Connect with us

LATEST NEWS

ಶಾಲಾ ಬಸ್ ಅಪಘಾತ: ಶಿಕ್ಷಕಿ ಸಾವು, 15 ಮಕ್ಕಳಿಗೆ ಗಂಭೀರ ಗಾಯ

Published

on

ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್​ಗೆ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ಸಾವನ್ನಪ್ಪಿದ್ದು, 15 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೈಪುರದಲ್ಲಿ ನಡೆದಿದೆ.

NH 52 ರ ಭೋಜ್ಲಾವಾ ಕಟ್ ಬಳಿ ಅಪಘಾತ ಸಂಭವಿಸಿದೆ. ಬ್ರಿಡ್ಜ್​ನಿಂದ ಇಳಿಯುವಾಗ ಬಸ್ ಬ್ರೇಕ್​ ಫೇಲ್ ಆದ ಕಾರಣ ನಿರ್ಮಾಣ ಹಂತದಲ್ಲಿದ್ದ ಮತ್ತೊಂದು ಬ್ರಿಡ್ಜ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿತ್ತು. ಬಸ್​ನಲ್ಲಿ 30-35 ಮಕ್ಕಳಿದ್ದರು.

ಡಿಕ್ಕಿ ಹೊಡೆದ ನಂತರ ಶಿಕ್ಷಕಿ ಬಸ್​ನಿಂದ ಹೊರಗೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಕೆಲವು ಮಕ್ಕಳನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದ್ದು, ಕೆಲವು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಲಾ ಬಸ್ ನಿಯಮ ಉಲ್ಲಂಘಿಸಿ ವೇಗವಾಗಿ ಚಲಿಸುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದಲ್ಲದೇ ಸಾರಿಗೆ ಇಲಾಖೆಯ ನಿರ್ಲಕ್ಷ್ಯದಿಂದ ನಗರದಲ್ಲಿ ಪರ್ಮಿಟ್, ವಿಮೆ ಇಲ್ಲದೇ ಹಲವು ಶಾಲಾ ಬಸ್ ಗಳು ರಸ್ತೆಗಿಳಿದಿರುವುದು ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ.

LATEST NEWS

ಅಪ*ಘಾತದಲ್ಲಿ ಮಗನ ದುರ್ಮ*ರಣ; ಕೋಮಾಕ್ಕೆ ಜಾರಿದ್ದ ತಾಯಿಯೂ ಸಾ*ವು

Published

on

ಮಂಗಳೂರು/ಶಿರ್ವ: ಪುತ್ರ ಶೋಕಂ ನಿರಂತರಂ ಎನ್ನುವ ಹಾಗೆ, ಅಪ*ಘಾತದಲ್ಲಿ ಮೃ*ತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.


ಮೃ*ತ ಬೈಕ್‌ ಸವಾರನನ್ನು ಶಿರ್ವ ಕೊಲ್ಲಬೆಟ್ಟು ಬಳಿಯ ನಿವಾಸಿ ರಮೇಶ್ ಮೂಲ್ಯ (51). ಪುತ್ರನ ಸಾವಿನ ಶೋಕದಿಂದ ಸಾವನ್ನಪ್ಪಿದ ಇಂದಿರಾ ಮೂಲ್ಯ (74) ಮೃತ ತಾಯಿ. ಮೃತ ರಮೇಶ್ ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಅಷ್ಟಕ್ಕೂ ಮಾ.23 ರಂದು ಬಂಟಕಲ್ಲಿನಿಂದ ಬಿ ಸಿ ರೋಡ್-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಪಾಂಬೂರು ಬಳಿ ಡಿ*ಕ್ಕಿ ಹೊಡೆದು ಬೈಕ್ ಸವಾರ ರಮೇಶ್ ಮೂಲ್ಯ ತೀವ್ರ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಾ. 24ರಂದು ರಾತ್ರಿ ಅವರು ಮೃ*ತಪಟ್ಟಿದ್ದರು.

ಇದನ್ನೂ ಓದಿ: ಆಟವಾಡುತ್ತಿದ್ದಾಗ ಟ್ರ್ಯಾಕ್ಟರ್‌ ಹರಿದು 5 ವರ್ಷದ ಮಗು ಸಾವು

ಪುತ್ರನ ಸಾವಿನ ಸುದ್ದಿ ಕೇಳಿ ಆಘಾತಗೊಂಡ ತಾಯಿ
ಬೈಕ್ ಅಪ*ಘಾತದಲ್ಲಿ ಮೃ*ತಪಟ್ಟ ರಮೇಶ್ ಅವರ ಮೃತ ದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ (74) ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ತೆರಳಿದ್ದು, ಮಂಗಳವಾರ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಇಂದಿರಾ ಮೂಲ್ಯ ಅವರು ಮೃ*ತಪಟ್ಟಿದ್ದಾರೆ. ದಿನದ ಅಂತರದಲ್ಲಿ ತಾಯಿ-ಮಗ ಇಬ್ಬರೂ ಮೃ*ತಪಟ್ಟಿದ್ದು, ಮೃ*ತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Continue Reading

LATEST NEWS

ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ ಹೊಸ ಟೋಲ್ ರೇಟ್ ..! ಎಷ್ಟು ಹೆಚ್ಚಾಗಲಿದೆ ಗೊತ್ತಾ ?

Published

on

ಮಂಗಳೂರು/ನವದೆಹಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ  ಸರ್ಕಾರ ಮತ್ತೊಂದು ಶಾ*ಕ್ ಕೊಟ್ಟಿದೆ. ಟೋಲ್ ದರದಲ್ಲಿ ಏರಿಕೆ ಮಾಡುವ ಬಗ್ಗೆ ಪರಿಷ್ಕರಣೆ ನಡೆಸಲಾಗಿದೆ. ಏಪ್ರಿಲ್ 1 ರಿಂದ ಈ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆ ಇದಾಗಿದ್ದು, ಕನಿಷ್ಠ ಶೇ.3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ.

ಎಲ್ಲೆಲ್ಲಿ ಹೆಚ್ಚಳ ?

ಕರ್ನಾಟಕದಲ್ಲಿ ಒಟ್ಟು 66 ಟೋಲ್ ಪ್ಲಾಜಾಗಳಿವೆ. ಬೆಂಗಳೂರು – ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು – ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಅಮೆರಿಕದ ಮಿಲಿಟರಿಯಲ್ಲೇ ಭಾರಿ ದೊಡ್ಡ ಭದ್ರತಾ ಲೋಪ!

ದೇಶದಾದ್ಯಂತ ಒಟ್ಟು 323 ರಾಜ್ಯ ಹೆದ್ದಾರಿ ಟೋಲ್ ಫ್ಲಾಜಾ ಸೇರಿದಂತೆ, ದೇಶದಲ್ಲಿ ಒಟ್ಟು 1,181 ಟೋಲ್ ಗಳಿವೆ. 2023-24 ರಲ್ಲಿ 42,196 ಕೋಟಿ ರೂ, 2024-25 ರಲ್ಲಿ 64,809 ಕೋಟಿ ರೂ. ಟೋಲ್‌ ಸಂಗ್ರಹವಾಗಿದೆ. 2019-20 ರಲ್ಲಿ ಟೋಲ್ ಶುಲ್ಕ ಸಂಗ್ರಹವು 27,503 ಕೋಟಿ ರೂ.ಗಳಷ್ಟಿತ್ತು. ಈ ವರ್ಷ 1 ಲಕ್ಷ ಕೋಟಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ.  ಕರ್ನಾಟಕದಲ್ಲಿ 66 ಟೋಲ್ ಫ್ಲಾಜಾಗಳಿದ್ದು, ಕಳೆದ 5 ವರ್ಷಗಳಲ್ಲಿ ಈ ಟೋಲ್‌ಗಳಿಂದ 13,702 ಕೋಟಿ ಸಂಗ್ರಹವಾಗಿದೆ.

 

Continue Reading

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page