Connect with us

DAKSHINA KANNADA

5 ಗ್ಯಾರಂಟಿಗಳ ಅನುದಾನದ ಆದಾಯ ಮೂಲಗಳ ಕುರಿತು ಶ್ವೇತಪತ್ರ ಹೊರಡಿಸಿ : ನಳಿನ್ ಕುಮಾರ್ ಕಟೀಲ್

Published

on

ಈ ಎಲ್ಲಾ ಯೋಜನೆಗಳಿಗೆ ನೀವು ಹಣದ ಕ್ರೋಢೀಕರಣ ಹೇಗೆ ಮಾಡುತ್ತೀರಿ. ನಿಮ್ಮ ಆದಾಯದ ಮೂಲ ಎಲ್ಲಿಂದ..? ಯೋಜನೆಗಳು ಎಷ್ಟು ವರ್ಷ ಮುಂದುವರಿಯುತ್ತದೆ.ಈ ಎಲ್ಲಾ ವಿಚಾರಗಳ ಬಗ್ಗೆ ಕೂಡಲೇ ಶ್ವೇತ ಪತ್ರವನ್ನು ಅವರು ಹೊರಡಿಸಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಕಾರ್ಡ್‌ ಬಗ್ಗೆ ಮುಖ್ಯಮಂತ್ರಿ ಇಂದು ಪ್ರಕಟ ಮಾಡಿದ್ದಾರೆ. 24 ಗಂಟೆಯಲ್ಲಿ ಘೋಷಣೆ ಮಾಡ್ತೇನೆ ಎಂದವರು ಸ್ವಲ್ಪ ತಡವಾಗಿ ಘೋಷಣೆ ಮಾಡಿದ್ದಾರೆ. ಆದರೂ ನಾನು ಅದನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲು ಹೇಳಿದ್ದಾರೆ.

 

ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಎಲ್ಲಾ ಯೋಜನೆಗಳಿಗೆ ನೀವು ಹಣದ ಕ್ರೋಢೀಕರಣ ಹೇಗೆ ಮಾಡುತ್ತೀರಿ. ನಿಮ್ಮ ಆದಾಯದ ಮೂಲ ಎಲ್ಲಿಂದ..? ಯೋಜನೆಗಳು ಎಷ್ಟು ವರ್ಷ ಮುಂದುವರಿಯುತ್ತದೆ.

ಈ ಎಲ್ಲಾ ವಿಚಾರಗಳ ಬಗ್ಗೆ ಕೂಡಲೇ ಶ್ವೇತ ಪತ್ರವನ್ನು ಅವರು ಹೊರಡಿಸಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.

ಪದವೀಧರರಿಗೆ ನಿರುದ್ಯೋಗಿಗಳಿಗೆ ಭತ್ಯೆಯನ್ನು ಘೋಷಣೆ ಮಾಡಿದಾಗ ಈ ಹಿಂದೆ ಕಾಂಗ್ರೆಸ್ಸಿಗರು ಮಾನದಂಡ ಮಾಡಿರಲಿಲ್ಲ.

ಖಾಸಗಿ ಬಸ್ಸುಗಳಲ್ಲಿ ಸಂಚರಿಸುವವರಿಗೆ ಏನು ವ್ಯವಸ್ಥೆ ಮಾಡಿದ್ದೀರಿ..?

ಇದು ಎಷ್ಟು ವರ್ಷ ಮುಂದುವರಿಯುತ್ತದೆ ಎನ್ನುವುದನ್ನು ಸರಕಾರ ಪ್ರಕಟ ಮಾಡಬೇಕು.

ಈ ಹಿಂದೆ ಸರಕಾರ ನೀಡುತ್ತಿದ್ದ ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮೀ, ಅಂಗವಿಕಲರ ಪಿಂಚಣಿ ಇತ್ಯಾದಿ ಪಿಂಚಣಿಗಳ ಗತಿ ಏನು..?

ರಾಜ್ಯದ ಬೊಕ್ಕಸದಲ್ಲಿ ಹಣ ಇಲ್ಲದೇ ಇದ್ದರೆ ಏನು ಗತಿ… ? ಯಾರಿಗೂ ಹೊರೆಯಾಗದ ರೀತಿಯಲ್ಲಿ ಯೋಜನೆ ಹೇಗೆ ಜಾರಿ ಮಾಡ್ತೀರಿ..? ಎಂದು ಪ್ರಶ್ನಿಸಿದರು.

ನಮ್ಮದು ಶ್ರೀಲಂಕಾ, ಪಾಕಿಸ್ಥಾನದಲ್ಲಿ ಆದ ಹಾಗೆ ಆರ್ಥಿಕ ಕುಸಿತ ಆಗದಂತೆ ನೋಡಿಕೊಳ್ಳಬೇಕು.

ಮೊದಲು ಶ್ವೇತ ಪತ್ರ ಹೊರಡಿಸಲಿ. ಕೇವಲ ಮುಂಬರುವ ಚುನಾವಣೆ ದೂರದೃಷ್ಟಿಯಲ್ಲಿ ಇಟ್ಟುಕೊಂಡು ಇದನ್ನು ಮಾಡುವುದು ಬೇಡ.

ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಇದನ್ನು ಅನುಷ್ಠಾನ ಮಾಡಿರಿ ಎಂದಿದ್ದಾರೆ.

DAKSHINA KANNADA

ಮಂಗಳೂರು : ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Published

on

ಮಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ನೀತಿಗಳೇ ಕಾರಣ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆ ನಡೆಯಿತು. ಕೇಂದ್ರ ಸರಕಾರವು ಬಡ ಜನರ ಜೀವನದೊಂದಿಗೆ ಚೆಲ್ಲಾಟ ನಡೆಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.

ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ “ಇಂದು ನಿರುದ್ಯೋಗ ಮತ್ತು ಬೆಲೆ ಏರಿಕೆ ನಮಗೆ ದೊಡ್ಡ ಸಮಸ್ಯೆ. ಬೆಲೆಏರಿಕೆಯನ್ನು ತಡೆ ಗಟ್ಟುವುದಾಗಿ ಹೇಳಿದ ನರೇಂದ್ರ ಮೋದಿ ಆಧಿಕಾರಕ್ಕೆ ಬಂದ ಬಳಿಕ ತಮ್ಮ ಮಾತನ್ನು ಮರೆತಿದ್ದಾರೆ. ಕಚ್ಛಾ ತೈಲದ ಬೆಲೆ ಏರಿಕೆಯಾದ್ದರಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಆನಿವಾರ್ಯ ಎಂದು ಹೇಳಿಕೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಒಬ್ಬ ದಡ್ಡ” ಎಂದು ಟೀಕಿಸಿದರು.

ಹರೀಶ್‌ ಕುಮಾರ್ ಮಾತನಾಡಿ “ಕಳೆದ 11 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದರೂ ಭಾರತದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಿಲ್ಲ. ಅದರ ಬದಲು ಏರಿಸಿದೆ” ಎಂದು ಆರೋಪಿಸಿದರು.

Continue Reading

DAKSHINA KANNADA

ಪಹಲ್ಗಾಮ್‌ ದಾಳಿ ಕುರಿತು ಅಭದ್ರತೆ ಹೇಳಿಕೆ ನೀಡಿದ ಸಿದ್ದು ; ಸಿಡಿದೆದ್ದ ಕ್ಯಾ. ಚೌಟ

Published

on

ಮಂಗಳೂರು : ಕಳೆದ ವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ನೀಡಿರುವಂತಹ ಹೇಳಿಕೆಯು ಭಾರಿ ವೈರಲ್ ಆಗಿತ್ತು. ಪಾಕ್‌ ನ್ಯೂಸ್‌ ಚಾನಲ್‌ಗಳಲ್ಲಿಯೂ ಹೆಡ್‌ಲೈನ್ ಆಗಿ ಗುರುತಿಸಿಕೊಂಡಿತ್ತು.

ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ‘ಇಂತಹ ಹೇಳಿಕೆಗಳು ದಾಳಿಯಲ್ಲಿ ಹುತಾತ್ಮರಾದ ನಮ್ಮ ಭದ್ರತಾ ಸಿಬ್ಬಂದಿಯ ಶೌರ್ಯ ಮತ್ತು ಬಲಿದಾನ ಕಡೆಗಣಿಸಿದಂತಾಗುತ್ತದೆ. ಇದನ್ನು ಬಲವಾಗಿ ಖಂಡಿಸಬೇಕು’ ಎಂದು ಸಂಸದ ಕ್ಯಾ. ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನದ ಜೊತೆ ಯುದ್ಧ ಸಾರುವ ಅಗತ್ಯ ಇಲ್ಲ” ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿರುವ ಕ್ಯಾ. ಚೌಟ , “ಪಹಲ್ಗಾಮ್‌ ನಲ್ಲಿ ನಡೆದ ಘಟನೆ ನಮ್ಮ ರಾಷ್ಟ್ರದ ಮೇಲೆ ನಡೆದ ಹೇಡಿತನ ದಾಳಿ. ಜವಾಬ್ದಾರಿಯುತ ಸ್ಥಾನದಲ್ಲಿ ಅದರಲ್ಲೂ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ‘ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ’ ಎಂಬ ರೀತಿಯ ಹೇಳಿಕೆ ನೀಡಿರುವುದು ಅಕ್ಷಮ್ಯ” ಎಂದು ಹೇಳಿದ್ದಾರೆ.

Continue Reading

BELTHANGADY

ಪ್ರಜ್ವಲ್ ರೇವಣ್ಣನನ್ನು ಮೀರಿಸಿದ ವಾಲಿಬಾಲ್ ಪ್ಲೇಯರ್ ..! ಏನಿದು ಘಟನೆ ..?

Published

on

ಮಂಗಳೂರು : ಆತ ಸಾಮಾನ್ಯನಲ್ಲ, ರಸಿಕರ ರಾಜ. ಕೆಲ ತಿಂಗಳುಗಳ ಹಿಂದೆ ಪೋಕ್ಸೋ ಕೇಸ್‌ನಡಿ ಸಿಕ್ಕಿಬಿದ್ದಿದ್ದ ಪ್ರಜ್ವಲ್‌ ರೇವಣ್ಣನಿಗಿಂತಲೂ ಒಂದು ಕೈ ಮೇಲೆ ಇದ್ದಾನೆ. ಇದೀಗ,  ಆತನ ಕಾಮಕಾಂಡ ಬಯಲಾಗಿದೆ. ಯಾರು ಆತ ? ಏನದು ಘಟನೆ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ವಾಲಿಬಾಲ್ ಆಟಗಾರನಾಗಿದ್ದ ಮೂಲತಃ ಕಾರ್ಕಳ ನಿವಾಸಿ ಸೈಯ್ಯದ್ ಎಂಬಾತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವಿಷಯ ಬಯಲಾಗಿದೆ. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ.

ಇನ್ನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಹಿಂದೂ ಸಂಘಟನೆ ಕಾರ್ಯಕರ್ತರು ಒಂದು ಕ್ಷಣ ಶಾಕ್​ ಆಗಿದ್ದಾರೆ. ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳೇ ತುಂಬಿದೆ. ಮೂಲತಃ ಕಾರ್ಕಳ ನಿವಾಸಿಯಾಗಿರುವ ಸೈಯದ್ ವಾಲಿಬಾಲ್ ಆಟಗಾರ ಕೂಡ ಹೌದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಏ.26 ರಂದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಮಂಗಳೂರು ಫೋಕೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿ ಸೈಯ್ಯದ್ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಉಜಿರೆಯ ಪ್ರಜ್ವಲ್ ಹಾಗೂ ಇತರರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯ್ಯದ್ ನನ್ನು ಹಿಗ್ಗಾಮುಗ್ಗ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಹಲ್ಲೆಗೆ ಒಳಗಾಗಿರುವ ಸೈಯ್ಯದ್ ನೀಡಿದ ದೂರಿನಂತೆ ಪೊಲೀಸರು ಉಜಿರೆಯ ಪ್ರಜ್ವಲ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ

Continue Reading
Advertisement

Trending

Copyright © 2025 Namma Kudla News

You cannot copy content of this page