Connect with us

DAKSHINA KANNADA

ಸುರತ್ಕಲ್ ಮಸಣ ಸೇರಿದ್ದು ಅಭಿನಂದನೆಯ ಫ್ಲೆಕ್ಸಲ್ಲ-ಬಿಜೆಪಿಯ ರಾಜಕಾರಣ: ಮುನೀರ್ ಕಾಟಿಪಳ್ಳ

Published

on

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್ ಗಳಲ್ಲ ಅದು ಬಿಜೆಪಿ ಪಕ್ಷದ ಅತ್ಯಂತ ಕೆಟ್ಟ, ನಿರ್ಲಜ್ಜ, ಜನವಿರೋಧಿ ರಾಜಕಾರಣ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮುನೀರ್ ಕಾಟಿಪಳ್ಳ ಇಂದು 33ನೇ ದಿನದ ಹಗಲು ರಾತ್ರಿ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.


ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟವು ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಈ ಹೋರಾಟದ ಜೊತೆಯಾಗಿ ನಿಂತ ದ.ಕ ಮತ್ತು ಉಡುಪಿ ಜಿಲ್ಲೆಯ ಜನಕ್ಕೂ ಹೋರಾಟದಿಂದ ಏನನ್ನೂ ಸಾಧಿಸಬಹುದೆಂಬ ಒಂದು ಹೊಸ ಭರವಸೆಯನ್ನು ತುಂಬಲು ಸಾಧ್ಯವಾಗಿದೆ.

ತುಳುನಾಡಿನ ಮಣ್ಣಿನ ನಿಜವಾದ ಬೇಡಿಕೆ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಪ್ರಶ್ನೆಗಳು. ಶಿಕ್ಷಣ, ಆರೋಗ್ಯದಂತಹ ವ್ಯಾಪಾರಿಕರಣದ ವಿರುದ್ಧವೂ ಜಿಲ್ಲೆಯ ಜನ ಮುಂದಿನ ದಿನಗಳಲ್ಲಿ ಹೋರಾಟವನ್ನು ಕೈಗೊಳ್ಳಲು ಸಾಧ್ಯವಾಗಬೇಕು.

ಈಗಾಗಲೇ ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡಿರುವ ಹಿಂದೆಯೇ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿ ಸುಂಕ ವಸೂಲಿ ಮಾಡಲು ಮುಂದಾಗುವುದರ ವಿರುದ್ಧ ಆಕ್ರೋಶಗಳು ಆ ಭಾಗದಲ್ಲೂ ದಾಖಲಾಗುತ್ತಿದ್ದೆ.

ಹೆಜಮಾಡಿಯಲ್ಲೂ ಕೋಮುವಾದಿ, ನಿರ್ಲಜ್ಜ, ಫರ್ಸಂಟೇಜ್ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ವಿವರಿಸಲಿದ್ದೇವೆ. ಡಿಸೆಂಬರ್ ಎರಡರಂದು ಹೆಜಮಾಡಿ ಟೋಲ್ ಗೇಟ್ ಮುಂಭಾಗ ನಡೆಯುವ ಧರಣಿಯಲ್ಲೂ ನಾವುಗಳು ಭಾಗವಹಿಸುವ ಮೂಲಕ ಅಲ್ಲಿನ ಹೋರಾಟಕ್ಕೆ ಸಹಮತವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.

ಮಾಜಿ ಶಾಸಕ ಮೊಯಿದ್ದಿನ್ ಬಾವಾ, ಸಿಐಟಿಯು ಕಾರ್ಮಿಕ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಬೀಡಿ ಕಾರ್ಮಿಕ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಪದ್ಮಾವತಿ ಶೆಟ್ಟಿ, ಬಾಬು ಪಿಲಾರ್, ಸದಾಶಿವ ದಾಸ್, ಹೋರಾಟ ಸಮಿತಿ ಮುಖಂಡರಾದ ರಾಘವೇಂದ್ರ ರಾವ್ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.


ಮಾಜಿ ಮೇಯರ್ ಪುರುಷೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್ ಬಶೀರ್ ಬೈಕಂಪಾಡಿ, ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮೂಸಬ್ಬ ಪಕ್ಷಿಕೆರೆ, ಮಾಜಿ ಕಾರ್ಪೊರೇಟರ್ ಜಯಂತಿ ಬಿ ಶೆಟ್ಟಿ, ಕಾಂಗ್ರೇಸ್ ಮುಖಂಡರಾದ ಸಾಹುಲ್ ಹಮೀದ್ , ಪಾರಡೈಸ್ ಯೂತ್ ಕ್ಲಭ್ ನ ಅಬೂಬಕ್ಕರ್, ಉಸ್ಮಾನ್, ಝಾಕಿರ್, ಡಿವೈಎಫ್ಐ ಮುಖಂಡರಾದ ಮಾಧುರಿ ಬೋಳಾರ, ಪ್ರಮೀಳಾ ಶಕ್ತಿನಗರ, ವಿಲ್ಲಿ ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

DAKSHINA KANNADA

ಉಳ್ಳಾಲ: ಕಡಲ್ಕೊರೆತ ಪೀಡಿತ ಪ್ರದೇಶಕ್ಕೆ ಸ್ಪೀಕರ್ ಖಾದರ್ ಭೇಟಿ

Published

on

ಉಳ್ಳಾಲದ ಕಡಲ್ಕೊರೆತ ಪೀಡಿತ ಐದು ಪ್ರದೇಶಗಳಲ್ಲಿ ಕಲ್ಲು ಹಾಕುವ ಕಾಮಗಾರಿಗಳನ್ನು ಆರಂಭಿಸಲಾಗಿದೆ. ಊರವರು ಹಾಗೂ ನಗರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾಮಗಾರಿಗಳ ಪರಿಶೀಲನೆ ನಡೆಸಬೇಕು. ತದನಂತರವೂ ದೂರುಗಳು ಬಂದಲ್ಲಿ ಮೂರನೇ ನಿಯೋಗವನ್ನು ರಚಿಸಿ ಪರಿಶೀಲನೆ ನಡೆಸಿದ ನಂತರವೇ ಗುತ್ತಿಗೆದಾರರಿಗೆ ಬಿಲ್ ಪಾವತಿಸಲಾಗುವುದು ಎಂದು ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.

ಉಳ್ಳಾಲದ ಕಡಲ್ಕೊರೆತ ಬಾಧಿತ ಕೋಟೆಪುರ, ಕೋಡಿ, ಮೊಗವೀರಪಟ್ನ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು. ಹಿಲೆರಿಯಾನಗರ, ಕೈಕೋ, ಸೋಮೇಶ್ವರ ಬೆಟ್ಟಂಪಾಡಿ, ಕೋಡಿ, ಮೊಗವೀರಪಟ್ನ ಮತ್ತು ಉಚ್ಚಿಲ ಪ್ರದೇಶದಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದೆ.

ಶಾಶ್ವತ ಪರಿಹಾರ ಕಂಡುಕೊಂಡ ಹಿನ್ನೆಲೆಯಲ್ಲಿ ಕೆಲಕಾಲ ಸಂರಕ್ಷಿತವಾಗಿತ್ತು. ಕಳೆದ ಬಾರಿ ಊರಿನವರ ಸಮ್ಮುಖದಲ್ಲಿ ಬೇಕಾದ ಅನುದಾನದ ರೂಪುರೇಷೆ ತಯಾರಿಸಿ ಸಂಬಂಧಿಸಿದ ಮೀನುಗಾರಿಕಾ ಮತ್ತು ಬಂದರು ಇಲಾಖೆಗಳ ಸಚಿವ ಮಾಂಕಳ್ ವೈದ್ಯ ಹಾಗೂ ಮುಖ್ಯಮಂತ್ರಿಗೆ ಜೊತೆ ಸಭೆ ನಡೆಸಿ ಒಂದು ವರ್ಷದ ಮುಂಚೆಯೇ ಅನುದಾನ ಬಿಡುಗಡೆ ಮಾಡಿ ಟಂಡರ್ ನಡೆಸಿ ವ್ಯವಸ್ಥಿತವಾಗಿ ಕೋಟೆಪುರ, ಮೊಗವೀರಪಟ್ನ, ಸೀಗ್ರೌಂಡ್, ಬಟ್ಟಂಪಾಡಿ, ಉಚ್ಚಿಲ ಐದು ಕಡೆಗಳಲ್ಲಿ ಕೆಲಸ ಆರಂಭಿಸಲಾಗಿದೆ. ಕಾಮಗಾರಿ ಪರಿಶೀಲನೆಗೆ ಊರವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ ಎಂದರು.

ಇದನ್ನೂ ಓದಿ: ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

ಈ ಸಂದರ್ಭ ನಗರಸಭೆ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಸ್ವಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಮೊದಲಾದವರಿದ್ದರು.

Continue Reading

DAKSHINA KANNADA

ರಾಜ್ಯ ಕಾಂಗ್ರೆಸ್‌ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ವೇದವ್ಯಾಸ ಕಾಮತ್

Published

on

ಮಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೇತೃತ್ವದಲ್ಲಿ ಜೂನ್ 23 ರಂದು ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ತನಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 94 ಸಿ ಹಕ್ಕು ಪತ್ರಗಳಿಗೆ 9/11 ನೀಡುತ್ತಿಲ್ಲ. ಇ-ಖಾತಾ ಹೆಸರಿನಲ್ಲಿ ಜನಸಾಮಾನ್ಯರಿಗೆ ಸಂಕಷ್ಟವಾಗಿದೆ. ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆ ಮಾಡುತ್ತಿಲ್ಲ. ಅರ್ಹ ಬಿಪಿಎಲ್ ಕಾರ್ಡ್ ಗಳ ರದ್ದತಿ ಮತ್ತು ನೂತನ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುತ್ತಿಲ್ಲ. ಮಂಗಳೂರು ಪಾಲಿಕೆಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರಕಾರ ವಿಶೇಷ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿದ ಅವರು ಇದೆಲ್ಲವನ್ನೂ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

Continue Reading

DAKSHINA KANNADA

ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

Published

on

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು (ಜೂನ್.21) ಬೆಳಿಗ್ಗೆ 11.30 ಗಂಟೆಗೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಎಂಜಿನಿಯರಿಂಗ್‌, ಯೋಜನೆ, ಕಂದಾಯ, ಲೆಕ್ಕ ಪತ್ರವಿಭಾಗದಲ್ಲಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಉಡುಪಿ: ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ..!

ಲೋಕಾಯುಕ್ತ ಪ್ರಭಾರ ಎಸ್ ಪಿ ಕುಮಾರ ಚಂದ್ರ ಅವರ ನೇತೃತ್ವದಲ್ಲಿ ಇಬ್ಬರು ಡಿವೈಎಸ್‌ಪಿ, ನಾಲ್ಕು ಮಂದಿ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಗಳಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page