Connect with us

LATEST NEWS

ಮನೆ ಮೇಲೆ ಕಾಗೆ ಕುಳಿತರೆ ಶುಭವೇ..?

Published

on

ಹಿಂದೂ ಧರ್ಮದಲ್ಲಿ ಅನೇಕ ಪ್ರಾಣಿ ಪಕ್ಷಿಗಳನ್ನು ನಾವು ಶುಭ, ಅಶುಭಗಳನ್ನಾಗಿ ವಿಂಗಡಿಸುತ್ತೇವೆ. ಇದರಲ್ಲಿ ಕಾಗೆ ಕೂಡಾ ಅನೇಕ ನಂಬಿಕೆಗಳನ್ನು ಒಳಗೊಂಡಿದೆ. ಇನ್ನು ಕಾಗೆಯನ್ನು ಕೆಲವರು ಅಶುಭ ಎಂದು ಹೇಳಿದ್ರೆ ಇನ್ನೂ ಕೆಲವರು ಶುಭ ಎಂದು ಪರಿಗಣಿಸುತ್ತಾರೆ.

 

ಸನಾತನ ನಂಬಿಕೆಗಳ ಪ್ರಕಾರ ಪಿತೃ ಪಕ್ಷದಂದು ಕಾಗೆಗಳಿಗೆ ಆಹಾರ ನೀಡುವುದರಿಂದ ಶುಭವಾಗುತ್ತದೆ. ಯಾಕಂದ್ರೆ ನಮ್ಮ ಪಿತೃಗಳು ಪಿತೃ ಪಕ್ಷದಂದು ಕಾಗೆಯ ರೂಪದಲ್ಲಿ ಬಂದು ಆಹಾರ ಸೇವನೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಇದು ಪಿತೃಗಳನ್ನು ಸಂತೋಷಪಡಿಸುತ್ತದೆ ಮತ್ತು ಅವರನ್ನು ತೃಪ್ತಿಗೊಳಿಸುತ್ತದೆ.  ಇನ್ನು ಕಾಗೆಗಳು ಮನೆಗೆ ಬಂದರೆ ಶುಭವೇ? ಇದು ಏನನ್ನು ಸೂಚಿಸುತ್ತದೆ.

ಮುಂಜಾನೆ ನಿಮ್ಮ ಮನೆಯ ಮೇಲ್ಭಾಗದಲ್ಲಿ ಕಾಗೆ ಕುಳಿತರೆ, ಮನೆಗೆ ಅತಿಥಿಗಳ ಆಗಮನ ಆಗಲಿದೆ ಎಂಬ ನಂಬಿಕೆ ಇದೆ. ಇನ್ನು ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಕಾಗೆ ಕೂಗುತ್ತಿದ್ದರೆ, ಇದು ಕೂಡಾ ಅತಿಥಿಯ ಆಗಮನ ಅಥವಾ ಹಳೆ ಸ್ನೇಹಿತನ ಭೇಟಿಯ ಸೂಚನೆಯನ್ನು ನೀಡುತ್ತದೆ.

ಮನೆಗೆ ಕಾಗೆಗಳ ದಂಡು ಬರುತ್ತಿದೆ ಅಂದ್ರೆ ಜಾಗೂರಕರಾಗಬೇಕು. ಯಾಕಂದ್ರೆ ಇದು ಅಶುಭವನ್ನು ಹೊತ್ತು ತರುತ್ತದೆ.  ಅಲ್ಲದೆ ಕುಟುಂಬದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ದಕ್ಷಿಣ ದಿಕ್ಕಿನಲ್ಲಿ ಕಾಗೆ ಕುಳಿತರೆ ಅದನ್ನು ಶುಭ ಎಂದು ಪರಿಗಣಿಸಲಾಗುವುದಿಲ್ಲ. ಇದು ಪಿತೃದೋಷವನ್ನು ಸೂಚಿಸುವುದರಿಂದ ಕೂಡಲೇ ಪಿತೃ ದೋಷ ಪರಿಹಾರ ಮಾಡಿಕೊಳ್ಳುವುದು ಉತ್ತಮ.

ಇದನ್ನೂ ಓದಿ..; ಇನ್ನೂ ಪ್ಯಾನ್ ಕಾರ್ಡ್‌ಗೆ ಆಧಾರ್ ಲಿಂಕ್‌ ಮಾಡಿಲ್ವಾ..!? ಹಾಗಿದ್ರೆ ಈ ಸ್ಟೋರಿ ನೋಡಿ

ಇನ್ನು ಪಿತೃ ಪಕ್ಷದಲ್ಲಿ ಕಾಗೆಗಳಿಗೆ ಆಹಾರ ನೀಡಿದರೆ ಅದು ಶುಭವನ್ನು ನೀಡುತ್ತದೆ ಎಂದು ಪರಿಗಣಿಸಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಪ್ರಯಾಣಕ್ಕೆ ಹೋಗುವ ಮುನ್ನ ಕಾಗೆಗಳಿಗೆ ಮೊಸರು ಅಥವಾ ಅನ್ನವನ್ನು ಸಮರ್ಪಿಸಿದರೆ ಪ್ರಯಾಣ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಇನ್ನು ಮುಂದೆ ಕೆ.ಪಿ.ಎಸ್.ಸಿ ಪರೀಕ್ಷೆ ಬರೆಯಲು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಕಡ್ಡಾಯ

Published

on

ಬೆಂಗಳೂರು: ಫೆ.16ರಿಂದ ಕರ್ನಾಟಕ ಲೋಕ ಸೇವಾ ಆಯೋಗವು(ಕೆಪಿಎಸ್‍ಸಿ) ನಡೆಸುವ ಮುಂದಿನ ಎಲ್ಲಾ ಪರೀಕ್ಷೆಗಳನ್ನು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್‍ಗಳನ್ನು ಮಾತ್ರ ಬಳಸಬೇಕು ಎಂದು ಆಯೋಗದ ಸಹಾಯಕ ಕಾರ್ಯದರ್ಶಿ ಟಿ. ಪ್ರಕಾಶ್ ಆದೇಶಿಸಿದ್ದಾರೆ.

ಈ ಮೊದಲು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅಭ್ಯರ್ಥಿಗಳಿಗೆ ಕಪ್ಪು ಬಾಲ್ ಪೆನ್ ಅನ್ನು ಬಳಸಲಾಗುತ್ತಿತ್ತು. ಇದೀಗ ಈ ಸೂಚನೆಯನ್ನು ಮಾರ್ಪಡಿಸಲಾಗಿದೆ. ಕಪ್ಪು ಬಾಲ್ ಪಾಯಿಂಟ್ ಪೆನ್ ಬದಲು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್‍ಗಳನ್ನು ಮಾತ್ರ ಬಳಸಬೇಕು ಎಂದು ಅವರು ಶುಕ್ರವಾರ ಪ್ರಕಟನೆ ಹೊರಡಿಸಿದ್ದಾರೆ.

Continue Reading

LATEST NEWS

ಬೀದರ್ ನಲ್ಲಿ ಮರ್ಯಾದಾ ಹತ್ಯೆ..! ಮಗಳನ್ನೇ ಕೊಂದ ತಂದೆ

Published

on

ಬೀದರ್: ಪ್ರೀತಿ ಮಧುರ ತ್ಯಾಗ ಅಮರ ಎನ್ನುವ ಮಾತಿದೆ. ಅಲ್ಲದೇ ಪ್ರೇಮಿಗಳ ದಿನ ಬರಲು ಇನ್ನೇನು ಸಮೀಪದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಪ್ರೀತಿ ಮಾಡಿ ಮದುವೆ ಆಗುವವರ ಸಂಖ್ಯೆಯೇ ಹೆಚ್ಚಾಗಿದೆ. ಮಕ್ಕಳು ಪ್ರೀತಿ ಮಾಡುತ್ತಿದ್ದಾರೆ ಎಂದರೆ ಪೋಷಕರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಯಾಕೆಂದರೆ ಹೊತ್ತು, ಹೆತ್ತು ಸಾಕಿ ಸಲಹಿದ ಮಗಳ ಕಾಳಜಿ ಬೆಟ್ಟದಷ್ಟಿರುತ್ತದೆ. ಪ್ರೀತಿಯಿಂದ ಸಾಕಿದ ಮಕ್ಕಳನ್ನು ಒಂದು ಒಳ್ಳೆಯ ಮನೆಗೆ ಕೊಡಬೇಕು ಎಂದು ಹೆತ್ತವರು ಆಸೆ ಪಡುತ್ತಾರೆ. ಕೆಲವರು ಮನೆಯವರ ಒಪ್ಪಿಗೆಯ ಮೇಲೆ ಪ್ರೀತಿ ಮಾಡಿ ಮದುವೆ ಆಗುತ್ತಾರೆ. ಆದರೆ ಇಲ್ಲೊಬ್ಬ ತಂದೆ ತನ್ನ ಮಗಳನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಹೌದು ಇಂತಹದೊಂದು ಘಟನೆ ನಡೆದಿರುವುದು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾ ಎನ್ನುವ ಗ್ರಾಮದಲ್ಲಿ. ಮಗಳು ತಂದೆಯ ಬಳಿ ನಾನು ಒಬ್ಬನನ್ನು ಇಷ್ಟ ಪಡುತ್ತಿದ್ದೇನೆ. ಅವನೊಂದಿಗೆ ನನ್ನ ವಿವಾಹ ಮಾಡಿಕೊಡಿ ಎಂದು ಹೇಳಿದ್ದಕ್ಕೆ ತಂದೆ ಮಗಳನ್ನೇ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.

ಮಗಳ ಪ್ರೀತಿಯನ್ನು ನಿರಾಕರಿಸಿದ ತಂದೆ

ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ಯುವತಿ. ಮೋನಿಕಾ ಒಬ್ಬ ಯುವಕನನ್ನು ತುಂಬಾ ಸಮಯದಿಂದ ಪ್ರೀತಿಸುತ್ತಿದ್ದಳು. ಇದನ್ನು ತಂದೆಯ ಬಳಿ ಹೇಳಿದಾಗ ತಂದೆ ಅದನ್ನು ನಿರಾಕರಿಸಿ, ಈ ಪ್ರೀತಿ ಪ್ರೇಮದಿಂದ ನೀನು ದೂರವಿರಬೇಕು. ಅವನನ್ನು ಮರೆತು ಬಿಡು. ನಾನು ನಿನಗೆ ಒಳ್ಳೆಯ ಹುಡುಗನನ್ನು ನೋಡುತ್ತೇನೆ ಎಂದು ಮಗಳಿಗೆ ತಿಳುವಳಿಕೆ ಹೇಳಿದ್ದರು.

ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ

ಆದರೂ ಮೋನಿಕಾ ತನ್ನ ಹುಡುಗನನ್ನು ಬಿಡಲು ಒಪ್ಪಿರಲಿಲ್ಲವಂತೆ. ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುತ್ತೇನೆ ಎಂದು ಹಠ ಮಾಡಿದ್ದಾಳೆ. ಮಗಳ ಮೇಲೆ ಕೋಪಗೊಂಡಿದ್ದ ತಂದೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಅಡುಗೆ ಮಾಡುತ್ತಿದ್ದ ಮಗಳ ಕುತ್ತಿಗೆಗೆ ಹಗ್ಗ ಬಿಗಿದು ಅವಳ ಕಥೆಯನ್ನು ಮುಗಿಸಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಮೋನಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಮೃತ ಯುವತಿಯ ತಾಯಿ ಭಾಗುಬಾಯಿ ದೂರು ನೀಡಿದ್ದಾಳೆ.

Continue Reading

FILM

ಅಭಿಮಾನಿಗಳಿಗೆ ನಿರಾಸೆ…ಗೆಳತಿಯ ಆಸೆ ಈಡೇರಿಸುತ್ತೇನೆ ಎಂದ ಡಿಬಾಸ್

Published

on

ಮಂಗಳೂರು/ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ನಟ ದರ್ಶನ್ ಹುಟ್ಟುಹಬ್ಬ. ಡಿಬಾಸ್ ಅಭಿಮಾನಿಗಳು ದಿನಗಣನೆ ಮಾಡುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ದರ್ಶನ್ ಭೇಟಿಯಾಗುವ ಆಸೆಯಲ್ಲಿದ್ದಾರೆ. ಆದರೆ, ಅಭಿಮಾನಿಗಳಿಗೆ ದರ್ಶನ್ ನಿರಾಸೆಯುಂಟು ಮಾಡಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿ ದರ್ಶನ್ ವೀಡಿಯೋವೊಂದನ್ನು ಹರಿಬಿಟ್ಟಿದ್ದಾರೆ.  ಈ ಬಾರಿ ಹುಟ್ಟುಹಬ್ಬಕ್ಕೆ  ಅಭಿಮಾನಿಗಳನ್ನು ಭೇಟಿಯಾಗಲು ಆಗುವುದಿಲ್ಲ ಎಂದಿದ್ದಾರೆ.  ಬೆನ್ನುನೋವಿನಿಂದ ಬಳಲುತ್ತಿರುವುದರಿಂದ ಬಹಳ ಹೊತ್ತು ನಿಲ್ಲಲಾಗುವುದಿಲ್ಲ. ಎಲ್ಲರಿಗೂ ವಿಶ್ ಮಾಡಲು ಆಗುವುದಿಲ್ಲ. ಇಂಜೆಕ್ಷನ್ ತೆಗೆದುಕೊಂಡು 10 – 20 ದಿನ ನೋವು ಕಡಿಮೆ ಇರುತ್ತದೆ. ಪವರ್ ಕಮ್ಮಿಯಾಗುತ್ತಿದ್ದಂತೆ ನೋವು ಹೆಚ್ಚಾಗುತ್ತದೆ. ಆಪರೇಷನ್ ಕಟ್ಟಿಟ್ಟ ಬುತ್ತಿ. ಅದನ್ನು ಮಾಡಿಸಬೇಕು. ಕೆಲವೇ ದಿನಗಳಲ್ಲಿ ಭೇಟಿಯಾಗುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸೂರಪ್ಪ ಬಾಬು ಸಿನಿಮಾ ಬಗ್ಗೆ…

ಈ ನಡುವೆ ಯಾರ್ಯಾರ ಸಿನಿಮಾ ಒಪ್ಪಿಕೊಂಡಿದ್ದೇನೆ ಅವರೆಲ್ಲಾ ಕಾದಿದ್ದಾರೆ. ಅವರಿಗೆ ತೊಂದರೆಯಾಗೋದು ಇಷ್ಟ ಇಲ್ಲ. ಸೆಲೆಬ್ರಿಟಿಗಳು ಯಾವ ಊಹಾಪೋಹಗಳಿಗೂ ಕಿವಿ ಕೊಡಬೇಡಿ. ಸೂರಪ್ಪ ಬಾಬು ಅವರು ನನ್ನ ಬಳಿಗೆ ಸಿನಿಮಾ ಮಾಡಬೇಕೆಂದು ಬಂದಿದ್ದಾಗ ಅವರಿಗೆ ಸಹ ತುಂಬಾ ಕಮಿಟ್ ಮೆಂಟ್ ಗಳಿದ್ದವು. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡೆ. ಈ ನಡುವೆ ತುಂಬಾ ವಿಷಯಗಳು ನಡೆದು ವಿಳಂಬವಾಯಿತು, ಸೂರಪ್ಪ ಬಾಬು ಅವರಿಗೆ ಮತ್ತಷ್ಟು ತೊಂದರೆ ಆಗಬಾರದು ಎಂದು ಅವರು ಕೊಟ್ಟ ಮುಂಗಡ ಹಣವನ್ನು ವಾಪಾಸ್ ಕೊಟ್ಟಿದ್ದೇನೆ ಮುಂದೊಂದು ದಿನ ಉತ್ತಮ ಸಬ್ಜೆಕ್ಟ್ ಸಿಕ್ಕಿದರೆ ಸೂರಪ್ಪ ಬಾಬು ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದರು.

 ಗೆಳತಿ ಆಸೆ ಈಡೇರಿಸುವೆ :

ನಿರ್ದೇಶಕ ಜೋಗಿ ಪ್ರೇಮ್ ಅವರ ಜೊತೆ ಖಂಡಿತ ಸಿನಿಮಾ ಮಾಡೇ ಮಾಡುತ್ತೇನೆ. ಅವರು ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆ ರಕ್ಷಿತಾ ಆಸೆ ಕೂಡ ನಾನು ಸಿನಿಮಾ ಮಾಡಬೇಕು ಅಂತ. ಕೆವಿಎನ್ ಪ್ರೊಡಕ್ಷನ್‌ನಲ್ಲಿ ಈಗಾಗಲೇ ಸಿನಿಮಾ ತಯಾರಾಗುತ್ತಿದೆ. ಅದರ ಮಧ್ಯೆ ಇನ್ನೊಂದು ಸಿನಿಮಾ ಸದ್ಯಕ್ಕೆ ಬೇಡ ಎಂದು ಮುಂದೆ ಹಾಕಿದ್ದೇವೆ. ಮುಂದೆ ಖಂಡಿತ ಮಾಡುತ್ತೇನೆ ಎಂದರು.

ವಿಶೇಷ ಥ್ಯಾಂಕ್ಸ್ ಹೇಳಿದ ಡಿಬಾಸ್ :

ವೀಡಿಯೋದ ಆರಂಭದಲ್ಲಿ ದರ್ಶನ್ ಸೆಲೆಬ್ರಿಟಿಗಳಿಗೆ(ಅಭಿಮಾನಿಗಳು) ನಮಸ್ಕಾರ ಹೇಳಬೇಕೋ, ಥ್ಯಾಂಕ್ಸ್ ಹೇಳಬೇಕೋ ಗೊತ್ತಾಗುತ್ತಿಲ್ಲ ಎಂದಿದ್ದಾರೆ. ಕೊನೆಯಲ್ಲಿ ಮತ್ತೆ ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳ ಪ್ರೀತಿ, ಬೆಂಬಲಕ್ಕೆ ಯಾವಾಗಲೂ ಚಿರಋಣಿ ಎಂದಿದ್ದಾರೆ.

ಈ ವೇಳೆ ತನ್ನ ಕಷ್ಟ ಕಾಲದಲ್ಲಿ ಸಾಥ್ ಕೊಟ್ಟ ಮೂವರ ಹೆಸರು ಉಲ್ಲೇಖಿಸಿದ್ದಾರೆ. ನಟ ಧನ್ವೀರ್, ಬುಲ್ ಬುಲ್ ರಚಿತಾ ರಾಮ್, ಪ್ರಾಣ ಸ್ನೇಹಿತೆ ರಕ್ಷಿತಾಗೆ ತುಂಬಾ ಥ್ಯಾಂಕ್ಸ್ ಎಂದಿದ್ದಾರೆ.

ಇದನ್ನೂ ಓದಿ : ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್​ ಇ*ನ್ನಿಲ್ಲ

ಇದೇ ಸಂದರ್ಭ ದರ್ಶನ್ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸುತ್ತಾರೆ ಎಂಬ ಗಾಸಿಪ್ ಬಗ್ಗೆ ಮಾತಾಡಿದ ಅವರು, ಈ ವಿಷಯ ಆಗಾಗ ಸುದ್ದಿಯಾಗುತ್ತಿರುತ್ತದೆ. ನನ್ನ ಕೊನೆಯ ಉಸಿರು ಇರುವವರೆಗೂ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸುವುದಿಲ್ಲ, ಕನ್ನಡದ ಜನತೆ ನನಗೆ ಪ್ರೀತಿ, ಆಶೀರ್ವಾದ ನೀಡಿದ್ದಾರೆ. ಇಲ್ಲಿ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು  ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page