Connect with us

ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್

Published

on

ತಪಸ್ಯ ಫೌಂಡೇಷನ್ ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿದೆ 2025 ರ ಬೀಚ್ ಫೆಸ್ಟಿವಲ್ ಮಂಗಳೂರಿನ ತಣ್ಣೀರುಬಾವಿಯಲ್ಲಿ ಆಯೋಜಿಸಲಾಗಿದೆ. ಜನವರಿ 31 ರಿಂದ ಫೆಬ್ರವರಿ 2 ರ ತನಕ ಈ ಬೀಚ್ ಫೆಸ್ಟಿವಲ್ ನಡೆಯಲಿದ್ದು, ಹಲವಾರು ವಿಶೇಷ ಕಾರ್ಯಕ್ರಮಗಳು ನಡೆಯಲಿದೆ.

ಅದರಲ್ಲಿ ಪ್ರಮುಖವಾಗಿ ಕೃಷಿ ಮೇಳವು ಒಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಸಹಾಯ ಆಗುವಂತಹ ಮಾಹಿತಿಗಳು ಸಿಗಲಿದೆ. ಕಡಿಮೆ ಬಂಡವಾಳದಲ್ಲಿ ಹೆಚ್ಚು ಇಳುವರಿ ಗಳಿಕೆ ಹಾಗೂ ಬೆಳೆ ಅಭಿವೃದ್ದಿಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗುತ್ತದೆ. ಕೃಷಿ ಮಣ್ಣಿನ ಆರೋಗ್ಯ ನಿರ್ವಹಣೆ, ನೀರಿನ ನಿರ್ವಹಣೆ, ಕೃಷಿ ಯಂತ್ರದ ಮಾಹಿತಿ, ಪಶು ಸಂಗೋಪನೆ ಮತ್ತು ಕೋಳಿ ಸಾಕಣಿಕೆಯ ಮಾಹಿತಿ, ಕೃಷಿ ವ್ಯಾಪಾರ ಮತ್ತು ಮಾರುಕಟ್ಟೆ, ಅರಣ್ಯ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಆರ್ಥಿಕ ನಿರ್ವಹಣೆ ಮತ್ತು ಸರ್ಕಾರದ ಯೋಜನೆಗಳು, ಜೇನು ಸಾಕಾಣಿಕೆ, ಅಣಬೆ ಕೃಷಿ, ಮೀನುಗಾರಿಕೆ ಮತ್ತು ಜಲಕೃಷಿ ಹಾಗೂ ಕೃಷಿಯಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಯ ಬಗ್ಗೆ ಮಾಹಿತಿ ಸಿಗಲಿದೆ.

ಬೀಚ್ ಉತ್ಸವದಲ್ಲಿ ನಡೆಯಲಿರುವ ಅತಿ ದೊಡ್ಡ ಕೃಷಿಮೇಳದಲ್ಲಿ ಎಲ್ಲರೂ ಭಾಗವಹಿಸುವಂತೆ ತಪಸ್ಯ ಫೌಂಡೇಷನ್ ಹಾಗೂ ಜಿಲ್ಲಾಡಳಿತ ಮನವಿ ಮಾಡಿದೆ.

Advertisement
Click to comment

Leave a Reply

Your email address will not be published. Required fields are marked *

FILM

ದೇಶದ್ರೋಹದ ಆರೋಪ; ಖ್ಯಾತ ನಟಿ ಅರೆಸ್ಟ್

Published

on

ಮಂಗಳೂರು/ಬಾಂಗ್ಲಾ : ಮಾಜಿ ಅಧ್ಯಕ್ಷ ಶೇಕ್ ಮುಜಿಬುರ್ ರೆಹಮಾನ್ ಮನೆಗೆ ಬಾಂಗ್ಲಾದೇಶದಲ್ಲಿ ಗಲಭೆ ಮತ್ತೆ ಭುಗಿಲೆದ್ದ ಹಿನ್ನಲೆ ಬೆಂಕಿ ಹಚ್ಚಲಾಗಿತ್ತು. ಇದರಿಂದ ಇಡೀ ಬಾಂಗ್ಲಾದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದ್ದು, ಇದೀಗ ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದ ಕಾರಣ ಭಾನುವಾರ (ಫೆ. 2) ರಾತ್ರಿ ಮೆಹರ್‌ನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಹೇಳಿದ್ದಾರೆ. ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವನ್ನು ಅವರು ಟೀಕಿಸಿದ್ದರು ಎನ್ನಲಾಗಿದ್ದು, ಈ ವಿಷಯದ ಕುರಿತು ಪ್ರಶ್ನೆ ಮಾಡಲಾಗುತ್ತಿದೆ.

 

ಇದನ್ನೂ ಓದಿ : ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

 

ಮನೆ ದಾಳಿ :

ಮೆಹರ್ ಬಂಧನಕ್ಕೂ ಮೊದಲು ಬಾಂಗ್ಲಾದ ಜಮಲ್​ಪುರದ ಮನೆಯ ಮೇಲೆ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ಹಾಳು ಮಾಡಿದ್ದಾರೆ. ಮೆಹರ್ ಅವರ ಕುಟುಂಬ ಆ ಮನೆಯಲ್ಲಿ ವಾಸವಾಗಿದ್ದು, ಮೆಹರ್ ತಂದೆ ಇಂಜಿನಿಯರ್ ಮೊಹಮದ್ ಅಲಿಗೆ ಸೇರಿದೆ. ಸದ್ಯ ಪೊಲೀಸರು ಈ ವಿಷಯವನ್ನು ಸೂಕ್ಷ್ಮ ರೀತಿಯಲ್ಲಿ ತನಿಖೆ ನಡೆದುತ್ತಿದ್ದಾರೆ.

Continue Reading

DAKSHINA KANNADA

ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

Published

on

ಮಂಗಳೂರು: ತನ್ನ ಪತ್ನಿಯನ್ನು ಕುಡಿದ ಅಮಲಿನಲ್ಲಿ ಪತಿ ಕೊಂದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣದ ಮುಖ್ಯ ಆರೋಪಿ ಪತಿಗೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ನಿನ್ನೆ (ಫೆ.6) ತೀರ್ಪು ನೀಡಿದೆ.

ಸುಳ್ಯದ ತೋಡಿಕಾನ ಅಂಡ್ಯಡ್ಕ ಸಿಆರ್‌ಸಿ ಕ್ವಾಟ್ರರ್ಸ್ ನಿವಾಸಿ ರಾಜ (64) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.

ರಾಜ ತನ್ನು ಪತ್ನಿ ಕಮಲಾ (57) ಎಂಬಾಕೆಯನ್ನು ಕೊಲೆಗೈದ ಆರೋಪದಲ್ಲಿ ಸಿಕ್ಕಿಬಿದ್ದಿದ್ದ. 2022ರ ಸೆ.4ರಂದು ದಂಪತಿ ರಾಜಾ ಮತ್ತು ಕಮಲಾ ರಬ್ಬರ್ ಮ್ಯಾಪಿಂಗ್ ಕೆಲಸ ಕೇಳುತ್ತಾ ಬೆಳ್ತಂಗಡಿ ಕೊಯೂರು ಗ್ರಾಮದ ಅಲೆಕ್ಕಿ ಎಂಬಲ್ಲಿನಧರ್ಣಪ್ಪ ಗೌಡರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇವರಿಗೆ ರಬ್ಬರ್ ತೋಟದ ಶೆಡ್‌ನಲ್ಲೇ ವಾಸ್ತವ್ಯಕ್ಕೆ ಅವಕಾಶ ನೀಡಲಾಗಿತ್ತು.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಪ್ರಸ್ತುತ ಆರೋಪಿಗೆ ನ್ಯಾಯಲಯವು ಜಾವಾವಧಿ ಶಿಕ್ಷೆ ವಿಧಿಸಿ ಕಮಲಾ ಸಾವಿಗೆ ನ್ಯಾಯ ನೀಡಿದೆ.

 

Continue Reading

DAKSHINA KANNADA

ಸುರತ್ಕಲ್: ಡ್ರೆಸ್ ಅಂಗಡಿಗೆ ಆಕಸ್ಮಿಕ ಬೆಂಕಿ; ಭಾರೀ ನಷ್ಟ

Published

on

ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್‌ನ ಪೂವ ಆರ್ಕೆಡ್‌ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ.

ಸುಟ್ಟು ಕರಕಲಾಗಿದ್ದ ಮಳಿಗೆಯು ಕೃಷ್ಣಾಪುರ ನಿವಾಸಿ ಶಮೀಮ್ ಎಂಬವರಿಗೆ ಸೇರಿದ್ದು, ಬಟ್ಟೆ ಬರೆಗಳು ಹಾಗೂ ಯಂತ್ರೋಪಕರಣಗಳು ಸೇರಿ ಕೋಟಿ ರೂ. ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಂಗಡಿಯ ಮೇಲ್ಛಾವಣಿಯಲ್ಲಿನ ಬಟ್ಟೆ ವಿನ್ಯಾಸ ವಿಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆ ಕ್ಷಣಾರ್ಧದಲ್ಲಿ ಇಡೀ ಮಳಿಗೆಯನ್ನು ಸುಟ್ಟು ಭಸ್ಮ ಮಾಡಿತು.

ಇದನ್ನೂ ಓದಿ : ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಮೂರು ಮತ್ತು ಎಂಆರ್ ಪಿಎಲ್ ನ ಒಂದು ಅಗ್ನಿ ನಿರೋಧಕ ವಾಹನಗಳು ಸತತ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page