Connect with us

DAKSHINA KANNADA

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ & ಸಾಧನಾ ಸಂಭ್ರಮ-2023 ಉದ್ಘಾಟನೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ಮತ್ತು ಸಾಧನಾ ಸಂಭ್ರಮ -2023 ಇಂದು ನಗರದಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ವಹಿಸಿದ್ದರು.
ಪತ್ರಕರ್ತರು ರಾತ್ರಿ ಹಗಲು ದುಡಿಯುತ್ತಿದ್ದು, ಸರಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಸಮ್ಮೇಳನ ಉದ್ಘಾಟಿಸಿದ ಪ್ರಕಾಶ್‌ ಶೆಟ್ಟಿ ಹೇಳಿದರು.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವ ಚಿತ್ರ ಯಾನ -2’ ಕೃತಿಯನ್ನು ಸಂಸದ ನಳಿನ್‌ ಕುಮಾರ್‌ ಬಿಡುಗಡೆ ಮಾಡಿ ಮಾತನಾಡಿದರು.


ಬಿಜೈ- ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಸಾಂಬ ಸದಾಶಿವ ಅವರು ವಿತರಿಸಿದರು. ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಶಾಸಕ ಯು. ಟಿ .ಖಾದರ್ ಹಾಗೂ ಜಿಲ್ಲಾ ಸಮ್ಮೇಳನದ ಕಿಟ್ ವಿತರಣೆಯನ್ನು ಶಾಸಕ ವೇದವ್ಯಾಸ್ ಕಾಮತ್ ನೆರವೇರಿಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ ಪ್ರಸ್ತಾವನೆಗೈದರು.


ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಟ್ಲ ಪೌಂಡೇಶನ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ। ಡಾ। ಪಿ.ಎಸ್‌. ಯಡಪಡಿತ್ತಾಯ, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಗುರ್ಮೆ ಸುರೇಶ್‌ ಶೆಟ್ಟಿ, ರೋನ್ಸ್‌ ಬಂಟ್ವಾಳ್‌, ಬ್ಯಾಂಕ್ ಆಫ್‌ ಬರೋಡಾದ ಆಧಿಕಾರಿ ಗಾಯತ್ರಿ ಮುಂತಾದವರು ಉಪಸ್ಥಿತರಿದ್ದರು.


ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ‘ಕಾವೇರಿ ತೀರದ ಪಯಣ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಪತ್ರಕತರ್ರ ಸಂಘದ ಪ್ರಧಾನ ಕಾರ್ಯದ ರ್ಶಿ ಜಿತೇಂದ್ರ ಕುಂದೇಶ್ವರ, ಪ್ರೆಸ್‌ ಕ್ಲಬ್‌ ಆಧ್ಯಕ್ಷ ಅನ್ನು ಮಂಗಳೂರು, ಮಹಮ್ಮದ್‌ ಆರಿಫ್‌. ಪತ್ರಿಕಾ ಭವನ ಟ್ರಸ್ಟ್‌ ನ ಆಧ್ಯಕ್ಷ ರಾಮಕೃಷ್ಣ, ಭಾಸ್ಕರ ರೈ ಕಟ್ಟ, ರವೀಂದ್ರ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿದ್ದರು.

 

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಪ್ರಭುದೇವ

Published

on

ಕಡಬ : ಇತ್ತೀಚೆಗೆ ಕರಾವಳಿಯ ದೇಗುಲಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು (ಮಾ.15) ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಹಾಗೂ ಕುಟುಂಬ ವರ್ಗದವರ ಜೊತೆಗೂಡಿ ಆಗಮಿಸಿದ್ದ ಪ್ರಭುದೇವ ಮಹಾಭಿಷೇಕ ಪೂಜೆಯನ್ನು ನೆರವೇರಿಸಿ, ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ : “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

ಈ ಸಂದರ್ಭ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

“ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

Published

on

ಮಂಗಳೂರು: ಕರ್ನಾಟಕದ ಜಾದೂ ಕಲಾವಿದ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಗೆ ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ಪ್ರಶಸ್ತಿಯು ಭಾರತದ ಅಗ್ರಗಣ್ಯ ಜಾದೂಗಾರ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ-ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ನೀಡಿದೆ. ವಿಶಾಖಪಟ್ಟಣದ ಲೋಕಸಭಾ ಸದಸ್ಯ ಭರತ್ ಮುತ್ತುಕುಮುಲಿ ಅವರು ಕುದ್ರೋಳಿ ಗಣೇಶ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್, ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೋಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ಧಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ ಎಂದರು.

ಕುದ್ರೋಳಿ ಗಣೇಶ್ ಅವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು, ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ.

Continue Reading

DAKSHINA KANNADA

ಅಕ್ರಮ ಗೋ ಸಾಗಾಟ; ಸ್ಕೂಟರ್ ಬಿಟ್ಟು ಆರೋಪಿ ಪರಾರಿ

Published

on

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಇಂದು (ಮಾ.15) ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ.

ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್‌ನಲ್ಲಿದ್ದ 100ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸ್ಕೂಟ‌ರ್ ಸವಾರ ಗಾಡಿ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಬಳಿಕ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page