Connect with us

DAKSHINA KANNADA

ಸಾರಾ ಅಬೂಬಕ್ಕರ್ ಗೆ ಅಂತಿಮ ಗೌರವ ಸಲ್ಲಿಸದೆ ಅಸಹಿಷ್ಣುತೆ ತೋರಲಾಗಿದೆ : ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳ‌ ನಡೆಗೆ ಗಣ್ಯರ ಖಂಡನೆ..!

Published

on

ಮಂಗಳೂರು :  ಕನ್ನಡದ ಪ್ರಖ್ಯಾತ ಬರಹಗಾರ್ತಿ ಸಾರಾ ಅಬೂಬಕ್ಕರ್ ಅವರು ನಿಧನ ಹೊಂದಿದ ಸಂದರ್ಭ ಸರಿಯಾದ ಗೌರವ ಸಲ್ಲಿಸದೆ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಕಡೆಗಣಿಸಿರುವುದ ಖೇದಕರ. ಸರಕಾರದ  ನಡೆಯ‌ನ್ನು ಸಾಹಿತಿ, ಬುದ್ದಿ ಜೀವಿಗಳ ಕರಾವಳಿಯ ಸಮಾನ ಮನಸ್ಕರು ತೀವ್ರವಾಗಿ ಖಂಡಿಸಿದ್ದಾರೆ.

ಬಿ.ಎಂ.ರೋಹಿಣಿ, ಪ್ರೊ.ನರೇಂದ್ರ ನಾಯಕ್, ಟಿ.ಆರ್.ಭಟ್, ಚಂದ್ರಕಲಾ ನಂದಾವರ, ಪ್ರೊ. ಚಂದ್ರ ಪೂಜಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ, ಎಂ.ದೇವದಾಸ್, ಬಿ.ಎಂ.ಹನೀಫ್, ವಾಸುದೇವ ಉಚ್ಚಿಲ, ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ, ಗುಲಾಬಿ ಬಿಳಿಮಲೆ, ಪ್ರೊ.ಕೆ.ರಾಜೇಂದ್ರ ಉಡುಪ, ಮೋಹನ್ ಪಿ. ವಿ., ಐ.ಕೆ.ಬೊಳುವಾರು, ಯಶವಂತ ಮರೋಳಿ, ಮುನೀರ್ ಕಾಟಿಪಳ್ಳ, ಡಾ.ಕೃಷ್ಣಪ್ಪ ಕೊಂಚಾಡಿ, ಶ್ರೀನಿವಾಸ ಕಾರ್ಕಳ ಮತ್ತಿರರು ಒಳಗೊಂಡ ಜಂಟಿ ಹೇಳಿಕೆಯಲ್ಲಿ

ಸಾರಾ ಅಬೂಬಕ್ಕರ್ ಪ್ರಖ್ಯಾತ ಕತೆಗಾರರು, ಬರಹಗಾರರು ಎಂಬಲ್ಲಿಗೆ ಅವರ ಪ್ರಾಮುಖ್ಯತೆ ಮುಗಿಯುವುದಿಲ್ಲ.

ಕ‌ರ್ನಾಟಕದ ಮುಸ್ಲಿಂ ಸಮುದಾಯ ಕನ್ನಡದಲ್ಲಿ ಸಾಹಿತ್ಯ ಕೃಷಿ ನಡೆಸುವುದೇ ಅಪರೂಪವಾಗಿದ್ದ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ಸಮಾಜದ ಕಂದಾಚಾರ, ತನ್ನದೇ ಸಮುದಾಯದ ಹೆಣ್ಣು ಮಕ್ಕಳ ಸಂಕಟಗಳನ್ನು ಕತೆಯಾಗಿಸಿದ್ದು ಸಣ್ಣ ಸಾಧನೆಯೇನೂ ಅಲ್ಲ.

ಅಂತಹ ಬರವಣಿಗೆಗಳ ಕಾರಣಕ್ಕೆ ಅವರು ಎದುರಿಸಿದ ದಾಳಿ, ದಬ್ಬಾಳಿಕೆಗಳೂ ಸಣ್ಣದಲ್ಲ. ಬರವಣಿಗೆಯ ಜೊತೆಗೆ ಮಹಿಳಾಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡ ಹೆಗ್ಗಳಿಕೆ ಸಾರಾ ಅವರದ್ದು.

ಅವರ ಕತೆ, ಕಾದಂಬರಿಗಳು ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದು ಮಾತ್ರವಲ್ಲ, ಕ‌ನ್ನಡದ ಹಿರಿಮೆಯನ್ನು ಹೊರನಾಡಿನಲ್ಲಿಯೂ ಎತ್ತಿ ಹಿಡಿದಿದೆ.

ತನ್ನ ಸಾಧನೆಗಾಗಿ ಅವರು ಅರ್ಹವಾಗಿಯೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಇಂತಹ ಗಣ್ಯ ಬರಹಗಾರ್ತಿ, ಲೇಖಕಿ ಅಗಲಿದ ಸಂದರ್ಭ ಸಹಜವಾಗಿಯೇ ಅವರಿಗೆ ಸರಕಾರಿ ಗೌರವಗಳು ಸಲ್ಲಬೇಕಿತ್ತು.

ಆದರೆ ಸರಕಾರದ ಯಾವುದೇ ಅಂತಿಮ ಗೌರವಗಳು ಅವರಿಗೆ ಸಲ್ಲಲಿಲ್ಲ. ಸರಕಾರದ, ಜಿಲ್ಲಾಡಳಿತದ ಪ್ರತಿನಿಧಿಗಳು ಅಧಿಕೃತ ಗೌರವ ಸಲ್ಲಿಸಲಿಲ್ಲ.

ಉಸ್ತುವಾರಿ ಸಚಿವರು, ಶಾಸಕರುಗಳು ನಗರದಲ್ಲೇ ಇದ್ದರೂ ಸಾರಾ ಅಬೂಬಕ್ಕರ್ ಅವರ ಅಂತಿಮ ದರ್ಶನ ಪಡೆಯಲಿಲ್ಲ.

ಇದು ನಮಗೆಲ್ಲಾ ಅಪಾರ ನೋವು ತಂದಿದೆ. ಈ ಕಡೆಗಣನೆ ಆಕಸ್ಮಿಕ ಆಗಿರಲಾರದು ಎಂಬುದು ನಮ್ಮ ಅಂದಾಜು.

ಇದು ಸರಕಾರ ಪ್ರಗತಿಪರ, ಜಾತ್ಯಾತೀತ ವಿಚಾರಗಳು, ಸಾಹಿತಿ, ಬುದ್ದಿಜೀವಿಗಳ ಕುರಿತು ಇತ್ತೀಚೆಗೆ ಹೊಂದಿರುವ ಅಸಹಿಷ್ಣು ಧೋರಣೆಗಳು, ಕೋಮುವಾದಿ ದೃಷ್ಟಿಕೋನದ ಭಾಗವಾದ ನಿಲುವೇ ಆಗಿದೆ ಎಂಬಂತೆ ತೋರುತ್ತದೆ.

ಸರಕಾರ, ಜಿಲ್ಲಾಡಳಿತ, ಜ‌ನಪ್ರತಿನಿಧಿಗಳ ಈ ಧೋರಣೆ ಆಘಾತಕಾರಿಯಾಗಿದ್ದು, ಕ‌ನ್ನಡನಾಡಿನ ವಿಶಾಲ, ಉದಾರ ಪ್ರಜ್ಞೆಗೆ ವಿರುದ್ದವಾಗಿದೆ, ನಾವಿದ‌‌ನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

DAKSHINA KANNADA

ಡಿ.28 : ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ಮಹಾಸಭೆ, ಸಾಧಕರಿಗೆ ಸನ್ಮಾನ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ ಮಂಗಳೂರು ಇದರ 87ನೇ ವಾರ್ಷಿಕ ಮಹಾಸಭೆ ಬಂಗ್ರ ಕೂಳೂರಿನ ಮಡಿವಾಳ ಸಭಾಭವನದ ಅಮೃತ ಸಭಾಂಗಣದಲ್ಲಿ ಡಿಸೆಂಬರ್ 28ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.


ಮೂಡುಬಿದಿರೆ ಶ್ರೀ ಕ್ಷೇತ್ರ ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಬಿ ಎನ್ ಪ್ರಕಾಶ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಮಂಗಳೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಮ್ ಎನ್ ಶಿವಲಿಂಗಪ್ಪ, ಹುಬ್ಬಳ್ಳಿ ಗೋಕುಲ್ ಹೊಟೇಲ್‌ ಮಾಲಕಿ ಡಾ ಸರಳ ರಮೇಶ್ ಕುಂದರ್‌, ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದ ಮಡಂತ್ಯಾರಿನ ಬ್ರಾಂಚ್‌ ಮ್ಯಾನೇಜರ್‌ ಓಂ ಪ್ರಸಾದ್ ಕೆ. ಆಗಮಿಸಲಿದ್ದಾರೆ. ಮಂಗಳೂರು ರಜತ ಯೂತ್‌ನ ಅಧ್ಯಕ್ಷ ಸಂಪತ್‌ ಕೊಂಡಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೀಣಾಂಜಲಿ ನಾರಾಯಣ ಬಿಜೈ ಉಪಸ್ಥಿತರಿರುವರು.

ಇದೇ ವೇಳೆ ಹಿರಿಯ ದೈವಾರಾಧಕರಾದ ಹರೀಶ್ ಸೊರಕೆ, ಹಿರಿಯ ಕುಲಕಸಬುದಾರರಾದ ಸೋಮನಾಥ ಮಡಿವಾಳ ಗುರುಪುರ, ಅಂತಾರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಕೀರ್ತನ್‌ ಕಟೀಲು ಇವರಿಗೆ ಸನ್ಮಾನ ನಡೆಯಲಿದೆ. ಅಪರಾಹ್ನ 3 ಗಂಟೆ ಬಳಿಕ ಸಂಘದ ಸದಸ್ಯರು ಹಾಗೂ ಮಹಿಳಾ ಘಟಕದ ಸದಸ್ಯೆಯರಿಂದ ಸಾಂಸ್ಕೃತಿಕ ನೃತ್ಯ ವೈಭವ ನಡೆಯಲಿದೆ.

ಇದನ್ನೂ ಓದಿ: ವೀರಭಾರತಿ ವ್ಯಾಯಾಮ ಶಾಲೆ ಬೆಂಗ್ರೆ ಮಂಗಳೂರು; ನೂತನ ಗರ್ಭಗುಡಿಯ ಹಾಗೂ ಕಟ್ಟಡದ ಶಿಲಾನ್ಯಾಸ ಸಮಾರಂಭ

ಡಿ.14ರಂದು ಕ್ರೀಡಾಕೂಟ: 87ನೇ ವಾರ್ಷಿಕ ಮಹಾಸಭೆಯ ಅಂಗವಾಗಿ ಮಡಿವಾಳ ಸ್ವಜಾತಿ ಬಾಂಧವರಿಗಾಗಿ ಆಟೋಟ, ಕ್ರಿಕೆಟ್‌ ಹಾಗೂ ಇನ್ನಿತರೆ ಸ್ಪರ್ಧೆಗಳನ್ನು ಡಿಸೆಂಬರ್ 14ರಂದು ಬೆಳಿಗ್ಗೆ 9ಕ್ಕೆ ನಂತೂರಿನ ಪಾದುವಾ ಹೈಸ್ಕೂಲ್‌ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ಪ್ರಕಟಣೆ ತಿಳಿಸಿದೆ.

Continue Reading

DAKSHINA KANNADA

ವಿಶ್ವಕಪ್ ಗೆದ್ದ ಚಾಂಪಿಯನ್ ಧನಲಕ್ಷ್ಮಿ ಪೂಜಾರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Published

on

ಮಂಗಳೂರು: ಬಾಂಗ್ಲಾದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ದಕ್ಷಿಣ ಭಾರತದ ಏಕೈಕ ಆಟಗಾರ್ತಿ ಸುರತ್ಕಲ್ ನ ಧನಲಕ್ಷ್ಮಿ ಪೂಜಾರಿ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ನೇತೃತ್ವದಲ್ಲಿ ಗುರುವಾರ ಸುರತ್ಕಲ್ ಕರ್ನಾಟಕ ಸೇವಾ ವೃಂದದ ವೇದಿಕೆಯಲ್ಲಿ ನಡೆಯಿತು. ಸುಮಾರು ಐವತ್ತಕ್ಕೂ ಅಧಿಕ ಸಂಘ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಧನಲಕ್ಷ್ಮಿ ಪೂಜಾರಿ ಅವರು ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗಾಯಗೊಂಡ ಸಂದರ್ಭ ಶಾಸಕರು ನೀಡಿದ ನೆರವನ್ನು ಸ್ಮರಿಸಿಕೊಂಡರಲ್ಲದೆ, ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಸಹಕಾರ ನೀಡಿದ ತರಬೇತುದಾರರು, ಸಂಘ ಸಂಸ್ಥೆಗಳ ನೆರವನ್ನು ಸ್ಮರಿಸಿಕೊಂಡರು.

ಶಾಸಕ ಡಾ.ಭರತ್ ಶೆಟ್ಟಿ  ವೈ ಮಾತನಾಡಿ, ಇಂದು ವಿಶ್ವ ಚಾಂಪಿಯನ್ ತಂಡವನ್ನು ಪ್ರತಿನಿಧಿಸುವ ಮೂಲಕ ನಮ್ಮ ಕ್ಷೇತ್ರ, ಜಿಲ್ಲೆ, ರಾಜ್ಯ ದೇಶಕ್ಕೆ ಕೀರ್ತಿಯನ್ನು ತಂದಿದ್ದಾರೆ. ಜೀವನದಲ್ಲಿ ಕಷ್ಟಗಳ ಸರಮಾಲೆಯನ್ನು ಎದುರಿಸುತ್ತ ಓದಿನ ಜೊತೆಗೆ ತನ್ನ ನೆಚ್ಚಿನ ಕಬಡ್ಡಿ ಕ್ರೀಡಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿರುವುದು ಎಲ್ಲಾ ಕ್ರೀಡಾಪಟುಗಳಿಗೂ ಮಾದರಿಯಾದ ಸಾಧನೆಯಾಗಿದೆ ಎಂದು ಶ್ಲಾಘಿಸಿದರು.

ಇದನ್ನೂ ಓದಿ: ಮಹಿಳಾ ವಿಶ್ವಕಪ್ ಕಬಡ್ಡಿಯಲ್ಲಿ ಆಳ್ವಾಸ್ ವಿದ್ಯಾರ್ಥಿನಿ ಧನಲಕ್ಷ್ಮೀ ಪೂಜಾರಿ

ಪ್ರಮುಖರಾದ ಮಹಾಬಲ ಪೂಜಾರಿ ಅವರು ಶುಭ ಹಾರೈಸಿದರು. ಪ್ರಮುಖರಾದ ರಾಜೇಶ್ ಕೊಟ್ಟಾರಿ, ಧನಲಕ್ಷ್ಮೀ ಪೂಜಾರಿ  ಹೆತ್ತವರು, ಬಿಜೆಪಿ ಪದಾಧಿಕಾರಿಗಳು, ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Continue Reading

DAKSHINA KANNADA

ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ; ಮಂಗಳೂರು ವಿಮಾನ ನಿಲ್ದಾಣದಲ್ಲೂ 17 ವಿಮಾನ ವಿಳಂಬ

Published

on

ಮಂಗಳೂರು: ದೇಶದ ಅತೀ ದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ನಿನ್ನೆಯೂ ಮುಂದುವರಿದಿದ್ದು, ಇದರ ಬಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿನ ಪ್ರಯಾಣಿಕರಿಗೂ ತಟ್ಟಿದೆ.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸುವ 5 ವಿಮಾನ ಹಾಗೂ ನಿರ್ಗಮಿಸುವ 5 ವಿಮಾನಗಳು ರದ್ದಾಗಿದ್ದು, ಒಟ್ಟು 17 ವಿಮಾನಗಳು ತಡವಾಗಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ಇತ್ತೀಚಿನ ಮಾಹಿತಿಗಳನ್ನು ಗಮನಿಸುವಂತೆ ಏರ್ಪೋರ್ಟಿನ ಪ್ರಕಟಣೆ ತಿಳಿಸಿದೆ.

ಮುಂಬಯಿ, ಹೊಸದಿಲ್ಲಿ, ಬೆಂಗಳೂರು ಇಂಡಿಗೋ ವಿಮಾನ ಗುರುವಾರ ರದ್ದುಗೊಂಡಿತ್ತು. ಕೆಲವರಿಗೆ ಕೆಲವು ತಾಸಿನ ಮೊದಲೇ ಮಾಹಿತಿ ರವಾನೆ ಆದ ಕಾರಣದಿಂದ ಬಹುತೇಕ ಮಂದಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿಲ್ಲ. ಕೊನೆಯ ಹಂತದಲ್ಲಿ ಗೊತ್ತಾದ ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಿ ಸಿಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಮುಂಗಡ ಬುಕ್ಕಿಂಗ್ ಮಾಡಿದ ಎಲ್ಲ ಪ್ರಯಾಣಿಕರು ವಿಮಾನ ಸಂಚಾರದ ಖಚಿತತೆ ತಿಳಿದು ವಿಮಾನ ನಿಲ್ದಾಣಕ್ಕೆ ಆಗಮಿಸುವಂತೆ ಸೂಚನೆಯನ್ನೂ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಕರಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ವೃದ್ಧ ದಂಪತಿ ಡಿಜಿಟಲ್‌ ಅರೆಸ್ಟ್‌ಗೆ ಯತ್ನ; ಸೈಬರ್‌ ಕಳ್ಳರ ಯತ್ನ ವಿಫಲಗೊಳಿಸಿದ ಬ್ಯಾಂಕ್‌ ಮ್ಯಾನೇಜರ್‌, ಪೊಲೀಸರು

ಮುಂಬಯಿ, ಹೊಸದಿಲ್ಲಿ ಸಹಿತ ಇತರ ಕಡೆಯಿಂದ ಬರುವ ಹಾಗೂ ಹೋಗುವ ಹಲವು ಇಂಡಿಗೋ ಹಾಗೂ ಏರ್‌ಇಂಡಿಯಾ ವಿಮಾನಗಳು ನಿಗದಿತ ಸಮಯಕ್ಕಿಂತ ಬರೋಬ್ಬರಿ 2-3 ತಾಸು ಹಾಗೂ ಅದಕ್ಕಿಂತ ಅಧಿಕ ಸಮಯ ತಡವಾಗಿಯೇ ಸಂಚಾರ ನಡೆಸಿದೆ. ಅರ್ಧ ತಾಸಿಗಿಂತ ಅಧಿಕ ತಡವಾಗಿ ಮಂಗಳೂರಿನಿಂದ ಒಟ್ಟು 17 ವಿಮಾನಗಳು ಸಂಚರಿಸಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page