Connect with us

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

BANTWAL

ಬಂಟ್ವಾಳ: ನಿಯಂತ್ರಣ ‌ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಸ್ಕೂಟರ್; ಸವಾರ ದುರ್ಮರಣ

Published

on

ಬಂಟ್ವಾಳ: ಸ್ಕೂಟರ್ ಒಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಎಪ್ರಿಲ್‌ 15ರ ರಂದು ರಾತ್ರಿ ಕಳ್ಳಿಗೆ ಗ್ರಾಮದ ವಿರಾಜೆ ಎಂಬಲ್ಲಿ ಸಂಭವಿಸಿದೆ.

ಕಳ್ಳಿಗೆ ಗ್ರಾಮದ ಕಾರೆಜಾಲ್‌ ನಿವಾಸಿ ಮೆಲ್‌ ರಾಯ್‌ ಡೇಸಾ (25) ಮೃತಪಟ್ಟ ಯುವಕ. ಖಾಸಗಿ ಬ್ಯಾಂಕೊಂದರ ಉದ್ಯೋಗಿಯಾಗಿದ್ದ ಮೆಲ್‌ ರಾಯ್‌ ಡೇಸಾ ಅವರು ಕೆಲಸ ಮುಗಿಸಿ ಮನೆಗೆ ತೆರಳಲು ಬ್ರಹ್ಮರಕೋಟ್ಲು ಕಡೆಯಿಂದ ಕಳ್ಳಿಗೆ ಮಾರ್ಗದಲ್ಲಿ ಸ್ಕೂಟರ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಕೂಟರ್‌ ಸಮೇತ ಹೊಂಡಕ್ಕೆ ಬಿದ್ದ ಕಾರಣ ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಗಮನಿಸಿ ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಅಷ್ಟರಲ್ಲಿ ಅವರು ಮೃತ ಪಟ್ಟಿದ್ದರು. ತೊಡಂಬಿಲ ಚರ್ಚ್ ನ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಮೆಲ್‌ ರಾಯ್‌ ಅವರು ಐಸಿವೈಎಂ ತೊಡಂಬಿಲ ಘಟಕದ ಅಧ್ಯಕ್ಷರಾಗಿದ್ದರು. ಘಟನೆಗೆ ಸಂಬಂಧಿಸಿ ಬಂಟ್ವಾಳ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

BANTWAL

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ

Published

on

ಬಂಟ್ವಾಳ: ಪಾಣೆಮಂಗಳೂರು ಜೈನರಪೇಟೆ ನೂರುಗುಡ್ಡೆ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ನಿನ್ನೆ (ಏ.12) ನಡೆದಿದೆ.

ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಾಗೇಶ್ ಪೂಜಾರಿ ವಿಟ್ಲದಲ್ಲಿ ಹೊಟೇಲ್ ಕಾರ್ಮಿಕನಾಗಿ ದುಡಿಯುತ್ತಿದ್ದು, ಆಕಸ್ಮಿಕವಾಗಿ ನೀರಿಗೆ ಬಿದ್ದಿರುವುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಅವರು 2-3 ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯ ಈಜುಗಾರರು ಮೇಲಕ್ಕೆತ್ತಿದ್ದರು.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಬಂಟ್ವಾಳ: ಅಕಾಲಿಕ ಮಳೆಗೆ ಭರಸಿಡಿಲು ಬಡಿದು ಮನೆಗೆ ಹಾನಿ

Published

on

ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ವಿದ್ಯುತ್ ಪರಿಕರಗಳೆಲ್ಲಾ ಹಾನಿಯಾದ ಘಟನೆ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮ ಕಾವಳಕಟ್ಟೆ ಎಂಬಲ್ಲಿ ನಡೆದಿದೆ.

ಕಾವಳಕಟ್ಟೆಯ ಎಂ.ಪಿ ಸರ್ಕಲ್ ನಿವಾಸಿ ಸೈಫುಲ್ಲಾ ಅವರ ಮನೆಗೆ ಸಿಡಿಲು ಬಡಿದಿದೆ. ಇದರಿಂದಾಗಿ ಅವರ ಮನೆಯ ಕರೆಂಟ್‌ನ ಮೀಟರ್, ಫ್ಯಾನ್, ಟಿ.ವಿ ಹಾಗೂ ಕೆಲ ವಸ್ತುಗಳು ವಿದ್ಯುತ್‌ನ ಅಘಾತಕ್ಕೆ ಸುಟ್ಟು ಕರಕಲಾಗಿದೆ.

ಆದರೆ ಮನೆ ಮಂದಿಗೆ ಯಾವೂದೇ ರೀತಿಯ ಅಪಾಯ ಸಂಭವಿಸಲಿಲ್ಲ. ಸ್ಥಳಕ್ಕೆ ಜಿ.ಪಂ ಮಾಜಿ ಸದಸ್ಯ ಬಿ. ಪದ್ಮಶೇಖರ್ ಜೈನ್ ಅವರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. ಬಳಿಕ ಮೆಸ್ಕಾಂ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page