Connect with us

LATEST NEWS

ಎಚ್ಚರಿಕೆ..!!! ರಾತ್ರಿ ವೇಳೆ ಬಟ್ಟೆ ಒಗೆದು ಒಣ ಹಾಕ್ತೀರಾ..? ಈ ಸ್ಟೋರಿ ಓದಿ ..!

Published

on

ಮಂಗಳೂರು: ನಮ್ಮ ಬಟ್ಟೆಗಳು ಸ್ವಚ್ಛವಾಗಿ ಫಳ-ಫಳ ಹೊಳೆಯಬೇಕೆಂದರೆ ಅದನ್ನು ಒಗೆಯುವುದು ಬಹಳ ಮುಖ್ಯ. ಇದೊಂದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಕೆಲವರು ಬಟ್ಟೆಗಳನ್ನು ಕೈಯಿಂದ ತೊಳೆದರೆ, ಮತ್ತೆ ಕೆಲವರು ವಾಷಿಂಗ್ ಮೆಷಿನ್ನಲ್ಲಿ ಒಗೆಯುತ್ತಾರೆ. ಕೆಲಸದ ಒತ್ತಡದಲ್ಲಿ ಈಗ ಬಟ್ಟೆಯನ್ನು ವಾಷಿಂಗ್‌ ಮೆಷಿನ್ನಲ್ಲಿ ಒಗೆಯುವ ಜನರೇ ಹೆಚ್ಚು.

ಒಂಟಿಯಾಗಿರುವವರಿಗೆ ಅಥವಾ ಮದುವೆಯಾಗಿರುವವರಾಗಲಿ ಎಲ್ಲರಿಗೂ ದೊಡ್ಡ ತಲೆನೋವೆಂದರೆ ಅದು ಬಟ್ಟೆ ಒಗೆಯುವುದು. ಕೆಲವೊಮ್ಮೆ ಮನೆಯ ಎಲ್ಲಾ ಕೆಲಸ ಮಾಡಿದರೂ ಬಟ್ಟೆ ಒಗೆಯಲು ಮಾತ್ರ ಸಮಯವೇ ಇರುವುದಿಲ್ಲ. ಹಾಗಾಗಿ ಸಂಜೆ ಕೆಲಸದಿಂದ ಬಂದ ಬಳಿಕ ಕೆಲವರು ಬಟ್ಟೆಯನ್ನು ಒಗೆಯುತ್ತಾರೆ. ಆದರೆ ಹೀಗೆ ಮಾಡುವುದು ದೊಡ್ಡ ತಪ್ಪು.

ರಾತ್ರಿಯ ವೇಳೆ ಬಟ್ಟೆ ಒಗೆದು ಒಣಗಲು ಹಾಕುತ್ತೀರಾ.. ಹಾಗಾದರೆ ಎಚ್ಚರಿಕೆ. ಈಗಲೇ ಈ ಅಭ್ಯಾಸವನ್ನು ಬಿಟ್ಟು ಬಿಡಿ. ರಾತ್ರಿಯಲ್ಲಿ ಬಟ್ಟೆಗಳನ್ನು ಒಣಗಿಸುವುದರಿಂದ ತೇವಾಂಶಯುಕ್ತ ಗಾಳಿಯಿಂದ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಕೀಟಗಳು ಬೆಳೆಯುತ್ತವೆ. ಇದು ಚರ್ಮದ ಸಮಸ್ಯೆಗಳಿಗೆ ಮತ್ತು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಕ್ಕಳ ಆರೋಗ್ಯವು ಕೆಡಬಹುದು.

ಬಿಸಿಲಿನಲ್ಲಿ ಬಟ್ಟೆಯನ್ನು ಒಗೆದು ಹಾಕಿದರೆ ಅದು ಸ್ವಚ್ಛವಾಗಿರುತ್ತದೆ. ಮತ್ತು ಬಟ್ಟೆಯಲ್ಲಿನ ಸೂಕ್ಷ್ಮ ಜೀವಿಗಳು ನಾಶವಾಗಿ ಹೋಗುತ್ತದೆ. ಅಲ್ಲದೇ ಬಿಸಿಲಿನ ಬೇಗೆಗೆ ಬಟ್ಟೆಯು ಬೇಗನೇ ಒಣಗುತ್ತದೆ. ರಾತ್ರಿಯಲ್ಲಿ, ಬಟ್ಟೆಗಳ ಮೇಲೆ ಇಬ್ಬನಿ ಹನಿಗಳು ಬಿದ್ದು ತೇವಗೊಳಿಸುತ್ತದೆ. ಈ ತೇವಾಂಶವು ಬ್ಯಾಕ್ಟೀರಿಯಾ, ವೈರಸ್‌ಗಳು ಮತ್ತು ಶಿಲೀಂಧ್ರಗಳ ಬೆಳವಣಿಗೆಗೆ ಕಾರಣವಾಗಬಹುದು.

ಕೆಲವೊಮ್ಮೆ ರಾತ್ರಿ ನಾವು ಬಟ್ಟೆ ಒಣಗಿಸಿದಾಗ ಅದರಲ್ಲಿ ಕೀಟಗಳು, ಸೊಳ್ಳೆಗಳು ಬಂದು ಕುಳಿತುಕೊಳ್ಳಬಹುದು. ಅವುಗಳು ಬಟ್ಟೆಯ ಮೇಲೆ ಮೊಟ್ಟೆಯನ್ನು ಹಾಕಿ ಹಾಳು ಮಾಡಲುಬಹುದು. ಇದರಿಂದ ಚರ್ಮದ ಮೇಲೆ ಅಲರ್ಜಿ ಆಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯು ಇದೆ. ಆದ್ದರಿಂದ ಇನ್ನು ಮುಂದೆಯಾದರೂ ಬಟ್ಟೆಯನ್ನು ಬೆಳಗಿನ ಜಾವವೇ ಒಗೆದು ಬಿಸಿಲಿಗೆ ಹಾಕಿ ಹೋಗಿ.

LATEST NEWS

ಬಾಂಗ್ಲಾ ಕ್ರಿಕೆಟ್‌ ಆಟಗಾರನಿಗೆ ಹೃದಯಾಘಾತ!

Published

on

ಮಂಗಳೂರು/ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ಆಟಗಾರ, ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಢಾಕಾ ಪ್ರೀಮಿಯರ್ ಲೀಗ್ ಪಂದ್ಯವಾಡುತ್ತಿರುವ ವೇಳೆ ಇಕ್ಬಾಲ್ ಅವರಿಗೆ ಎದೆ ನೋವು ಕಾಣಸಿಕೊಂಡಿದೆ. ಮೊಹಮ್ಮದನ್ ಸ್ಪೋರ್ಟ್ಸ್ ಕ್ಲಬ್ ಮತ್ತು ಶಿನೆಪುಕರ್ ಕ್ರಿಕೆಟ್ ಕ್ಲಬ್ ನಡುವೆ ಪಂದ್ಯ ನಡೆಯುತ್ತಿತ್ತು. ಈ ಪಂದ್ಯದಲ್ಲಿ ಪಾಲ್ಗೊಂಡಿದ್ದ ತಮೀಮ್ ಇಕ್ಬಾಲ್‌ಗೆ ಇದ್ದಕ್ಕಿದ್ದಂತೆಯೇ ಎದೆನೋವು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ಅವರನ್ನು ಹೆಲಿಕಾಪ್ಟರ್ ಮೂಲಕ ಢಾಕಾಗೆ ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗಿತ್ತು, ಆದರೆ ಅವರನ್ನು ಬಿಕೆಎಸ್‌ಪಿ ಮೈದಾನದಿಂದ ವಿಮಾನದಲ್ಲಿ ಕರೆದೊಯ್ಯಲು ಸಾಧ್ಯವಾಗಲಿಲ್ಲ. ನಂತರ ಅವರನ್ನು ಚಿಕಿತ್ಸೆಗಾಗಿ ಫಜಿಲತುನ್ನೆಸ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಬಾಲ್ ಟ್ಯಾಂಪರಿಂಗ್ ಮಾಡಿದ್ರಾ ಸಿಎಸ್‌ಕೆ ಆಟಗಾರರು; ವೈರಲ್ ಆಯ್ತು ವೀಡಿಯೋ

‘ಆಸ್ಪತ್ರೆಯಲ್ಲಿ ಆರಂಭಿಕ ತಪಾಸಣೆ ನಡೆಸಿದ ವೇಳೆ ತಮೀಮ್ ಅವರಿಗೆ ಸಣ್ಣ ಪ್ರಮಾಣದಲ್ಲಿ ಹೃದಯಾಘಾತವಾಗಿರುವುದು ಕಂಡುಬಂದಿತ್ತು. ಹೀಗಾಗಿ ಢಾಕಾಗೆ ಏರ್‌ಲಿಫ್ಟ್ ಮಾಡಲು ಯೋಜಿಸಲಾಗಿತ್ತು. ಆದರೆ ಹೆಲಿಪ್ಯಾಡ್‌ಗೆ ಕರೆದೊಯ್ಯುವ ವೇಳೆ ಮತ್ತೆ ತೀವ್ರವಾಗಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ವಾಪಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ತಮೀಮ್ ಅವರಿಗೆ ತೀವ್ರವಾದ ಹೃದಾಯಾಘಾತವಾಗಿದೆ. ವೈದ್ಯಕೀಯ ತಂಡ ಸಾಧ್ಯವಿರುವ ಎಲ್ಲಾ ರೀತಿಯ ಚಿಕಿತ್ಸೆ ನೀಡುತ್ತಿದೆ’ ಎಂದು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್‌ ಮುಖ್ಯ ವೈದ್ಯ ಡಾ.ದೆಬಾಶಿಶ್ ಚೌಧರಿ ಹೇಳಿದ್ದಾರೆ.

ತಮಿಮ್ ಇಕ್ಬಾಲ್ ಇದೇ ಜನವರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದರು. ಬಾಂಗ್ಲಾದೇಶ ಪರ 243 ಏಕದಿನ, 70 ಟೆಸ್ಟ್ ಹಾಗೂ 78 ಟಿ20 ಪಂದ್ಯಗಳನ್ನಾಡಿ ಒಟ್ಟಾರೆ 15 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಿಂದ ತಮೀಮ್ ಇಕ್ಬಾಲ್ ಬರೋಬ್ಬರಿ 25 ಶತಕ ಸಿಡಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶ ಪರ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ತಮಿಮ್ ಇಕ್ಬಾಲ್ ಹೆಸರಿನಲ್ಲಿದೆ.

Continue Reading

LATEST NEWS

ಕೇರಳ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ನೇಮಕ

Published

on

ಮಂಗಳೂರು/ತಿರುವನಂತಪುರಂ : ಕೇರಳ ರಾಜ್ಯದ ಬಿಜೆಪಿ ಅಧ್ಯಕ್ಷರು ಯಾರಾಗ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ಕೇರಳ ರಾಜ್ಯದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ (ಮಾ. 24) ತಿರುವನಂತಪುರದಲ್ಲಿ ನಡೆದ ಬಿಜೆಪಿ ರಾಜ್ಯ ಪರಿಷತ್ ಸಭೆಯಲ್ಲಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ಕೆ.ಸುರೇಂದ್ರನ್ ಮತ್ತು ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸೇರಿದಂತೆ ಬಿಜೆಪಿಯ ಅನೇಕ ರಾಜ್ಯ ನಾಯಕರು ಉಪಸ್ಥಿತರಿದ್ದರು. ಸುರೇಂದ್ರನ್ ಅವರು ಪಕ್ಷದ ಧ್ವಜವನ್ನು ಚಂದ್ರಶೇಖರ್ ಅವರಿಗೆ ವೇದಿಕೆಯಲ್ಲಿ ಹಸ್ತಾಂತರಿಸಿದರು.

ಚಂದ್ರಶೇಖರ್ ಅವರು ಈ ಹುದ್ದೆಗೆ ಏಕೈಕ ನಾಮನಿರ್ದೇಶಿತರಾಗಿದ್ದರು. ಇಲ್ಲಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭಾನುವಾರ(ಮಾ.23)  ನಾಮಪತ್ರ ಸಲ್ಲಿಸಿದ್ದರು.

ರಾಜೀವ್ ಚಂದ್ರಶೇಖರ್ ಬಗ್ಗೆ :

ಕೇರಳ ಸ್ಥಳೀಯ ಚುನಾವಣೆಗೂ ಮುನ್ನ ರಾಜೀವ್ ಚಂದ್ರಶೇಖರ್ ಹೆಗಲಿಗೆ ಹೊಸ ಜವಾಬ್ದಾರಿ ಕೊಡಲಾಗಿದೆ. ರಾಜೀವ್ ಚಂದ್ರಶೇಖರ್ ಗುಜರಾತ್‌ನ ಅಹಮದಾಬಾದ್‌ನವರು. ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ, ಕೇರಳ ಎನ್‌ಡಿಎ ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅವರು ಮೋದಿ ಸಂಪುಟದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ , ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಮತ್ತು ಜಲಶಕ್ತಿ ಸಚಿವಾಲಯದ ರಾಜ್ಯ ಸಚಿವರಾಗಿದ್ದರು.

ಚಂದ್ರಶೇಖರ್ ಏಪ್ರಿಲ್ 2006 ರಿಂದ ಏಪ್ರಿಲ್ 2018 ರ ವರೆಗೆ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯಸಭೆಯ ಸ್ವತಂತ್ರ ಸದಸ್ಯರಾಗಿದ್ದರು. ಏಪ್ರಿಲ್ 2018 ರಲ್ಲಿ ಬಿಜೆಪಿ ಸದಸ್ಯರಾಗಿ ಮೂರನೇ ಆರು ವರ್ಷಗಳ ಅವಧಿಗೆ ಕರ್ನಾಟಕದಿಂದ ರಾಜ್ಯಸಭೆಗೆ ಮರು ಆಯ್ಕೆಯಾದರು.

ಇದನ್ನೂ ಓದಿ : ಬಾಲ್ ಟ್ಯಾಂಪರಿಂಗ್ ಮಾಡಿದ್ರಾ ಸಿಎಸ್‌ಕೆ ಆಟಗಾರರು; ವೈರಲ್ ಆಯ್ತು ವೀಡಿಯೋ

ಅಂದ್ಹಾಗೆ ರಾಜೀವ್ ಚಂದ್ರಶೇಖರ್ 2024ರ ಲೋಕಸಭಾ ಚುನಾವಣೆಯಲ್ಲಿ ತಿರುವನಂತಪುರಂನಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧ 16,077 ಮತಗಳಿಂದ ಸೋತಿದ್ದರು.

Continue Reading

LATEST NEWS

ಬಾಲ್ ಟ್ಯಾಂಪರಿಂಗ್ ಮಾಡಿದ್ರಾ ಸಿಎಸ್‌ಕೆ ಆಟಗಾರರು; ವೈರಲ್ ಆಯ್ತು ವೀಡಿಯೋ

Published

on

ಮಂಗಳೂರು/ಚೆನ್ನೈ: ನಿನ್ನೆ (ಮಾ.23) ಮುಂಬೈ ವಿರುದ್ದ ಸಿಎಸ್‌ಕೆ ತನ್ನ ಮೊದಲ ಪಂದ್ಯವನ್ನು ತನ್ನ ತವರು ನೆಲವಾದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಡಿತ್ತು. ರೋಚಕ ಪಂದ್ಯದಲ್ಲಿ ಸಿಎಸ್‌ಕೆ ನಾಲ್ಕು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಇದೀಗ ಸಿಎಸ್‌ಕೆಗೆ ಸಂಬಂಧಿಸಿದ ವೀಡಿಯೋ ಒಂದು ವೈರಲ್ ಆಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆಯೇ ಎಂಬ ಅನುಮಾನ ಐಪಿಎಲ್ ಅಭಿಮಾನಿಗಳಲ್ಲಿ ಮೂಡಿದೆ.

ಟಾಸ್ ಗೆದ್ದ ಸಿಎಸ್‌ಕೆ ತಂಡ ಬೌಲಿಂಗ್ ಆಯ್ದುಕೊಂಡಿತ್ತು. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಋತುರಾಜ್ ಗಾಯಕ್ವಾಡ್, ಬೌಲರ್ ಖಲೀಲ್ ಅಹ್ಮದ್ ಬಳಿಗೆ ಬರುತ್ತಾರೆ. ಅದೇ ಸಮಯದಲ್ಲಿ ಖಲೀಲ್ ಅಹ್ಮದ್ ತಮ್ಮ ಜೇಬಿನಿಂದ ಏನೋ ತೆಗೆಯುತ್ತಾರೆ. ಅಲ್ಲದೆ ಆ ಬಳಿಕ ಋತುರಾಜ್ ಗಾಯಕ್ವಾಡ್ ಅವರಿಗೆ ಕೊಡುತ್ತಿದ್ದಂತೆ ಅವರು ಅದನ್ನು ಜೇಬಿನಲ್ಲಿರಿಸಿಕೊಂಡಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಕ್ರಿಕೆಟಿಗ ಡೇವಿಡ್ ವಾರ್ನರ್‌ಗೆ ನೀನೊಬ್ಬ ದೊಡ್ಡ ಕಳ್ಳ.. ಎಂದ ಹಿರಿಯ ನಟ ರಾಜೇಂದ್ರ ಪ್ರಸಾದ್! 

ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಅಭಿಮಾನಿಗಳು ತಮ್ಮದೇ ಅರ್ಥದಲ್ಲಿ ವಿಶ್ಲೇಷಿಸುತ್ತಿದ್ದಾರೆ. ಇಬ್ಬರು ಸೇರಿಕೊಂಡು ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಕೆಲವರು ಅದೊಂದು ಸಾಮಾನ್ಯ ದೃಶ್ಯವಾಗಿರಬಹುದು ಅಂತಲೂ ಉಲ್ಲೇಖ ಮಾಡಿದ್ದಾರೆ.

ಈ ಹಿಂದೆ ಫಿಕ್ಸಿಂಗ್ ಕಾರಣದಿಂದಾಗಿ 2 ವರ್ಷಗಳ ಕಾಲ ಸಿಎಸ್‌ಕೆ ತಂಡ ಬ್ಯಾನ್ ಆಗಿತ್ತು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಚೆಂಡು ವಿರೂಪಗೊಳಿಸಿರುವ ಆರೋಪ ಕೇಳಿ ಬಂದಿದ್ದು, ಮುಂದಿನ ದಿನಗಳಲ್ಲಿ ಸಿಎಸ್‌ಕೆ ತಂಡ ಯಾವ ರೀತಿಯ ಸ್ಪಷ್ಟನೆ ಕೊಡುತ್ತದೆ ಎಂದು ಕಾದು ನೋಡಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page