Connect with us

ಮಂಗಳೂರಿನ ನಗರದ ರಸ್ತೆಯಲ್ಲಿ ಕಾಡುಕೋಣಗಳ ವಾಕಿಂಗ್..!! ಆತಂಕದಲ್ಲಿ ನಗರದ ಜನತೆ..

Published

on

ಮಂಗಳೂರಿನ ನಗರದ ರಸ್ತೆಯಲ್ಲಿ ಕಾಡುಕೋಣಗಳ ವಾಕಿಂಗ್..!! ಆತಂಕದಲ್ಲಿ ನಗರದ ಜನ..

ಮಂಗಳೂರು: ಮಹಾಮಾರಿ ಕೊರೊನಾ ಬಂದಮೇಲೆ ಮನುಷ್ಯ ಮನೆಯೊಳಗಡೆ ಬಂಧಿಯಾಗಿ ಪ್ರಾಣಿಗಳು ಸ್ವೇಚ್ಛೆಯಿಂದ ಹೊರಗಡೆ ಸುತ್ತಾಡುವಂತಾಗಿತ್ತು.

ನಗರದಾದ್ಯಂತ ವಾಹನ ದಟ್ಟಣೆ, ಮಾಲಿನ್ಯ ಇಲ್ಲದೆ ಪ್ರಕೃತಿ ಮಾತೆ ಕೂಡ ಶುದ್ಧವಾಗಿ ಫಳಫಳ ಅಂತ ಹೊಳಿತಾ ಇದ್ದಳು.

ವಾಹನ ಹಾಗೂ ಮನುಷ್ಯನ ಓಡಾಟ ಇಲ್ಲದ ಕಾರಣ ಪ್ರಾಣಿಗಳು ಕೂಡ ನಗರದಲ್ಲಿ ರೌಂಡ್ಸ್ ಹಾಕೋಕೆ ಆರಂಭಿಸಿವೆ.

ಇತ್ತೀಚೆಗಷ್ಟೇ ತಿರುಪತಿ ತಿಮ್ಮಪ್ಪನ ಬೆಟ್ಟದಲ್ಲಿ ಕಾಡುಪ್ರಾಣಿಗಳು ಓಡಾಟ ನಡೆಸಿ ಸುದ್ದಿಯಾಗಿದ್ದವು.

ಇದೀಗ ಕರಾವಳಿ ಜಿಲ್ಲೆ ಮಂಗಳೂರಿನ ಸರದಿ. ಹೌದು ಮಂಗಳೂರು ನಗರದಲ್ಲಿ ಇಂದು (ಮೇ 5) ದಿಢೀರ್ ಅಂತ ಎರಡು ಕಾಡು ಕೋಣಗಳು ಪ್ರತ್ಯಕ್ಷವಾಗಿವೆ.

ಇಂದು ಮುಂಜಾನೆ ನಗರದ ಹ್ಯಾಟ್ ಹಿಲ್ ಬಳಿ ಕಾಣ ಸಿಕ್ಕಿದ್ದ ಕಾಡು ಕೋಣ ಬಳಿಕ ನಗರದ ರಥಬೀದಿಯಲ್ಲಿ ನಿಧಾನಕ್ಕೆ ವಾಕಿಂಗ್ ಮಾಡಿತ್ತು.

ಬಳಿಕ ಗುಜರಾತಿ ಶಾಲೆಯ ಬಳಿ ಕಾಣ ಸಿಕ್ಕಿದೆ. ಇದೀಗ ಏಕಾಏಕಿ ನಗರದ ಮಧ್ಯದಲ್ಲಿ ಕಾಡು ಕೋಣವನ್ನು ಕಂಡ ಸ್ಥಳೀಯರು ಭಯಭೀತರಾಗಿದ್ದು, ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ನಗರದ ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಪ್ರಸ್ತುತ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಕಾಡು ಕೋಣ ಹಿಡಿಯಲು ಭರದ ಕಾರ್ಯಾಚರಣೆ ಆರಂಭಿಸಿದಾಗ ಅಚ್ಚರಿ ಕಂಡಿತ್ತು. ಎರಡು ಕಾಡುಕೋಣಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಡು ಕೋಣ ಬಹಳ ಅಪಾಯಕಾರಿಯಾಗಿದ್ದು, ಕೆಲ ವರ್ಷಗಳ ಹಿಂದೆ ಬಜ್ಜೆ ವಿಮಾನ ನಿಲ್ದಾಣದ ಬಳಿ ಕಾಣ ಸಿಕ್ಕಿದ್ದವು.

ಅಲ್ಲದೇ ಕೊಂಚ ಮರಗಿಡಗಳು ತುಂಬಿ ಕಾಡು ಪ್ರದೇಶದಂತಿರುವ ಬಜ್ಪೆ, ಅದ್ಯಪಾಡಿ ವಿಮಾನ ನಿಲ್ದಾಣದ ಸುತ್ತಮುತ್ತಾ ಆನೇಕ ಕಾಡು ಕೋಣಗಳಿವೆ ಎಂದು ಅರಣ್ಯಾಧಿಕಾರಿಗಳು ಈಗಾಗಲೇ ಮಾಹಿತಿ ನೀಡಿದ್ದಾರೆ.

ಆದರೆ ದೂರದ ಆ ಪ್ರದೇಶದಿಂದ ನಗರಕ್ಕೆ ಬಂದ ಬಗ್ಗೆ, ಇದೀಗ ನಗರವಾಸಿಗಳಿಗೆ ಅಚ್ಚರಿ ಮತ್ತು ಆತಂಕ ಎರಡೂ ಉಂಟಾಗಿದೆ.

ಕೊರೊನಾದಿಂದ ಕಳೆದ 40 ದಿನಗಳಿಂದ ಲಾಕ್ ಡೌನ್ ಇದ್ದ ಕಾರಣ, ನಗರದಲ್ಲಿ ಜನ – ವಾಹನಗಳ ಒಡಾಟವಿರದ ಕಾರಣ ಕಾಡು ಪ್ರಾಣಿಗಳು ಸಹಜವಾಗಿ ಅತ್ತಿಂದ ಈಚೆಗೆ ವಲಸೆ ಹೋಗುವುದು ಸಹಜ ಪ್ರಕ್ರಿಯೆ.

ಇದೇ ಹಿನ್ನಲೆಯಲ್ಲಿ ಕಾಡಿನಲ್ಲಿದ್ದ ಕೋಣಗಳು ಇದೀಗ ನಾಡಿಗೆ ಬಂದು ಸೇರಿವೆ ಎಂದು ಅರಣ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page