂಕ್, ನಂದನ್ ದ್ವಿತೀಯ ರ್ಯಾಂಕ್ ಹಾಗೂ ಭುವನೇಶ್ವರಿ ತೃತೀಯ ರ್ಯಾಂಕ್ ಗಳಿಸಿದ್ದಾರೆ ಎಂದು ಹೇಳಿದರು.

 

 

Continue Reading
Advertisement

Trending

Copyright © 2025 Namma Kudla News

You cannot copy content of this page