Connect with us

LATEST NEWS

ಆಪಲ್ ಐಫೋನ್‌ಗಳು ಪ್ರತಿ ವರ್ಷ ಸೆಪ್ಟೆಂಬರ್​ನಲ್ಲೇ ​ಬಿಡುಗಡೆಯಾಗೋದೇಕೆ? ಇದರ ಹಿಂದಿದೆ ಈ ಕಾರಣ

Published

on

ಮಂಗಳೂರು: ಕೋಟ್ಯಂತರ ಜನರ ಬಹಳ ಸಮಯದಿಂದ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಮೊನ್ನೆಯಷ್ಟೆ ಆಪಲ್ ಹೊಸ ಐಫೋನ್ 16 ಸರಣಿ ಮತ್ತು ಆಪಲ್ ಏರ್​ಪಾ​ಡ್ಸ್ 4, ಆಪಲ್ ವಾಚ್ ಸೀರಿಸ್ 10 ಮತ್ತು ಹೊಸ ಆಪಲ್ ವಾಚ್ ಆಲ್ಟ್ರಾ-2 ಅನ್ನು ಬಿಡುಗಡೆ ಮಾಡಿದೆ. ಕಳೆದ ಬಾರಿಗಿಂತ, ಈ ಬಾರಿ ಆಪಲ್ ಐಫೋನ್ ಸರಣಿಯಲ್ಲಿ ಅನೇಕ ಹೊಸ ಹೊಸ ಫೀಚರ್ಸ್ ನೀಡಲಾಗಿದೆ. ಅಲ್ಲದೆ, AI ಬೆಂಬಲವನ್ನು ಸಹ ಒದಗಿಸಲಾಗಿದೆ. ಆದರೆ, ಆಪಲ್ ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿಯೇ ಹೊಸ ಐಫೋನ್‌ಗಳನ್ನು ಏಕೆ ಬಿಡುಗಡೆ ಮಾಡುತ್ತದೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ..?

ಈ ವರ್ಷ ಐಫೋನ್ 16 ಸರಣಿಯನ್ನು ಸೆಪ್ಟೆಂಬರ್ 9 ರಂದು ಬಿಡುಗಡೆ ಮಾಡಲಾಯಿತು. ಐಫೋನ್ 15 ಸರಣಿಯ ಬಿಡುಗಡೆ ದಿನಾಂಕ 12 ಸೆಪ್ಟೆಂಬರ್ 2023 ಆಗಿತ್ತು. ಆದರೆ, ಮೊದಲ ಐಫೋನ್ ಜೂನ್ 29, 2007 ರಂದು ಅನಾವರಣಗೊಳಿಸಲಾಯಿತು. ಆ ಬಳಿಕ ಆಪಲ್‌ನ ಹೆಚ್ಚಿನ ಹೊಸ ಐಫೋನ್ ಸರಣಿಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮಾತ್ರ ರಿಲೀಸ್ ಆಗಿದೆ. ಬಿಡುಗಡೆಯ ದಿನಾಂಕದಲ್ಲಿ ಮಾತ್ರ ವ್ಯತ್ಯಾಸವಿತ್ತಷ್ಟೆ, ಆದರೆ ತಿಂಗಳು ಸೆಪ್ಟೆಂಬರ್ ಆಗಿತ್ತು. ಸೆಪ್ಟೆಂಬರ್‌ನಲ್ಲಿಯೇ ಐಫೋನ್ ಹೊಸ ಸರಣಿ ಪ್ರಾರಂಭಿಸುವ ಹಿಂದೆ ಆಪಲ್ ಏನಾದರೂ ದೊಡ್ಡ ತಂತ್ರವನ್ನು ಹೊಂದಿದೆಯೇ? ಇದು ದೊಡ್ಡ ಮಾರ್ಕೆಟಿಂಗ್ ಗಿಮಿಕ್ ಆಗಿದೆಯೇ? ಇಂತಹ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ವಿವರವಾಗಿ ತಿಳಿದುಕೊಳ್ಳೋಣ.

ಆಪಲ್​ನ ಆರ್ಥಿಕ ವರ್ಷ

ಆಪಲ್ ಕಂಪನಿಯ ಆರ್ಥಿಕ ವರ್ಷ ಸಂಪೂರ್ಣ ಭಿನ್ನವಾಗಿದೆ. ಆಪಲ್ ತನ್ನದೇ ಆದ ಪ್ರತ್ಯೇಕ ಆರ್ಥಿಕ ವರ್ಷವನ್ನು ಹೊಂದಿದೆ. ಆಪಲ್‌ನ ಆರ್ಥಿಕ ವರ್ಷವು ಸೆಪ್ಟೆಂಬರ್‌ನ ಕೊನೆಯ ಭಾನುವಾರದಂದು ಪ್ರಾರಂಭವಾಗುತ್ತದೆ ಮತ್ತು ಮುಂದಿನ ವರ್ಷದ ಸೆಪ್ಟೆಂಬರ್‌ನ ಕೊನೆಯ ಶನಿವಾರದಂದು ಕೊನೆಗೊಳ್ಳುತ್ತದೆ.

ಉದಾಹರಣೆಗೆ, ಈ ವರ್ಷ ಅಂದರೆ 2024ರ ಆಪಲ್​ನ ಹಣಕಾಸು ವರ್ಷವು ಸೆಪ್ಟೆಂಬರ್, 29ರ ಕೊನೆಯ ಭಾನುವಾರದಂದು ಪ್ರಾರಂಭವಾಗುತ್ತದೆ ಮತ್ತು ಮುಂದಿನ ವರ್ಷ 2025ರ ಸೆಪ್ಟೆಂಬರ್ 27 ರ ಕೊನೆಯ ಶನಿವಾರದಂದು ಕೊನೆಗೊಳ್ಳುತ್ತದೆ. ಹೀಗೆ ಆಪಲ್‌ನ ಹಣಕಾಸು ವರ್ಷವು ಎಲ್ಲಾ ಕಂಪನಿಗಳಿಗಿಂತ ಭಿನ್ನವಾಗಿದೆ. ಆದ್ದರಿಂದ ಹಣಕಾಸು ವರ್ಷದ ಅಂತ್ಯದ ಮೊದಲು ಹೊಸ ಐಫೋನ್ ಸರಣಿಯನ್ನು ಕಂಪನಿ ಪ್ರಾರಂಭಿಸುತ್ತದೆ.

ಹಬ್ಬದ ಸೀಸನ್

ಭಾರತ ಸೇರಿದಂತೆ ವಿಶ್ವದಲ್ಲಿ ಮೂರನೇ ತ್ರೈಮಾಸಿಕದ ಕೊನೆಯ ತಿಂಗಳು ಸೆಪ್ಟೆಂಬರ್​ನಲ್ಲಿ ಕೊನೆಗೊಳ್ಳುತ್ತದೆ. ನಾಲ್ಕನೇ ಅಂದರೆ ಕೊನೆಯ ತ್ರೈಮಾಸಿಕ ಅಕ್ಟೋಬರ್‌ನಿಂದ ಪ್ರಾರಂಭವಾಗುತ್ತದೆ. ಭಾರತ ಸೇರಿದಂತೆ ಜಗತ್ತಿನಲ್ಲಿ, ಅಕ್ಟೋಬರ್ ನಾಲ್ಕನೇ ತ್ರೈಮಾಸಿಕದಿಂದ ಹಬ್ಬಗಳು, ಜಾತ್ರೆಗಳು ಶುರುವಾಗುತ್ತವೆ. ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ, ದೀಪಾವಳಿ, ಕ್ರಿಸ್‌ಮಸ್, ಹೊಸ ವರ್ಷದಂತಹ ಅನೇಕ ದೊಡ್ಡ ಹಬ್ಬಗಳನ್ನು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದು ಹಬ್ಬದ ಸೀಸನ್ ಎನ್ನಬಹುದು.

ಹಬ್ಬದ ಋತುವಿನ ಸಮಯವನ್ನು ಗಮನದಲ್ಲಿಟ್ಟುಕೊಂಡು, ಆಪಲ್ ಸೆಪ್ಟೆಂಬರ್‌ನಲ್ಲಿ ಹೊಸ ಐಫೋನ್ ಸರಣಿಯನ್ನು ಪ್ರಾರಂಭಿಸುವುದು ಮತ್ತೊಂದು ಟ್ರಿಕ್ ಆಗಿದೆ. ಏಕೆಂದರೆ ಜನರು ದೀಪಾವಳಿ, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂದರ್ಭ ನೂತನವಾದ ಫೋನನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಾರೆ. ಹೀಗಾಗಿ ದೇಶ ಮತ್ತು ಪ್ರಪಂಚದಲ್ಲಿ ಹಬ್ಬದ ಸೀಸನ್ ಪ್ರಾರಂಭವಾಗುವ ಮೊದಲು ಸೆಪ್ಟೆಂಬರ್‌ನಲ್ಲಿಯೇ ಹೊಸ ಸರಣಿಯ ಐಫೋನ್‌ಗಳನ್ನು ಪ್ರಾರಂಭಿಸಲು ಇದು ಮುಖ್ಯ ಕಾರಣ.

ಹಾಗೆಯೇ ಹಬ್ಬದ ಋತುವಿನಲ್ಲಿ, ಅನೇಕ ಇ-ಕಾಮರ್ಸ್ ವೆಬ್‌ಸೈಟ್‌ಗಳು ಐಫೋನ್ ಖರೀದಿಯ ಮೇಲೆ ಭಾರಿ ರಿಯಾಯಿತಿ ಕೊಡುಗೆಗಳನ್ನು ನೀಡುತ್ತವೆ. ಆದ್ದರಿಂದ ಈ ಸಮಯದಲ್ಲಿ, ಹೊಸ ರೂಪಾಂತರವನ್ನು ಬಿಡುಗಡೆ ಮಾಡಿದಾಗ, ಹಳೆಯ ಐಫೋನ್‌ನ ಬೆಲೆ ತೀವ್ರವಾಗಿ ಕುಸಿಯುತ್ತದೆ. ಆಗ ಆಪಲ್ ಉತ್ಪನ್ನಗಳು ಹೆಚ್ಚು ಮಾರಾಟವಾಗುತ್ತದೆ.

LATEST NEWS

ಏರುತ್ತಿರುವ ಬಿಸಿಲಿನ ಧಗೆ, ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಯಾರೂ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

Published

on

ರಾಯಚೂರು: ರಾಜ್ಯದಲ್ಲಿ ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಹೀಗಾಗಿ ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಯಾರೂ ಹೊರಗೆ ಬರಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಉಷ್ಣಾಂಶ ಹೆಚ್ಚಳ ಹಾಗೂ ಗಾಳಿಯಲ್ಲಿ ತೇವಾಂಶ ಕಡಿಮೆ ಆಗಿರುವ ಹಿನ್ನೆಲೆ ಜನರಿಗೆ ಹಗಲು ಮತ್ತು ರಾತ್ರಿಯ ವೇಳೆ ಸಹ ಸೆಖೆಯ ಅನುಭವವಾಗುತ್ತಿದೆ. ಒಟ್ಟಾರೆ ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚು ತಾಪಮಾನ ದಾಖಲಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ ಎಂದರು.

ಬಿಸಿಲು ಹೆಚ್ಚಾಗುತ್ತಿರುವುದರಿಂದ ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.

Continue Reading

LATEST NEWS

ಕಲಿಕೆಯಲ್ಲಿ ಹಿಂದುಳಿದಿದ್ದ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿದ ತಂದೆ

Published

on

ಆಂಧ್ರಪ್ರದೇಶ: ಶಾಲೆಯಲ್ಲಿ ಮಕ್ಕಳು ಓದಿನಲ್ಲಿ ಹಿಂದಿ ಇದ್ದರಿಂದ ಬೇಸರಗೊಂಡು ತಂದೆಯು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿಯಲ್ಲಿ ನಡೆದಿದೆ.

ತಂದೆ ಚಂದ್ರಕಿಶೋರ್ ಹಾಗೂ ಮಕ್ಕಳಾದ ಜೋಶಿಲ್ ಹಾಗೂ ನಿಖಿಲ್ ಸಾವಿಗೀಡಾದವರು. ಚಂದ್ರಕಿಶೋರ್ ಸ್ಥಳೀಯ ಒಎನ್‌ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದರು. ತನ್ನ ಒಬ್ಬರು ಮಕ್ಕಳು ಶಾಲೆಯಲ್ಲಿ ಓದಿನಲ್ಲಿ ಹಿಂದೆ ಇರುವುದೇ ಈತನಿಗೆ ದೊಡ್ಡ ಚಿಂತೆಯಾಗಿತ್ತು. ಹಾಗಾಗಿ ಒಂದು ದಿನ ಪತ್ನಿ ಮತ್ತು ಮಕ್ಕಳನ್ನು ತನ್ನ ಕಚೇರಿಗೆ ಕರೆದು ಬಳಿಕ ಪತ್ನಿಯನ್ನು ಕಛೇರಿಯಲ್ಲೇ ಇರುವಂತೆ ಹೇಳಿ ಇಬ್ಬರು ಮಕ್ಕಳನ್ನು ಶಾಲೆಯ ಸಮವಸ್ತ್ರದ ಅಳತೆಯನ್ನು ತೆಗೆಯಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಹೇಳಿ ಹೋಗಿದ್ದಾನೆ.

ಆದರೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿ ನೀರು ತುಂಬಿದ ಬಕೆಟ್‌ನಲ್ಲಿ ಇಬ್ಬರು ಮಕ್ಕಳ ಮುಖವನ್ನು ಮುಳುಗಿಸಿ ಕೊಂದಿದ್ದಾನೆ. ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಪತಿ ಬಹಳ ಸಮಯವಾದರೂ ಹಿಂತಿರುಗದಿದ್ದಾಗ, ತನುಜಾ ತನ್ನ ಸಹೋದ್ಯೋಗಿಗಳೊಂದಿಗೆ ಮನೆಗೆ ಹೋಗಿದ್ದಾಳ ಕಿಟಕಿಯಿಂದ ಮನೆಯೊಳಗೆ ನೋಡಿದಾಗ, ಪತಿ ಮತ್ತು ಮಕ್ಕಳು ಸತ್ತಿರುವುದು ಕಂಡು ಬಂದಿದೆ.

ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಚಂದ್ರಕಿಶೋರ್ ಬರೆದಿರುವ ಡೆತ್ ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ.

Continue Reading

FILM

ರೀಲ್ಸ್ ರಾಣಿ ರೇಷ್ಮಾ ಆಂಟಿ ಕಿಡ್ನಾಪ್

Published

on

ಮಂಗಳೂರು/ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ‘ಹಾಯ್ ಫ್ರೆಂಡ್ಸ್ ಏನ್ ಗೊತ್ತಾ’ ಅಂತ ಹೇಳುತ್ತಲೇ ವಿಡಿಯೋ ಮಾಡಿ ಫೇಮಸ್ ಆಗಿದ್ದ ರೇಷ್ಮಾ ಯಾಸಿನ್ ಸಖತ್ ಸುದ್ದಿಯಲ್ಲಿದ್ದಾರೆ. ಆದರೆ ಇದೀಗ ಕಿಡ್ನಾಪ್ ಆಗಿರೋ ರೀತಿಯಲ್ಲಿ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.


ಗಿಚ್ಚಿ ಗಿಲಿಗಿಲಿ ಸೀಸನ್ 3ರ ಸ್ಪರ್ಧಿಯಾಗಿ ಇಡೀ ಕರ್ನಾಟಕಕ್ಕೆ ಫೇಮಸ್ ಆಗಿರುವ ರೇಷ್ಮಾ ಯಾಸಿನ್ ಅವರು ತಮ್ಮ ವೈರಲ್ ವಿಡಿಯೋಗಳಿಂದಲೇ ಇಂದು ಸೆಲಿಬ್ರಿಟಿಯಾಗಿದ್ದಾರೆ. ಜನರು ಸಹ ರೇಷ್ಮಾ ಅವರ ವಿಡಿಯೋಗಳಿಗೆ ಪ್ರೀತಿಯನ್ನು ನೀಡುತ್ತಿದ್ದು, ಅಧಿಕ ವ್ಯೂವ್ಸ್ ಪಡೆದುಕೊಳ್ಳುತ್ತಿರುತ್ತವೆ. ಇದೀಗ ಕಿಡ್ನಾಪ್ ಆಗಿರೋ ರೀತಿಯಲ್ಲಿ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕೆಆರ್‌ಎಸ್ ಡ್ಯಾಂಗೆ ಎತ್ತಿ ಹಾಕುವೆ ಎಂದ ರವಿ ಮಂಡ್ಯ
ಸದ್ಯ ವೈರಲ್ ವಿಡಿಯೋದಲ್ಲಿ ಹಾಯ್ ಫ್ರೆಂಡ್ಸ್. ನೀವು ನನ್ನನ್ನು ಎಷ್ಟು ಬೆಳೆಸಿದ್ದೀರಿ ಅಂದ್ರೆ ರವಿ ಮಂಡ್ಯ ಅವರನ್ನು ನಾನು ಪರ್ಸನಲ್ ಮೇಕಪ್ ಮ್ಯಾನ್ ಆಗಿ ಇಟ್ಕೊಂಡಿದ್ದೇನೆ ಎಂದು ರೇಷ್ಮಾ ಆಂಟಿ ಹೇಳುತ್ತಾರೆ. ಇದಕ್ಕೆ ಕೋಪಗೊಳ್ಳುವ ರವಿ ಮಂಡ್ಯ, ಒಮಿನಿ ವ್ಯಾನ್ ಡಿಕ್ಕಿ ಓಪನ್ ಮಾಡುತ್ತಾರೆ. ನಂತರ ರೇಷ್ಮಾ ಕೈ-ಕಾಲುಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಡಿಕ್ಕಿಯೊಳಗೆ ಹಾಕುತ್ತಾರೆ. ಬಿದ್ಕೋ ಕಪಿ ಮುಂಡೆದೆ, ಇನ್ನೊಂದ್ ಸಾರಿ ಆ ಕಟ್ಟಪ್ಪನ ಜೊತೆ ನೀನು ವಿಡಿಯೋನೇ ಮಾಡಬಾರದು. ನಿನ್ನನ್ನು ಕೆಆರ್‌ಎಸ್ ಡ್ಯಾಂಗೆ ಎತ್ತಿ ಹಾಕುವೆ ಎಂದು ವ್ಯಾನ್ ಚಾಲನೆ ಮಾಡಿಕೊಂಡು ಹೋಗುತ್ತಾರೆ.

ಇದನ್ನೂ ಓದಿ: ಶ್ರೀಲೀಲಾ ಅಭಿನಯದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್!

ಈ ರೀಲ್ಸ್‌ ನೋಡಿದ ನೆಟ್ಟಿಗರು, ಅಣ್ಣ ತುಂಬಾ ಉಪಕಾರ ಮಾಡಿದ್ರಿ, ಫಸ್ಟ್ ತಗೊಂಡ್ ಹೋಗಿ ಕೆಆರ್‌ಎಸ್ ಡ್ಯಾಮ್‌ಗೆ ಆಕ್ಬಿಡು ದೇವರು ಒಳ್ಳೇದ್ ಮಾಡ್ತಾನೆ ನಿನಗೆ ಎಂದು ತಮ್ಮ ಗೋಳು ತೋಡಿಕೊಂಡಿದ್ದಾರೆ. ಇವ್ಳ ಕರ್ಕೊಂಡು ಹೋಗಿ ಕಾಡಲ್ಲಿ ಬಿಟ್ ಬಂದ್ಬಿಡು ಇಲ್ಲಿ ಇವರ ಕಾಟ ತಡೆಯೋಕೆ ಆಗ್ತಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page