Connect with us

LATEST NEWS

ದಾಳಿಗೆ ಪ್ರತಿದಾಳಿ ..! ಪಾಕ್ ವಿಫಲ ಯತ್ನ ..! F-16 ಹಾಗೂ JF-17 ಜೆಟ್‌ಗಳನ್ನು ಹೊಡೆದುರುಳಿಸಿದ ಭಾರತ ..!

Published

on

ಮಂಗಳೂರು/ಹೊಸದಿಲ್ಲಿ : ಪೆಹಲ್ಗಾಮ್ ದಾಳಿ ಬಳಿಕ ಪ್ರತಿಕಾರಕ್ಕಾಗಿ ಭಾರತವು ಸಿಂಧೂರ್ ಆಪರೇಶನ್ ಆರಂಭಿಸಿದೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ಮಾಡಿತ್ತು. ಬಳಿಕ ಒಂದು ದಿನದ ನಂತರ ಅಂದರೆ ನಿನ್ನೆ ಗುರುವಾರ (ಮೇ 08) ಪಾಕಿಸ್ತಾನದಿಂದ  ಡೋನ್ ಮತ್ತು ಕ್ಷಿಪಣಿ ದಾಳಿ ನಡೆದಿದೆ. ಜಮ್ಮುವಿನ ಹಲವಾರು ಪ್ರದೇಶಗಳು ಹಾಗೂ ರಾಜಸ್ಥಾನ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ದಾಳಿಮಾಡಲು ಪಾಕ್ ಯತ್ನಿಸಿದ್ದು ಭಾರತವು ಈ ದಾಳಿಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದೆ.

ಭಾರತದ ಪ್ರತಿದಾಳಿ :

ಪಾಕಿಸ್ತಾನದ ಒಂದು F-16 ಫೈಟರ್ ಜೆಟ್ ಮತ್ತು ಬಹುಶಃ ಎರಡು JF-17 ಜೆಟ್‌ಗಳನ್ನು ಹೊಡೆದುರುಳಿಸಿತು. ಜೊತೆಗೆ ಇತರ ಸ್ಪೋಟಕಗಳನ್ನು ತಡೆಹಿಡಿಯಿತು. ಆದರೆ ಡೋನ್ ಜಮ್ಮು ನಾಗರಿಕ ವಿಮಾನ ನಿಲ್ದಾಣವನ್ನು ಅಪ್ಪಳಿಸಿತು. ಪಠಾಣ್‌ಕೋಟ್ ಮತ್ತು ಜೈಸಲ್ಮೀರ್‌ನಲ್ಲಿ ಡೋನ್‌ಗಳನ್ನು ತಡೆಹಿಡಿಯಲಾಗಿದೆ. ಪ್ರತೀಕಾರವಾಗಿ, ಭಾರತವು ಪಾಕಿಸ್ತಾನದ ವಿರುದ್ಧ ಪ್ರತಿದಾಳಿ ನಡೆಸಿತು, ಹಲವಾರು ಪ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹಾರಿಸಿತು.

ಇದನ್ನೂ ಓದಿ : ಪಾಕಿಸ್ತಾನ ನೌಕಾ ನೆಲೆ ಮೇಲೆ MAG-29 ರಾತ್ರೋರಾತ್ರಿ ದಾಳಿ

ಭಯೋತ್ಪಾದಕ ಸಂಘಟನೆಗಳೊಂದಿಗೆ ತಂತ್ರ ಅಳವಡಿಕೆ :

ಕಳೆದ ತಿಂಗಳು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪಾಕಿಸ್ತಾನದ ಇಂಟ‌ರ್-ಸರ್ವೀಸಸ್ ಇಂಟೆಲಿಜೆನ್ಸ್‌ (ಐಎಸ್‌ಐ) ಮತ್ತು ಹಮಾಸ್ ಸದಸ್ಯರ ನಡುವೆ ರಹಸ್ಯ ಸಭೆ ನಡೆದಿರುವುದನ್ನು ಇತ್ತೀಚಿನ ಗುಪ್ತಚರ ಮಾಹಿತಿಗಳು ಸೂಚಿಸುತ್ತಿದೆ. ನಿನ್ನೆ (ಮೇ.8) ರಾತ್ರಿಯ ದಾಳಿಯು ಇದನ್ನು ಸೂಚಿಸುತ್ತಿದ್ದು, ಪಾಕಿಸ್ತಾನಿ ಸೇನೆಯು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧಿಸಿದ ತಂತ್ರಗಳನ್ನು ಹೆಚ್ಚಾಗಿ ಅಳವಡಿಸಿಕೊಳ್ಳುತ್ತಿದೆ ಎನ್ನಲಾಗುತ್ತಿದೆ.

ಭಾರತೀಯ ಸೇನೆಯಿಂದ ಉತ್ತಮ ಕ್ಷಿಪಣಿ ರಕ್ಷಣಾ ವ್ಯವಸ್ಥೆ :

ಗುರುವಾರ ರಾತ್ರಿ ಒಂದು ಡೋನ್ ಜಮ್ಮು ನಾಗರಿಕ ವಿಮಾನ ನಿಲ್ದಾಣವನ್ನು ಅಪ್ಪಳಿಸಿದರೆ, ಕನಿಷ್ಠ ಎಂಟು ಕ್ಷಿಪಣಿಗಳನ್ನು ಭಾರತದ ವಾಯು ರಕ್ಷಣಾ ವ್ಯವಸ್ಥೆಯು ತಡೆಹಿಡಿಯಿತು. ಜಮ್ಮು ವಿಶ್ವವಿದ್ಯಾಲಯದ ಬಳಿ ಇನ್ನೆರಡು ಡೋನ್‌ಗಳನ್ನು ಹೊಡೆದುರುಳಿಸಲಾಯಿತು. ರಾಜಸ್ಥಾನದ ಜೈಸಲ್ಮೀರ್ ಮತ್ತು ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಡೋನ್‌ಗಳನ್ನು ತಡೆಹಿಡಿಯಲಾಯಿತು, ಆದರೆ ಚಂಡೀಗಢದಲ್ಲಿಯೂ ಸೈರನ್‌ಗಳು ಕೇಳಿಬಂದವು. ಭಾರತೀಯ ಸೇನೆ ಮತ್ತು ವಾಯುಪಡೆಯು ಆಕಾಶ್, MRSAM ಮತ್ತು Zu-23 ಸೇರಿದಂತೆ ಮೇಲ್ಮಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸುತ್ತಿವೆ

LATEST NEWS

ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ: ಆದಂಪುರ್‌ ವಾಯುನೆಲೆಯಲ್ಲಿ ಪ್ರಧಾನಿ ಮೋದಿ

Published

on

ಮಂಗಳೂರು/ಆದಂಪುರ್: ಆಪರೇಷನ್ ಸಿಂಧೂರ್ ನಂತರ ಪ್ರಧಾನಿ ಮೋದಿ ನಿನ್ನೆ ಮೊದಲ ಬಾರಿಗೆ ಸಾರ್ವಜನಿಕ ಭಾಷಣ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬಿನ ಆದಂಪುರ್ ವಾಯುನೆಲೆಗೆ ಭೇಟಿ ನೀಡಿದರು.

ಪ್ರಧಾನಿ ಮೋದಿ ಅದಂಪುರ್ ಭೇಟಿ ಹೆಚ್ಚು ಮಹತ್ವ ಪಡೆದಿದ್ದು ಏಕೆಂದರೆ, ಪಾಕಿಸ್ತಾನದವರು ನಾವು ಆದಂಪುರ್‌ ವಾಯುನೆಲೆಯನ್ನು ಛಿದ್ರಗೊಳಿಸಿದ್ದೇವೆ ಎಂಬ ಸುಳ್ಳು ಸುದ್ದಿ ಹರಡಿದ್ದರು. ಆದರೆ, ಇಂದು ಬೆಳಿಗ್ಗೆ  ಪಂಜಾಬ್‌ನ  ಅದೇ ಆದಂಪುರ್ ವಾಯುನೆಲೆಯಲ್ಲಿ ಪ್ರಧಾನಿ ಮೋದಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ!

ವಾಯುನೆಲೆಯಲ್ಲಿ ಐಎಎಫ್ ಯೋಧರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ ಎಂದಿದ್ದಾರೆ. ಅಲ್ಲದೆ ಯಾವುದೇ ಭಯೋತ್ಪಾದಕ ದಾಳಿಗೆ ನಮ್ಮದೇ ಆದ ಷರತ್ತುಗಳ ಮೇಲೆ ನಿರ್ಣಾಯಕ ಉತ್ತರ ನೀಡಲಾಗುವುದು ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶವನ್ನೂ ರವಾನಿಸಿ ಪಾಕ್ ಸೇನೆಯ ಬೆವರಿಳಿಸಿದ್ದಾರೆ.

ಒಂದು ದಾಳಿ ಪಾಕಿಸ್ತಾನದಲ್ಲಿ ಮಹಾವಿನಾಶಕ್ಕೆ ಕಾರಣ!

“ನಾವು ಗಾಡ್‌ಫಾದರ್‌ಗಳು ಮತ್ತು ಭಯೋತ್ಪಾದನೆಯ ರಾಜ್ಯ ಪ್ರಾಯೋಜಕರ ನಡುವೆ ವ್ಯತ್ಯಾಸವನ್ನು ತೋರಿಸುವುದಿಲ್ಲ. ಅವರು ಅಮಾಯಕರನ್ನು ಕೊಂದರೆ ಅವರಿಗೆ ವಿನಾಶವೊಂದೇ ಪರಿಹಾರ ಎಂದು ತಿಳಿದಿದೆ. ಪಾಕಿಸ್ತಾನದವರು ಹೇಡಿಗಳಂತೆ ಬಂದರು. ಆದರೆ ಅವರು ಎದುರಿಸಬೇಕಾಗಿದ್ದು ಭಾರತೀಯ ಸೇನೆಯನ್ನು ಎಂಬುದನ್ನು ಮರೆತಿದ್ದಾರೆ. ಪಾಕಿಸ್ತಾನದ 9 ಭಯೋತ್ಪಾದಕ ಪಡೆಗಳು ನಾಶವಾದವು. 100ಕ್ಕೂ ಹೆಚ್ಚು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಅವರ ಒಂದು ದಾಳಿ ಪಾಕಿಸ್ತಾನದಲ್ಲಿ ಮಹಾವಿನಾಶಕ್ಕೆ ಕಾರಣವಾಯಿತು. ಈಗ ಪಾಕಿಸ್ತಾನದವರು ನಮ್ಮ ಕ್ಷಿಪಣಿ, ಡ್ರೋನ್​ಗಳ ಬಗ್ಗೆ ಯೋಚನೆ ಮಾಡಿದರೆ ಸಾಕು ಕಣ್ಣುಮುಚ್ಚಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ” ಎಂದು ಪ್ರಧಾನಿ ಮೋದಿ ಪಾಕಿಸ್ತಾನವನ್ನು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ನಿವಾಸದ ಮೇಲೆ ಬಾಂ*ಬ್ ದಾಳಿ ಆಗಬೇಕು ಎಂದಿದ್ದ ವ್ಯಕ್ತಿಯ ಬಂಧನ

ಇದೇ ವೇಳೆ ಪಾಕಿಸ್ತಾನದ ಬಗ್ಗೆ ಭಾರತಕ್ಕಿರುವ ಮೂರು ಪ್ರಮುಖ ನೀತಿಗಳ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಭಾರತದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ಭಾರತವು ಪರಮಾಣು ಬ್ಲ್ಯಾಕ್‌ಮೇಲ್‌ಗಳನ್ನು ಸ್ವೀಕರಿಸವುದಿಲ್ಲ. ಇನ್ನೂ ಭಯೋತ್ಪಾದಕರು ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವ ಪಾಕ್ ಸರ್ಕಾರ ಕೂಡ ಭಯೋತ್ಪಾದಕರೇ ಆಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಭಾರತೀಯ ಯೋಧರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

“ಇದು ಹೊಸ ಭಾರತ, ಶಾಂತಿಯನ್ನು ಬಯಸುತ್ತದೆ. ಆದರೆ ಪಾಕಿಸ್ತಾನದಿಂದ ಮಾನವೀಯತೆಯ ಮೇಲೆ ದಾಳಿ ನಡೆದರೆ, ನಾವು ನಿಮ್ಮನ್ನು ನಿರ್ನಾಮ ಮಾಡುತ್ತೇವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ಅವರಿಗೆ ನೀಡಿದ್ದೇವೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಪಾಕಿಸ್ತಾನಿ ಸೈನ್ಯವನ್ನು ಸೋಲಿಸಿವೆ” ಎಂದು ಭಾರತೀಯ ಯೋಧರನ್ನು ಶ್ಲಾಘಿಸಿದ್ದಾರೆ.

 

Continue Reading

LATEST NEWS

ಬದಲಾಯ್ತು ಗೂಗಲ್ ಲೋಗೋ; 10 ವರ್ಷಗಳ ಬಳಿಕ ಆಧುನಿಕ ಟಚ್

Published

on

ನವದೆಹಲಿ: ಸುಮಾರು 10 ವರ್ಷಗಳ ನಂತರ ಗೂಗಲ್ ಮತ್ತೊಮ್ಮೆ ತನ್ನ ಐಕಾನಿಕ್ ‘G’ ಲೋಗೋವನ್ನು ಬದಲಾಯಿಸಿದೆ.

2015 ರಲ್ಲಿ, ಗೂಗಲ್ ತನ್ನ ಕ್ಲಾಸಿಕ್ ಲೋಗೋವನ್ನು ಆಧುನಿಕ ಟೈಪ್‌ಫೇಸ್ ಪ್ರಾಡಕ್ಟ್ ಸ್ಯಾನ್ಸ್ ಗೆ ಬದಲಾಯಿಸಿತು. ಈಗ 2025 ರಲ್ಲಿ, ಕಂಪನಿಯು ಇದಕ್ಕೆ ಹೊಸ ದೃಶ್ಯ ತಿರುವನ್ನು ಸೇರಿಸಿದೆ.

ಹೊಸ ಲೋಗೋದಲ್ಲಿ ಗೂಗಲ್ ತನ್ನ ಬ್ರ್ಯಾಂಡ್‌ನ ಗುರುತಾಗಿರುವ ನೀಲಿ, ಕೆಂಪು, ಹಸಿರು ಮತ್ತು ಹಳದಿ ಎಂಬ ನಾಲ್ಕು ಸಾಂಪ್ರದಾಯಿಕ ಬಣ್ಣಗಳನ್ನು ಉಳಿಸಿಕೊಂಡಿದೆ. ಆದರೆ ಈ ಬಾರಿ ವಿನ್ಯಾಸದಲ್ಲಿ ಹೊಸ ತಿರುವು ಇದೆ.

ಇದನ್ನೂ ಓದಿ: ಹೊಸದಾಗಿ ನಿರ್ಮಾಣವಾಗುತ್ತಿರುವ ಮನೆಗೆ ನೀರು ಹಾಕಲು ಹೋಗಿ ಬಾಲಕಿ ಸಾವು

ಮೊದಲು ಈ ಬಣ್ಣಗಳನ್ನು G ಲೋಗೋದಲ್ಲಿ ಬ್ಲಾಕ್ ಶೈಲಿಯಲ್ಲಿ ಕಾಣಲಾಗುತ್ತಿತ್ತು. ಈಗ ಅದೇ ಬಣ್ಣಗಳನ್ನು ಗ್ರೇಡಿಯಂಟ್‌ನಲ್ಲಿ ಅಂದರೆ ಬೆಳಕಿನಿಂದ ಗಾಢ ಛಾಯೆಗಳವರೆಗೆ ಕಾಣಬಹುದು. ಇದು ಜನರಿಗೆ ಕ್ರಿಯಾತ್ಮಕ ಮತ್ತು ಆಧುನಿಕ ಅನುಭವವನ್ನು ನೀಡುತ್ತದೆ. ಗೂಗಲ್‌ನ ಈ ಹೊಸ ಲೋಗೋ ಕಂಪನಿಯು ಈಗ ತನ್ನ ಹಳೆಯ ನೋಟವನ್ನು ಮೀರಿ ಹೆಚ್ಚು ಸ್ಮಾರ್ಟ್, ಫ್ಯೂಚರಿಸ್ಟಿಕ್ ಮತ್ತು ಎಐ-ಪವರ್ಡ್​ ಬ್ರ್ಯಾಂಡಿಂಗ್‌ನತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ.

Continue Reading

LATEST NEWS

ಆರ್‌ಸಿಬಿ ತಂಡಕ್ಕೆ ಮೊದಲ ಮ್ಯಾಚ್; ಇಲ್ಲಿದೆ ನೋಡಿ IPL 2025ರ ಪರಿಷ್ಕೃತ ವೇಳಾಪಟ್ಟಿ

Published

on

ಮಂಗಳೂರು/ಮುಂಬೈ: ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಡಿಮೆಯಾಗಿದ್ದು, ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶನಿವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ.


ಹೌದು, ಈಗಾಗಲೇ ಗುಜರಾತ್ ಟೈಟನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್‌ನ ಉಳಿದ ಪಂದ್ಯಗಳಿಗಾಗಿ ಸಿದ್ದತೆಗಳನ್ನು ಆರಂಭಿಸಿವೆ. ಈ ಸಿದ್ದತೆಗಳ ನಡುವೆ ಮತ್ತೊಂದು ಮಾಹಿತಿ ಕೂಡ ಹೊರಬಿದ್ದಿದೆ. ಅದೇನೆಂದರೆ.. ಐಪಿಎಲ್ ಪುನರಾಂಭಗೊಳ್ಳುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದೊಂದಿಗೆ ಎಂಬುದು. ಹೀಗಾಗಿ ಆರ್‌ಸಿಬಿ ಅಭಿಮಾನಿಗಳಿಗೆ ಈ ಸುದ್ದಿ ಮತ್ತಷ್ಟು ಖುಷಿ ಕೊಟ್ಟಿದೆ. ಇನ್ನು ಈ ಬಾರಿಯ ಫೈನಲ್ ಪಂದ್ಯವನ್ನು ಜೂನ್ 3ರಂದು ಆಯೋಜಿಸಲು ನಿರ್ಧರಿಸಲಾಗಿದೆ.

ಐಪಿಎಲ್ 2025ರ ಪರಿಷ್ಕೃತ ವೇಳಾಪಟ್ಟಿ

Continue Reading
Advertisement

Trending

Copyright © 2025 Namma Kudla News

You cannot copy content of this page