Connect with us

bangalore

ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟಾ ಅವರ ಒಂದಿಷ್ಟು ಪರಿಚಯ..!

Published

on

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.

ಕ್ಯಾಪ್ಟನ್ ಬ್ರಿಜೇಶ್ ಚೌಟಾ ಯಾರು … ಅವರ ಹಿನ್ನೆಲೆ ಏನು..?

ಕ್ಯಾಪ್ಟನ್ ಬ್ರಿಜೇಶ್ ಚೌಟಾ ಯಾರು … ಅವರ ಹಿನ್ನೆಲೆ ಏನು..?
ತುಳುನಾಡಿನ ಪ್ರತಿಷ್ಠಿತ ಬಂಟ ಸಮೂದಾಯದ ಗುತ್ತಿನ ಮನೆತನದಲ್ಲಿ ಜನಿಸಿರುವ ಬೃಜೇಶ್ ಚೌಟ ಮಂಗಳೂರಿನ ರಥ ಬೀದಿಯಲ್ಲಿ ವಾಸವಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಸಂಘ ಪರಿವಾರದ ನಂಟು ಹೇಗೆ ..?

ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸೇವೆ ಆರಂಭಿಸಿದ್ದರು. ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದರು. ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ದೇಶ ಸೇವೆಗೆ ತನ್ನನ್ನು ಮುಡಿಪಾಗಿಟ್ಟುಕೊಂಡ ಚೌಟಾ ಇದೇ ಕಾರಣದಿಂದ ಅವಿವಾಹಿತರಾಗಿ ಉಳಿದುಕೊಂಡಿದ್ದಾರೆ ಅನ್ನೋದೇ ಅವರ ದೇಶ ಪ್ರೇಮಕ್ಕೆ ಸಾಕ್ಷಿ .

ರಾಜಕೀಯಕ್ಕೆ ಕ್ಯಾಪ್ಟನ್ ಎಂಟ್ರಿ…!

2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದರು.

ಪಕ್ಷದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಕ್ಯಾಪ್ಟನ್‌..!

ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

ಕರಾವಳಿಯ ಜಾನಪದ ಕ್ರೀಡೆ ಕಂಬಳದ ಆಯೋಜನೆ

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಲು ತೀರ್ಮಾನಿಸಿದರು, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳ ಆಯೋಜನೆ. ಹೀಗೆ ಎಲ್ಲಾ ಕ್ಷೇತ್ರದಲ್ಲೂ ಮಿಂಚಿರುವ ವಿದ್ಯಾವಂತ, ಅವಿವಾಹಿತ, ಹಾಗೂ ಪ್ರತಿಷ್ಟಿತ ಮನೆತನದ ಬ್ರಿಜೇಶ್ ಚೌಟ ಬಿಜೆಪಿಯ ಸರಿಯಾದ ಆಯ್ಕೆ ಅನ್ನಲೇ ಬೇಕಿದೆ.

bangalore

ಮಚ್ಚು ಹಿಡಿದು ರೀಲ್ಸ್ ಪ್ರಕರಣ; ರಜತ್‌ಗೆ ಬಿಗ್ ರಿಲೀಫ್

Published

on

ಬೆಂಗಳೂರು : ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಯ್ಸ್‌ vs ಗರ್ಲ್ಸ್ ರಿಯಾಲಿಟಿ ಶೋ ಸ್ಪರ್ಧಿಗಳಾದ ರಜತ್‌ ಹಾಗೂ ಕಿಶನ್‌ಗೆ ಜಾಮೀನು ಮಂಜೂರಾಗಿದ್ದು, 24 ನೇ ಎಸಿಎಂಎಂ ಕೋರ್ಟ್‌ ರಜತ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಎಪ್ರಿಲ್‌ 16 ರಂದು ರಜತ್‌ ವಾಪಸು ಜೈಲು ಸೇರಿದ್ದರು.

ಷರತ್ತು ಬದ್ಧ ಜಾಮೀನು ನೀಡಿದ ಹಿನ್ನೆಲೆಯಲ್ಲಿ ವಿನಯ್‌ ಮತ್ತು ರಜತ್‌ ರಿಲೀಸ್‌ ಆಗಿದ್ದರು. ರಜತ್‌ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯರ ಆರೋಪಿ ರಜತ್‌ ವಿರುದ್ಧ ವಾರೆಂಟ್‌ ಹೊರಡಿಸಿತ್ತು.

ಕೋರ್ಟ್‌ಗೆ ಹಾಜರಾಗಲಿಲ್ಲದ ಕಾರಣ ರಜತ್‌ ಮೇಲೆ ವಾರೆಂಟ್‌ ಇಶ್ಯೂ ಮಾಡಲಾಗಿತ್ತು. ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಏ.17) ಜಾಮೀನು ಅರ್ಜಿ ಸಲ್ಲಿಸಿದ್ದು, ನಿನ್ನೆ (ಏ.18) ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದರು. ಪರಪ್ಪನ ಅಗ್ರಹಾರದಿಂದ ರಜತ್‌ಗೆ ಬಿಡುಗಡೆ ಭಾಗ್ಯ ದೊರಕಿದೆ.

Continue Reading

bangalore

ಗ್ರೀನ್ ಜರ್ಸಿ ತೊಟ್ಟ ಬೆಂಗಳೂರಿಗೆ ಸತತ 4ನೇ ಜಯ ..! ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ದಾಖಲೆ ..!

Published

on

IPL 2025  :  ರಜತ್ ಪಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಈ ಸೀಸನ್​ನಲ್ಲಿ ನಾಲ್ಕನೇ ಗೆಲುವು ಸಾಧಿಸಿದೆ. ಈ ಎಲ್ಲಾ ನಾಲ್ಕು ಗೆಲುವುಗಳು ಇತರ ತಂಡಗಳ ವಿರುದ್ಧ ಅವರ ತವರಿನಲ್ಲಿ ಬಂದಿರುವುದು ವಿಶೇಷವಾಗಿದೆ. ನಿನ್ನೆ (ಏ.13) ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 9 ವಿಕೆಟ್​ಗಳಿಂದ ಸೋತಿದೆ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಅರ್ಧಶತಕಗಳ ಸಹಾಯದಿಂದ ಆರ್‌ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿತು.

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 173 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್‌ಸಿಬಿ 17.3 ಓವರ್‌ಗಳಲ್ಲಿ ಒಂದು ವಿಕೆಟ್‌ಗೆ 175 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಆರ್‌ಸಿಬಿ ಪರ ಸಾಲ್ಟ್ 33 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ಸಹಾಯದಿಂದ 65 ರನ್ ಗಳಿಸಿದರೆ, ಕೊಹ್ಲಿ 45 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 62 ರನ್ ಗಳಿಸಿ ಅಜೇಯರಾಗುಳಿದರು. ಇವರಲ್ಲದೆ, ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ದೇವದತ್ ಪಡಿಕ್ಕಲ್ 28 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ ಅಜೇಯ 40 ರನ್ ಗಳಿಸಿದರು.

ವಿರಾಟ್ ಕೊಹ್ಲಿ ಅರ್ಧಶತಕ :

ರಾಜಸ್ಥಾನ ವಿರುದ್ಧ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದ್ದಾರೆ. ಇದಕ್ಕಾಗಿ ಅವರು 39 ಎಸೆತಗಳನ್ನು ಎದುರಿಸಿದರು. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ವಾಸ್ತವವಾಗಿ, ಇದು ಅವರ ಟಿ20 ವೃತ್ತಿಜೀವನದ 100ನೇ ಅರ್ಧಶತಕವಾಗಿದೆ.

Continue Reading

bangalore

ತವರಿನಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ ಮಿಂಚಿದ ಕೆ.ಎಲ್.ರಾಹುಲ್ ..! ಆರ್‌ಸಿಬಿಗೆ ಭಾರೀ ಮುಖಭಂಗ ಮಾಡಿದ ಕನ್ನಡಿಗ ..!

Published

on

ಬೆಂಗಳೂರು : ತವರಿನಲ್ಲಿಯೇ ಆರ್‌ಸಿಬಿಗೆ ಭಾರೀ ಮುಖಭಂಗ ನಡೆದಿದೆ. ಅದೂ ಸಹ ಒಬ್ಬ ಕನ್ನಡಿಗನಿಂದ. ನಿನ್ನೆ (ಏ.11) ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು, ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆರ್​ಸಿಬಿ ಪರ ಓಪನರ್ ಬ್ಯಾಟರ್ ಆಗಿ ಕ್ರೀಸ್​ಗೆ ಆಗಮಿಸಿದ ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ಆದರೆ 7 ಓವರ್​ ಆಗುಷ್ಟರಲ್ಲಿ ಆರ್​ಸಿಬಿಯ ಚಿತ್ರಣವೇ ಬದಲಾಯಿತು. ಪ್ರಮುಖವಾದ 3 ವಿಕೆಟ್​ಗಳು ಉರುಳಿ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಕೊನೆಗೂ ತವರಿನ ಪಿಚ್​ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಅವರ ಬ್ಯಾಟಿಂಗ್ ಆರ್ಭಟದಿಂದ ರಾಯಲ್ ಚಾಲೆಂಜರ್ಸ್​ ಜೊತೆ ಡೆಲ್ಲಿ ಕ್ಯಾಪಿಟಲ್ಸ್​ 6 ವಿಕೆಟ್​ಗಳ ರೋಚಕ ಗೆಲವು ಪಡೆದಿದೆ. ಈ ಮೂಲಕ ಆರ್​ಸಿಬಿ ತನ್ನ ನೆಲದಲ್ಲಿಯೇ ಕನ್ನಡಿಗನಿಂದ ಭಾರೀ ಅವಮಾನಕ್ಕೆ ಒಳಗಾದಂತೆ ಆಗಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ 20 ಓವರ್​ನಲ್ಲಿ 7 ವಿಕೆಟ್​ಗೆ 164 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನು ಹತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭವೇನೂ ಚೆನ್ನಾಗಿರಲಿಲ್ಲ. ಏಕೆಂದರೆ ಆರಂಭಿಕ ಬ್ಯಾಟ್ಸ್​ಮನ್​ಗಳಾದ ಫಾಫ್​ಡುಪ್ಲಿಸ್ಸಿ 2, ಮೆಕ್‌ಗುರ್ಕ್ 7, ಪೊರೆಲ್ 7 ರನ್​ ಹೀಗೆ ಬ್ಯಾಕ್ ಟು ಬ್ಯಾಕ್​ ವಿಕೆಟ್​ ಉರುಳಿದವು. ಈ ವೇಳೆ ಡೆಲ್ಲಿಗೆ ನೆರವಾಗಿದ್ದು ಕನ್ನಡಿಗ ಕೆ.ಎಲ್ ರಾಹುಲ್​. ಕೊನೆವರೆಗೂ ಕ್ರೀಸ್​ ಕಚ್ಚಿಕೊಂಡು ರಾಹುಲ್ ಬ್ಯಾಟಿಂಗ್ ಮಾಡಿದರು. ಸೋಲುವ ಪಂದ್ಯವನ್ನು ರಾಹುಲ್ ಅವರೇ ಗೆಲ್ಲಿಸಿಕೊಟ್ಟಿದ್ದಾರೆ ಎಂದರೆ ತಪ್ಪಾಗಲಾರದು.

ಕೆ.ಎಲ್​ ರಾಹುಲ್​ಗೆ ನಾಯಕ ಅಕ್ಷರ್ ಪಟೇಲ್ ಉತ್ತಮ ಸಾಥ್ ಕೊಟ್ಟರು. ಕೆ.ಎಲ್​ ರಾಹುಲ್ ಆರ್ಭಟದ ಬ್ಯಾಟಿಂಗ್​ನಿಂದ ಡೆಲ್ಲಿ ಕ್ಯಾಪಿಟಲ್ಸ್​ 17.5 ಓವರ್​​ಗಳಲ್ಲಿ 4 ವಿಕೆಟ್​ಗೆ 169 ರನ್​ಗಳನ್ನ ಗಳಿಸಿ ಅದ್ಭುತವಾದ ಗೆಲುವು ಪಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ತಂಡ ಇನ್ನೇನು ಸೋಲುತ್ತದೆ ಎಂದುಕೊಂಡಿದ್ದರು. ಆದರೆ ಪಂದ್ಯದಲ್ಲಿ ಮುಖ್ಯ ಪಾತ್ರ ವಹಿಸಿದ ಕೆ.ಎಲ್ ರಾಹುಲ್ ಗೆಲ್ಲುವವರೆಗೂ ಹೋರಾಡಿದರು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್​ ನಿನ್ನೆ (ಏ.10) ನಡೆದ ಟೂರ್ನಿಯಲ್ಲಿ 4 ಪಂದ್ಯಗಳನ್ನು ಆಡಿ, 4 ರಲ್ಲೂ ಅಮೋಘವಾದ ಗೆಲುವು ಸಾಧಿಸಿ 8 ಅಂಕಗಳನ್ನು ಪಡೆದುಕೊಂಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page